ಚೆನ್ನೈ: ತುಮಕೂರಿನ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಪಿತ್ತಕೋಶ ಸೋಂಕಿನ ಆಪರೇಷನ್ ಗೆ ಒಳಗಾಗಿದ್ದ ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ.
ಮಂಗಳವಾರದಿಂದ ಶ್ರೀಗಳು ದ್ರವರೂಪದ ಆಹಾರವನ್ನು ಸೇವಿಸುತ್ತಿದ್ದಾರೆ. ಕಳೆದ ಮೂರು ದಿನಗಳಿಂದ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶ್ರೀಗಳನ್ನು ಇಂದು ಸ್ಪೆಷಲ್ ವಾರ್ಡ್ ಗೆ ಶಿಫ್ಟ್ ಮಾಡುವ ಸಾಧ್ಯತೆ ಇದೆ. ಸ್ವಲ್ಪ ಮಟ್ಟಿಗೆ ಇಂದು ವೈದ್ಯರು ಶ್ರೀಗಳನ್ನು ವಾಕಿಂಗ್ ಮಾಡಿಸುವ ಸಾಧ್ಯತೆ ಇದೆ.
- Advertisement 2
- Advertisement 3
ಈಗಾಗಲೇ ದ್ರವ ರೂಪದ ಆಹಾರವನ್ನು ನೀಡಿರೋ ವೈದ್ಯರು, ಇಂದು ಸಹ ದ್ರವರೂಪದ ಆಹಾರವನ್ನು ಮುಂದುವರಿಸಲಿದ್ದಾರೆ. ಇಂದು ಬೆಳೆಗ್ಗೆ ಮತ್ತೊಮ್ಮೆ ವಿವಿಧ ರೀತಿಯ ಪರೀಕ್ಷೆಗಳನ್ನು ವೈದ್ಯರು ಮಾಡಲಿದ್ದಾರೆ. ವೈದ್ಯರು ಶ್ರೀಗಳನ್ನು ಯಾವಾಗ ಡಿಸ್ಚಾರ್ಜ್ ಮಾಡಬೇಕು ಎನ್ನುವುದರ ಬಗ್ಗೆ ನಿರ್ಧಾರ ಮಾಡಲಿದ್ದಾರೆ.
- Advertisement 4
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv