ಸಿದ್ದರಾಮಯ್ಯ ಬಾದಾಮಿ, ಗೋಡಂಬಿಗೆ ಹೋಗಿ ಈಗ ನಾಟಿಕೋಳಿ, ಮುದ್ದೆ ತಿನ್ನಲು ವರುಣಾಗೆ ಬರ್ತಿದ್ದಾರೆ: ಶ್ರೀನಿವಾಸ್ ಪ್ರಸಾದ್ ವ್ಯಂಗ್ಯ

Public TV
1 Min Read
Srinivasa Prasad

ಚಾಮರಾಜನಗರ: ಸಿದ್ದರಾಮಯ್ಯ (Siddaramaiah) ಬಾದಾಮಿ, ಗೋಡಂಬಿ ಕ್ಷೇತ್ರಕ್ಕೆ ಹೋಗಿ ಇದೀಗ ನಾಟಿಕೋಳಿ, ರಾಗಿಮುದ್ದೆ ತಿನ್ನಲು ವರುಣಾಗೆ ಬರುತ್ತಿದ್ದಾರೆ ಎಂದು ಸಂಸದ ಶ್ರೀನಿವಾಸ್ ಪ್ರಸಾದ್ (Srinivasa Prasad) ವ್ಯಂಗ್ಯವಾಡಿದ್ದಾರೆ.

ಚಾಮರಾಜನಗರದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ವರುಣಾದಲ್ಲಿ ನಿಲ್ಲುವುದಾಗಿ ಇತ್ತೀಚೆಗೆ ಹೇಳಿದ್ದಾರೆ. ಈಗಾಗಲೇ ಒಂದು ಸುತ್ತು ವರುಣಾ ಕ್ಷೇತ್ರಕ್ಕೆ ಹೋಗಿ ಬಂದಿದ್ದಾರೆ. ಅಂತಿಮವಾಗಿ ಬೇರೆಡೆ ಬಿಟ್ಟು ವರುಣಾದಲ್ಲಿ ನಿಲ್ಲುವ ತೀರ್ಮಾನಕ್ಕೆ ಬಂದ ಹಾಗೆ ಕಾಣಿಸುತ್ತಿದೆ. ಅವರನ್ನು ಸೋಲಿಸಲು ನಾವು ಹೋರಾಟ ಮಾಡುತ್ತೇವೆ. ಅವರ ವಿರುದ್ಧ ಅಭ್ಯರ್ಥಿ ಯಾರಾಗ್ತಾರೆ ಎಂಬುದನ್ನು ಹೈಕಮಾಂಡ್ ತೀರ್ಮಾನ ಮಾಡುತ್ತದೆ ಎಂದರು. ಇದನ್ನೂ ಓದಿ: ರಾಜ್ಯ ಸರ್ಕಾರದಿಂದ ಮೈಲಿಗಲ್ಲು – ರಾಜ್ಯಾದ್ಯಂತ 114 ಕ್ಲಿನಿಕ್‌ಗೆ ಚಾಲನೆ

SIDDARAMAIAH SRINIVAS PRASAD 1

ಸಿದ್ದರಾಮಯ್ಯ ಚಾಮುಂಡೇಶ್ವರಿಯಲ್ಲಿ ಒಂದೇ ಚುನಾವಣೆಗೆ ಹೆದರಿ ಬಾದಾಮಿಗೆ ಓಡಿಹೋದ್ರು. ಇದೀಗ ಬಾದಾಮಿ, ಗೋಡಂಬಿ ಕ್ಷೇತ್ರಕ್ಕೆ ಹೋಗಿ ಮತ್ತೆ ರಾಗಿಮುದ್ದೆ, ನಾಟಿಕೋಳಿಗಾಗಿ ಇಲ್ಲಿಗೆ ಬರುತ್ತಿದ್ದಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಝಿಕಾ ವೈರಸ್‌ಗೆ ಹೆಚ್ಚಿದ ಆತಂಕ – ಮಕ್ಕಳ ಸಣ್ಣ ಜ್ವರಕ್ಕೂ ಹೆದರುತ್ತಿದ್ದಾರೆ ಪೋಷಕರು

ಹೆಚ್ ವಿಶ್ವನಾಥ್ ಕಾಂಗ್ರೆಸ್ ಸೇರ್ಪಡೆ ವಿಚಾರದ ಬಗ್ಗೆ ನಾನೇನೂ ಪ್ರತಿಕ್ರಿಯೆ ನೀಡಲ್ಲ. ನನಗೂ ಅವರಿಗೂ ಈಗ ಸಂಬಂಧವಿಲ್ಲ. ನಮ್ಮ ಬಳಿ ಅವರು ಮಾತನಾಡಿಲ್ಲ. ಮಾತನಾಡುವುದೂ ಇಲ್ಲ ಎಂದು ತಿಳಿಸಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *