Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಹಸಿರು ಶಾಲು ಹಾಕಿದ್ರೆ ರೈತರು ಉದ್ದಾರ ಆಗುತ್ತಾರಾ?: ಬಿಎಸ್‍ವೈಗೆ ಸಿದ್ದರಾಮಯ್ಯ ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಹಸಿರು ಶಾಲು ಹಾಕಿದ್ರೆ ರೈತರು ಉದ್ದಾರ ಆಗುತ್ತಾರಾ?: ಬಿಎಸ್‍ವೈಗೆ ಸಿದ್ದರಾಮಯ್ಯ ಟಾಂಗ್

Bengaluru City

ಹಸಿರು ಶಾಲು ಹಾಕಿದ್ರೆ ರೈತರು ಉದ್ದಾರ ಆಗುತ್ತಾರಾ?: ಬಿಎಸ್‍ವೈಗೆ ಸಿದ್ದರಾಮಯ್ಯ ಟಾಂಗ್

Public TV
Last updated: March 5, 2020 3:58 pm
Public TV
Share
3 Min Read
Siddu BSY
SHARE

– ಬಿಎಸ್‍ವೈ ಮಂಡ್ಯದಲ್ಲಿ ಲಿಂಬೆಹಣ್ಣಿನ ವ್ಯಾಪಾರ ಮಾಡಿದವ್ರು
– ಮಹದಾಯಿಯಲ್ಲಿ ಬಿಜೆಪಿಯವರ ಪಾತ್ರ ಏನಿದೆ?

ಬೆಂಗಳೂರು: ದೇಶದ ಆರ್ಥಿಕ ಪರಿಸ್ಥಿತಿ ಅಧೋಗತಿಗೆ ಹೋಗಿದೆ. ಕೇಂದ್ರ ಸರ್ಕಾರದ ಜಿಡಿಪಿ ಶೇ.4.6 ಇದೆ. ನಮ್ಮ ಪ್ರಕಾರ ಶೇ.4 ಇದೆ. ರಾಜ್ಯದಲ್ಲಿ 19-20ಕ್ಕೆ ನಿರೀಕ್ಷೆಗಿಂತ ಶೇ.1 ರಷ್ಟು ಕಡಿಮೆಯಾಗಿದೆ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬಜೆಟ್ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಕೃಷಿ, ಕೈಗಾರಿಕೆ ಸೇವಾವಲಯ ಮೂರು ಕ್ಷೇತ್ರದಲ್ಲಿ ಕಡಿಮೆಯಾಗಿದೆ. ಕೈಗಾರಿಕೆಯಲ್ಲಿ ಶೇ.5.6 ಇತ್ತು, ಈಗ 5.6 ಆಗಿದೆ. ಸೇವಾ ವಲಯ ಶೇ.9.9 ಇತ್ತು, ಈಗ ಶೇ.7 ಕ್ಕೆ ಇಳಿದಿದೆ. ಕೃಷಿಗೆ ಏನೇನು ಕೊಟ್ಟಿಲ್ಲ. ನೀರಾವರಿಗೆ 21 ಸಾವಿರ ಕೋಟಿ ನೀಡಿದ್ದಾರೆ. ಅದೂ ಸಣ್ಣ ನೀರಾವರಿ ಸೇರಿ ಮಹದಾಯಿಗೆ 500 ಕೋಟಿ ರೂ. ಎತ್ತಿನಹೊಳೆಗೆ 1500 ಕೋಟಿ ರೂ. ನೀಡಿದ್ದಾರೆ. ಕೃಷ್ಣಾ ಮೇಲ್ದಂಡೆ ಯೋಜನೆಗೆ 40 ಸಾವಿರ ಕೋಟಿ ಬೇಕು ಎಂದು ಹೇಳಿದರು.  ಇದನ್ನೂ ಓದಿ: ಸಂಚಾರಿ ಕೃಷಿ ಹೆಲ್ತ್ ಕ್ಲಿನಿಕ್, ಸಣ್ಣ ರೈತರಿಗೆ 10 ಸಾವಿರ – ಕೃಷಿಗೆ ಸಿಕ್ಕಿದ್ದು ಏನು?

