Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಗಾಂಧಿ, ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಕಂಡ್ರೆ ಬಿಜೆಪಿಗೆ ಆಗ್ತಿರಲಿಲ್ಲ, ಈಗ ನಾಟಕ ಆಡ್ತಾರೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಗಾಂಧಿ, ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಕಂಡ್ರೆ ಬಿಜೆಪಿಗೆ ಆಗ್ತಿರಲಿಲ್ಲ, ಈಗ ನಾಟಕ ಆಡ್ತಾರೆ: ಸಿದ್ದರಾಮಯ್ಯ

Bengaluru City

ಗಾಂಧಿ, ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಕಂಡ್ರೆ ಬಿಜೆಪಿಗೆ ಆಗ್ತಿರಲಿಲ್ಲ, ಈಗ ನಾಟಕ ಆಡ್ತಾರೆ: ಸಿದ್ದರಾಮಯ್ಯ

Public TV
Last updated: September 26, 2021 2:25 pm
Public TV
Share
3 Min Read
siddaramaia 2
SHARE

ಬೆಂಗಳೂರು: ಗಾಂಧಿ, ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಯವರಿಗೆ ಆಗುತ್ತಿರಲಿಲ್ಲ. ಈಗ ಪ್ರೀತಿ ಇರುವಂತೆ ನಾಟಕ ಆಡುತ್ತಾರೆ ಎಂದು ವಿರೋಧ ಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಮಾಜಿ ಮುಖ್ಯಮಂತ್ರಿ, ದಿವಂಗತ ಆರ್. ಗುಂಡೂರಾವ್ ಅವರ ಜನ್ಮದಿನದ ಅಂಗವಾಗಿ ಗಾಂಧಿನಗರ ವಿಧಾನಸಭೆ ಕ್ಷೇತ್ರದ ಆಟದ ಮೈದಾನದಲ್ಲಿ ಇಂದು ಆಯೋಜಿಸಿದ್ದ ದಿನಸಿ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ವಂದೇ ಮಾತರಂ ಗೀತೆ ಆರಂಭವಾದದ್ದು ಸ್ವಾತಂತ್ರ್ಯ ಹೋರಾಟದಲ್ಲಿ, ಈಗ ಅದನ್ನು ಬಿಜೆಪಿ, ಆರ್.ಎಸ್.ಎಸ್ ಹೇಳಲು ಆರಂಭಿಸಿದೆ. ಆಗ ಸ್ವಾತಂತ್ರ್ಯ ಚಳವಳಿ ನಡೆಯುವಾಗ ಅದರಿಂದ ದೂರ ಇದ್ದರು. ಮೊದಲು ಗಾಂಧಿ, ಅಂಬೇಡ್ಕರ್, ಸರ್ದಾರ್ ವಲ್ಲಭಭಾಯಿ ಪಟೇಲ್ ಅವರನ್ನು ಕಂಡರೆ ಬಿಜೆಪಿಗೆ ಆಗುತ್ತಿರಲಿಲ್ಲ. ಈಗ ಇದ್ದಕ್ಕಿದ್ದಂತೆ ಅವರ ಮೇಲೆ ಪ್ರೀತಿಯ ನಾಟಕವಾಡಲು ಆರಂಭಿಸಿದ್ದಾರೆ. ನಾವು ಆರಂಭಿಸಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಂದ್ ಮಾಡಿ ಬಡವರು ತಿನ್ನುವ ಅನ್ನಕ್ಕೆ ಕಲ್ಲು ಹಾಕಿದ ದುಷ್ಟ ಸರ್ಕಾರ ರಾಜ್ಯದಲ್ಲಿದೆ. ಇದನ್ನು ಕಿತ್ತೊಗೆಯುವ ಸಂಕಲ್ಪವನ್ನು ಜನ ಮಾಡಬೇಕು ಎಂದು ಕಿಡಿಕಾರಿದ್ದಾರೆ.

siddaramaia 1

ನಾನು ಜನತಾ ಪಾರ್ಟಿಯಿಂದ ಶಾಸಕನಾಗಿ ಆಯ್ಕೆಯಾದಾಗ ಗುಂಡೂರಾವ್ ಅವರು ಆಡಳಿತದಲ್ಲಿ ಇದ್ದರು, ಅವರು ಹೇಗೆ ಅಜಾನುಬಾಹುವಾಗಿದ್ದರೋ, ಅಷ್ಟೇ ಹೃದಯವೈಶಾಲ್ಯತೆಯನ್ನು ಹೊಂದಿದ್ದರು. ರಾಜಕಾರಣಿಗಳಿಗೆ ಹೃದಯ ವೈಶಾಲ್ಯತೆ ಇದ್ದಾಗ ಮಾತ್ರ ಬಡವರು, ದಲಿತರು, ದಮನಿತರ ಪರವಾಗಿ ಸ್ಪಂಧಿಸಲು ಸಾಧ್ಯವಾಗುತ್ತದೆ. ಗುಂಡೂರಾವ್ ಸಾಮಾನ್ಯ ಕುಟುಂಬದಿಂದ ಬಂದು ಮುಖ್ಯಮಂತ್ರಿ ಸ್ಥಾನಕ್ಕೇರಿದ ಸಾಧಕರು ಎಂದು ಹೊಗಳಿದ್ದಾರೆ. ಇದನ್ನೂ ಓದಿ: ನಾನು ಕಾಂಗ್ರೆಸ್‍ಗೆ ಹೋಗ್ತೀನೆಂದು ಹೇಳಿಕೆ ಕೊಡುವವರಿಗೆಲ್ಲಾ ತಲೆ ಕೆಟ್ಟಿದೆ: ಶಿವಲಿಂಗೇಗೌಡ

