ದಾವಣಗೆರೆ: ಮತ್ತೊಮ್ಮೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಬೇಕೆಂದು ಅಭಿಮಾನಿಯೊಬ್ಬ ಬಾಳೆ ಹಣ್ಣಿನ ಮೇಲೆ ಬರೆದು ದೇವರ ಮೇಲೆ ಎಸೆದಿದ್ದಾನೆ.
ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಂಜಿತ್ ಎಂಬಾತ ಮತ್ತೊಮ್ಮೆ ಮುಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಗಬೇಕೆಂದು ದೇವರಲ್ಲಿ ಬೇಡಿಕೆ ಇಟ್ಟಿದ್ದಾನೆ. ಹೀಗಾಗಿ ದಾವಣಗೆರೆ ಜಿಲ್ಲೆಯ ಹೊನ್ನಾಳಿ ಹಿರೇಕಲ್ಮಠ ರಥೋತ್ಸವದ ವೇಳೆ ಬಾಳೆ ಹಣ್ಣಿನ ಮೇಲೆ ಮತ್ತೊಮ್ಮೆ ಸಿಎಂ ಸಿದ್ದರಾಮಯ್ಯ ಎಂದು ಬರೆದು ದೇವರ ರಥದ ಮೇಲೆ ಎಸೆದಿದ್ದಾರೆ. ಇದೀಗ ಈ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಇದನ್ನೂ ಓದಿ: ಹಾಲು ಮಾರಾಟಗಾರನ ಹತ್ಯೆ – ಮೋದಿ ಭೇಟಿ ಸಮಯದಲ್ಲೇ ಗುಜರಾತ್ನಲ್ಲಿ ಗುಂಪು ಘರ್ಷಣೆ
ಜಾತ್ರಾಮಹೋತ್ಸವದಲ್ಲಿ ರಥೋತ್ಸವಕ್ಕೆ ಬಯಕೆ ಈಡೇರಲೆಂದು ಹಣ್ಣು ಜವಣೆ ಎಸೆಯುವ ಪದ್ದತಿ ಇದೆ. ಇದೇ ರೀತಿ ಈ ಹಿಂದೆ ಆರ್ಸಿಬಿ ಅಭಿಮಾನಿಯೊಬ್ಬರು ಈ ಸಲ ಕಪ್ ನಮ್ದೆ ಎಂದು ಬಾಳೆ ಹಣ್ಣಿನ ಮೇಲೆ ಬರೆದು, ಬಾಳೆ ಹಣ್ಣಿನ ಜೊತೆಗೆ ಹತ್ತು ರೂಪಾಯಿ ಇಟ್ಟು ಪ್ರಾರ್ಥನೆ ಮಾಡಿ ರಥದ ಮೇಲೆ ಎಸೆದಿದ್ದರು. ಇದನ್ನೂ ಓದಿ: ಪಠ್ಯ, ಪುಸ್ತಕ ಪರಿಷ್ಕರಣೆಗೆ ಮುಂದುವರಿದ ವಿರೋಧ- ತಮ್ಮ ಕವಿತೆಯನ್ನು ಬಳಸಬೇಡಿ: ರೂಪಾ ಹಾಸನ