Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಿದ್ದರಾಮಯ್ಯಗೆ ಕುರ್ಚಿ ಉಳಿಸಿಕೊಳ್ಳೋದೆ ಚಿಂತೆ, ಯಾಕಂದ್ರೆ ಇನ್ನೊಬ್ಬರು ಸಿಎಂ ಕುರ್ಚಿ ಎಳೆಯುತ್ತಿದ್ದಾರೆ: ಅಮಿತ್ ಶಾ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಸಿದ್ದರಾಮಯ್ಯಗೆ ಕುರ್ಚಿ ಉಳಿಸಿಕೊಳ್ಳೋದೆ ಚಿಂತೆ, ಯಾಕಂದ್ರೆ ಇನ್ನೊಬ್ಬರು ಸಿಎಂ ಕುರ್ಚಿ ಎಳೆಯುತ್ತಿದ್ದಾರೆ: ಅಮಿತ್ ಶಾ

Public TV
Last updated: April 2, 2024 5:10 pm
Public TV
Share
3 Min Read
Amit Shah 03
SHARE

– ಮೋದಿ ಸರ್ಕಾರ 10 ವರ್ಷಗಳಲ್ಲಿ ಕರ್ನಾಟಕಕ್ಕೆ 4.91 ಲಕ್ಷ ಕೋಟಿ ರೂ. ಅನುದಾನ ಕೊಟ್ಟಿದೆ
– ಪಾಕಿಸ್ತಾನದವರು ಬಾಂಬ್ ಹಾಕಿ ಹೋದರೂ ಮನಮೋಹನ್ ಸಿಂಗ್ ಸುಮ್ಮನಿದ್ದರು
– ಕಾಂಗ್ರೆಸ್, I.N.D.I.A ಒಕ್ಕೂಟದ ವಿರುದ್ಧ ಅಮಿತ್ ಶಾ ವಾಗ್ದಾಳಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಮ್ಮ ಖುರ್ಚಿ ಉಳಿಸಿಕೊಳ್ಳುವುದೇ ಚಿಂತೆಯಾಗಿದೆ. ಏಕೆಂದರೆ ಇನ್ನೊಬ್ಬರು ಸಿಎಂ ಕುರ್ಚಿ ಎಳೆಯುತ್ತಿದ್ದಾರೆ ಎಂದು ಕೇಂದ್ರ ಗೃಹಸಚಿವ ಅಮಿತ್ ಶಾ, ಸಿಎಂ-ಡಿಕೆಶಿ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

Amit Shah 01

ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಅವರು, ಸಿಎಂ-ಡಿಸಿಎಂ ವಿರುದ್ಧ ವಾಗ್ದಾಳಿ ನಡೆಸಿದರು. ಇದೇ ವೇಳೆ `ನನ್ನ ತೆರಿಗೆ ನನ್ನ ಹಕ್ಕು’ ಕಾಂಗ್ರೆಸ್ ಬೇಡಿಕೆಗೆ ತಿರುಗೇಟು ನೀಡಿದರು. 10 ವರ್ಷಗಳಲ್ಲಿ ಯುಪಿಎ ಕೇವಲ 1.52 ಲಕ್ಷ ಕೋಟಿ ರೂ. ಅನುದಾನ ಮಾತ್ರ ರಾಜ್ಯಕ್ಕೆ ಕೊಟ್ಟಿತ್ತು. ಆದ್ರೆ ಮೋದಿ ಸರ್ಕಾರ ಕಳೆದ 10 ವರ್ಷಗಳಲ್ಲಿ 4.91 ಲಕ್ಷ ಕೋಟಿ ರೂ. ಅನುದಾನ ಕೊಟ್ಟಿದೆ. ಇದು 3 ಪಟ್ಟು ಹೆಚ್ಚಿದೆ ಎಂದು ಹೇಳಿದರು.

