ಮೈಸೂರು: ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಆಗಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಇದೀಗ ಹರಕೆ ಒಪ್ಪಿಸಿದ್ದಾರೆ.
ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದಲ್ಲಿರುವ ಸಿದ್ದರಾಮಯ್ಯ ಅವರ ಮನೆ ದೇವರು ಸಿದ್ದರಾಮೇಶ್ವರ ದೇವರಿಗೆ ಹರಕೆ ತೀರಿಸಿದ್ದಾರೆ. ಅನಿವಾಸಿ ಭಾರತೀಯ ರವಿಮಹಾದೇವ, ದೇವರಿಗೆ ಚಿನ್ನಲೇಪಿತ ಬೆಳ್ಳಿಯ ನಾಗಾಭರಣ ನೀಡಿ ಹರಕೆ ಸಲ್ಲಿಸಿದ್ದಾರೆ.
ದೇವೇಗೌಡನಹುಂಡಿಯ ಮಹಾದೇವರ ಪುತ್ರ ರವಿ ಸದ್ಯ ಸೌದಿ ಅರೇಬಿಯಾದಲ್ಲಿ ವಾಸವಾಗಿದ್ದಾರೆ. ಸಾಗರೋತ್ತರ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಹಾಗೂ ಜಂಟಿ ಕಾರ್ಯದರ್ಶಿ ಕೂಡ ಆಗಿದ್ದು, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಹರಕೆ ಅರ್ಪಣೆ ಮಾಡಿದ್ದಾರೆ.
Web Stories