ತುಮಕೂರು: ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಬುಧವಾರ ರಾತ್ರಿ ಮಠದಲ್ಲಿ ಚಿಕಿತ್ಸೆ ನೀಡಲಾಗಿದೆ. ಸದ್ಯಕ್ಕೆ ಸ್ವಾಮಿಜಿಗಳ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿದೆ.
ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರ ಅವರ ತಂಡ ಬಂದು ತಪಾಸಣೆ ನಡೆಸಿ ಚಿಕಿತ್ಸೆಯನ್ನು ನೀಡಿದೆ. ನಡೆದಾಡುವ ದೇವರು ಚೇತರಿಸಿಕೊಂಡಿದ್ದಾರೆ. ಸಿದ್ದಗಂಗಾ ಶ್ರೀಗಳು ಆರೋಗ್ಯರಾಗಿದ್ದಾರೆಂದು ಮಠದ ಕಿರಿಯ ಶ್ರೀಗಳು ಸ್ಪಷ್ಟಪಡಿಸಿದ್ದಾರೆ.
ಮಾಧ್ಯಮಗಳ ಜೊತೆ ಮಾತನಾಡಿದ ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್ವರ್, ಹೃದಯ ಬಡಿತದಲ್ಲಿ ಸ್ವಲ್ಪ ಏರುಪೇರು ಕಂಡುಬಂದಿದ್ದು, ಜ್ವರದಿಂದ ಬಳಲುತ್ತಿದ್ದರು. ಬಳಿಕ ಬಿಜಿಎಸ್ ಆಸ್ಪತ್ರೆಯ ಡಾ.ರವೀಂದ್ರರವರ ತಂಡ ಬಂದು ತಪಾಸಣೆ ನಡೆಸಿ ಏನು ತೊಂದರೆ ಇಲ್ಲ ಎಂದು ತಿಳಿಸಿದ್ದಾರೆ. ಇಂಜೆಕ್ಷನ್ ನೀಡಿದ ಬಳಿಕ ಸ್ವಾಮೀಜಿ ಕೂಡ ಆರಾಮಗಿದ್ದಾರೆ. ಪೂಜೆಯನ್ನು ಕೂಡ ಮಾಡಿದ್ದಾರೆ ಎಂದು ಹೇಳಿದ್ದಾರೆ.
2018 ಜನವರಿಯಲ್ಲಿ ಶ್ರೀಗಳ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿತ್ತು. ಅಂದು ಅಳವಡಿಸಿದ್ದ ಸ್ಟಂಟ್ ಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ಡಿಸೆಂಬರ್ 1ರಂದು ಬಿಜಿಎಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆಸ್ಪತ್ರೆಗೆ ಆಗಮಿಸಿದ್ದ ಶ್ರೀಗಳು ವ್ಹೀಲ್ ಚೇರ್ ನಲ್ಲಿ ಕುಳಿತುಕೊಳ್ಳಲು ಒಪ್ಪದೇ ನಡೆದುಕೊಂಡು ಹೋಗುವ ಮೂಲಕ ಎಲ್ಲರನ್ನು ಅಚ್ಚರಿಸಿಗೊಳಿಸಿದ್ದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv