ವಿಶ್ರಾಂತಿಗೆ ತೊಂದರೆ ಹಿನ್ನೆಲೆ ಸಿದ್ದಗಂಗಾ ಶ್ರೀಗಳು ಆಸ್ಪತ್ರೆಗೆ ಶಿಫ್ಟ್: ಕಿರಿಯ ಸ್ವಾಮೀಜಿ

Public TV
1 Min Read
TMK SIDDAGANGA SRI

ತುಮಕೂರು: ಸಿದ್ದಗಂಗಾ ಮಠದ ಸಿದ್ದಗಂಗಾ ಶ್ರೀಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಶ್ರೀಗಳು ಬೇಗ ಗುಣಮುಖರಾಗಲು ಉತ್ತಮ ಆರೈಕೆ ಅಗತ್ಯವಿದ್ದು, ಸೋಂಕು ಬೇಗ ವಾಸಿಯಾಗಬೇಕು ಎಂಬ ಉದ್ದೇಶದಿಂದ ಅವರನ್ನು ಸಿದ್ದಗಂಗಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಸಿದ್ದಗಂಗಾ ಕಿರಿಯ ಶ್ರೀಗಳು ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಕಿರಿಯ ಶ್ರೀಗಳು, ಮಠದ ವಾತಾವರಣದಲ್ಲಿ ಶ್ರೀಗಳಿಗೆ ಸೋಂಕು ತಗಲುವ ಸಾಧ್ಯತೆ ಇದ್ದು, ಮಠಕ್ಕೆ ವಿಐಪಿಗಳು ಹೆಚ್ಚಾಗಿ ಭೇಟಿ ನೀಡುತ್ತಿದ್ದಾರೆ. ಆದ್ದರಿಂದ ಆಸ್ಪತ್ರೆಗೆ ಶಿಫ್ಟ್ ಮಾಡುವ ನಿರ್ಧಾರ ಕೈಗೊಳ್ಳಲಾಗಿದೆ. ಯಾವುದೇ ಕಾರಣಕ್ಕೂ ನಾಡಿನ ಭಕ್ತರೂ ಇದನ್ನು ಅನ್ಯತ ತಿಳಿದುಕೊಳ್ಳಬಾರದು. ಶ್ರೀಗಳ ಆರೋಗ್ಯ ಉತ್ತಮವಾಗಿ ಚೇತರಿಕೆ ಆಗುತ್ತಿದೆ. ವಿಐಪಿಗಳ ಭೇಟಿಗೂ ಅವಕಾಶ ನಿರಾಕರಿಸಲಾಗಿದೆ ಎಂದು ಸ್ಪಷ್ಟಪಡಿಸಿದರು.

TMK SIDDAGANGA

ಮಠದಲ್ಲಿ ನಾವು ಎಷ್ಟೇ ಜಾಗೃತಿ ವಹಿಸಿದರು ಕೂಡ ಸೋಂಕು ತಗಲುವ ಸಾಧ್ಯತೆ ಇತ್ತು. ಅಲ್ಲದೇ ಚಿಕಿತ್ಸೆಗೆ ಬೇಕಾದ ಸೌಲಭ್ಯಗಳು ಕೂಡ ಆಸ್ಪತ್ರೆಯಲ್ಲಿ ಲಭ್ಯವಾಗುವ ಕಾರಣ ಈ ನಿರ್ಧಾರ ಕೈಗೊಳ್ಳಲಾಯಿತು. ಶ್ರೀ ಗಳಿಗೆ ಎಂದಿನಂತೆ ತಪಾಸಣೆ ಹಾಗೂ ಚಿಕಿತ್ಸೆ ಆಸ್ಪತ್ರೆಯಲ್ಲೇ ಮುಂದುವರಿಯುತ್ತದೆ. ಇಂದು ರೇಲಾ ಆಸ್ಪತ್ರೆಯಿಂದ ತಜ್ಞ ವೈದ್ಯರು ಕೂಡ ಪರಿಶೀಲನೆ ನಡೆಸಿದ್ದಾರೆ. ಆದ್ದರಿಂದ ಯಾರು ಆತಂಕಕ್ಕೆ ಒಳಪಡುವ ಅಗತ್ಯವಿಲ್ಲ ಎಂದರು.

ತುಮಕೂರು ಜಿಲ್ಲಾಧಿಕಾರಿ ಡಾ. ರಾಕೇಶ್ ಕುಮಾರ್ ಹಾಗೂ ಎಸ್‍ಪಿ ಡಾ ದಿವ್ಯಾ ಗೋಪಿನಾಥ್ ನೇತೃತ್ವದಲ್ಲಿ ಆಸ್ಪತ್ರೆ ಗೆ ಶಿಫ್ಟ್ ಮಾಡಲಾಯಿತು. ಮಠದಿಂದ ಝೀರೋ ಟ್ರಾಫಿಕ್ ಮೂಲಕ ಸಿದ್ದಗಂಗಾ ಆಸ್ಪತ್ರೆಗೆ ಶ್ರೀಗಳನ್ನು ಕರೆತರಲಾಯಿತು. ಶ್ರೀಗಳ ವಿಶ್ರಾಂತಿಗೆ ತೊಂದರೆ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *