ಚೆನ್ನೈ: ನಡೆದಾಡುವ ದೇವರು ಶ್ರೀ ಸಿದ್ದಗಂಗಾ ಶ್ರೀಗಳ ಆರೋಗ್ಯ ಚೇತರಿಸಿಕೊಳ್ಳುತ್ತಿದೆ. ನ್ಯೂಟ್ರೀಷನ್ಗಳನ್ನು ನೀಡಲಾಗುತ್ತಿದ್ದು ಇನ್ನೂ ಒಂದು ವಾರಗಳ ಕಾಲ ಐಸಿಯುನಲ್ಲೇ ಶ್ರೀಗಳಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ರೇಲಾ ಆಸ್ಪತ್ರೆಯ ಡಾ. ಪರಮೇಶ್ವರ್ ತಿಳಿಸಿದ್ದಾರೆ.
ಶ್ರೀಗಳಿಗೆ ಶಸ್ತ್ರಚಿಕಿತ್ಸೆ ಮಾಡಿ ಸುಮಾರು 9 ದಿನಗಳು ಕಳೆದಿದೆ. ಅವರು ಚಿಕಿತ್ಸೆಗೆ ಉತ್ತಮ ರೀತಿಯಲ್ಲಿ ಸ್ಪಂದಿಸುತ್ತಿದ್ದಾರೆ, ಆರೋಗ್ಯದಲ್ಲಿ ಚೇತರಿಕೆ ಕಾಣಿಸುತ್ತಿದೆ. ಎಂದಿನಂತೆ ರಕ್ತನಾಳ ಮೂಲಕವೇ ನ್ಯೂಟ್ರೀಷನ್ಗಳನ್ನು ನೀಡಲಾಗುತ್ತಿದೆ. ಶ್ರೀಗಳಿಗೆ ಇನ್ನೂ ಒಂದು ವಾರಗಳ ಕಾಲ ಐಸಿಯುನಲ್ಲೇ ಚಿಕಿತ್ಸೆ ನೀಡಲಾಗುತ್ತದೆ ಎಂದು ಡಾ. ಪರಮೇಶ್ವರ್ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಸಿದ್ದಗಂಗಾ ಶ್ರೀಗಳಿಗೆ ಯಾವುದೇ ಸೋಂಕು ತಗಲದಂತೆ ನೋಡಿಕೊಳ್ಳಲಾಗುತ್ತಿದೆ. ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಶ್ರೀಗಳಿಗೆ ಪ್ರೋಟೀನ್ ಹಾಗೂ ನ್ಯೂಟ್ರಿಷನ್ ಕೊರತೆ ಇದ್ದು, ಸರಿಯಾದ ಪ್ರಮಾಣದಲ್ಲಿ ನ್ಯೂಟ್ರೀಷನ್ನನ್ನು ನೀಡಲಾಗುತ್ತಿದೆ. ಈಗ ಶ್ರೀಗಳು ಆರೋಗ್ಯವಾಗಿದ್ದಾರೆ ಎಲ್ಲರೊಡನೆ ಮಾತನಾಡುತ್ತಿದ್ದಾರೆ ಯಾರು ಚಿಂತಿಸುವ ಅಗತ್ಯವಿಲ್ಲ ಎಂದು ಮಾಹಿತಿ ನೀಡಿದ್ದಾರೆ.
ಶ್ರೀಗಳು ಗುಣಮುಖರಾದ ಮೇಲೆ ಐಸಿಯುನಿಂದಾನೇ ನೇರವಾಗಿ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv