Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನಮ್ಮಪ್ಪ ಸಿದ್ರಾಮಯ್ಯ ಅಂತ ಹೆಸರಿಟ್ಟಿಲ್ವಾ, ಸಿದ್ರಾಮುಲ್ಲಾ ಅನ್ನೋಕೆ ಇವನ್ಯಾರು: ಸಿ.ಟಿ.ರವಿ ವಿರುದ್ಧ ಸಿದ್ದರಾಮಯ್ಯ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ನಮ್ಮಪ್ಪ ಸಿದ್ರಾಮಯ್ಯ ಅಂತ ಹೆಸರಿಟ್ಟಿಲ್ವಾ, ಸಿದ್ರಾಮುಲ್ಲಾ ಅನ್ನೋಕೆ ಇವನ್ಯಾರು: ಸಿ.ಟಿ.ರವಿ ವಿರುದ್ಧ ಸಿದ್ದರಾಮಯ್ಯ ಕಿಡಿ

Chikkamagaluru

ನಮ್ಮಪ್ಪ ಸಿದ್ರಾಮಯ್ಯ ಅಂತ ಹೆಸರಿಟ್ಟಿಲ್ವಾ, ಸಿದ್ರಾಮುಲ್ಲಾ ಅನ್ನೋಕೆ ಇವನ್ಯಾರು: ಸಿ.ಟಿ.ರವಿ ವಿರುದ್ಧ ಸಿದ್ದರಾಮಯ್ಯ ಕಿಡಿ

Public TV
Last updated: January 22, 2023 8:42 am
Public TV
Share
3 Min Read
siddaramaiah and ct ravi
SHARE

– ಜೆಡಿಎಸ್ ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುವ ಪಕ್ಷ
– ಸಿ.ಟಿ.ರವಿ ಆರ್‌ಎಸ್‌ಎಸ್‌ನಲ್ಲಿ ಟ್ರೈನಿಂಗ್ ಆಗಿರುವ ಗಿರಾಕಿ

ಚಿಕ್ಕಮಗಳೂರು: ನಮ್ಮಪ್ಪ ನನಗೆ ಸಿದ್ರಾಮಯ್ಯ ಅಂತ ಹೆಸರಿಟ್ಟಿಲ್ವಾ. ಸಿದ್ರಾಮುಲ್ಲಾ ಅನ್ನೋಕೆ ಇವನ್ಯಾರು ಎಂದು ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಶಾಸಕ ಸಿ.ಟಿ.ರವಿ (C.T Ravi) ವಿರುದ್ಧ ಕಿಡಿಕಾರಿದರು.

Contents
  • – ಜೆಡಿಎಸ್ ಅಧಿಕಾರಕ್ಕಾಗಿ ಯಾರ ಜೊತೆ ಬೇಕಾದರೂ ಹೋಗುವ ಪಕ್ಷ – ಸಿ.ಟಿ.ರವಿ ಆರ್‌ಎಸ್‌ಎಸ್‌ನಲ್ಲಿ ಟ್ರೈನಿಂಗ್ ಆಗಿರುವ ಗಿರಾಕಿ
  • Live Tv

Siddaramaiah 1 3

ನಗರದ ಆಶ್ರಯ ಮೈದಾನದಲ್ಲಿ ಜಿಲ್ಲಾ ಕಾಂಗ್ರೆಸ್ (Congress) ವತಿಯಿಂದ ಹಮ್ಮಿಕೊಂಡಿದ್ದ ಪ್ರಜಾಧ್ವನಿ ಯಾತ್ರೆಯನ್ನು (Praja Dhwani Yatra) ಉದ್ಘಾಟಿಸಿ ಮಾತನಾಡಿದ ಅವರು, ಪ್ರಜಾಧ್ವನಿ ಎಂದರೆ ನಮ್ಮ ಧ್ವನಿಯಲ್ಲ. ನಿಮ್ಮ ಧ್ವನಿ, ರಾಜ್ಯದ ಜನರ ಧ್ವನಿ. ಬಿಜೆಪಿ ಕೋಮುವಾದದಲ್ಲಿ ನಂಬಿಕೆ ಇಟ್ಟಿರುವ ಪಕ್ಷ. ಜನರ ಭಾವನೆಗಳ ಜೊತೆ ಚೆಲ್ಲಾಟವಾಡುವ ಮೂಲಕ, ಜನರ ಭಾವನೆಗಳನ್ನು ಕೆರಳಿಸಿ ಜಾತಿಯ ಅಫೀಮು ಕೊಟ್ಟು ಧರ್ಮಾಂಧರನ್ನಾಗಿ ಮಾಡುವ ಪಕ್ಷ ಬಿಜೆಪಿ (BJP) ಸಿ.ಟಿ.ರವಿ ಆರ್‌ಎಸ್‌ಎಸ್‌ನಲ್ಲಿ (RSS) ಟ್ರೈನಿಂಗ್ ಆಗಿರುವ ಗಿರಾಕಿ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಈವರೆಗೂ ನಾನು ತಟಸ್ಥವಾಗಿದ್ದೇನೆ, ಸ್ಪರ್ಧೆ ಬಗ್ಗೆ ಮುಂದೆ ತೀರ್ಮಾನ: ಸುಮಲತಾ

CT Ravi 4

ಜೆಡಿಎಸ್ (JDS) ಪಕ್ಷ ಸಿದ್ಧಾಂತಗಳಿಗೆ ಬದ್ಧವಾಗಿರುವ ಪಕ್ಷವಲ್ಲ. ಅಧಿಕಾರಕ್ಕಾಗಿ ಯಾವ ಪಕ್ಷದ ಜೊತೆಗೆ ಬೇಕಾದರೂ ಹೋಗುತ್ತಾರೆ. ಆದರೆ, ಕಾಂಗ್ರೆಸ್ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡ ಪಕ್ಷ. ಕೋಮುವಾದದೊಂದಿಗೆ ರಾಜಿ ಮಾಡಿಕೊಳ್ಳದ ಏಕೈಕ ಪಕ್ಷ ನಮ್ಮದು. ಆರ್‌ಎಸ್‌ಎಸ್‌ನವರು ಸಂವಿಧಾನ ವಿರೋಧಿಗಳು. ಚಿಂತನ ಗಂಗಾ ಪುಸ್ತಕ ಬರೆದ ಗೋಳ್ವಾಕರ್ ಆ ಸಂಘಟನೆಯವರು. ಅಂತಹ ಸಂಘಟನೆ ಗರಡಿಯಲ್ಲಿ ಬೆಳೆದಿರುವ ಸಿ.ಟಿ ರವಿಗೆ ಸಂವಿಧಾನ ಹೇಗೆ ಅರ್ಥವಾಗುತ್ತದೆ ಎಂದು ಪ್ರಶ್ನಿಸಿದರು.

CONGRESS PROGRAM 1

ಸಾವರ್ಕರ್‌ರನ್ನು ಪೂಜಿಸುವ ಮತ್ತು ಮಹಾತ್ಮ ಗಾಂಧೀಜಿಯವರನ್ನು ಕೊಂದ ಗೂಡ್ಸೆ ಪೂಜಿಸುವವರಿಗೆ ಜಾತ್ಯಾತೀತ ತತ್ವ, ಪ್ರಜಾಪ್ರಭುತ್ವ ತತ್ವ, ಸಂವಿಧಾನದ ಮೇಲೆ ಗೌರವ ಇರಲು ಸಾಧ್ಯವಿಲ್ಲ. ಆದ್ದರಿಂದ ಸಿ.ಟಿ.ರವಿ ಅಫೀಮು ಕುಡಿದವರ ತರ ಮಾತನಾಡುತ್ತಾರೆ. ಸಿ.ಟಿ ರವಿಗೆ ಸಂವಿಧಾನದ ಬಗ್ಗೆ ಗೌರವವಿಲ್ಲ. ಅವರು ರಾಜಕೀಯದಲ್ಲಿ ಇರಲು ಯೋಗ್ಯರಲ್ಲ. ನಾನು 12 ವರ್ಷ ಹಣಕಾಸು ಮಂತ್ರಿಯಾಗಿ, 13 ಬಜೆಟ್‍ಗಳನ್ನು ಮಂಡಿಸಿದ್ದೇನೆ. ಯಾರಾರದೂ ಒಬ್ಬರು ಸಿದ್ದರಾಮಯ್ಯ ಎನ್‍ಓಸಿಗೆ ಐದು ಪೈಸೆ ದುಡ್ಡು ತೆಗೆದುಕೊಂಡಿದ್ದೇನೆ ಎಂದು ಹೇಳಿದರೆ ರಾಜಕೀಯದಿಂದ ನಿವೃತ್ತಿಯಾಗುತ್ತೇನೆ ಎಂದು ಸವಾಲು ಹಾಕಿದರು. ಇದನ್ನೂ ಓದಿ: ಸಾಕ್ಷ್ಯಚಿತ್ರ ಭಾರತದಲ್ಲಿ ಬ್ಯಾನ್‌ – ಬಿಬಿಸಿ ವಿರುದ್ಧ 302 ಅಧಿಕಾರಿಗಳು ಆಕ್ರೋಶ

DKShivakumar 1

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ (D.K Shivakumar) ಮಾತನಾಡಿ, ವಿಧಾನಸಭೆ ಗೋಡೆಗಳನ್ನು ಮುಟ್ಟಿದರೆ ದುಡ್ಡು ದುಡ್ಡು ಎನ್ನುತ್ತದೆ ಎಂದು ರಾಜ್ಯ ಸರ್ಕಾರದ ವಿರುದ್ಧ ವ್ಯಂಗ್ಯವಾಡಿದರು. ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಮಾತನಾಡಿ, ಸಿ.ಟಿ ರವಿ ಮಾತೆತ್ತಿದರೆ ಇಂದಿರಾಗಾಂಧಿ, ಸೋನಿಯಾಗಾಂಧಿ, ರಾಹುಲ್‍ಗಾಂಧಿಯವರ ಬಗ್ಗೆ ಮಾತನಾಡುತ್ತಾರೆ. ಸೋನಿಯಾಗಾಂಧಿಯವರು ತಮ್ಮ ಕುಟುಂಬದಲ್ಲಿ ಕಷ್ಟನಷ್ಟವನ್ನು ಅನುಭವಿಸಿದ ಮಹಿಳೆ. ಅವರು ದೇಶದ ಸಂಸ್ಕೃತಿಗೆ ಪ್ರತೀಕವಾದ ಮಹಿಳೆಯಾಗಿದ್ದು, ಅವರ ವಿರುದ್ಧ ಮಾತನಾಡುವ ಮನುಷ್ಯ ಈ ನೆಲದಲ್ಲಿ ಹುಟ್ಟಿರುವುದು ನಂಬಲು ಸಾಧ್ಯವಿಲ್ಲ. ಈ ಜಿಲ್ಲೆ ಭಾವೈಕ್ಯತೆಯ ಜಿಲ್ಲೆ. ಇಲ್ಲಿ ಶ್ರೀಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಇದ್ದು ದೇಶದಲ್ಲೇ ಸಾಮರಸ್ಯದ ಸಂಕೇತವಾಗಿದ್ದು, ಧರ್ಮದ ಹೆಸರಿನಲ್ಲಿ ವಿಷಬೀಜ ಬಿತ್ತುವ ಕೆಲಸವನ್ನು ಇಲ್ಲಿನ ಶಾಸಕ ಸಿ.ಟಿ. ರವಿ ಮಾಡುತ್ತಿದ್ದಾರೆ. ಇಲ್ಲಿನ ರಸ್ತೆಗಳೆಲ್ಲ ಡಾಂಬರ್ ಕಿತ್ತು ಬಂದಿದ್ದು, ರಸ್ತೆಗಳಲ್ಲಿ ಶೇ.40 ಕಮಿಷನ್ ಹೊಡೆಯುತ್ತಿದ್ದಾರೋ ಅಥವಾ ಹಳೇ ಕಲ್ಲಿಗೆ ಹೊಸ ಬಿಲ್ ಮಾಡುತ್ತಿದ್ದಾರೋ ಎಂದು ವ್ಯಂಗ್ಯವಾಡಿದರು.

ಇಂತಹ ಶಾಸಕರ ಅವಶ್ಯಕತೆ ಈ ಜಿಲ್ಲೆಗೆ ಇಲ್ಲ. ಇಂತವರನ್ನು ಬದಲಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಮುಂಬರುವ ಚುನಾವಣೆಯಲ್ಲಿ ಬದಲಾವಣೆಗೆ ಇಲ್ಲಿನ ಜನರು ಮುಂದಾಗಬೇಕು. ಹಿಂದಿನ ಕಾಂಗ್ರೆಸ್ ಭದ್ರಕೋಟೆ ಮರುಕುಳಿಸಬೇಕು ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

TAGGED:bjpcongressCT Ravid k shivakumarrsssiddaramaiahಕಾಂಗ್ರೆಸ್ಡಿ.ಕೆ.ಶಿವಕುಮಾರ್ಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

aindrita ray garbage issue
ಕಸದ ಸಮಸ್ಯೆಗೆ ನಟಿ ಐಂದ್ರಿತಾ ರೈ ಬೇಸರ – ಜಿಬಿಎಗೂ ಕರೆ ಮಾಡಿದ್ರೂ ನೋ ರೆಸ್ಪಾನ್ಸ್
Cinema Latest Sandalwood Top Stories
Rachita Ram 3
ಲ್ಯಾಂಡ್ ಲಾರ್ಡ್ ಚಿತ್ರದ `ನಿಂಗವ್ವ ನಿಂಗವ್ವ’ ಸಾಂಗ್ ರಿಲೀಸ್
Cinema Latest Sandalwood Top Stories
Darshan Pavithra
ಪರಪ್ಪನ ಅಗ್ರಹಾರದಲ್ಲಿ ದರ್ಶನ್ ಭೇಟಿಗೆ ಪವಿತ್ರಗೌಡ ಶತಪ್ರಯತ್ನ – ನಯವಾಗೇ ನಿರಾಕರಿಸಿದ ದರ್ಶನ್!
Bengaluru City Cinema Crime Latest Top Stories
Nagachaitanya Shobitha Wedding
ಸಮಂತಾಗೂ ಮುನ್ನ ಗುಡ್‌ನ್ಯೂಸ್ ಕೊಡಲು ಸಜ್ಜಾದ್ರಾ ಮಾಜಿ ಪತಿ?
Cinema Latest South cinema Top Stories

You Might Also Like

MB Patil 2
Bengaluru City

ಬೆಂಗಳೂರಿನಲ್ಲಿ 2ನೇ ವಿಮಾನ ನಿಲ್ದಾಣ – ಷರತ್ತಿನ ಅರಿವಿದೆ, ಮುಂದಾಲೋಚನೆಯಿಂದ ಟೆಂಡರ್ ಆಹ್ವಾನ: ಎಂ.ಬಿ ಪಾಟೀಲ್‌

Public TV
By Public TV
47 seconds ago
man assault on child
Bengaluru City

ಆಟವಾಡುತ್ತಿದ್ದ 5 ವರ್ಷದ ಮಗುವನ್ನು ಕಾಲಿನಿಂದ ಒದ್ದು ವಿಕೃತಿ – ಪಕ್ಕದ್ಮನೆ ನಿವಾಸಿಯಿಂದ ಕೃತ್ಯ

Public TV
By Public TV
4 minutes ago
Sudha Murty 3
Latest

AI ದುರ್ಬಳಕೆ – ರಾಜ್ಯಸಭಾ ಸದಸ್ಯೆ ಸುಧಾ ಮೂರ್ತಿಗೂ ತಪ್ಪದ ಡೀಪ್‌ಫೇಕ್‌ ಕಾಟ

Public TV
By Public TV
49 minutes ago
DK Shivakumar 1
Belgaum

ಸತೀಶ್ ಜಾರಕಿಹೊಳಿ ಡಿನ್ನರ್ ಮೀಟಿಂಗ್ ಮಾಡಿರೋದ್ರಲ್ಲಿ, ಎಲ್ಲ ಸೇರಿರೋದ್ರಲ್ಲಿ ತಪ್ಪೇನಿದೆ: ಡಿಕೆಶಿ ಮರುಪ್ರಶ್ನೆ

Public TV
By Public TV
52 minutes ago
Urea
Bengaluru City

ಬೆಂಗಳೂರಲ್ಲಿ ಜಪ್ತಿಯಾದ 1,90,000 ಕೆಜಿ ಯೂರಿಯಾ ಕೇರಳದ್ದಲ್ಲ, ಕರ್ನಾಟಕದ್ದೇ – ವರದಿ ಹೇಳೋದೇನು?

Public TV
By Public TV
1 hour ago
donald trump 1
Latest

ಬ್ರೌನ್ ವಿವಿ, MIT ಗುಂಡಿನ ದಾಳಿ ಬೆನ್ನಲ್ಲೇ ಗ್ರೀನ್ ಕಾರ್ಡ್ ಲಾಟರಿ ಸ್ಥಗಿತಗೊಳಿಸಿದ ಟ್ರಂಪ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?