BSY

ಹಸಿರು ಶಾಲು ಹಾಕಿದರೆ ರೈತರು ಉದ್ದಾರ ಆಗುತ್ತಾರಾ? ಯಡಿಯೂರಪ್ಪ ವ್ಯವಸಾಯ ಮಾಡಿದ್ದಾರೊ ಗೊತ್ತಿಲ್ಲ. ಏಕೆಂದ್ರೆ ಅವರು ಮಂಡ್ಯದಲ್ಲಿ ಲಿಂಬೆಹಣ್ಣಿನ ವ್ಯಾಪಾರ ಮಾಡಿಕೊಂಡಿದ್ದರು. ನಾನೂ ಮೂರು ವರ್ಷ ಹಸಿರು ಶಾಲು ಹಾಕಿಕೊಂಡಿದ್ದೆ. ಅವರು ಯಾವುದಾದರೂ ಶಾಲು ಹಾಕಿಕೊಳ್ಳಲಿ. ಬಜೆಟ್‍ನಲ್ಲಿ ಸುಳ್ಳು ಹೇಳುವುದೇಕೆ? ನೀರಾವರಿ ಕೃಷಿಗೆ ಯಾವುದೇ ವಿಶೇಷ ಅನುದಾನ ನೀಡಿಲ್ಲ ಎಂದು ತಿಳಿಸಿದರು.

ಮಹದಾಯಿ ಕ್ರೆಡಿಟ್ ಅನ್ನು ಬಿಜೆಪಿಯವರು ತೆಗೆದುಕೊಳ್ಳುತ್ತಿದ್ದಾರೆ. ನಮ್ಮ ಅವಧಿಯಲ್ಲಿ ಹೋರಾಟ ಮಾಡಿದ್ದೇವೆ. ಸುಪ್ರೀಂಕೋರ್ಟ್ ನಮ್ಮ ಪರವಾಗಿ ತೀರ್ಪು ನೀಡಿತ್ತು. ಇದರಲ್ಲಿ ಬಿಜೆಪಿಯವರ ಪಾತ್ರ ಏನಿದೆ? ಗೋವಾ ಸಿಎಂ ಜೊತೆ ಮಾತನಾಡಲು ಇವರಿಗೆ ಆಗಲಿಲ್ಲ. ಮಹದಾಯಿ ಯೋಜನೆಯನ್ನು ಕನಿಷ್ಠ 2 ವರ್ಷದಲ್ಲಿ ಪೂರ್ಣಗೊಳಿಸಬೇಕು. ಆದ್ಯತೆ ಮೇಲೆ ಹೆಚ್ಚಿನ ಅನುದಾನ ನೀಡಬೇಕು. ಹೊಸ ಕಾರ್ಯಕ್ರಮ ಯಾವುದೂ ಇಲ್ಲ ಎಂದು ಹೇಳಿದರು. ಇದನ್ನೂ ಓದಿ: ಮಹದಾಯಿಗೆ 500 ಕೋಟಿ, ಎತ್ತಿನಹೊಳೆಗೆ 1500 ಕೋಟಿ – ನೀರಾವರಿಗೆ ಸಿಕ್ಕಿದ್ದು ಏನು?

