ಮೋದಿ ವಿರುದ್ಧ 100 ಕೋಟಿ ರೂ. ಮಾನನಷ್ಟ ಕೇಸ್!

Public TV
1 Min Read
MODI CM 1

ಬೆಂಗಳೂರು: ಸಿದ್ದರಾಮಯ್ಯ ಸರ್ಕಾರವನ್ನು 10% ಸರ್ಕಾರ ಎಂದು ಆರೋಪಿಸಿದ್ದ ಪ್ರಧಾನಿ ಮೋದಿ, ಅಮಿತ್ ಶಾ ಹಾಗೂ ಬಿಎಸ್ ಯಡಿಯೂರಪ್ಪ ಅವರ ವಿರುದ್ಧ ಮಾನನಷ್ಟ ಕೇಸ್ ಹಾಕಲು ಸಿಎಂ ಮುಂದಾಗಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ನಾಯಕ ಉಗ್ರಪ್ಪ ಈ ನಾಯಕರು ತಮ್ಮ ಹೇಳಿಕೆಗೆ ಕ್ಷಮೆ ಕೇಳಬೇಕು. ಇಲ್ಲದೇ ಇದ್ದರೆ 100 ಕೋಟಿ ರೂ. ಮಾನಷ್ಟ ಕೇಸ್ ಹಾಕಲಾಗುವುದು ಎಂದು ತಿಳಿಸಿದರು.

CM 5

ಮೋದಿ, ಬಿಎಸ್‍ವೈ, ಅಮಿತ್ ಶಾ ಅವರಿಗೆ ಸಿಎಂ ಸಿದ್ದರಾಮಯ್ಯ ಇಂದು ಬೆಳಗ್ಗೆ ನೋಟಿಸ್ ಜಾರಿ ಮಾಡಿದ್ದಾರೆ. ಬಿಜೆಪಿ ನಾಯಕರು ಹೇಳಿಕೆಯಿಂದ ಪಕ್ಷ ಹಾಗೂ ತಮಗೇ ತೀವ್ರ ನಷ್ಟ ಉಂಟುಮಾಡಿದೆ ಎಂದು ತಿಳಿಸಿದ್ದಾರೆ. ಅಲ್ಲದೇ ಈ ನೋಟಿಸ್ ಗೆ ಉತ್ತರಿಸದೇ ಇದ್ದರೆ ಕ್ರಿಮಿನಲ್ ಹಾಗೂ ಸಿವಿಲ್ ಮಾನನಷ್ಟ ಕೇಸ್ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಪ್ರಧಾನಿ ಮೋದಿ ಹಾಗೂ ಅಮಿತ್ ಶಾ, ಬಿಎಸ್‍ವೈ ಪಕ್ಷದ ಹಾಗೂ ನನ್ನ ಮೇಲೆ ಆಧಾರ ರಹಿತ ಆರೋಪ ಮಾಡಿದ್ದಾರೆ. `ನಂಗಾ ನಾಚ್’ ಸರ್ಕಾರ, `10% ಸರ್ಕಾರ’ ಹಾಗೂ ರಾಜ್ಯದ ಮಂಗಳೂರು ಭಾಗದಲ್ಲಿ ನಡೆದ ಹತ್ಯೆಗಳನ್ನು ಕಾಂಗ್ರೆಸ್ ಪ್ರೇರಿತ ಎಂದು ಆರೋಪಿಸಿದ್ದಾರೆ. ಈ ಆರೋಪಗಳಿಗೆ ಸೂಕ್ತ ದಾಖಲೆಗಳನ್ನು ನೀಡಬೇಕು ಎಂದು ಸೂಚಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *