Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Haveri | ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Haveri

ನಮ್ಮ ಸರ್ಕಾರದ ಸಾಧನೆ ಹೇಳೋಕೆ ಒಂದು ದಿನ ಸಾಲೋದಿಲ್ಲ: ಸಿದ್ದರಾಮಯ್ಯ

Public TV
Last updated: February 14, 2026 3:48 pm
Public TV
Share
3 Min Read
DK Shivakumar Siddaramaiah
SHARE

– ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ 141 ಸ್ಥಾನ ಬರುತ್ತೆ ಬರೆದಿಟ್ಟುಕೊಳ್ಳಿ ಎಂದ ಡಿಕೆಶಿ

ಹಾವೇರಿ: ಕಾಂಗ್ರೆಸ್‌ ಸರ್ಕಾರ (Congress Government) ಅಧಿಕಾರಕ್ಕೆ ಬಂದು 1,000 ದಿನಗಳನ್ನ ಪೂರೈಸಿದೆ. 590 ಭರವಸೆಗಳಲ್ಲಿ 234 ಭರವಸೆಗಳನ್ನ ಈಗಾಗಲೇ ಈಡೇರಿಸಿದ್ದೇವೆ. ನಮ್ಮದು ನುಡಿದಂತೆ ನಡೆದ ಸರ್ಕಾರ. ನಮ್ಮ ಸರ್ಕಾರದ ಸಾಧನೆ ಹೇಳುತ್ತಾ ಹೋದ್ರೆ ಒಂದು ದಿನ ಸಾಲೋದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬೆನ್ನುತಟ್ಟಿಕೊಂಡರು.

ರಾಜ್ಯ ಕಾಂಗ್ರೆಸ್‌ ಸರ್ಕಾರ 1,000 ದಿನಗಳು ಪೂರೈಸಿದ ಹಿನ್ನೆಲೆ ಹಾವೇರಿಯಲ್ಲಿ (Haveri) ಹಮ್ಮಿಕೊಳ್ಳಲಾಗಿದ್ದ ಭೂ ಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Haveri Samavesha

ಕೇಂದ್ರದಿಂದ ರಾಜ್ಯ ಸರ್ಕಾರಕ್ಕೆ ಅನ್ಯಾಯ
ಬಿಜೆಪಿಯವರಿಗೆ (BJP) ನಮ್ಮ ಸರ್ಕಾರದ ಮೇಲೆ ಆರೋಪ ಮಾಡುವ ನೈತಿಕ ಹಕ್ಕಿಲ್ಲ. ನಾವು ಮೆಕ್ಕೇಜೊಳ್ಳ ಖರೀದಿ ಕೇಂದ್ರ ತೆರೆದೆವು. ಕಬ್ಬಿಗೆ ಬೆಂಬಲ ಬೆಲೆ ನೀಡಿದೆವು. ನಮ್ಮ ಸರ್ಕಾರ ರೈತರ, ಹಿಂದುಳಿದ, ಅಲ್ಪಸಂಖ್ಯಾತರ, ಬಡವರ ಪರವಾಗಿದೆ. ನಮ್ಮ ಸರ್ಕಾರದ ಕೆಲಸ ಹೇಳುತ್ತಾ ಹೋದ್ರೆ ಒಂದು ದಿನ ಸಾಲೋದಿಲ್ಲ. 1 ಸಾವಿರ ದಿನ ಅನ್ನೋದು ಮೈಲಿಗಲ್ಲು ಅಲ್ಲ, ಇದು ಬದ್ಧತೆ. ಆದ್ರೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಬಹಳ ಅನ್ಯಾಯ ಮಾಡಿದೆ. ಜಿಎಸ್‌ಟಿ ನಲ್ಲಿ (GST) ಅನ್ಯಾಯ ಮಾಡಿದೆ ಎಂದು ಕಿಡಿ ಕಾರಿದ್ರು.

590 ರಲ್ಲಿ 234 ಭರವಸೆ ಈಡೇರಿಸಿದ್ದೇವೆ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳಾಗಿವೆ. ಹಾವೇರಿನಲ್ಲಿ ಇಷ್ಟೊಂದು ದೊಡ್ಡ ಕಾರ್ಯಕ್ರಮ ನಡೆಯುತ್ತೆ ಅಂದು ಕೊಂಡಿರಲಿಲ್ಲ. ಸರ್ಕಾರದ ವತಿಯಿಂದ ಕಾರ್ಯಕ್ರಮ ಆಯೋಜಕರಿಗೆ ಧನ್ಯವಾದ ಸಲ್ಲಿತ್ತೇನೆ. 2023ರ ಮೇ 20 ರಂದು ಅಧಿಕಾರಕ್ಕೆ ಬಂದ್ವಿ. ಚುನಾವಣೆ ವೇಳೆ ಕೊಟ್ಟ ಮಾತಿನಂತೆ ಕೆಲಸ ಮಾಡುತ್ತಿದ್ದೇವೆ. 590 ಭರವಸೆಗಳಲ್ಲಿ 234 ಭರವಸೆಗಳನ್ನು ಈಡೇರಿಸಿದ್ದೇವೆ. ಉಳಿದ ಭರವಸೆ ಈಡೇರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ. ನಾವು ನುಡಿದಂತೆ ನಡೆದಿದ್ದೇವೆ. ನಮ್ಮ ಸರ್ಕಾರ ನುಡಿದಂತೆ ನಡೆದ ಸರ್ಕಾರ ಎಂದು ಶ್ಲಾಘಿಸಿದ್ರು.

1000 ದಿನಗಳ ಸಾರ್ಥಕತೆ…
1 ಲಕ್ಷ ಕುಟುಂಬಗಳಿಗೆ ಹಕ್ಕುಪತ್ರದ ಗ್ಯಾರಂಟಿ!

ರಾಜ್ಯದಲ್ಲಿ ನಮ್ಮ ಕಾಂಗ್ರೆಸ್‌ ಸರ್ಕಾರ 1000 ದಿನಗಳನ್ನು ಪೂರೈಸಿರುವುದರ ಪ್ರಯುಕ್ತ ಹಾವೇರಿಯಲ್ಲಿ ಕಂದಾಯ ಇಲಾಖೆ ಮತ್ತು ಜಿಲ್ಲಾಡಳಿತ ವತಿಯಿಂದ ಹಮ್ಮಿಕೊಂಡಿದ್ದ ಭೂಗ್ಯಾರಂಟಿ ಸಮರ್ಪಣಾ ಸಮಾವೇಶದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು, ಕಂದಾಯ ಸಚಿವರಾದ… pic.twitter.com/HB6tabNyX5

— DK Shivakumar (@DKShivakumar) February 14, 2026

ಬಿಜೆಪಿ 4 ವರ್ಷ ಅಧಿಕಾರ ಮಾಡಿದ್ರು, ಶೇ.10 ರಷ್ಟು ಭರವಸೆಯನ್ನೂ ಈಡೇರಿಸಲಿಲ್ಲ. ಈಗ ನಮ್ಮ ಸರ್ಕಾರದ ಖಜಾನೆ ಖಾಲಿ ಆಗಿದೆ ಅಂತ ಸುಳ್ಳು ಆರೋಪ ಮಾಡ್ತಿದ್ದಾರೆ. ಖಜಾನೆ ಖಾಲಿ ಆಗಿದ್ರೆ ಇಂತಹ ಯೋಜನೆ ಜಾರಿಗೊಳಿಸುತ್ತಿರಲಿಲ್ಲ ಎಂದು ಸಿಎಂ ತಿರುಗೇಟು ನೀಡಿದ್ರು.

ಆದರ್ಶ ಇಲ್ಲದೇ ಸತ್ತರೆ ಬದುಕಿಗೆ ಅವಮಾನ
ಇನ್ನೂ ಡಿಸಿಎಂ ಡಿಕೆ ಶಿವಕುಮಾರ್‌ ಮಾತನಾಡಿ, ಭೂ ಮಾಲೀಕರ ಪರವಾಗಿ ಕೃಷ್ಣ ಬೈರೇಗೌಡ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಆದರ್ಶ ಇಲ್ಲದೇ ಸತ್ತರೆ ಬದುಕಿಗೆ ಅವಮಾನ. ನುಡಿದಂತೆ ನಡೆದು ನಿಮ್ಮ ಆಶೀರ್ವಾದ ಪಡೆಯಲು ಬಂದಿದ್ದೇವೆ. ʻಕಮಲ ಕೆರೆಯಲ್ಲಿದ್ದರೆ ಚಂದ… ತೆನೆ ಹೊಲದಲ್ಲಿದ್ದರೆ ಚಂದ… ಆದ್ರೆ ದಾನ ಧರ್ಮ ಮಾಡುವ ʻಕೈʼ ಅಧಿಕಾರದಲ್ಲಿದ್ದರೆ ಚಂದ. ಟೀಕೆ, ಆರೋಪ, ಅಪಪ್ರಚಾರಕ್ಕೆ ಸಾವಿದೆ. ನಾವು ಮಾಡುವ ಕೆಲಸಕ್ಕೆ ʻಗ್ಯಾರೆಂಟಿʼ ಸಾವಿಲ್ಲ ಎಂದು ನುಡಿದರು.

Haveri Convention

7ನೇ ಗ್ಯಾರಂಟಿ ನೀರಿನ ಗ್ಯಾರಂಟಿ
ಮುಂದುವರಿದು.. ಮಿಸ್ಟರ್ ಕುಮಾರಸ್ವಾಮಿ, ಯಡಿಯೂರಪ್ಪ, ವಿಜಯೇಂದ್ರ ಅವರೇ, ನೀವು ಇಂತಹ ಸಾಧನೆ ಕೆಲಸ ಮಾಡಿದ್ದೀರಾ? ನಾನು ಕೇಂದ್ರ ಸರ್ಕಾರಕ್ಕೆ ಕೇಳುತ್ತೇನೆ. ಕೃಷ್ಣಾ ಮೇಲ್ದಂಡೆ ಯೋಜನೆ, ಕಾವೇರಿ ಯೋಜನೆಯನ್ನ ನಮ್ಮ ಸರ್ಕಾರ ಕೈಗೆತ್ತಿಕೊಂಡಿದೆ. ಮರು ಡಿಪಿಆರ್ ತಯಾರು ಮಾಡುತ್ತಿದ್ದೇವೆ. ಕೃಷ್ಣಾ, ಕಾವೇರಿ, ಮಹದಾಯಿ ಯೋಜನೆ ಮೂಲಕ ನೀರಿನ ಧ್ವನಿ ನೀಡುತ್ತೇವೆ. 7ನೇ ಗ್ಯಾರಂಟಿ ನೀರಿನ ಗ್ಯಾರಂಟಿ ಆಗಿರುತ್ತೆ. ಮುಂದಿನ ಚುನಾವಣೆಯಲ್ಲಿ 141 ಸ್ಥಾನ ಕಾಂಗ್ರೆಸ್ ಬರುತ್ತವೆ ಬರೆದಿಟ್ಟುಕೊಳ್ಳಿ ಎಂದು ಎಚ್ಚರಿಸಿದ್ರು.

TAGGED:Congress conventionDK Shivakumarhaverisiddaramaiahಕಾಂಗ್ರೆಸ್ ಸಮಾವೇಶಡಿಕೆ ಶಿವಕುಮಾರ್ಸಿದ್ದರಾಮಯ್ಯಹಾವೇರಿ
Share This Article
Facebook Whatsapp Whatsapp Telegram

Cinema news

Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood

You Might Also Like

Rahul Gandhi Narendra Modi
Latest

ಪುಲ್ವಾಮಾ ದಾಳಿಗೆ 7 ವರ್ಷ – ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದ ಪ್ರಧಾನಿ ಮೋದಿ, ರಾಹುಲ್ ಗಾಂಧಿ

Public TV
By Public TV
2 minutes ago
freshwater crab
Latest

ಪಶ್ಚಿಮ ಘಟ್ಟದಲ್ಲಿ ಹೊಸ ಪ್ರಭೇದ ಸಿಹಿನೀರಿನ ಏಡಿ ಪತ್ತೆ

Public TV
By Public TV
7 minutes ago
Haveri Samavesha
Districts

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ 1,000 ದಿನಗಳ ಸಂಭ್ರಮ – ಹಾವೇರಿ ಸಮಾವೇಶದಲ್ಲಿ ಸಿಎಂ ಪ್ರತಿಮೆ ಅನಾವರಣ

Public TV
By Public TV
18 minutes ago
railway track
Bellary

ಬಳ್ಳಾರಿ, ಹೊಸಪೇಟೆ ನಡುವೆ ರೈಲ್ವೆ ಮಲ್ಟಿಟ್ರ‍್ಯಾಕ್ ನಿರ್ಮಾಣಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ

Public TV
By Public TV
22 minutes ago
Online Game
Explainer

Explainer | ಪಬ್‌ಜಿ, ಬ್ಲೂ ವೇಲ್‌, ಕೊರಿಯನ್‌ ಲವ್‌ ಗೇಮ್‌ – ಮಕ್ಕಳ ಜೀವ ಕಸಿಯುತ್ತಿದೆ ಆನ್‌ಲೈನ್‌ ಗೇಮಿಂಗ್‌ ಗೀಳು

Public TV
By Public TV
25 minutes ago
Mumbai Vande Bharat Express Train Man Arrested For Releasing Snake in Washroom
Latest

ಮುಂಬೈ-ಸೋಲಾಪುರ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಹಾವು ಬಿಟ್ಟ ವ್ಯಕ್ತಿ ಅರೆಸ್ಟ್

Public TV
By Public TV
42 minutes ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?