siddu11

ಗುಂಡೂರಾವ್ ಅವರು ಇಂದಿರಾ ಗಾಂಧಿ ಅವರ ಆಶೀರ್ವಾದದಿಂದ ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ನೇರ ನಡೆ, ನುಡಿಯ ಸ್ವಭಾವ, ಬಡವರಿಗೆ ಸ್ಪಂದಿಸುವ ಅವರ ಗುಣ ಇಂದಿಗೂ ಜನರ ಮನದಲ್ಲಿ ಶಾಶ್ವತವಾಗಿ ನೆಲೆಸಿದೆ. ಗುಂಡೂರಾವ್ ಅವರ ಕಾಲದಲ್ಲಿ ಬಡವರಿಗೆ ಅಕ್ಕಿ ನೀಡುವ ಕಾರ್ಯಕ್ರಮ ಆರಂಭಿಸಲಾಗಿತ್ತು. ನಾನು ಮುಖ್ಯಮಂತ್ರಿ ಆದ ಮೇಲೆ ಮೊದಲು ಒಂದು ರೂಪಾಯಿಗೆ ಐದು ಕೆ.ಜಿ ಅಕ್ಕಿ ನೀಡಿದೆ. ನಂತರ 1 ಕೋಟಿ 20 ಲಕ್ಷ ಕುಟುಂಬಗಳಿಗೆ ತಲಾ ಏಳು ಕೆ.ಜಿ ಉಚಿತವಾಗಿ ಅಕ್ಕಿ ನೀಡಿದೆ. ಈಗ ಕುಮಾರಸ್ವಾಮಿ ಅನ್ನಭಾಗ್ಯ ಯೋಜನೆಗೆ ನಾನು ಅನುದಾನ ನೀಡಿದೆ ಅಂತ ಸುಳ್ಳು ಹೇಳುತ್ತಾರೆ.

siddaramaiah

ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವ ಮೊದಲೇ ಈ ಯೋಜನೆ ನಾನು ಜಾರಿಗೆ ತಂದಿದ್ದೆ. ಅಲ್ಲದೇ ಈ ದೇಶದಲ್ಲಿ ಎಲ್ಲರಿಗೂ ಬಟ್ಟೆ ಮತ್ತು ಹೊಟ್ಟೆ ತುಂಬಾ ಅನ್ನ ಸಿಗುವುದಿಲ್ಲವೋ ಅಲ್ಲಿಯವರೆಗೆ ನಾನು ಅರೆಬೆತ್ತಲಾಗಿಯೇ ಇರುತ್ತೇನೆ ಎಂದು ಗಾಂಧೀಜಿ ಅವರು ಹೇಳಿದ್ದರು. ರಾಜ್ಯದ ಜನರ ಹಸಿವು ನೀಗಿಸುವ ಕೆಲಸವನ್ನು ದಿನೇಶ್ ಗುಂಡೂರಾವ್ ಅವರು ನಮ್ಮ ಸರ್ಕಾರದ ಅವಧಿಯಲ್ಲಿ ಅತ್ಯಂತ ಪರಿಣಾಮಕಾರಿಯಾಗಿ ನಿಭಾಯಿಸಿದ್ದರು ಎಂದು ಹೆಮ್ಮೆಯಿಂದ ಹೇಳಲು ಬಯಸುತ್ತೇನೆ ಎಂದು ನುಡಿದಿದ್ದಾರೆ. ಇದನ್ನೂ ಓದಿ: ಒಳ್ಳೆಯ ಕೆಲಸ ಮಾಡಿದ್ದರೆ ಯಡಿಯೂರಪ್ಪರನ್ನ ಸಿಎಂ ಸ್ಥಾನದಿಂದ ಇಳಿಸುತ್ತಿರಲಿಲ್ಲ: ಡಿಕೆಶಿ

HDK 2

ಟಬು ರಾವ್ ಅವರ ಅಧ್ಯಕ್ಷತೆಯಲ್ಲಿ ಗುಂಡೂರಾವ್ ಫೌಂಡೇಶನ್ ಆರಂಭವಾಗಿದೆ. ಇದು ಬಡ ಜನರಿಗೆ ಅಕ್ಕಿ ಹಾಗೂ ಕೊರೊನಾದಿಂದ ಮೃತಪಟ್ಟ ಕುಟುಂಬಗಳಿಗೆ ರೂ. 10 ಸಾವಿರದ ಚೆಕ್ ನೀಡುವ ಜನಪರ ಕಾರ್ಯವನ್ನು ಮಾಡುತ್ತಿದೆ. ಸರ್ಕಾರ ಮಾಡಬೇಕಿದ್ದ ಕೆಲಸವನ್ನು ದಿನೇಶ್ ಗುಂಡೂರಾವ್ ಅವರ ಕುಟುಂಬ ಮಾಡುತ್ತಿದೆ. ಈ ವರ್ಷ ಒಂದರಲ್ಲೇ 30,000 ಜನರಿಗೆ ಆಹಾರ ಕಿಟ್ ಹಂಚಿದ್ದಾರೆ. ಇಂಥ ಜನಪರ ಕಾರ್ಯಕ್ಕೆ ಅವರನ್ನು ಅಭಿನಂದಿಸಲು ಬಯಸುತ್ತೇನೆ. ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಮಾರ್ಗದರ್ಶನದಲ್ಲಿ ಇದೇ ರೀತಿ ರಾಜ್ಯಾದ್ಯಂತ ನಮ್ಮ ಶಾಸಕರು, ಕಾರ್ಯಕರ್ತರು ಜನರ ಕಷ್ಟಕ್ಕೆ ನೆರವಾಗಿದ್ದಾರೆ.

TAGGED:bengalurubjpFormer Chief Minister R. Gundu RaoPublic TVsiddaramaiahಪಬ್ಲಿಕ್ ಟಿವಿಬಿಜೆಪಿಬೆಂಗಳೂರುಮಾಜಿ ಮುಖ್ಯಮಂತ್ರಿ ಗುಂಡೂರಾವ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

sudeep vijayalakshmi
ಸುದೀಪ್ ಮಾತಿಗೆ ದರ್ಶನ್ ಪತ್ನಿ ವಿಜಯಲಕ್ಷ್ಮಿ ಟಕ್ಕರ್
Cinema Latest Sandalwood Top Stories
rajath Chaitra
ಕಂಟೆಸ್ಟೆಂಟ್‌ಗಳಲ್ಲ.. ಅತಿಥಿಗಳು – ಬಿಗ್‌ಬಾಸ್ ಮನೆಯಿಂದ ಹೊರಬಂದ ಚೈತ್ರಾ, ರಜತ್
Cinema Latest Sandalwood Top Stories
calendar movie
ಕ್ಯಾಲೆಂಡರ್ ಹೆಸರಿನಲ್ಲಿ ಬಂತು ಸಿನಿಮಾ: ಆದರ್ಶ್ ನಾಯಕ
Cinema Latest Sandalwood Top Stories
KGF
7ನೇ ವರ್ಷದ ಸಂಭ್ರಮದಲ್ಲಿ ಕೆಜಿಎಫ್ ಚಾಪ್ಟರ್-1
Cinema Latest Sandalwood Top Stories

You Might Also Like

Maharashtra Local Polls BJP
Latest

ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಅತಿದೊಡ್ಡ ಪಕ್ಷ; ಮಹಾಯುತಿ ಮೈತ್ರಿಗೆ ಭರ್ಜರಿ ಗೆಲುವು

Public TV
By Public TV
2 hours ago
MOHAN BHAGAWAT
Latest

ಬಿಜೆಪಿಗೆ ಆರ್‌ಎಸ್‌ಎಸ್ ಹೋಲಿಕೆ ಮಾಡುವುದು ತಪ್ಪು: ಮೋಹನ್ ಭಾಗವತ್

Public TV
By Public TV
2 hours ago
kollur temple accused arrest
Latest

ಉಡುಪಿ| ಕೊಲ್ಲೂರು ದೇಗುಲದ ಹೆಸರಲ್ಲಿ ನಕಲಿ ವೆಬ್‌ಸೈಟ್; ಭಕ್ತರ ವಂಚಿಸುತ್ತಿದ್ದ ಆರೋಪಿ ರಾಜಸ್ಥಾನದಲ್ಲಿ ಅಂದರ್‌

Public TV
By Public TV
3 hours ago
GBA
Bengaluru City

ಬೆಂಗಳೂರು| ಇ-ಖಾತಾ ಗೋಲ್ಮಾಲ್‌; ಜಿಬಿಎ ಅಧಿಕಾರಿಗಳೇ ಶಾಮೀಲು ಆರೋಪ

Public TV
By Public TV
3 hours ago
Kolakatta Lagnajita Chakraborty
Crime

ದೇವರ ಹಾಡು ಹಾಡಿದ್ದನ್ನು ಆಕ್ಷೇಪಿಸಿ ಗಾಯಕಿ ಲಗ್ನಜಿತಾ ಚಕ್ರವರ್ತಿಗೆ ಕಿರುಕುಳ – ಆರೋಪಿ ಅರೆಸ್ಟ್

Public TV
By Public TV
3 hours ago
pm modi assam
Latest

ನುಸುಳುಕೋರರಿಗೆ ಕಾಂಗ್ರೆಸ್ ರಕ್ಷಣೆ: ಮೋದಿ ವಾಗ್ದಾಳಿ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?