Amit Shah 02

ರಾಹುಲ್‌ ಪರ ಸಂಸದನ ಮನೆಯಲ್ಲಿ 350 ಕೋಟಿ ರೂ. ಸಿಕ್ಕಿದೆ:
ಇಂಡಿಯಾ ಒಕ್ಕೂಟದ ವಿರುದ್ಧ ವಾಗ್ದಾಳಿ ನಡೆಸಿದ ಅಮಿತ್ ಶಾ, ಪ್ರಜಾಪ್ರಭುತ್ವ ಉಳಿಸಿ ಅಂತಿದ್ದಾರೆ, ಪ್ರಜಾಪ್ರಭುತ್ವಕ್ಕೆ ಏನಾಗಿದೆ? 2014ರ ವರೆಗೆ ಭ್ರಷ್ಟಾಚಾರ ನಡೆಯುತ್ತಿತ್ತು. ಭ್ರಷ್ಟಾಚಾರಿಗಳನ್ನ ಜೈಲಿಗೆ ಹಾಕುವ ವಾಗ್ದಾನ ಕೊಟ್ಟಿದ್ದೆವು. ಆ ಕೆಲಸ ಆಗ್ತಿದೆ. ರಾಹುಲ್ ಗಾಂಧಿ ಪರ ಸಂಸದನ ಮನೆಯಲ್ಲಿ 350 ಕೋಟಿ ರೂಪಾಯಿ ಸಿಗುತ್ತೆ, ಮಮತಾ ಬ್ಯಾನರ್ಜಿ ಪಕ್ಷದ ನಾಯಕನ ಮನೆಯಲ್ಲಿ 51 ಕೋಟಿ ರೂಪಾಯಿ ಸಿಕ್ಕಿದೆ. ಅಂತಹವರನ್ನ ಜೈಲಿಗೆ ಹಾಕದೇ ಅರಮನೆಯಲ್ಲಿ ಇಡಬೇಕಾ ಎಂದು ಪ್ರತಿಪಕ್ಷ ನಾಯಕರ ಟೀಕೆಗೆ ತಿರುಗೇಟು ನೀಡಿದರು.

ಸಿದ್ದರಾಮಯ್ಯ ವಿರುದ್ಧ ಕೆಂಡ:
ಮೋದಿ ಸಿಎಎ ಜಾರಿಗೆಗೊಳಿಸಿದಾಗ ಅದನ್ನೂ ಕಾಂಗ್ರೆಸ್ ಜನ ವಿರೋಧಿಸಿದರು. ಯುಪಿಎ 10 ವರ್ಷ ಅಧಿಕಾರದಲ್ಲಿದ್ದಾಗ ಏನಾಯ್ತು ಅನ್ನೋದನ್ನ ಸಿದ್ದರಾಮಯ್ಯ ವಿವರಿಸಲಿ. ಪಾಕಿಸ್ತಾನದಿಂದ ಬಂದು ಬಾಂಬ್ ಹಾಕಿ ಹೋಗ್ತಿದ್ದರೂ, ಅಂದಿನ ಮನಮೋಹನ್ ಸಿಂಗ್ ಮೌನವಾಗಿದ್ದರು. ಆದ್ರೆ ಮೋದಿ ಅವರು ಪಾಕಿಸ್ತಾನದ ಮೇಲೆ ಸರ್ಜಿಕಲ್ ಸ್ಟ್ರೈಕ್‌ ಮಾಡಿಸಿದರು. ಇದೇ ನಮಗೂ ಅವರಿಗೂ ಇರುವ ವ್ಯತ್ಯಾಸ. ದೇಶದ ಆರ್ಥಿಕತೆ 11ನೇ ಸ್ಥಾನದಲ್ಲಿ ಇತ್ತು, ಈಗ 5ನೇ ಸ್ಥಾನಕ್ಕೆ ಬಂದಿದೆ. ಮತ್ತೊಮ್ಮೆ ಮೋದಿಯನ್ನ ಗೆಲ್ಲಿಸಿದರೆ, ದೇಶ 3ನೇ ಅತಿದೊಡ್ಡ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮಲಿದೆ ಎಂದು ಶ್ಲಾಘಿಸಿದರು.

ಮೋದಿ ಎಂಬ ಭಾವದಿಂದ ಮತ ಕೇಳಿ:
ಲೋಕಸಭಾ ಚುನಾವಣೆ ತಯಾರಿಗಾಗಿ ಮೋದಿ ನೇತೃತ್ವದಲ್ಲಿ ಚುನಾವಣಾ ಕಣದಲ್ಲಿದ್ದೇವೆ. ಆದ್ರೆ ಮತ್ತೊಂದು ಕಡೆ ಪರಿವಾರ ವಾದ, ಭ್ರಷ್ಟಾಚಾರ ತುಂಬಿರುವ ಐ.ಎನ್.ಡಿ.ಐ.ಎ ಒಕ್ಕೂಟ ಇದೆ. ಎಲ್ಲೇ ಹೋದರೂ ಮೋದಿ ಮೋದಿ ಹೆಸರು ಕೇಳಿ ಬರ್ತಿದೆ. ಕರ್ನಾಟಕದಲ್ಲಿ 2014 ರಲ್ಲಿ ಬಿಜೆಪಿಗೆ 43% ಮತ ಕೊಡೋ ಮೂಲಕ ಗೆಲ್ಲಿಸಿದ್ರಿ, ಈ ಸಲ 60% ಮತ ಕೋಡೋ ಮೂಲಕ ಕರ್ನಾಟಕದ 28 ಕ್ಷೇತ್ರಗಳಲ್ಲಿಯೂ ಗೆಲ್ಲಿಸಬೇಕು. ಬೂತ್ ಮಟ್ಟದ ಪ್ರತಿಯೊಬ್ಬ ಕಾರ್ಯಕರ್ತರು ಸಹ ಮೋದಿ ಎಂಬ ಭಾವನೆಯಿಂದ ಮತ ಕೇಳಿ ಎಂದು ಕರೆ ಕೊಟ್ಟರು.

