Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪೂಜ್ಯ ಗದ್ದುಗೆಯಲ್ಲಿ ಐಕ್ಯರಾದ ಶ್ರೀಗಳು

Public TV
Last updated: January 22, 2019 8:41 pm
Public TV
Share
3 Min Read
Sri Final A copy
SHARE

ತುಮಕೂರು: ವಿಶ್ವಚೇತನ, ವಿಶ್ವರತ್ನ, ಕಾಯಕಯೋಗಿ, ನಡೆದಾಡುವ ದೇವರು ಡಾ. ಶಿವಕುಮಾರಸ್ವಾಮೀಜಿಗಳ ಯುಗಾಂತ್ಯವಾಗಿದೆ. ಸೋಮವಾರ 11 ಗಂಟೆ 44 ನಿಮಿಷಕ್ಕೆ ಲಿಂಗೈಕ್ಯರಾದ ಮಹಾನ್ ಮಾನವತಾವಾದಿಗೆ ಕೋಟಿ ಮನಸುಗಳು ಭಾರ ಹೃದಯದಿಂದ ಬೀಳ್ಕೊಡುಗೆ ನೀಡಿದ್ದಾರೆ. ಸಿದ್ದಗಂಗಾ ಮಠದ ಆವರಣದಲ್ಲಿ ಗುರು ಉದ್ಧಾನ ಶಿವಯೋಗಿಗಳ ಪಕ್ಕದಲ್ಲಿ ಶಿವಕುಮಾರ ಸ್ವಾಮೀಜಿಯವರನ್ನು ಗದ್ದುಗೆಯಲ್ಲಿ ಐಕ್ಯ ಮಾಡಲಾಗಿದೆ.

ಮಧ್ಯಾಹ್ನ 4.30ರ ವೇಳೆಗೆ ಆರಂಭವಾದ ಕ್ರಿಯಾ ವಿಧಾನ, ವಿಧಿ ವಿಧಾನಗಳು ಅಂತಿಮವಾಗಿ 8.30 ಗಂಟೆಗೆ ಪೂರ್ಣಗೊಂಡಿತು. ಶ್ರೀಗಳು ಚೈತನ್ಯ ಅವರ ದೇಹವನ್ನು ಬಿಟ್ಟು ಹೋದ ಬಳಿಕ ಅವರ ದೇಹಕ್ಕೆ ಮತ್ತೆ ಚೈತನ್ಯ ತುಂಬಲು ಕ್ರಿಯಾ ಸಮಾಧಿ ವಿಧಿ ವಿಧಾನ ಮಾಡಲಾಯಿತು. ಲಿಂಗಧಾರಣೆ ಮಾಡಿ, ಇಷ್ಟಲಿಂಗ ಪೂಜೆ ಮಾಡುವ ಅಧ್ಯಾತ್ಮ ಸಾಧಕರಿಗೆ ಮಾತ್ರ ಲಿಂಗಾಯತ ಕ್ರಿಯಾಸಮಾಧಿ ಮಾಡಲಾಗುತ್ತದೆ.

TMK SIDDAGANGA SRI copy

ಸಂಜೆ 4.30ಕ್ಕೆ ಆರಂಭವಾದ ಈ ಪ್ರಕ್ರಿಯೆಯಲ್ಲಿ ಕಿರಿಯ ಶ್ರೀಗಳು ಮುಂದಿದ್ದು ಎಲ್ಲಾ ವಿಧಿ ವಿಧಾನಗಳನ್ನು ನೆರವೇರಿಸಿದರು. 5 ಗಂಟೆಗೆ ಶ್ರೀಗಳು ಮಹಾ ಮಂಗಳಾರತಿ ಮಾಡಿದ ಬಳಿಕ ಮೆರವಣಿಗೆಗೆ ಆರಂಭ ಮಾಡಲಾಯಿತು. 5.15 ಗಂಟೆಗೆ ಸುಮಾರಿಗೆ ಲಿಂಗೈಕ್ಯ ದೇಹವನ್ನು 1 ಲಕ್ಷದ 1 ರುದ್ರಾಕ್ಷಿ ಹಾಗೂ ಹೂಗಳಿಂದ ಅಲಂಕಾರ ಮಾಡಿದ್ದ ವಿಮಾನಗೋಪುರದ ಮೂಲಕ ಅಂತಿಮ ಯಾತ್ರೆ ಮೆರವಣಿಗೆ ಆರಂಭ ಮಾಡಲಾಯಿತು.

