Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ? – 10 ಸಾವಿರ ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ? – 10 ಸಾವಿರ ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ

Districts

ಸಿದ್ದಗಂಗಾ ಮಠಕ್ಕೆ ಎದುರಾಗುತ್ತಾ ನೀರಿನ ಹಾಹಾಕಾರ? – 10 ಸಾವಿರ ಮಕ್ಕಳು, ಭಕ್ತಾದಿಗಳಿಗೆ ನೀರು ನೀಡಲು ಲೆಕ್ಕಾಚಾರ

Public TV
Last updated: January 29, 2026 8:48 am
Public TV
Share
3 Min Read
Tumakuru Siddaganga Mutt Drinking Water
SHARE

– 70 ಲಕ್ಷ ಬಿಲ್ ಪಾವತಿಸದಷ್ಟು ಬಡವಾಯ್ತಾ ಸರ್ಕಾರ?

ತುಮಕೂರು: ತುಮಕೂರಿನ (Tumakuru) ಸಿದ್ದಗಂಗಾ ಮಠಕ್ಕೆ (Siddaganga Mutt) ನೀರಿನ ಹಾಹಾಕಾರ ಎದುರಾಗುವ ಆತಂಕ ಶುರುವಾಗಿದೆ. ಕಾರಣ ಕೆಐಎಡಿಬಿ (KIADB) ಅಧಿಕಾರಿಗಳು ಪಂಪ್ ಹೌಸ್‌ನ ವಿದ್ಯುತ್ ಬಿಲ್ ಪಾವತಿಸದ ಪರಿಣಾಮ ಸಂಪರ್ಕ ಕಡಿತಗೊಳಿಸಲಾಗಿದೆ. ಹಾಗಾಗಿ ದೇವರಾಯಪಟ್ಟಣ ಕೆರೆಯಲ್ಲಿ ನೀರು ನಿಧಾನವಾಗಿ ಬರಿದಾಗುತ್ತಿದೆ. 10 ಸಾವಿರ ಮಠದ ಮಕ್ಕಳಿಗೆ, ಲಕ್ಷಾಂತರ ಭಕ್ತಾಧಿಗಳಿಗೆ ಇದರ ಬಿಸಿ ತಟ್ಟಲಿದೆ.

ಕಳೆದ ವರ್ಷ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಸಿದ್ದಗಂಗಾ ಮಠಕ್ಕೆ ಕೊಟ್ಟ ಮಾತನ್ನು ಉಳಿಸಿಕೊಂಡಿಲ್ಲ. ಅದರ ಪರಿಣಾಮ ಈ ವರ್ಷ ಮಠಕ್ಕೆ ನೀರಿನ ಅಭಾವ ಎದುರಾಗಿದೆ. ಹೊನ್ನೆನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಸಿ, ದೇವರಾಯಪಟ್ಟಣ ಕೆರೆಯಿಂದ ಮಠಕ್ಕೆ ನೀರು ಪಂಪ್ ಮಾಡಲಾಗುತ್ತದೆ. ಆದರೆ ಕಳೆದ ವರ್ಷ ಕೆಐಎಡಿಬಿ ಅಧಿಕಾರಿಗಳು ಹೊನ್ನೆನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ಪಂಪ್ ಮಾಡಿದ 70 ಲಕ್ಷ ವಿದ್ಯುತ್ ಬಿಲ್ ಪಾವತಿಸುವಂತೆ ಮಠಕ್ಕೆ ನೋಟಿಸ್ ಕೊಟ್ಟಿದೆ. ಇದನ್ನೂ ಓದಿ: ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR

ಅಸಲಿಗೆ ಮಠ ಒಂದು ಹನಿ ನೀರನ್ನೂ ಉಪಯೋಗಿಸಿರಲಿಲ್ಲ. ಅಧಿಕಾರಿಗಳ ಈ ಎಡವಟ್ಟು ಪಬ್ಲಿಕ್ ಟಿವಿಯಲ್ಲಿ ಬಿತ್ತರವಾಗಿತ್ತು. ಇದನ್ನು ಗಮನಿಸಿದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮಠವು ಒಂದು ನಯಾಪೈಸೆಯೂ ಕಟ್ಟಬೇಕಿಲ್ಲ, ಎಲ್ಲ ಹಣವನ್ನೂ ನಾವೇ ಭರಿಸುತ್ತೇವೆ ಎಂದಿದ್ದರು. ಸಚಿವರು ಭರವಸೆ ಕೊಟ್ಟು ಒಂದು ವರ್ಷ ಆದರೂ ಕೆಐಎಡಿಬಿ ವಿದ್ಯುತ್ ಬಿಲ್ ಪಾವತಿ ಮಾಡಿಲ್ಲ. ಇದನ್ನೂ ಓದಿ: ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ; ಸಂಸದ ಸೇರಿ 15 ಮಂದಿ ದುರ್ಮರಣ