mahadayi 1

2021ರ ಹೊಸ ಘೋಷಣೆಗಳು ಎಂದು ಹೇಳುತ್ತಾರೆ. ಭಾಗ್ಯಲಕ್ಷ್ಮಿ, ಸೈಕಲ್ ಯೋಜನೆ ಮಾತ್ರ ಹೇಳಿದ್ದಾರೆ. ಆಹಾರ ಇಲಾಖೆಗೆ ಶೇ. 1 ಅನುದಾನ ಕಡಿಮೆ ಮಾಡಿದ್ದಾರೆ. ಯಾವ ಯೋಜನೆ ನಿಲ್ಲಿಸುತ್ತಾರೊ ಗೊತ್ತಿಲ್ಲ. ಎಸ್‍ಸಿಪಿಟಿಎಸ್‍ಪಿಯಲ್ಲಿ 30,150 ಕೋಟಿ ರೂ. ಇತ್ತು. ಈಗ 26,131 ಕೋಟಿ ರೂ. ಇದೆ. ಸುಮಾರು 4 ಸಾವಿರ ಕೋಟಿ ಹೆಚ್ಚಳವಾಗಬೇಕಿತ್ತು. ಬಜೆಟ್ ಗಾತ್ರ ಹೆಚ್ಚಾದಂತೆ ಆ ಯೋಜನೆಗೂ ಹೆಚ್ಚಿನ ಅನುದಾನ ನೀಡಬೇಕಿತ್ತು. ಮೂಗಿಗೆ ತುಪ್ಪ ಹಚ್ಚಲು ಘೋಷಣೆ ಮಾಡಿದ್ದಾರೆ.

ರೈತರ ಸಾಲ ಮನ್ನಾ ಯೋಜನೆ ಏನಾಯಿತು ಎಂದು ಹೇಳಬೇಕಿತ್ತು. ಈ ಬಗ್ಗೆ ಎಲ್ಲಿಯೂ ಪ್ರಸ್ತಾಪವಿಲ್ಲ. ಲ್ಯಾಂಡ್ ಬ್ಯಾಂಕ್‍ಗಳ ಸುಸ್ತಿ ಬಡ್ಡಿ ಮನ್ನಾ ಮಾಡುವುದಾಗಿ ಹೇಳಿದ್ದರು ಅದನ್ನೂ ಪ್ರಸ್ತಾಪಿಸಿಲ್ಲ. ಇವರು ರೈತರ ಪರಾನಾ ಅಥವಾ ವಿರೋಧಿನಾ? ಇದು ರೈತ ವಿರೋಧಿ ಬಜೆಟ್ ಎಂದು ದೂರಿದರು.

farmer

ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಅಂತ ಹೇಳುತ್ತಿದ್ದಾರೆ. ಆದರೆ ಅಲ್ಪ ಸಂಖ್ಯಾತರಿಗೆ ಯಾವುದೇ ಯೋಜನೆ ನೀಡಿಲ್ಲ. ಹಿಂದುಳಿದವರು, ಪರಿಶಿಷ್ಟರಿಗೆ ಯಾವುದೇ ವಿಶೇಷ ಯೋಜನೆ ಘೊಷಣೆ ಇಲ್ಲ. ಕಲ್ಯಾಣ ಕರ್ನಾಟಕ ಅಂತ ಘೋಷಣೆ ಮಾಡಿದ್ದರು. ನಾವು ಎಷ್ಟು ಹಣ ಇಟ್ಟಿದ್ದೇವು ಅಷ್ಟೇ ಹಣ ಇಟ್ಟಿದ್ದಾರೆ. ಎಲ್ಲ ಪಕ್ಷದವರು ಸೇರಿ 2,500 ಕೋಟಿ ರೂ. ನೀಡುವಂತೆ ಮನವಿ ಮಾಡಿದ್ದರು. 371-ಜೆ,ಗೆ ವಿರೋಧ ಮಾಡಿದವರು ಬಿಜೆಪಿಯವರು. ಕಲ್ಯಾಣ ಕರ್ನಾಟಕ ಘೋಷಣೆ ಮಾಡಿ ಅಭಿವೃದ್ಧಿ ಮಾಡಬೇಕಲ್ಲ. ಬರಿ ಢೋಂಗಿ ಘೋಷಣೆ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಬೆಂಗಳೂರಿಗೆ 10 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೆ. ಇವರು 8 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದಾರೆ. ಮೆಟ್ರೋ ಫೆರಿಫರೆಲ್ ರಿಂಗ್ ರೋಡ್ ಬಗ್ಗೆ ಪ್ರಸ್ತಾಪವಿಲ್ಲ. ಬೆಂಗಳೂರು ಚಿತ್ರವನ್ನು ಆರು ತಿಂಗಳಲ್ಲಿ ಬದಲಾವಣೆ ಮಾಡುವುದಾಗಿ ಸಿಎಂ ಹೇಳಿದ್ದರು. ಸಬ್ ಅರ್ಬನ್ ರೈಲು ಮೂರು ವರ್ಷದಿಂದ ಹೇಳುತ್ತಿದ್ದಾರೆ. ಕೇಂದ್ರದವರು 1 ಕೋಟಿ ರೂ. ಇಟ್ಟಿದ್ದಾರೆ. ಇವರು 500 ಕೋಟಿ ಮೀಸಲಿಟ್ಟಿದ್ದಾರೆ. ಇದು ಟೇಕ್ ಆಪ್ ಆಗಲ್ಲ ಎಂದು ಹೇಳಿದರು.

ಸಾಲ ತೆಗೆದುಕೊಳ್ಳಲು ಅವಕಾಶ ಇದೆ. ಜಿಡಿಪಿಯ ಶೇ.25 ರಷ್ಟು ಸಾಲ ತೆಗೆದುಕೊಳ್ಳಬೇಕು. 16.99 ಲಕ್ಷ ರೂ. ಜಿಡಿಪಿ ಇದೆ. ಆರ್ಥಿಕ ಶಿಸ್ತು ಮೀರಿಲ್ಲ. ಹೊಸ ಕಾರ್ಯಕ್ರಮ ಯಾವುದೂ ಇಲ್ಲ. ಸಾಮಾಜಿಕ ನ್ಯಾಯಕ್ಕೆ ದೊಡ್ಡ ಹೊಡೆತ ಬಿದ್ದಿದೆ. ಹೆಸರು ಬದಲಾಯಿಸಿದಷ್ಟೇ ಬದಲಾವಣೆ. ಈ ಬಜೆಟ್ ಯಾವುದೇ ಮುನ್ನೋಟವಿಲ್ಲ ಎಂದು ಹೇಳಿದರು.

ಪೆಟ್ರೋಲ್, ಡೀಸೆಲ್ ತೆರಿಗೆ ಹೆಚ್ಚಳ ಮಾಡಿದ್ದಾರೆ. ಕುಡಯೋರಿಗೆ ತೆರಿಗೆ ಹೆಚ್ಚಳ ಮಾಡಿದ್ದಾರೆ. ಬಜೆಟ್ ಮೂಲಕ ಬಿಜೆಪಿಯವರು ಜನರಿಗೆ ದ್ರೋಹ ಮಾಡಲು ಹೊರಟಿದ್ದಾರೆ. ಕೇಂದ್ರದಲ್ಲಿ ಇವರದ್ದೇ ಸರ್ಕಾರ ಇದೆ. ರಾಮರಾಜ್ಯ ಮಾಡುವುದಾಗಿ ಹೇಳಿದ್ದರು. ಅಲ್ಲಿಂದಲೂ ಯಾವುದೇ ಹಣ ಬರುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು.

TAGGED:Budget 2020cm yeddyurappaPublic TVsiddaramaiahಪಬ್ಲಿಕ್ ಟಿವಿಬಜೆಟ್ಬಿ.ಎಸ್.ಯಡಿಯೂರಪ್ಪಸಿಎಂಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

rashmika mandanna
ಮದುವೆಯಂದು ರಶ್ಮಿಕಾ ಮಿನಿಮಲ್ ಮೇಕಪ್ ಹಾಕಿದ್ದು ಯಾಕೆ – ಗುಟ್ಟು ಬಿಚ್ಚಿಟ್ಟ ಮೇಕಪ್ ಆರ್ಟಿಸ್ಟ್‌
Cinema Latest Sandalwood South cinema
Suhana Khan
ಮಗಳನ್ನೇ ಸಹೋದ್ಯೋಗಿ ಥರ ನೋಡುವ ಶಾರುಖ್ ಖಾನ್!
Bollywood Cinema Latest Top Stories
trisha krishnan
ಶ್ರೀಮಂತ ಉದ್ಯಮಿಯನ್ನ ಮದ್ವೆಯಾಗಿ, 4 ಮಕ್ಕಳನ್ನು ಬೆಳೆಸುತ್ತಿದ್ದೇನೆ – ಸಿನಿಮಾ ನಿವೃತ್ತಿ ವದಂತಿಗೆ ನಟಿ ತ್ರಿಶಾ ಕೌಂಟರ್
Cinema Latest South cinema Top Stories
Rashmika Mandanna
ಕೊಡಗಿನಲ್ಲಿ ರಶ್ಮಿಕಾ – ವಿಜಯ್‌ ಡಿನ್ನರ್‌ ಪಾರ್ಟಿ; ಕೊಡವ ಶೈಲಿಯ ಭರ್ಜರಿ ಆತಿಥ್ಯ!
Cinema Kodagu Latest Main Post Sandalwood South cinema

You Might Also Like

Peenya Flyover
Bengaluru City

ಮುಂದಿನ ವಾರ ತುಮಕೂರು ರಸ್ತೆ ಫ್ಲೈಓವರ್‌ ಬಂದ್‌ ಸಾಧ್ಯತೆ

Public TV
By Public TV
25 minutes ago
lokayukta police arrest chief officer of sirwara town panchayat for accepting bribe of rs 1 lakh
Crime

1 ಲಕ್ಷ ಲಂಚ ಪಡೆದು ಪರಾರಿಗೆ ಯತ್ನ – ಅಧಿಕಾರಿಯನ್ನು ಚೇಸ್ ಮಾಡಿ ಹಿಡಿದ ʻಲೋಕಾʼ ಪೊಲೀಸರು

Public TV
By Public TV
60 minutes ago
CJ Roy
Bengaluru City

ಮಾನಸಿಕ ಖಿನ್ನತೆಯಿಂದ ಸಿಜೆ ರಾಯ್‌ ಆತ್ಮಹತ್ಯೆ – ಎಸ್‌ಐಟಿ ತನಿಖೆ ಪೂರ್ಣ

Public TV
By Public TV
1 hour ago
Heat Waves Beach
Dakshina Kannada

ಕರಾವಳಿ ಜಿಲ್ಲೆಗಳಲ್ಲಿ ಬಿಸಿಗಾಳಿ ಎಚ್ಚರಿಕೆ – ಯೆಲ್ಲೋ ಅಲರ್ಟ್‌ ಜಾರಿ

Public TV
By Public TV
2 hours ago
Tejasvi Surya
Bengaluru City

TCS World 10K: 10 ಕಿ.ಮೀ. ರಸ್ತೆಯನ್ನು ಶೀಘ್ರವೇ ರಿಪೇರಿ ಮಾಡಿ – ಸರ್ಕಾರಕ್ಕೆ ತೇಜಸ್ವಿ ಸೂರ್ಯ ಮನವಿ

Public TV
By Public TV
2 hours ago
shivamogga hulikal ghat hill collapse three labours died
Districts

ಹುಲಿಕಲ್ ಘಾಟಿ ಬಳಿ ಗುಡ್ಡ ಕುಸಿತ – ಮಣ್ಣಿನಡಿ ಸಿಲುಕಿದ್ದ ಮೂರು ಮೃತದೇಹಗಳು ಪತ್ತೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?