ಮೋದಿ ಗುಜರಾತ್ ಸಿಎಂ ಆಗಿದ್ದ ಅವಧಿಯಲ್ಲಿ 25 ಪೈಸೆಯಷ್ಟೂ ಭ್ರಷ್ಟಾಚಾರ ಆರೋಪ ಮಾಡಲು ವಿಪಕ್ಷಗಳಿಗೆ ಸಾಧ್ಯವಾಗಲಿಲ್ಲ. ಆದ್ರೆ 10 ವರ್ಷ ಯುಪಿಎ ಅವಧಿಯಲ್ಲಿ 12 ಲಕ್ಷ ಕೋಟಿ ಮೊತ್ತದ ಅಕ್ರಮ ನಡೆದಿದೆ. ಡಿಕೆ ಶಿವಕುಮಾರ್‌ಗೂ ಭ್ರಷ್ಟಾಚಾರಕ್ಕೂ ಬಿಡದ ನಂಟಿದೆ. ಇಂತಃ ಭ್ರಷ್ಟ ಕಾಂಗ್ರೆಸ್ ಮೋದಿ ಎದುರು ನಿಂತಿದೆ ಎಂದು ಹೇಳಿದರು.

ಭ್ರಷ್ಟಾಚಾರ ಮಾಡೋರು ಜನಸೇವೆ ಮಾಡಲ್ಲ:
ಕಾಂಗ್ರೆಸ್ ವಿರುದ್ಧ ವಾಗ್ದಾಳಿ ಮುಂದುವರಿಸಿದ ಅಮಿತ್ ಶಾ, ಭ್ರಷ್ಟಾಚಾರ ಮಾಡೋರು ಯಾವತ್ತಿಗೂ ಜನಸೇವೆ ಮಾಡಲ್ಲ. ಮೋದಿ 10 ಲಕ್ಷ ಮಹಿಳೆಯರಿಗೆ ಉಜ್ವಲ ಗ್ಯಾಸ್ ಕೊಟ್ಟಿದ್ದಾರೆ, 14 ಲಕ್ಷ ಜನರಿಗೆ ನಲ್ಲಿ ನೀರು, 60 ಲಕ್ಷ ಬಡವರಿಗೆ 5 ಲಕ್ಷ ರೂ.ವರೆಗೆ ವಿಮೆ ಸಿಗುವಂತೆ ಮಾಡಿ ಬಡವರಿಗೆ ಹೊಸ ಜೀವನೋತ್ಸಾಹ ತುಂಬಿದ್ದಾರೆ. 370ನೇ ವಿಧಿ ರದ್ದು ಮಾಡಿದ್ದಾರೆ. 370ನೇ ವಿಧಿ ರದ್ದು ಮಾಡಿದಾಗ ಕಾಂಗ್ರೆಸ್ ರಕ್ತದ ಹೊಳೆ ಹರಿಯುತ್ತದೆ ಎಂದಿದ್ದರು, ಆದರೀಗ ಒಂದು ಸಣ್ಣ ಕಲ್ಲೂ ಸಹ ಹೊಡೆಯಲಾಗುತ್ತಿಲ್ಲ ಎಂದು ತಿರುಗೇಟು ನೀಡಿದರು.

ಅಷ್ಟೇ ಅಲ್ಲ ಶತಮಾನಗಳಿಂದ ಬಗೆಹರಿಯದ ಸಮಸ್ಯೆಗೆ ಮೋದಿ ಅವರ ಕಾಲದಲ್ಲಿ ಪರಿಹಾರ ಸಿಕ್ಕಿತು. ಮೋದಿಯವರು ರಾಮಮಂದಿರ ಕಟ್ಟಿಸಿ, ಪ್ರಾಣಪ್ರತಿಷ್ಠಾಪನೆಯನ್ನೂ ನೇರವೇರಿಸಿದರು. ಸೋನಿಯಾ, ರಾಹುಲ್, ಖರ್ಗೆ ಎಲ್ಲರಿಗೂ ಪ್ರಾಣ ಪ್ರತಿಷ್ಠಾಪನೆಗೆ ಆಹ್ವಾನ ನೀಡಲಾಗಿತ್ತು. ಆದ್ರೆ ವೋಟ್ ಬ್ಯಾಂಕ್ ಹೋಗಿಬಿಡುತ್ತೆ ಅನ್ನೋ ಭಯದಿಂದ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೂ ಬರಲಿಲ್ಲ ಎಂದು ತಿವಿದರು.

Share This Article
Facebook Whatsapp Whatsapp Telegram
Previous Article pushpa 2 ಐಕಾನ್ ಸ್ಟಾರ್ ಅಭಿಮಾನಿಗಳಿಗೆ ಸಿಹಿಸುದ್ದಿ- ‘ಪುಷ್ಪ 2’ ಜಾತ್ರೆ ಶುರು
Next Article Sumalatha Ambarish 1 ನಾಳೆ ಸುಮಲತಾ ಮಹತ್ವದ ಘೋಷಣೆ: ದರ್ಶನ್, ಅಭಿಷೇಕ್ ಸಾಥ್

Latest Cinema News

KD Cinema
ಶೀಘ್ರದಲ್ಲೇ ತೆರೆಗೆ ಬರಲಿದ್ದೇವೆ – `ಕೆಡಿ’ ಚಿತ್ರತಂಡದಿಂದ ಫಾನ್ಸ್‌ಗೆ ಗುಡ್‌ನ್ಯೂಸ್
Cinema Latest Sandalwood Top Stories
amulya peekaboo movie
ಸ್ಯಾಂಡಲ್‌ವುಡ್‌ಗೆ ಗೋಲ್ಡನ್ ಕ್ವೀನ್ ಅಮೂಲ್ಯ ಕಮ್‌ಬ್ಯಾಕ್
Cinema Latest Sandalwood Top Stories
Hoovina Banadanthe Song Viral Girl Nithyashree
ಅದೊಂದು ಹಾಡಿನಿಂದ ದಿಢೀರ್ ಫೇಮಸ್ ಆದ ಯುವತಿ – ಇನ್ಸ್ಟಾದಲ್ಲಿ 150 ಇದ್ದ ಫಾಲೋವರ್ಸ್ ಈಗ 40,000
Cinema Latest Top Stories
Bigg Boss Kannada Season 12 promo
ವೀಕ್ಷಕರಿಗೆ ಚಮಕ್‌ ಕೊಟ್ಟ BBK 12 ಪ್ರೋಮೋ – AI ಮೂಲಕ ‘ಕಾಗೆ-ನರಿ’ ಕಥೆ ಹೇಳಿದ ಕಿಚ್ಚ ಸುದೀಪ್‌; ಟ್ವಿಸ್ಟ್‌ ಏನು?
Cinema Latest Top Stories TV Shows
Kichcha Sudeep KD Cinema
ಕೆಡಿ ಸೆಟ್‌ನಲ್ಲಿ ಕಿಚ್ಚ ಸುದೀಪ್: ಕೆಡಿ ವರ್ಸಸ್ ವಿಲನ್
Cinema Latest Sandalwood Top Stories

You Might Also Like

suryakumar yadav asia cup
Cricket

ಪಾಕ್‌ ವಿರುದ್ಧದ ಗೆಲುವನ್ನು ಪಹಲ್ಗಾಮ್ ಸಂತ್ರಸ್ತರು, ಭಾರತೀಯ ಸಶಸ್ತ್ರ ಪಡೆಗಳಿಗೆ ಅರ್ಪಿಸಿದ ಕ್ಯಾಪ್ಟನ್ ಸೂರ್ಯ

6 hours ago
Nitin Gadkari
Latest

ನನ್ನ ಮಿದುಳು 200 ಕೋಟಿ ಬೆಲೆಬಾಳುತ್ತೆ, ಪ್ರಾಮಾಣಿಕವಾಗಿಯೇ ಹಣ ಗಳಿಸ್ತೀನಿ: ನಿತಿನ್ ಗಡ್ಕರಿ

6 hours ago
suryakumar yadav shivam dube
Cricket

ಬರ್ತ್‌ಡೇ ದಿನವೇ ಪಾಕ್‌ ವಿರುದ್ಧ ಭಾರತಕ್ಕೆ ಗೆಲುವಿನ ಸಿಹಿ ಕೊಟ್ಟ ನಾಯಕ ಸೂರ್ಯ

6 hours ago
surya kumar yadav asia cup
Cricket

ಭಾರತಕ್ಕೆ ಶರಣಾದ ಪಾಕ್‌; ಟೀಂ ಇಂಡಿಯಾಗೆ 7 ವಿಕೆಟ್‌ಗಳ ಭರ್ಜರಿ ಜಯ

7 hours ago
hardik pandya
Cricket

India Vs Pakistan: ಮೊದಲ ಎಸೆತಕ್ಕೆ ವಿಕೆಟ್‌; ಪಾಕ್‌ ವಿರುದ್ಧದ ಪಂದ್ಯದಲ್ಲಿ ಇತಿಹಾಸ ಬರೆದ ಹಾರ್ದಿಕ್‌ ಪಾಂಡ್ಯ

7 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?