ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು: ಸಚಿವ ಪುಟ್ಟರಂಗ ಶೆಟ್ಟಿ

Public TV
1 Min Read
PUTTARANGA SHETTY SIDDARAMAIAH

ದಾವಣಗೆರೆ: ನನಗೆ ಈಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಚಿವ ಪುಟ್ಟರಂಗಶೆಟ್ಟಿ ನಗರದಲ್ಲಿ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಾಜಿ ಸಿಎಂ ಸಿದ್ದರಾಮಯ್ಯನವರು ನನಗೆ ಪಕ್ಷದಲ್ಲಿ ಟಿಕೆಟ್ ಕೊಡಿಸಿ ಗೆಲ್ಲುವಂತೆ ಮಾಡಿದ್ದಾರೆ. ಅವರು ಉಪ್ಪಾರ ಜನಾಂಗಕ್ಕೆ ಹಲವು ಸೌಲಭ್ಯಗಳನ್ನು ಸಹ ಕಲ್ಪಿಸಿಕೊಟ್ಟಿರುವುದರಿಂದ ನನಗೆ ಯಾವಾಗಲೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಎಂದು ಹೇಳಿದರು.

SIDDU 1 1

ಕೇವಲ ನಾನು ಜಿಲ್ಲಾ ಪಂಚಾಯತ್ ಅಧ್ಯಕ್ಷ ಹುದ್ದೆ ಸಾಕು ಎಂದುಕೊಂಡಿದ್ದ ನನಗೆ ಅವರು, ಸಚಿವರನ್ನಾಗಿ ಮಾಡಿದ್ದಾರೆ. ನಾನು ಸಚಿವನಾದ ಕೀರ್ತಿಯು ಕೇವಲ ಸಿದ್ದರಾಮಯ್ಯನವರಿಗೆ ಸಲ್ಲಿಸುತ್ತದೆ. ಕರ್ನಾಟಕದ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆದರೆ ನನಗೆ ಎಂದಿಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿಗಳು ಎಂದು ತಿಳಿಸಿದರು.

ಇಂದು ರಾಜ್ಯದಲ್ಲಿ ಹಿಂದುಳಿದ ಜನಾಂಗದವರು ಮುಂದುವರಿಯುತ್ತಿದ್ದಾರೆ ಎಂದರೆ ಅದಕ್ಕೆ ಕಾರಣ ನಮ್ಮ ನಾಯಕರಾದ ಸಿದ್ದರಾಮಯ್ಯನವರ ಅಭಿವೃದ್ಧಿ ಕಾರ್ಯಗಳೇ. ನಾನು ಹಿಂದುಳಿದ ಇಲಾಖೆಯಲ್ಲಿ ಸಲ್ಲಿಸುವ ಪ್ರತಿಯೊಂದು ಸೇವೆಯ ಕೀರ್ತಿಯು ಸಿದ್ದರಾಮಯ್ಯನವರಿಗೆ ಸಲ್ಲುತ್ತದೆ ಎಂದು ಹಾಡಿ ಹೊಗಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ: www.instagram.com/publictvnews

Share This Article
Leave a Comment

Leave a Reply

Your email address will not be published. Required fields are marked *