ಸಂಜೆ 6 ಗಂಟೆ ವೇಳೆಗೆ ಸಿಎಂ ಕುಮಾರಸ್ವಾಮಿ, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಸಿದ್ದರಾಮಯ್ಯ, ಮಾಜಿ ಸಿಎಂ ಯಡಿಯೂರಪ್ಪ, ದಿನೇಶ್ ಗುಂಡೂರಾವ್, ವೀರಪ್ಪ ಮೊಯ್ಲಿ, ದೇಶಪಾಂಡೆ, ಶೋಭಾ ಕರಂದ್ಲಾಜೆ, ಶ್ರೀರಾಮುಲು, ಜನಾರ್ದನ ರೆಡ್ಡಿ, ಡಿಸಿಎಂ ಪರಮೇಶ್ವರ್, ಗೃಹ ಸಚಿವ ಎಂ.ಬಿ.ಪಾಟೀಲ್, ಮಾಜಿ ಸಚಿವ ವಿ.ಸೋಮಣ್ಣ, ಸಚಿವ ಡಿಕೆ ಶಿವಕುಮಾರ್ ಸೇರಿದಂತೆ ಹಲವು ಗಣ್ಯರು, ಸಂಸದರು, ಶಾಸಕರು, ಸಚಿವರು ಸೇರಿದಂತೆ ಜನಪ್ರತಿನಿಧಿಗಳು ಹಾಜರಿದ್ದು, ಗೌರವ ಸಲ್ಲಿಸಿದರು. ಬಳಿಕ 3 ಸುತ್ತು ಕುಶಾಲುತೋಪು ಹಾರಿಸಿ, ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಬಳಿಕ ಶ್ರೀಗಳ ಲಿಂಗ ದೇಹದ ಮೇಲೆ ಹೊದಿಸಿದ್ದ ತ್ರಿವರ್ಣ ಧ್ವಜವನ್ನು ಸಿಎಂ ಕುಮಾರಸ್ವಾಮಿ ಅವರು ಕಿರಿಯ ಶ್ರೀಗಳಿಗೆ ಹಸ್ತಾಂತರಿಸಿದರು. ಈ ಮೂಲಕ ಅಧಿಕೃತವಾಗಿ ಶ್ರೀಗಳ ಲಿಂಗಕಾಯವನ್ನು ಮಠಕ್ಕೆ ಹಸ್ತಾಂತರ ಮಾಡಿದರು. ರಾಷ್ಟ್ರಧ್ವಜ ಹೊದಿಸುವಾಗ “ಶ್ರೀಗಳಿಗೆ ಭಾರತರತ್ನ ನೀಡಿ” ಎನ್ನುವ ಘೋಷ ಕೇಳಿಬಂತು.

TMK HD KUMARASWAMY 1 1

ಪಂಚ ವಾದ್ಯಗಳ ಮೂಲಕ ಶಿವಯೋಗಿಗಳ ಗದ್ದುಗೆವರೆಗೂ ಮೆರವಣಿಗೆ ಮಾಡಲಾಯಿತು. “ಶಿವಕುಮಾರ ಸ್ವಾಮೀಜಿಗಳಿಗೆ, ನಡೆದಾಡುವ ದೇವರಿಗೆ ಜಯವಾಗಲಿ, ಅನ್ನ ದಾಸೋಹಿಗೆ ಜಯವಾಗಲಿ, ಜ್ಞಾನ ದಾಸೋಹಿಗೆ ಜಯವಾಗಲಿ” ಎಂಬ ಘೋಷ ಕೂಗುತ್ತಾ 3 ಪ್ರದಕ್ಷಿಣೆ ಮಾಡಿದ ಬಳಿಕ ಗದ್ದುಗೆಯ ಸಮಾಧಿ ಸ್ಥಳದಲ್ಲಿ ಐವರು ಸ್ವಾಮೀಜಿಗಳು ಈ ವೇಳೆ ಕ್ರಿಯಾ ವಿಧಿ ವಿಧಾನಗಳನ್ನು ಆರಂಭಿಸಿದರು. ಗದ್ದುಗೆ ಪೂಜೆ ಸ್ಥಳದಲ್ಲಿ ಕ್ರಿಯಾ ಸಮಾಧಿ ಶಾಸ್ತ್ರಗಳು, ಮಂತ್ರ ಪಠಣ ಮೂಲಕ ಕಾರ್ಯ ನಡೆಯಿತು. ಅಟವೀ ಶಿವಯೋಗಿಗಳ ಗದ್ದುಗೆಯ ಅರ್ಚಕರೂ ಕೂಡ ಈ ಪೂಜೆಯಲ್ಲಿ ತೊಡಗಿದ್ದರು. ಬೆಳಗ್ಗೆಯಿಂದಲೇ ನಡೆದ ಪೂಜೆ ಶಾಸ್ತ್ರಗಳನ್ನು ಕಿರಿಯ ಸ್ವಾಮೀಜಿಗಳು ಪೂರ್ಣಗೊಳಿಸಿದರು. ಕ್ರಿಯಾ ಸಮಾಧಿ ವೇಳೆ 10 ರಿಂದ 11 ಸಾವಿರ ವಿಭೂತಿ ಗಟ್ಟಿ, 20 ಚೀಲ ಅಂದರೆ 500 ಕೆಜಿ ಉಪ್ಪು, 10 ಚೀಲ ಮರಳು, 1001 ವಿವಿಧ ರೀತಿಯ ಪತ್ರೆಗಳನ್ನು ಬಳಕೆ ಮಾಡಲಾಗಿತ್ತು.

TMK SIDDAGANGA MUTT

ಕ್ರಿಯಾ ಸಮಾಧಿ: ವೀರಶೈವ ಲಿಂಗಾಯಿತ ಆಗಮೋಕ್ತ ಕ್ರಿಯಾ ಸಮಾಧಿ ವಿಧಿ ವಿಧಾನಗಳ ಮೂಲಕ ಶ್ರೀಗಳ ಕ್ರಿಯಾ ಸಮಾಧಿಯನ್ನು ಮಾಡಲಾಯಿತು. 9 ಪಾದ ಆಳ, 9 ಪಾದ ಉದ್ದ, 5 ಪಾದ ಅಗಲದಲ್ಲಿ ನಿರ್ಮಾಣವಾಗಿರುವ ಕ್ರಿಯಾ ಸಮಾಧಿಯಲ್ಲಿ 3 ಹಂತಗಳಲ್ಲಿ ಮೆಟ್ಟಿಲು (ಸೋಪನ) ನಿರ್ಮಾಣ ಮಾಡಲಾಗಿರುತ್ತದೆ. ಶ್ರೀಗಳ ಪಾರ್ಥಿವ ಶರೀರವನ್ನು ಕೂರಿಸಲು ಆದರೊಳಗೆ ತ್ರಿಕೋನಾಕೃತಿಯಲ್ಲಿ ಗೂಡು ನಿರ್ಮಿಸಲಾಗಿತ್ತು. ಇದರಲ್ಲಿ ಶ್ರೀಗಳ ಐಕ್ಯವನ್ನಿಟ್ಟು, ವಿಭೂತಿ, ಪತ್ರೆ, ಉಪ್ಪು ಸೇರಿದಂತೆ ವಿವಿಧ ಬಿಲ್ವಪತ್ರೆಗಳನ್ನ ಕ್ರಿಯಾ ಸಮಾಧಿಯನ್ನು ಮುಚ್ಚಲಾಯಿತು.

ಮೊದಲಿಗೆ ಪಾರ್ಥೀವ ಶರೀರಕ್ಕೆ ನಾಡಿನ ಪುಣ್ಯ ನದಿಗಳಿಂದ ತರಿದ್ದ ಪವಿತ್ರ ತೀರ್ಥದಿಂದ ಅಭಿಷೇಕ ನೆರವೇರಿಸಿ ಹೊಸ ಕಶಾಯ ವಸ್ತ್ರಗಳನ್ನು ಧಾರಣೆ ಮಾಡಲಾಯಿತು. ಈ ವೇಳೆ ಪಂಚಾಮೃತ ಹಾಗೂ ಪತ್ರೆ ಇಟ್ಟು ಪ್ರತಿ ಸೋಪಾನದಲ್ಲೂ ಅಭಿಷೇಕ ನಡೆಸಲಾಯಿತು.

TMK SIDDAGANGA MUTT 1

ಪಾರ್ಥಿವ ಶರೀರವನ್ನು ಗದ್ದುಗೆಯ ಒಳಭಾಗದ ಗೂಡಿನಲ್ಲಿ ಪದ್ಮಾಸನ ಸ್ಥಿತಿಯಲ್ಲಿ ಕೂರಿಸಿ, ಕೈಗೆ ಇಷ್ಟ ಲಿಂಗವನ್ನು ನೀಡಲಾಯಿತು. ನಂತರ ರುದ್ರ ಚಮಕ ಪಠಣ ಮಾಡುತ್ತಾ ಪಾರ್ಥೀವ ಶರೀರಕ್ಕೆ ಪಂಚಾಮೃತಾಭಿಷೇಕ ನೆರವೇರಿಸಲಾಯಿತು. ಈ ವೇಳೆ ಶ್ರೀಗಳಿಗೆ ಮಹಾ ಮಂಗಳಾರತಿ ಹಾಗೂ ತಂಬಿಟ್ಟು, ಚಿಗಲಿ ಹಾಗೂ ಹಸಿ ಕಡಲೆಕಾಳು ನೈವೇದ್ಯ ನೆರವೇರಿಸಲಾಯಿತು. ಕೆಳ ಭಾಗದಲ್ಲಿ ಉಪ್ಪು, ಮೆಣಸು ನಂತರ ವಿಭೂತಿ ಗಟ್ಟಿಗಳಿಂದ ಲಿಂಗ ಶರೀರವನ್ನು ಮುಚ್ಚಲಾಯಿತು.

https://www.youtube.com/watch?v=S5rWpX2kQ2g

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bharat ratnaCM Kumaraswamypolice departmentPublic TVSiddaganga Sritumkurಕ್ರಿಯಾ ಸಮಾಧಿತುಮಕೂರುಪಬ್ಲಿಕ್ ಟಿವಿಪೊಲೀಸ್ ಇಲಾಖೆಭಾರತ ರತ್ನಸಿಎಂ ಕುಮಾರಸ್ವಾಮಿಸಿದ್ದಗಂಗಾ ಶ್ರೀಸಿದ್ದಗಂಗಾ ಶ್ರೀಗಳು
Share This Article
Facebook Whatsapp Whatsapp Telegram

Cinema Updates

Kantara
ಕಾಂತಾರ ಚಾಪ್ಟರ್-1 | ದೈವದ ನೇಮೋತ್ಸವ ಚಿತ್ರೀಕರಣಕ್ಕೂ ಮುನ್ನವೇ ಸಹ ಕಲಾವಿದ ಸಾವು
7 hours ago
Kantara 3
ʻಕಾಂತಾರ ಚಾಪ್ಟರ್-1ʼಗೆ ಸಾಲು ಸಾಲು ವಿಘ್ನ – ಒಂದೇ ತಿಂಗಳಲ್ಲಿ ಮೂರು ಸಾವು!
7 hours ago
Kantara Death copy
ಕಾಂತಾರ ಚಾಪ್ಟರ್-1 ಚಿತ್ರದ ಸಹ ಕಲಾವಿದ ವಿಜು ಹೃದಯಾಘಾತದಿಂದ ಸಾವು
8 hours ago
India House Movie
`ದಿ ಇಂಡಿಯಾ ಹೌಸ್ʼ ಸಿನಿಮಾ ಶೂಟಿಂಗ್‌ ಸೆಟ್‌ನಲ್ಲಿ ನೀರಿನ ಟ್ಯಾಂಕರ್‌ ಸ್ಫೋಟ – ಹಲವರಿಗೆ ಗಾಯ
9 hours ago

You Might Also Like

Ahmedabad Air India Plane Crash trouble started 30 seconds into flight only survivor Vishwash Kumar Ramesh
Latest

ಟೇಕಾಫ್‌ ಆದ 30 ಸೆಕೆಂಡ್‌ನಲ್ಲಿ ದೊಡ್ಡ ಶಬ್ಧ ಬಂತು – ಪವಾಡ ಸದೃಶವಾಗಿ ಏಕೈಕ ಪ್ರಯಾಣಿಕ ಪಾರು

Public TV
By Public TV
6 minutes ago
Bhoomi Chauhan
Latest

ಜಸ್ಟ್‌ 10 ನಿಮಿಷ, ಟ್ರಾಫಿಕ್‌ನಲ್ಲಿ ಸಿಲುಕಿ ಲಕ್ಕಿ ಲೇಡಿ ಬಚಾವ್‌!

Public TV
By Public TV
39 minutes ago
Ahmedabad Plane Crash 1
Latest

Ahmedabad Plane Crash | ಈವರೆಗೆ ಭಾರತದಲ್ಲಿ ಸಂಭವಿಸಿದ ಪ್ರಮುಖ ವಿಮಾನ ದುರಂತಗಳ ಪಟ್ಟಿ ಇಲ್ಲಿದೆ

Public TV
By Public TV
44 minutes ago
Air India crash in Ahmedabad Hours before crash flier on same Air India jet reported AC failure cabin issues
Latest

ಪತನಗೊಂಡ ವಿಮಾನ ಅವ್ಯವಸ್ಥೆಯಿಂದ ಕೂಡಿತ್ತು- 2 ಗಂಟೆ ಮೊದಲು ಪ್ರಯಾಣಿಸಿದ್ದ ಪ್ರಯಾಣಿಕನ ಆಕ್ರೋಶ

Public TV
By Public TV
1 hour ago
Last Night In India Britons Instagram Post Before Boarding Doomed Air India Flight
Latest

ಭಾರತದಲ್ಲಿ ನನ್ನ ಕೊನೆಯ ರಾತ್ರಿ – ವಿಮಾನ ಹತ್ತುವ ಮುನ್ನ ಬ್ರಿಟನ್‌ ಪ್ರಯಾಣಿಕನ ಭಾವುಕ ಪೋಸ್ಟ್‌

Public TV
By Public TV
2 hours ago
gujarat cm vijay rupani
Latest

ವಿಮಾನ ಪತನ – ಗುಜರಾತ್‌ ಮಾಜಿ ಸಿಎಂ ವಿಜಯ್‌ ರೂಪಾನಿ ಸಾವು

Public TV
By Public TV
4 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?