Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಖುಷಿ ಪಡುವೆ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಖುಷಿ ಪಡುವೆ: ಸಿದ್ದರಾಮಯ್ಯ

Bengaluru City

‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಖುಷಿ ಪಡುವೆ: ಸಿದ್ದರಾಮಯ್ಯ

Public TV
Last updated: December 8, 2022 9:55 am
Public TV
Share
3 Min Read
SIDDRAMIHA 1
SHARE

ಬೆಂಗಳೂರು: ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ‘ರೈತರಾಮಯ್ಯ’, ‘ಕನ್ನಡ ರಾಮಯ್ಯ’, ‘ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ (Sidramullah Khan) ಎಂದು ಕರೆದರೆ ಅದಕ್ಕೂ ಖುಷಿಪಡುವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಸರಣಿ ಟ್ವೀಟ್ ಮೂಲಕ ಶಾಸಕ  ಸಿ.ಟಿ ರವಿ (C.T Ravi) ಮತ್ತು ಬಿಜೆಪಿಗೆ (BJP) ತಿರುಗೇಟು ನೀಡಿದ್ದಾರೆ.

BJP 1

ಟ್ವೀಟ್‍ನಲ್ಲಿ ಏನಿದೆ?
ಸುಳ್ಳು, ಅಪಪ್ರಚಾರ ಮತ್ತು ಚಾರಿತ್ರ್ಯಹನನವನ್ನೇ ರಾಜಕೀಯ ಪ್ರಚಾರದ ಸರಕನ್ನಾಗಿ ಮಾಡಿಕೊಂಡ ಬಿಜೆಪಿ ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿ ನಡೆಸುತ್ತಿರುವ ಅಪಪ್ರಚಾರದಲ್ಲಿ ಅಚ್ಚರಿಪಡುವಂತಹದ್ದೇನಿಲ್ಲ. ಶೂನ್ಯ ಸಾಧನೆ, ಭ್ರಷ್ಟಾಚಾರ, ಅನಾಚಾರಗಳ ಮಸಿ ಬಳಿದುಕೊಂಡ ಮುಖ ತೋರಿಸಿ ಮತಯಾಚನೆ ಮಾಡಲಿಕ್ಕಾಗುತ್ತದೆಯೇ? ಮೈತುಂಬ ಕಪ್ಪು ಬಳಿದುಕೊಂಡ ದುಷ್ಟರಿಗೆ ಬಿಳಿಬಟ್ಟೆ ನೋಡಿದಾಕ್ಷಣ ಕಪ್ಪು ಬಳಿಯೋಣ ಎಂದು ಮನಸ್ಸಾಗುವುದು ಸಹಜ ಗುಣ. ಇದು ಅವರ ಸೋಲು, ಹತಾಶೆ ಮತ್ತು ಅಸಹಾಯಕತೆಯನ್ನು ಸೂಚಿಸುತ್ತದೆ. ಒಂದು ಕಾಲದಲ್ಲಿ ಒಂದಷ್ಟು ಸಭ್ಯಸ್ಥರು ಇದ್ದ ಬಿಜೆಪಿಯಲ್ಲಿ ಇಂತಹ ನೈತಿಕ ಅಧ:ಪತನಕ್ಕೆ ಬಿದ್ದಿರುವುದರ ಬಗ್ಗೆ ಎಲ್ಲರೂ ಸಂತಾಪ ಸೂಚಿಸೋಣ. ಇದನ್ನೂ ಓದಿ: ಕಾಫಿನಾಡಲ್ಲಿ ಮನೆ-ಮನೆಗೆ ತೆರಳಿ ಸಿ.ಟಿ.ರವಿ ಭಿಕ್ಷಾಟನೆ

siddu

ಸಿದ್ರಮುಲ್ಲಾಖಾನ್ ಎಂದು ನನ್ನ ಹೆಸರಿಗೆ ಮುಸ್ಲಿಂ ಹೆಸರು ಸೇರಿಸಿರುವ ಬಗ್ಗೆ ನನಗೇನು ಬೇಸರವಿಲ್ಲ. ಗೋವಿಂದ ಭಟ್ಟರ ಶಿಷ್ಯರಾದ ಶಿಶುನಾಳ ಷರೀಪ್, ಸಂತ ರಮಾನಂದರ ಶಿಷ್ಯರಾದ ಕವಿ ಕಬೀರರ ಪರಂಪರೆ ನಮ್ಮದು. ಆದ್ದರಿಂದ ಮುಸ್ಲಿಂ ಹೆಸರನ್ನು ನನ್ನ ಹೆಸರಿಗೆ ಜೋಡಿಸಿ ಜಾತ್ಯತೀತತೆಯ ನನ್ನ ನಂಬಿಕೆಯನ್ನು ಪುರಸ್ಕರಿಸಿದ್ದಾರೆ. ಹಿಂದೂ ಕೋಮುವಾದದಷ್ಟೇ ಸ್ಪಷ್ಟತೆ ಮತ್ತು ಬದ್ಧತೆಯಿಂದ ನಾನು ಮುಸ್ಲಿಂ ಮತ್ತಿತರ ಧರ್ಮಗಳ ಕೋಮುವಾದವನ್ನೂ ವಿರೋಧಿಸುತ್ತಾ ಬಂದಿದ್ದೇನೆ. ಬಿಜೆಪಿ ರೀತಿಯಲ್ಲಿ ರಾಜಕೀಯ ಕಾರಣಕ್ಕಾಗಿ ಒಳ್ಳೆಯವರು-ಕೆಟ್ಟವರು ಎಂಬ ಭೇದವಿಲ್ಲದೆ ಸಾರಾಸಗಟಾಗಿ ಮುಸ್ಲಿಮರನ್ನು ಗುರಿಯಾಗಿಟ್ಟುಕೊಂಡ ಕೋಮುವಾದದ ರಾಜಕೀಯವನ್ನು ನಾನು ಮಾಡಿದವನಲ್ಲ. ಮುಸ್ಲಿಂ ಬಂಧುಗಳ ಮೂಲಭೂತ ಅವಶ್ಯಕತೆಗಳಾದ ಭದ್ರತೆ, ಶಿಕ್ಷಣ, ಆರೋಗ್ಯ, ಉದ್ಯೋಗಳನ್ನು ಒದಗಿಸಲು ಮುಂಗಡಪತ್ರದಲ್ಲಿ ನ್ಯಾಯಬದ್ಧವಾದ ಪಾಲನ್ನು ಎತ್ತಿಟ್ಟು ಕಾರ್ಯಕ್ರಮಗಳನ್ನು ಅನುಷ್ಠಾನಕ್ಕೆ ತಂದಿದ್ದೇನೆ. ಈ ಬಗ್ಗೆ ನನಗೆ ಹೆಮ್ಮೆಯೂ ಇದೆ, ಅಭಿಮಾನವೂ ಇದೆ.

tippu

ಟಿಪ್ಪು ಸುಲ್ತಾನ ಜಯಂತಿಯನ್ನು ವಿವಾದವನ್ನಾಗಿ ಮಾಡಿ ಬಿಜೆಪಿ ಹುಟ್ಟುಹಾಕಿದ ವಿವಾದ ಮತ್ತು ಗಲಭೆಗಳು ರಾಜಕೀಯ ಪ್ರೇರಿತವಾದುದು ಎಂದು ರಾಜ್ಯದ ಜನರಿಗೆ ಮನದಟ್ಟಾಗಿದೆ. ಬಿಜೆಪಿಯ ಮುಖ್ಯಮಂತ್ರಿಗಳಿಂದ ಹಿಡಿದು ಸಚಿವ-ಶಾಸಕರ ವರೆಗೆ ಎಲ್ಲರೂ ಬಗೆಬಗೆಯ ವೇಷಧರಿಸಿ ಟಿಪ್ಪು ಜಯಂತಿ ಆಚರಿಸಿರುವುದನ್ನು ಜನ ನೋಡಿದ್ದಾರೆ. ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಆಗಿದ್ದಾಗ ಟಿಪ್ಪುವಿನ ಬಗ್ಗೆ 400 ಪುಟಗಳ ಪುಸ್ತಕ ಬರೆಸುವ ಜೊತೆಗೆ ಟಿಪ್ಪುವನ್ನು ಕೊಂಡಾಡಿ ಮುನ್ನುಡಿಯನ್ನೂ ಬರೆದಿದ್ದರು. ವಿಧಾನಮಂಡಲದ ವಜ್ರಮಹೋತ್ಸವ ಸಮಾರಂಭದಲ್ಲಿ ಭಾಗವಹಿಸಿದ್ದ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರು ತಮ್ಮ ಭಾಷಣದಲ್ಲಿ ಟಿಪ್ಪು ಸುಲ್ತಾನನ (Tipu Sultan) ಸಾಧನೆಗಳನ್ನು ಉಲ್ಲೇಖಿಸಿ ಶ್ಲಾಘಿಸಿದ್ದರು. ನಾನು ಮುಖ್ಯಮಂತ್ರಿಯಾಗಿದ್ದಾಗ ಹಿಂದೂ ಯುವಕರ ಕೊಲೆ ನಡೆದಿತ್ತು ಎಂಬ ಸುಳ್ಳು ಪ್ರಚಾರವನ್ನೂ ಬಿಜೆಪಿ ನಡೆಸುತ್ತಿದೆ. ಇದನ್ನೂ ಓದಿ: ನಾನು ಹಿಂದೂ ಹುಲಿನೇ, ಮುಲ್ಲಾ ಅಂತ ಕರೆಯೋಕ್ಕಾಗಲ್ಲ: ಸಿ.ಟಿ ರವಿ

ಮುಖ್ಯಮಂತ್ರಿಯಾಗಿ ಜನರಿಗಾಗಿ ಮಾಡಿರುವ ಸೇವೆಯನ್ನು ಗುರುತಿಸಿ ಬಹಳಷ್ಟು ಜನ ನನ್ನನ್ನು ‘ಅನ್ನರಾಮಯ್ಯ’, ರೈತರಾಮಯ್ಯ, ಕನ್ನಡ ರಾಮಯ್ಯ, ದಲಿತರಾಮಯ್ಯ ಎಂದೆಲ್ಲಾ ಕರೆಯುತ್ತಾರೆ. ಅದೇ ರೀತಿ ಮುಸ್ಲಿಂ ಸಮುದಾಯಕ್ಕೆ ಮಾಡಿರುವ ಕೆಲಸವನ್ನು ಗುರುತಿಸಿ ನನ್ನನ್ನು ‘ಸಿದ್ರಮುಲ್ಲಾ ಖಾನ್’ ಎಂದು ಕರೆದರೆ ಅದಕ್ಕೂ ಖುಷಿಪಡುವೆ.
4/13#ಧರ್ಮರಾಜಕಾರಣ

— Siddaramaiah (@siddaramaiah) December 7, 2022

ಶೋಭಾ ಅವರು ರಾಜ್ಯದಲ್ಲಿ 24 ಹಿಂದೂಗಳ ಹತ್ಯೆಗಳು ನಡೆದಿವೆ ಎಂದು ಕೇಂದ್ರ ಗೃಹಸಚಿವರಾದ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದರು. ಅದರಲ್ಲಿ ಜೀವಂತವಿದ್ದ ವ್ಯಕ್ತಿಯ ಹೆಸರನ್ನೂ ಸೇರಿಸಲಾಗಿತ್ತು. ಬಿಜೆಪಿಯವರು ಹೇಳುತ್ತಿರುವ ಹನ್ನೊಂದು ಹಿಂದೂಗಳ ಹತ್ಯೆಯಲ್ಲಿ ಆರೋಪಿಗಳಾಗಿದ್ದವರು ಎಸ್‍ಡಿಪಿಐ ಮತ್ತು ಪಿಎಫ್‍ಐ ಸದಸ್ಯರು. ಅವರ ವಿರುದ್ಧ ಪ್ರಕರಣ ದಾಖಲಿಸಿ ಆರೋಪ ಪಟ್ಟಿ ಸಲ್ಲಿಸಲಾಗಿದೆ. ಪರೇಶ್ ಮೇಸ್ತಾ ಎಂಬ ಯುವಕನ ಸಾವು ಹತ್ಯೆಯಲ್ಲ ಎಂದು ಸಿಬಿಐ ಇತ್ತೀಚೆಗೆ ಹೇಳಿರುವುದು ಬಿಜೆಪಿ ಸುಳ್ಳುಗಳನ್ನು ಬಯಲುಮಾಡಿದೆ. ನಮ್ಮ ಸರ್ಕಾರದ ಅವಧಿಯಲ್ಲಿ 11 ಮುಸ್ಲಿಂ ಯುವಕರ ಹತ್ಯೆಯೂ ನಡೆದಿತ್ತು. ಈ ಹತ್ಯೆಗಳ ಎಲ್ಲ ಆರೋಪಿಗಳು ಬಜರಂಗದಳ ಮತ್ತಿತರ ಸಂಘಪರಿವಾರದ ಸಂಘಟನೆಗಳ ಕಾರ್ಯಕರ್ತರಾಗಿದ್ದಾರೆ. ಅವರ ವಿರುದ್ಧವೂ ಪ್ರಕರಣಗಳನ್ನು ದಾಖಲಿಸಿತ್ತು. ಈ ಪ್ರಕರಣಗಳ ಸಮಗ್ರ ಮಾಹಿತಿಯನ್ನು ಅಂದಿನ ಗೃಹಸಚಿವರು ಪುಸ್ತಕ ರೂಪದಲ್ಲಿ ಪ್ರಕಟಿಸಿದ್ದಾರೆ.

ಕರ್ನಾಟಕದ ಜನತೆ ಪ್ರಜ್ಞಾವಂತರಿದ್ದಾರೆ, ಸರಿ-ತಪ್ಪುಗಳನ್ನು ಅರ್ಥಮಾಡಿಕೊಳ್ಳುವಷ್ಟು ವಿವೇಕವುಳ್ಳವರಾಗಿದ್ದಾರೆ. ಆದ್ದರಿಂದ ಅಪಪ್ರಚಾರ ನಡೆಸಿದಷ್ಟು ಅಪಪ್ರಚಾರ ನಡೆಸಿದವರೇ ರಾಜ್ಯದ ಜನರ ಮುಂದೆ ಬತ್ತಲಾಗುತ್ತಾರೆ ಎನ್ನುವುದು ನನಗೆ ಗೊತ್ತು. ನನ್ನ ವಿರುದ್ಧದ ಅಪಪ್ರಚಾರವನ್ನು ನಿಲ್ಲಿಸಬೇಕೆಂದು ನಾನೇನು ಮನವಿ ಮಾಡುವುದಿಲ್ಲ. ಆದರೆ ಇಂತಹ ಅಪಪ್ರಚಾರಗಳಿಗೆ ಹೆದರಿ ಬಿಜೆಪಿ ಸರ್ಕಾರದ ದುರಾಡಳಿತ, ಭ್ರಷ್ಟಾಚಾರ ಮತ್ತು ಕೋಮುವಾದದ ರಾಜಕಾರಣದ ವಿರುದ್ಧದ ನನ್ನ ಹೋರಾಟವನ್ನು ನಾನು ನಿಲ್ಲಿಸುತ್ತೇನೆ ಎಂದು ತಿಳಿದುಕೊಂಡರೆ ಅದು ಮೂರ್ಖತನ ಅಷ್ಟೇ ಎಂದು ಸರಣಿ ಟ್ವೀಟ್ ಮೂಲಕ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

Live Tv
[brid partner=56869869 player=32851 video=960834 autoplay=true]

TAGGED:CT RavisiddaramaiahSidramullah KhanTipu Sultanಕಾಂಗ್ರೆಸ್ಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

prakash raj
ಜ.29-ಫೆ.6ರವರೆಗೆ 17ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ – ರಾಯಭಾರಿಯಾಗಿ ಪ್ರಕಾಶ್ ರಾಜ್ ಆಯ್ಕೆ
Bengaluru City Cinema Districts Karnataka Latest Sandalwood Top Stories
Sudeep
ರೂಮಿನಲ್ಲಿ ಕೆಟ್ಟ ವಾಸನೆ ಬಂದ್ರೆ ಬಿಟ್ಟಿದ್ದು ಯಾರು ಅನ್ನೋದು ಬಿಟ್ಟವನಿಗೆ ಮಾತ್ರ ಗೊತ್ತಿರುತ್ತೆ: ಸುದೀಪ್‌
Cinema Karnataka Latest Main Post National Sandalwood South cinema
Dhurandhar
600 ಕೋಟಿಯತ್ತ ಧುರಂಧರ್ ಕಲೆಕ್ಷನ್ – FA9LA ಸಾಂಗ್‌ಗೆ ಹೆಜ್ಜೆ ಹಾಕಿದ ಶಿಲ್ಪಾ ಶೆಟ್ಟಿ
Bollywood Cinema Latest Top Stories
Sudeep
`ಯುದ್ಧಕ್ಕೆ ಸಿದ್ಧ.. ನಾವು ನಮ್ಮ ಮಾತಿಗೆ ಬದ್ಧ’ – ಸುದೀಪ್ `ಯುದ್ಧ’ ಸಾರಿದ್ದು ಯಾರ ವಿರುದ್ಧ..?
Bengaluru City Cinema Dharwad Districts Karnataka Latest Main Post Sandalwood

You Might Also Like

rahul gandhi kn rajanna
Bengaluru City

ರಾಹುಲ್ ಗಾಂಧಿಗೆ ಕೆ.ಎನ್.ರಾಜಣ್ಣ ಪತ್ರ – ಸಿಎಂ ಸಿದ್ದರಾಮಯ್ಯ ಪರ ಬ್ಯಾಟಿಂಗ್

Public TV
By Public TV
15 minutes ago
Chitradurga Pregnant Suicide
Chitradurga

ಕೌಟುಂಬಿಕ ಕಲಹ – 2 ತಿಂಗಳ ಗರ್ಭಿಣಿ ನೇಣಿಗೆ ಶರಣು

Public TV
By Public TV
17 minutes ago
Hassan Retired soldier Suicide
Bengaluru City

ಮಾನಸಿಕ ಖಿನ್ನತೆ – ಪಿಸ್ತೂಲ್‌ನಿಂದ ತಲೆಗೆ ಗುಂಡು ಹಾರಿಸಿಕೊಂಡು ನಿವೃತ್ತ ಯೋಧ ಆತ್ಮಹತ್ಯೆ

Public TV
By Public TV
21 minutes ago
virat kohli 4
Bengaluru City

ಬೆಂಗಳೂರಿನಲ್ಲೇ ಕೊಹ್ಲಿ ಆಡಲಿದ್ದಾರೆ, ಆದ್ರೆ ಚಿನ್ನಸ್ವಾಮಿಯಲ್ಲಿ ಅಲ್ಲ!

Public TV
By Public TV
53 minutes ago
Kannada professor thief arrested 262 grams of gold ornaments and cash worth Rs. 32 lakh seized from the arrested woman bengaluu Police
Bengaluru City

ವೀಕ್ ಡೇಸ್‌ನಲ್ಲಿ ಕನ್ನಡ ಪ್ರೊಫೆಸರ್, ವೀಕೆಂಡ್‌ನಲ್ಲಿ ಖರ್ತನಾಕ್ ಕಳ್ಳಿ – ಮದ್ವೆ ಮನೆಯೇ ಟಾರ್ಗೆಟ್‌!

Public TV
By Public TV
1 hour ago
Chamarajanagar Leopard Cage
Chamarajanagar

ಚಿರತೆ ಸೆರೆಗೆ ಇಟ್ಟಿದ್ದ ಬೋನಿಗೆ ರೈತ ಲಾಕ್ – 3 ಗಂಟೆ ಒದ್ದಾಟದ ಬಳಿಕ ಸ್ಥಳೀಯರಿಂದ ರಕ್ಷಣೆ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?