ಬಿಲ್ ಪಾವತಿಸದ ಪರಿಣಾಮ ಬೆಸ್ಕಾಂ ಅಧಿಕಾರಿಗಳು ಹೊನ್ನೆನಹಳ್ಳಿಯಲ್ಲಿ ನೀರು ಪಂಪ್ ಮಾಡುವ ಘಟಕದ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಾರೆ. ಹಾಗಾಗಿ ಕಳೆದ 6-8 ತಿಂಗಳಿಂದ ಹೊನ್ನೆನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಪಂಪ್ ಆಗುತ್ತಿಲ್ಲ. ಇದರಿಂದ ದೇವರಾಯಪಟ್ಟಣ ಕೆರೆಯಲ್ಲಿ ನೀರು ಬರಿದಾಗುತ್ತಿದೆ. ಇದಕ್ಕೆ ಉತ್ತರ ಕೊಡಬೇಕಾದ ಕೆಐಎಡಿಬಿ ಅಧಿಕಾರಿಗಳು ಪ್ರತಿಕ್ರಿಯೆ ಕೊಡದೇ ನುಣುಚಿಕೊಳ್ಳುತ್ತಾರೆ. ಕೆಐಎಡಿಬಿ ಮುಖ್ಯ ಎಂಜಿನಿಯರ್ ಅನಿಲಕುಮಾರ್ ರಾಥೋಡ್ ಮಾಹಿತಿ ಬೇಕಾದರೆ ಮೂರ್ನಾಲ್ಕು ದಿನ ಬಿಟ್ಟು ಬನ್ನಿ ಎಂದು ಅಸಡ್ಡೆ ತೋರಿದ್ದಾರೆ. ಇದನ್ನೂ ಓದಿ: ತಂಬಾಕು ಜಾಹೀರಾತುಗಳ ವಿರುದ್ಧ ಕನ್ನಡಿಗರ ಸಮರ – ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ಪೋಸ್ಟರ್ ತೆರವು

ಹೊನ್ನೆನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರು ಹರಿಯದ ಪರಿಣಾಮ ದೇವರಾಯಪಟ್ಟಣ ಕೆರೆ ಬರಿದಾಗುವ ಲಕ್ಷಣ ಗೋಚರಿಸಿದೆ. ಫೆಬ್ರುವರಿ 6ರಿಂದ 20ರವರೆಗೆ 15 ದಿನಗಳ ಕಾಲ ಮಠದ ಜಾತ್ರೆ ನಡೆಯಲಿದೆ. ಪ್ರತಿದಿನ ಲಕ್ಷಾಂತರ ಭಕ್ತಾಧಿಗಳಿಗೆ ಊಟ ಸ್ನಾನಾದಿಗಳಿಗೆ ನೀರಿನ ಕೊರತೆ ಉಂಟಾಗಬಹುದು. ಅಲ್ಲದೆ ನಿತ್ಯ 10 ಸಾವಿರ ವಿದ್ಯಾರ್ಥಿಗಳ ಉಪಯೋಗಕ್ಕೆ ನೀರು ಬೇಕಾಗಿದೆ. ಮಾರ್ಚ್ ಮಧ್ಯ ಭಾಗದಲ್ಲಂತೂ ದೇವರಾಯಪಟ್ಟಣ ಕೆರೆಯ ನೀರು ಸಂಪೂರ್ಣ ಖಾಲಿಯಾಗಲಿದೆ. ಆಗ ಅಕ್ಷರಶಃ ಮಠಕ್ಕೆ ನೀರಿನ ಅಭಾವ ತಲೆದೋರಲಿದೆ. ಕೆಐಎಡಿಬಿ ಅಧಿಕಾರಿಗಳು ಬೆಸ್ಕಾಂ ಬಿಲ್ ಪಾವತಿಸಿ ವಿದ್ಯುತ್ ಸಂಪರ್ಕ ಕೊಡಿಸಿದರೆ ಮಾತ್ರ ಹೊನ್ನೆನಹಳ್ಳಿಯಿಂದ ನೀರು ಹರಿಯಲಿದೆ. ಇದನ್ನೂ ಓದಿ: Video | ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ

ಸರ್ಕಾರದ ಆರ್ಥಿಕ ಪರಿಸ್ಥಿತಿ ಸರಿ ಇಲ್ಲ. ಮಠದವರೇ ವಿದ್ಯುತ್ ಬಿಲ್ ಭರಿಸಿ ಅಂತಾ ಅಧಿಕಾರಿಗಳು ಕಳೆದ ವರ್ಷ ಲೆಟರ್ ಕಳಿಸಿದ್ದು, ಸರ್ಕಾರಕ್ಕೆ ಮುಜುಗರ ತಂದಿತ್ತು. ಈ ಮುಜುಗರದಿಂದ ತಪ್ಪಿಸಿಕೊಳ್ಳಲು ಸಚಿವ ಎಂ.ಬಿ ಪಾಟೀಲ್ ಸಂಪೂರ್ಣ ಬಿಲ್ ಸರ್ಕಾರ ಭರಿಸಲಿದೆ ಎಂದಿದ್ದರು. ಆದರೆ ಒಂದು ವರ್ಷ ಆದರೂ ವಿದ್ಯುತ್ ಬಿಲ್ ಪಾವತಿ ಆಗಿಲ್ಲ. ಇದರಿಂದ ಮಠಕ್ಕೆ ನೀರಿನ ಕೊರತೆ ತಲೆದೋರಿದೆ. ಇದನ್ನೂ ಓದಿ: ಅಪೆಕ್ಸ್‌ ಬ್ಯಾಂಕ್‌ ಚುನಾವಣಾ ಸಭೆ; ಸಿಎಂ ಎದುರೇ ಕೆ.ಎನ್‌ ರಾಜಣ್ಣ – ಸಚಿವ ಸುಧಾಕರ್ ನಡ್ವೆ ಜಟಾಪಟಿ

TAGGED:drinking waterKIADBMB Patilsiddaganga mutttumakuruಎಂ.ಬಿ.ಪಾಟೀಲ್ಕುಡಿಯುವ ನೀರುತುಮಕೂರುಸಿದ್ದಗಂಗಾ ಮಠ
Share This Article
Facebook Whatsapp Whatsapp Telegram

Cinema news

actor mayur patel car accident
ಕುಡಿದು ವಾಹನ ಚಲಾಯಿಸಿ ಕಾರುಗಳಿಗೆ ಸರಣಿ ಅಪಘಾತ; ನಟ ಮಯೂರ್ ಪಟೇಲ್ ವಿರುದ್ಧ FIR
Cinema Crime Latest Main Post Sandalwood
Ranveer Singh Rishab Shetty Kantara
ತುಳುನಾಡಿನ ದೈವಕ್ಕೆ ʻಹೆಣ್ಣು ದೆವ್ವʼ ಅಂತ ಅಪಮಾನ – ರಣವೀರ್ ಸಿಂಗ್‌ ವಿರುದ್ಧ FIR
Bengaluru City Cinema Crime Latest Main Post
Suri Anna 2
ಹರೀಶ್ ರಾಯ್ ನಟಿಸಿದ ಕೊನೆ ಚಿತ್ರ ಸೂರಿ ಅಣ್ಣ ಟ್ರೈಲರ್ ಬಿಡುಗಡೆ
Cinema Latest Main Post Sandalwood
Arijith Singh
ಹಿನ್ನೆಲೆ ಗಾಯನಕ್ಕೆ ಗುಡ್ ಬೈ ಹೇಳಿದ ಅರಿಜಿತ್ ಸಿಂಗ್
Bollywood Cinema Latest Main Post

You Might Also Like

ajit pawar plane crash flight attendant
Latest

ಅಪ್ಪ.. ನಾನು ಅಜಿತ್‌ ಪವಾರ್‌ ಅವ್ರ ವಿಮಾನದಲ್ಲಿ ಹೋಗ್ತಿದ್ದೇನೆ, ನಾಳೆ ಊರಿಗೆ ಬರ್ತೀನಿ: ತಂದೆ ಜೊತೆ ಫ್ಲೈಟ್‌ ಅಟೆಂಡೆಂಟ್‌ ಕೊನೆ ಮಾತು

Public TV
By Public TV
1 minute ago
Colombian Lawmaker
Latest

ಕೊಲಂಬಿಯಾದ ಗಡಿಯಲ್ಲಿ ವಿಮಾನ ಪತನ; ಸಂಸದ ಸೇರಿ 15 ಮಂದಿ ದುರ್ಮರಣ

Public TV
By Public TV
1 hour ago
Bengaluru Poster Removed From BMTC KSRTC
Bengaluru City

ತಂಬಾಕು ಜಾಹೀರಾತುಗಳ ವಿರುದ್ಧ ಕನ್ನಡಿಗರ ಸಮರ – ಸಾರಿಗೆ ಬಸ್‌ಗಳ ಮೇಲೆ ಅಂಟಿಸಿದ್ದ ಪೋಸ್ಟರ್ ತೆರವು

Public TV
By Public TV
2 hours ago
siddaramaiah 1 3
Bengaluru City

Video | ನರೇಗಾ ಬಗ್ಗೆ ಚರ್ಚೆಗಾಗಿ ವಿಧಾನಮಂಡಲ ಅಧಿವೇಶನ 2 ದಿನ ವಿಸ್ತರಣೆ – ಸಿಎಂ

Public TV
By Public TV
10 hours ago
KN RAJANNA
Bengaluru City

ಅಪೆಕ್ಸ್‌ ಬ್ಯಾಂಕ್‌ ಚುನಾವಣಾ ಸಭೆ; ಸಿಎಂ ಎದುರೇ ಕೆ.ಎನ್‌ ರಾಜಣ್ಣ – ಸಚಿವ ಸುಧಾಕರ್ ನಡ್ವೆ ಜಟಾಪಟಿ

Public TV
By Public TV
10 hours ago
TRAIN
Bengaluru City

ಶಿವರಾತ್ರಿ ಪ್ರಯುಕ್ತ ಬೆಂಗಳೂರು – ವಿಜಯಪುರ ನಡುವೆ ವಿಶೇಷ ರೈಲು

Public TV
By Public TV
10 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?