Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯಗೆ ಕುರ್ಚಿ ಉಳಿಸಿಕೊಳ್ಳೋದೆ ಚಿಂತೆ, ಯಾಕಂದ್ರೆ ಇನ್ನೊಬ್ಬರು ಸಿಎಂ ಕುರ್ಚಿ ಎಳೆಯುತ್ತಿದ್ದಾರೆ: ಅಮಿತ್ ಶಾ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಿದ್ದರಾಮಯ್ಯಗೆ ಕುರ್ಚಿ ಉಳಿಸಿಕೊಳ್ಳೋದೆ ಚಿಂತೆ, ಯಾಕಂದ್ರೆ ಇನ್ನೊಬ್ಬರು ಸಿಎಂ ಕುರ್ಚಿ ಎಳೆಯುತ್ತಿದ್ದಾರೆ: ಅಮಿತ್ ಶಾ

Bengaluru City

ಸಿದ್ದರಾಮಯ್ಯಗೆ ಕುರ್ಚಿ ಉಳಿಸಿಕೊಳ್ಳೋದೆ ಚಿಂತೆ, ಯಾಕಂದ್ರೆ ಇನ್ನೊಬ್ಬರು ಸಿಎಂ ಕುರ್ಚಿ ಎಳೆಯುತ್ತಿದ್ದಾರೆ: ಅಮಿತ್ ಶಾ

Public TV
Last updated: April 2, 2024 5:10 pm
Public TV
Share
3 Min Read
Amit Shah 03
SHARE

– ಮೋದಿ ಸರ್ಕಾರ 10 ವರ್ಷಗಳಲ್ಲಿ ಕರ್ನಾಟಕಕ್ಕೆ 4.91 ಲಕ್ಷ ಕೋಟಿ ರೂ. ಅನುದಾನ ಕೊಟ್ಟಿದೆ
– ಪಾಕಿಸ್ತಾನದವರು ಬಾಂಬ್ ಹಾಕಿ ಹೋದರೂ ಮನಮೋಹನ್ ಸಿಂಗ್ ಸುಮ್ಮನಿದ್ದರು
– ಕಾಂಗ್ರೆಸ್, I.N.D.I.A ಒಕ್ಕೂಟದ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಖುರ್ಚಿ ಉಳಿಸಿಕೊಳ್ಳುವುದೇ ಚಿಂತೆಯಾಗಿದೆ. ಏಕೆಂದರೆ ಇನ್ನೊಬ್ಬರು ಸಿಎಂ ಕುರ್ಚಿ ಎಳೆಯುತ್ತಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ, ಸಿಎಂ-ಡಿಕೆಶಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

Amit Shah 01

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ-ಡಿಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಇದೇ ವೇಳೆ `ನನ್ನ ತೆರಿಗೆ ನನ್ನ ಹಕ್ಕು’ ಕಾಂಗ್ರೆಸ್ ಬೇಡಿಕೆಗೆ ತಿರುಗೇಟು ನೀಡಿದರು. 10 ವರ್ಷಗಳಲ್ಲಿ ಯುಪಿಎ ಕೇವಲ 1.52 ಲಕ್ಷ ಕೋಟಿ ರೂ. ಅನುದಾನ ಮಾತ್ರ ರಾಜ್ಯಕ್ಕೆ ಕೊಟ್ಟಿತ್ತು. ಆದ್ರೆ ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ 4.91 ಲಕ್ಷ ಕೋಟಿ ರೂ. ಅನುದಾನ ಕೊಟ್ಟಿದೆ. ಇದು 3 ಪಟ್ಟು ಹೆಚ್ಚಿದೆ ಎಂದು ಹೇಳಿದರು.

Amit Shah 02

ರಾಹುಲ್‌ ಪರ ಸಂಸದನ ಮನೆಯಲ್ಲಿ 350 ಕೋಟಿ ರೂ. ಸಿಕ್ಕಿದೆ:
ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಪ್ರಜಾಪ್ರಭುತ್ವ ಉಳಿಸಿ ಅಂತಿದ್ದಾರೆ, ಪ್ರಜಾಪ್ರಭುತ್ವಕ್ಕೆ ಏನಾಗಿದೆ? 2014ರ ವರೆಗೆ ಭ್ರಷ್ಟಾಚಾರ ನಡೆಯುತ್ತಿತ್ತು. ಭ್ರಷ್ಟಾಚಾರಿಗಳನ್ನ ಜೈಲಿಗೆ ಹಾಕುವ ವಾಗ್ದಾನ ಕೊಟ್ಟಿದ್ದೆವು. ಆ ಕೆಲಸ ಆಗ್ತಿದೆ. ರಾಹುಲ್ ಗಾಂಧಿ ಪರ ಸಂಸದನ ಮನೆಯಲ್ಲಿ 350 ಕೋಟಿ ರೂಪಾಯಿ ಸಿಗುತ್ತೆ, ಮಮತಾ ಬ್ಯಾನರ್ಜಿ ಪಕ್ಷದ ನಾಯಕನ ಮನೆಯಲ್ಲಿ 51 ಕೋಟಿ ರೂಪಾಯಿ ಸಿಕ್ಕಿದೆ. ಅಂತಹವರನ್ನ ಜೈಲಿಗೆ ಹಾಕದೇ ಅರಮನೆಯಲ್ಲಿ ಇಡಬೇಕಾ ಎಂದು ಪ್ರತಿಪಕ್ಷ ನಾಯಕರ ಟೀಕೆಗೆ ತಿರುಗೇಟು ನೀಡಿದರು.

ಸಿದ್ದರಾಮಯ್ಯ ವಿರುದ್ಧ ಕೆಂಡ:
ಮೋದಿ ಸಿಎಎ ಜಾರಿಗೆಗೊಳಿಸಿದಾಗ ಅದನ್ನೂ ಕಾಂಗ್ರೆಸ್ ಜನ ವಿರೋಧಿಸಿದರು. ಯುಪಿಎ 10 ವರ್ಷ ಅಧಿಕಾರದಲ್ಲಿದ್ದಾಗ ಏನಾಯ್ತು ಅನ್ನೋದನ್ನ ಸಿದ್ದರಾಮಯ್ಯ ವಿವರಿಸಲಿ. ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋಗ್ತಿದ್ದರೂ, ಅಂದಿನ ಮನಮೋಹನ್ ಸಿಂಗ್ ಮೌನವಾಗಿದ್ದರು. ಆದ್ರೆ ಮೋದಿ ಅವರು ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್‌ ಮಾಡಿಸಿದರು. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ. ದೇಶದ ಆರ್ಥಿಕತೆ 11ನೇ ಸ್ಥಾನದಲ್ಲಿ ಇತ್ತು, ಈಗ 5ನೇ ಸ್ಥಾನಕ್ಕೆ ಬಂದಿದೆ. ಮತ್ತೊಮ್ಮೆ ಮೋದಿಯನ್ನ ಗೆಲ್ಲಿಸಿದರೆ, ದೇಶ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಶ್ಲಾಘಿಸಿದರು.

ಮೋದಿ ಎಂಬ ಭಾವದಿಂದ ಮತ ಕೇಳಿ:
ಲೋಕಸಭಾ ಚುನಾವಣೆ ತಯಾರಿಗಾಗಿ ಮೋದಿ ನೇತೃತ್ವದಲ್ಲಿ ಚುನಾವಣಾ ಕಣದಲ್ಲಿದ್ದೇವೆ. ಆದ್ರೆ ಮತ್ತೊಂದು ಕಡೆ ಪರಿವಾರ ವಾದ, ಭ್ರಷ್ಟಾಚಾರ ತುಂಬಿರುವ ಐ.ಎನ್.ಡಿ.ಐ.ಎ ಒಕ್ಕೂಟ ಇದೆ. ಎಲ್ಲೇ ಹೋದರೂ ಮೋದಿ ಮೋದಿ ಹೆಸರು ಕೇಳಿ ಬರ್ತಿದೆ. ಕರ್ನಾಟಕದಲ್ಲಿ 2014 ರಲ್ಲಿ ಬಿಜೆಪಿಗೆ 43% ಮತ ಕೊಡೋ ಮೂಲಕ ಗೆಲ್ಲಿಸಿದ್ರಿ, ಈ ಸಲ 60% ಮತ ಕೋಡೋ ಮೂಲಕ ಕರ್ನಾಟಕದ 28 ಕ್ಷೇತ್ರಗಳಲ್ಲಿಯೂ ಗೆಲ್ಲಿಸಬೇಕು. ಬೂತ್ ಮಟ್ಟದ ಪ್ರತಿಯೊಬ್ಬ ಕಾರ್ಯಕರ್ತರು ಸಹ ಮೋದಿ ಎಂಬ ಭಾವನೆಯಿಂದ ಮತ ಕೇಳಿ ಎಂದು ಕರೆ ಕೊಟ್ಟರು.

ಮೋದಿ ಗುಜರಾತ್ ಸಿಎಂ ಆಗಿದ್ದ ಅವಧಿಯಲ್ಲಿ 25 ಪೈಸೆಯಷ್ಟೂ ಭ್ರಷ್ಟಾಚಾರ ಆರೋಪ ಮಾಡಲು ವಿಪಕ್ಷಗಳಿಗೆ ಸಾಧ್ಯವಾಗಲಿಲ್ಲ. ಆದ್ರೆ 10 ವರ್ಷ ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಮೊತ್ತದ ಅಕ್ರಮ ನಡೆದಿದೆ. ಡಿಕೆ ಶಿವಕುಮಾರ್‌ಗೂ ಭ್ರಷ್ಟಾಚಾರಕ್ಕೂ ಬಿಡದ ನಂಟಿದೆ. ಇಂತಃ ಭ್ರಷ್ಟ ಕಾಂಗ್ರೆಸ್ ಮೋದಿ ಎದುರು ನಿಂತಿದೆ ಎಂದು ಹೇಳಿದರು.

ಭ್ರಷ್ಟಾಚಾರ ಮಾಡೋರು ಜನಸೇವೆ ಮಾಡಲ್ಲ:
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅಮಿತ್ ಶಾ, ಭ್ರಷ್ಟಾಚಾರ ಮಾಡೋರು ಯಾವತ್ತಿಗೂ ಜನಸೇವೆ ಮಾಡಲ್ಲ. ಮೋದಿ 10 ಲಕ್ಷ ಮಹಿಳೆಯರಿಗೆ ಉಜ್ವಲ ಗ್ಯಾಸ್ ಕೊಟ್ಟಿದ್ದಾರೆ, 14 ಲಕ್ಷ ಜನರಿಗೆ ನಲ್ಲಿ ನೀರು, 60 ಲಕ್ಷ ಬಡವರಿಗೆ 5 ಲಕ್ಷ ರೂ.ವರೆಗೆ ವಿಮೆ ಸಿಗುವಂತೆ ಮಾಡಿ ಬಡವರಿಗೆ ಹೊಸ ಜೀವನೋತ್ಸಾಹ ತುಂಬಿದ್ದಾರೆ. 370ನೇ ವಿಧಿ ರದ್ದು ಮಾಡಿದ್ದಾರೆ. 370ನೇ ವಿಧಿ ರದ್ದು ಮಾಡಿದಾಗ ಕಾಂಗ್ರೆಸ್ ರಕ್ತದ ಹೊಳೆ ಹರಿಯುತ್ತದೆ ಎಂದಿದ್ದರು, ಆದರೀಗ ಒಂದು ಸಣ್ಣ ಕಲ್ಲೂ ಸಹ ಹೊಡೆಯಲಾಗುತ್ತಿಲ್ಲ ಎಂದು ತಿರುಗೇಟು ನೀಡಿದರು.

ಅಷ್ಟೇ ಅಲ್ಲ ಶತಮಾನಗಳಿಂದ ಬಗೆಹರಿಯದ ಸಮಸ್ಯೆಗೆ ಮೋದಿ ಅವರ ಕಾಲದಲ್ಲಿ ಪರಿಹಾರ ಸಿಕ್ಕಿತು. ಮೋದಿಯವರು ರಾಮಮಂದಿರ ಕಟ್ಟಿಸಿ, ಪ್ರಾಣಪ್ರತಿಷ್ಠಾಪನೆಯನ್ನೂ ನೇರವೇರಿಸಿದರು. ಸೋನಿಯಾ, ರಾಹುಲ್, ಖರ್ಗೆ ಎಲ್ಲರಿಗೂ ಪ್ರಾಣ ಪ್ರತಿಷ್ಠಾಪನೆಗೆ ಆಹ್ವಾನ ನೀಡಲಾಗಿತ್ತು. ಆದ್ರೆ ವೋಟ್ ಬ್ಯಾಂಕ್ ಹೋಗಿಬಿಡುತ್ತೆ ಅನ್ನೋ ಭಯದಿಂದ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೂ ಬರಲಿಲ್ಲ ಎಂದು ತಿವಿದರು.

TAGGED:Amit ShahbengaluruBJP WorkersBS YediyurappaDK Shivakumarnarendra modisiddaramaiahಅಮಿತ್ ಶಾನರೇಂದ್ರ ಮೋದಿಬಿಜೆಪಿ ಕಾರ್ಯಕರ್ತರುಬೆಂಗಳೂರು
Share This Article
Facebook Whatsapp Whatsapp Telegram

Cinema news

Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories
Puneeth Rajakumar
800 ಕೆ.ಜಿ ಕಂಚಿನ ಅಪ್ಪು ಪುತ್ಥಳಿ ಅನಾವರಣ
Bengaluru City Cinema Districts Karnataka Latest Sandalwood Top Stories
Moogathi Malli
ಮೂಗುತಿ ಮಲ್ಲಿ: ಚೂಟಿ ಹುಡುಗಿ, ಘಾಟಿ ಬೆಡಗಿ!
Cinema Latest Sandalwood Top Stories

You Might Also Like

Sadik Pailwan Davanagere South
Davanagere

ದಾವಣಗೆರೆಯಲ್ಲಿ ಕಾಂಗ್ರೆಸ್‌ ವಿರುದ್ಧ ಸಮರ – ಬಂಡಾಯ ಅಭ್ಯರ್ಥಿ ಸೇರಿದಂತೆ 23 ಮಂದಿ ಮುಸ್ಲಿಮ್‌ ನಾಯಕರಿಂದ ನಾಮಪತ್ರ ಸಲ್ಲಿಕೆ

Public TV
By Public TV
3 hours ago
ಮಹಿಳಾ ಮೀಸಲಾತಿ ಮಸೂದೆಗೆ ಸಂಸತ್ತಿನಲ್ಲಿ ಒಪ್ಪಿಗೆ ಸಿಕ್ಕಿದ ನಂತರ ಎನ್‌ಡಿಎ ಮಹಿಳಾ ಸಂಸದರ ಜೊತೆ ಮೋದಿ
Latest

ಮಹಿಳೆಯರಿಗೆ 273 ಎಂಪಿ ಸೀಟ್ ಮೀಸಲು?

Public TV
By Public TV
4 hours ago
Rikki Rai Car Drifting Case
Bengaluru City

ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

Public TV
By Public TV
4 hours ago
Haveri Rain Effect
Districts

ಹಾವೇರಿಯಲ್ಲಿ ಬಿರುಗಾಳಿ ಸಹಿತ ಮಳೆ – ಧರೆಗೆ ಉರುಳಿದ ವಿದ್ಯುತ್ ಕಂಬಗಳು, ಮರ ಬಿದ್ದು ಆಟೋ ಜಖಂ

Public TV
By Public TV
5 hours ago
NDA announces seat sharing pact BJP AIADMK
Latest

ತಮಿಳುನಾಡಿನಲ್ಲಿ ಎನ್‌ಡಿಎ ಸೀಟು ಹಂಚಿಕೆ ಅಂತಿಮ – 27 ಕ್ಷೇತ್ರಗಳಲ್ಲಿ ಬಿಜೆಪಿ ಸ್ಪರ್ಧೆ

Public TV
By Public TV
5 hours ago
Laljit Singh Bhullar 1
Latest

ಅಧಿಕಾರಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ – ಪಂಜಾಬ್ ಮಾಜಿ ಸಚಿವ ಲಾಲ್ಜಿತ್ ಭುಲ್ಲರ್ ಅರೆಸ್ಟ್

Public TV
By Public TV
5 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?