ಹುಬ್ಬಳ್ಳಿ: ಬಿಟ್ ಕಾಯಿನ್ ದಂಧೆಯಲ್ಲಿ ಪ್ರಭಾಗಳು ಇದ್ದಾರೆ. ಅದರ ಬಗ್ಗೆ ನಮಗೆ ಮಾಹಿತಿ ಇದೆ. ಆದರೆ ಕೇಂದ್ರ ತನಿಖಾ ಸಂಸ್ಥೆಯವರು ಅದನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡುತ್ತಿದ್ದಾರೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಹುಬ್ಬಳ್ಳಿಯಲ್ಲಿಂದು ಖಾಸಗಿ ಸಮಾರಂಭದಲ್ಲಿ ಭಾಗಿಯಾಗಿದ್ದ ಅವರು ಮಾಧ್ಯಮಗಳ ಜೊತೆ ಮಾತನಾಡಿ, ಬಿಟ್ ಕಾಯಿನ್ ದಂಧೆಯಲ್ಲಿ ಯಾರಿಗೂ ರಕ್ಷಣೆ ಕೊಡಬಾರದು. ಪ್ರಕರಣವನ್ನು ಮುಚ್ಚಿ ಹಾಕಬಾರದು. ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಅದೂ ಯಾರೇ ಇದ್ದರೂ ಶಿಕ್ಷೆ ಆಗಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಬಿಜೆಪಿಯವರಿಗೆ ಹಸುಗಳ ಮೇಲೆ ಪ್ರೀತಿ ಇದ್ದರೆ ಗೋಮಾಂಸ ರಫ್ತು ನಿಲ್ಲಿಸಲಿ: ಎಚ್.ಸಿ.ಮಹದೇವಪ್ಪ
ಬಿಟ್ ಕಾಯಿನ್ ದಂಧೆಯ ಬಗ್ಗೆ ಐಟಿ ಹಾಗೂ ಸಿಬಿಐಗೆ ರೆಫರ್ ಮಾಡಿದ್ದೇವೆ ಅಂತ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿಕೆಗೆ, ಇಷ್ಟು ದಿನ ಅವರು ಏನೂ ಮಾಡ್ತಿದ್ರು, ಮತ್ಯಾಕೆ ಮುಚ್ಚಿಟ್ಟರು. ಈಡಿಗೆ ಪ್ರಕರಣ ವರ್ಗಾಯಿಸಿದ್ದಾರೆ ಅಂದರೆ ಎನೂ ಆಗಿರಬೇಕಲ್ವಾ, ಇಲ್ಲಿಯವರೆಗೂ ಯಾಕೆ ರಕ್ಷಣೆ ನೀಡಿದರೂ. ಆ ಬಗ್ಗೆ ಇನ್ನಷ್ಟು ಮಾಹಿತಿ ಸಂಗ್ರಹಿಸುತ್ತೇವೆ ಎಂದು ತಿರುಗೇಟು ನೀಡಿದ್ದಾರೆ.
ಇದೇ ವೇಳೆ ಉಪಚುನಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಯಲ್ಲಿ ನಾವೂ ಗೆಲುವು ಸಾಧಿಸುತ್ತೇವೆ. ಹಾನಗಲ್ ಕ್ಷೇತ್ರದಲ್ಲಿ ನೂರಕ್ಕೆ ನೂರರಷ್ಟು ಗೆಲವು ಸಾಧಿಸುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇದನ್ನೂ ಓದಿ: ಡಿಕೆ ಶಿವಕುಮಾರ್ ಆಪ್ತನ ಮನೆ ಮೇಲೆ ಐಟಿ ಅಧಿಕಾರಿಗಳ ದಾಳಿ
ಬುಧವಾರ ಹಾನಗಲ್ ಪ್ರಚಾರದ ವೇಳೆ ಬಸವರಾಜ ಬೊಮ್ಮಾಯಿ ಅವರು ಹಾಕಿದ ಸವಾಲಿಗೆ ಪ್ರತಿಕ್ರಿಯಿಸಿದ ಅವರು, ಆ ಯಪ್ಪನಿಗೆ ಬಾ ಅಂತ ಹೇಳಿದ್ದೇನೆ. ನಾನು ಹೇಳಿ ಎಷ್ಟು ದಿನಾ ಆಯ್ತು. ಅವರ ಕ್ಷೇತ್ರ ಏನು ನೋಡೋದು. ಇವರು ಅಧಿಕಾರಕ್ಕೆ ಬಂದ ಮೇಲೆ ಒಂದೂ ರಸ್ತೆಯಾದರೂ ಹೊಸದಾಗಿ ಮಾಡಿದ್ದಾರಾ ಎಂದು ಟಾಂಗ್ ನೀಡಿದ್ದಾರೆ. ಇದನ್ನೂ ಓದಿ: ಬಲಿಪಾಡ್ಯಮಿ ದಿನ ದೇವಾಲಯಗಳಲ್ಲಿ ಗೋಪೂಜೆ ಕಡ್ಡಾಯ: ಧಾರ್ಮಿಕ ದತ್ತಿ ಇಲಾಖೆ
ಧಾರವಾಡದಲ್ಲಿ ಡಿಕೆ ಶಿವಕುಮಾರ ಆಪ್ತ ಯುಬಿ ಶೆಟ್ಟಿ ಸಹೋದರರ ಮೇಲೆ ಐಟಿ ದಾಳಿ ವಿಚಾರದ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಸಿದ್ದರಾಮಯ್ಯ ಅವರು, ನನಗೆ ಗೊತ್ತಿಲ್ಲಪ್ಪ ಅಂತ ಹೇಳಿ ಪ್ರತಿಕ್ರಿಯೆ ನೀಡದೇ ತೆರಳಿದರು.