ಕಲಬುರಗಿ: ಆಪರೇಷನ್ ಆಡಿಯೋ ತನಿಖೆಯನ್ನು ಎಸ್ಐಟಿಗೆ ತನಿಖೆ ವಹಿಸುವುದರ ಹಿಂದೆ ಮಾಜಿ ಸಿಎಂ ಸಿದ್ದರಾಮಯ್ಯ ಅವರಿದ್ದು, ಅವರೇ ದೋಸ್ತಿ ಸರ್ಕಾರದ ವಿಲನ್ ಎಂದು ಮಾಜಿ ಡಿಸಿಎಂ ಆರ್ ಅಶೋಕ್ ಆರೋಪಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ದೋಸ್ತಿ ಸರ್ಕಾರಕ್ಕೆ ಸಿದ್ದರಾಮಯ್ಯ ಅವರು ದೊಡ್ಡ ವಿಲನ್. ಆಪರೇಷನ್ ಆಡಿಯೋ ಎಸ್ಐಟಿ ತನಿಖೆ ವಹಿಸುವುದರ ಹಿಂದೆ ಸಿದ್ದರಾಮಯ್ಯ ಅವರು ಇದ್ದಾರೆ. ಪ್ರಕರಣದಲ್ಲಿ ಸಿಎಂ ಕುಮಾರಸ್ವಾಮಿ ಅವರನ್ನು ಸಿಲುಕಿಸುವುದೇ ಪ್ಲಾನ್ ಆಗಿದೆ ಎಂದು ಆರೋಪಿಸಿದರು.
ಸರ್ಕಾರವನ್ನು ಉರುಳಿಸಲು ಸಿದ್ದರಾಮಯ್ಯ ಅವರು ಪ್ರಯತ್ನಿಸುತ್ತಿದ್ದಾರೆ. ಅವರು ಕೀ ಕೊಟ್ಟ ವೇಳೆ ಬೆಂಬಲಿಗ ಶಾಸಕರು ಮುಂಬೈ ಸೇರಿದಂತೆ ವಿವಿಧೆಡೆ ಓಡಿ ಹೋಗುತ್ತಾರೆ. ಸಿದ್ದರಾಮಯ್ಯ ಹೇಳಿದ ಕೂಡಲೇ ಎಲ್ಲವೂ ಸರಿಯಾಗುತ್ತದೆ. ಮತ್ತೆ ಅವರೇ ಸರ್ಕಾರ ಉರುಳಿಸಲು ಕಾರಣರಾಗಿದ್ದಾರೆ. ನಮ್ಮ ಮೇಲೆ ಕಾರಣವಿಲ್ಲದೇ ಆರೋಪ ಮಾಡಿದ್ದಾರೆ ಎಂದರು.
ರಾಜ್ಯದಲ್ಲಿ ಲೋಕಸಭಾ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದೆ. ಪ್ರಧಾನಿ ಮೋದಿ ಅವರು ಕಲಬುರಗಿಯಲ್ಲಿ ಸಮಾವೇಶಕ್ಕೆ ಆಗಮಿಸುತ್ತಾರೆ. ಈ ತಯಾರಿಗೆ ಜಿಲ್ಲೆಗೆ ಭೇಟಿ ನೀಡಿದ್ದೇನೆ. ಮಾರ್ಚ್ 01 ರಂದು ಕಾರ್ಯಕ್ರಮ ನಡೆಯುತ್ತದೆ. ಮುಂದಿನ ದಿನಗಳಲ್ಲಿ ರಾಜ್ಯ ವಿವಿಧ ಪ್ರದೇಶಗಳಲ್ಲೂ ಕೂಡ ಸಮಾವೇಶ ನಡೆಯುತ್ತದೆ. ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನಗಳನ್ನು ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv