ರಾಮನಗರ: ಇವತ್ತು ಸಿದ್ದರಾಮಯ್ಯ (Siddaramaiah) ಅವರು ನಮ್ಮ ಪಕ್ಷಕ್ಕೆ ಬಂದಿದ್ದಾರೆ. ಅವರು ಮೂಲ ನಮ್ಮ ಪಕ್ಷದವರಲ್ಲ, ಬೇರೆ ಪಕ್ಷದಿಂದ ಬಂದವರು ಆದರೂ, ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಲೋಕಸಭಾ ಚುನಾವಣಾ ಅಭ್ಯರ್ಥಿ ಡಿ.ಕೆ ಸುರೇಶ್ (DK Suresh) ಹೇಳಿದ್ದಾರೆ.
ರಾಮನಗರದಲ್ಲಿ (Ramanagara) ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಬೇರೆ ಪಕ್ಷದಿಂದ ಬಂದವರು ಆದರೂ ನಾವು ಅವರಿಗೆ ಅವಕಾಶ ಮಾಡಿಕೊಟ್ಟಿದ್ದೇವೆ. ಇಂದು 2ನೇ ಬಾರಿಗೆ ಮುಖ್ಯಮಂತ್ರಿ ಆಗಿದ್ದಾರೆ, ನಮ್ಮ ನಾಯಕರಾಗಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ವೇಗವಾಗಿ ಬಂದ ಕಾರು ಬೈಕ್ಗೆ ಡಿಕ್ಕಿ – ವ್ಯಕ್ತಿ, ಆತನ ಇಬ್ಬರು ಸಹೋದರಿಯರು ದುರ್ಮರಣ
ಸಿದ್ದರಾಮಯ್ಯ ಅವರು ರಾಜ್ಯಕ್ಕೆ ಹೊಸ ಕಾಯಕಲ್ಪ ಕೊಟ್ಟಿದ್ದಾರೆ. ಬಡವರಿಗಾಗಿ ಒಂದಷ್ಟು ಕಾರ್ಯಕ್ರಮ ಕೊಟ್ಟಿದ್ದಾರೆ. ಹಾಗಾಗಿ ಹಣೇಲಿ ಬರೆದಿದ್ದರೆ ಎಲ್ಲಾ ಆಗುತ್ತೆ, ಬರೆದಿಲ್ಲ ಅಂದ್ರೆ ಏನೂ ಮಾಡೋಕಾಗಲ್ಲ ಎಂದು ನುಡಿದಿದ್ದಾರೆ. ಇದನ್ನೂ ಓದಿ: ತುಮಕೂರು ಕ್ಷೇತ್ರ ಗೆಲ್ಲಲು ಬಿಜೆಪಿ ಪ್ಲ್ಯಾನ್; ಮಾಧುಸ್ವಾಮಿ ಮುನಿಸು ಶಮನಕ್ಕೆ ಆಫರ್ – ಸೋಮಣ್ಣ ಪರ ಪ್ರಚಾರಕ್ಕಿಳಿತಾರಾ?
ಸಿದ್ದರಾಮಯ್ಯರ ಯೋಗ ಇಲ್ಲಿ ಬರೆದಿತ್ತು:
ಜೆಡಿಎಸ್ನವರು ಸಿದ್ದರಾಮಯ್ಯ ಅವರಿಗೆ ಬೀಗ ಹಾಕಿ ಕೂರಿಸಿದ್ರು, ಸಸ್ಪೆಂಡ್ ಮಾಡಿದ್ದರು. ಆದ್ರೆ ಅವರ ಯೋಗ ಅಲ್ಲಿ ಬರೆದಿರಲಿಲ್ಲ, ಇಲ್ಲಿ (ಕಾಂಗ್ರೆಸ್) ಬರೆದಿತ್ತು. ಹಾಗೆಯೇ ನಿಮ್ಮ ಯೋಗ ಸಹ ಬರೆದಿರಬಹುದು. ಯಾರನ್ನೂ ಅಡ್ಡ ಹಾಕೋಕೆ ಹೋಗ್ಬೇಡಿ, ಪಕ್ಷ ಬೆಳೆಯುವ ನಿಟ್ಟಿನಲ್ಲಿ ಕೆಲಸ ಮಾಡಿ ಎಂದು ಕಾರ್ಯಕರ್ತರಿಗೆ ಸಲಹೆ ನೀಡಿದ್ದಾರೆ.