ಎಚ್‍ಡಿಕೆ ಅಪ್ಪ, ಅಣ್ಣ, ಮಗ ಸೋತಿಲ್ವಾ: ಸಿದ್ದರಾಮಯ್ಯ ತಿರುಗೇಟು

Public TV
2 Min Read
siddu hdk

ಬೆಂಗಳೂರು: ಕುಮಾರಸ್ವಾಮಿ ಹೇಳಿಕೆಗೆ ರಿಯಾಕ್ಟ್ ಮಾಡಲ್ಲ. ಅವರ ಭಾಷೆ ಅವರ ಸಂಸ್ಕೃತಿ ತೋರಿಸುತ್ತದೆ. ಚುನಾವಣೆಯಲ್ಲಿ ಸೋಲು ಗೆಲುವು ನಿರ್ಧಾರ ಮಾಡುವುದು ಮತದಾರ. ಮತದಾರ ಕೊಟ್ಟ ತೀರ್ಪನ್ನು ನಾವು ಸ್ವೀಕಾರ ಮಾಡಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದರು.

ನಗರದ ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿದ್ದರಾಮಯ್ಯ ಅವರು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಹರಿಹಾಯ್ದಿದ್ದಾರೆ. ನಾನು ಸೋತಿದ್ದೇನೆ. ಅವರ ಅಪ್ಪ ಸೋತಿಲ್ವಾ? ಮಗ ಸೋತಿಲ್ವಾ? ಅಣ್ಣ ಸೋತಿಲ್ವಾ? ಎಂದು ಕಿಡಿಕಾರಿದ ಅವರು, ಪ್ರಜಾಪ್ರಭುತ್ವದಲ್ಲಿ ಜನರ ತೀರ್ಪು ಅಂತಿಮ. ನಾನು ಜೆಡಿಎಸ್‌ನಲ್ಲಿ ರಾಜ್ಯಾಧ್ಯಕ್ಷ ಆಗಿದ್ದಾಗ ಈ ಕುಮಾರಸ್ವಾಮಿ ಎಲ್ಲಿದ್ದರೂ ಎನ್ನುವುದೇ ಗೊತ್ತಿಲ್ಲ. ನಾನೇಕೆ ಇವರ ಮುಂದೆ ಹೋಗಿ ಕೈ ಕಟ್ಟಿ ನಿಲ್ಲಲಿ. ಕಣ್ಣೀರು ಹಾಕಲಿ ಎಂದು ಪ್ರಶ್ನಿಸಿದರು.

HDD DEVEGOWDA

ಈಗ ರಾಜ್ಯದ ಜನರ ಮುಂದೆ ಕಣ್ಣೀರು ಹಾಕುತ್ತಿರುವುದು ಯಾರೆಂದು ಗೊತ್ತಿದೆ. ನಾನೇಕೆ ಕಣ್ಣಿರು ಹಾಕಲಿ. ಇವರ ಭಾಷೆ ಇವರ ರಾಜಕೀಯ ಸಂಸ್ಕೃತಿ ತೋರಿಸುತ್ತದೆ. ನನ್ನನ್ನು ಕಂಡರೆ ಕುಮಾರಸ್ವಾಮಿಗೆ ಭಯ. ನನ್ನ ವಿರುದ್ಧ ಮಾತನಾಡಿದರೆ ಅವರಿಗೆ ರಾಜಕೀಯ ಲಾಭವಿದೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಪಾದಯಾತ್ರೆ ಮೊಟಕುಗೊಳಿಸಿಲು ಸರ್ಕಾರದಿಂದ ವೀಕೆಂಡ್ ಕರ್ಫ್ಯೂ ಜಾರಿ: ಈಶ್ವರ್ ಖಂಡ್ರೆ

ramanagar hdk

ಜನರ ಮೇಲೆ ತೆರಿಗೆ ಹಾಕಬೇಡಿ: ವೀಕೆಂಡ್ ಕರ್ಫ್ಯೂ ನಿನ್ನೆ ವಾಪಸ್ ಪಡೆದಿದ್ದಾರೆ. ತೆರಿಗೆ ಈಗ ಏರಿಕೆ ಮಾಡುವುದು ಸರಿಯಲ್ಲ. ಕಾರ್ಪೊರೇಟ್ ಸಂಸ್ಥೆಗಳ ಮೇಲೆ ತೆರಿಗೆ ಹಾಕಬೇಕು. ಜನಸಾಮಾನ್ಯರ ಮೇಲೆ ತೆರಿಗೆ ಹಾಕಬೇಡಿ. ಈಗಾಗಲೇ ಕೊರೊನಾದಿಂದ ಜನರ ಜೀವನ ನಿರ್ವಹಣೆ ಕಷ್ಟವಾಗಿದೆ. ಸಣ್ಣಪುಟ್ಟ ಆದಾಯ ಇರುವವರು ಜೀವನ ನಡೆಸಲು ಕಷ್ಟ ಪಡುತ್ತಿದ್ದಾರೆ ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರದ ವಿರುದ್ಧ ಜನಾಂದೋಲನ ಯಾತ್ರೆ: ಎಸ್.ಆರ್.ಹಿರೇಮಠ

SIDDU 2

ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಇಂಧನ ಮಂತ್ರಿ ಹೇಳಿದ್ದಾರೆ. ಯಾವುದೇ ಕಾರಣಕ್ಕೂ ವಿದ್ಯುತ್ ದರ, ಕುಡಿಯುವ ನೀರಿನ ದರ ಏರಿಕೆ ಮಾಡಬಾರದು. ತಮಿಳುನಾಡಿನ ಹೊಗೇನಕಲ್ ಯೋಜನೆಯನ್ನು ರಾಜ್ಯ ಸರ್ಕಾರ ತೀವ್ರವಾಗಿ ವಿರೋಧಿಸಬೇಕು. ಈ ಬಗ್ಗೆ ಕಾನೂನು ತಜ್ಞರನ್ನು ಸರ್ಕಾರ ಸಂಪರ್ಕಿಸಬೇಕು. ತಮಿಳುನಾಡು ಯೋಜನಾ ವರದಿ ಸಿದ್ಧ ಮಾಡುತ್ತಿದೆ. ಇದನ್ನು ಕೇಂದ್ರ ಸರ್ಕಾರ ಒಪ್ಪಬಾರದು. ಅದಕ್ಕೆ ರಾಜ್ಯ ಸರ್ಕಾರ ತೀವ್ರವಾಗಿ ವಿರೋಧಿಸಬೇಕು. ಮೇಕೆದಾಟು ವಿಚಾರವಾಗಿ ಇನ್ನೂ 7 ದಿನ ಪಾದಯಾತ್ರೆ ಬಾಕಿ ಇದೆ. ಮೇಕೆದಾಟು ವಿಚಾರವಾಗಿ ಸುಪ್ರೀಂ ಕೋರ್ಟ್ನಲ್ಲಿ ಯಾವುದೇ ಅಡ್ಡಿ ಇಲ್ಲ. ಈಗಾಗಲೇ ನ್ಯಾಯಾಧಿಕರಣ ತೀರ್ಪು ನೀಡಿದೆ ಎಂದರು.

Share This Article
Leave a Comment

Leave a Reply

Your email address will not be published. Required fields are marked *