ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ (Gruha Lakshmi Scheme) ನೋಂದಣಿಗೆ ರಾಜ್ಯ ಸರ್ಕಾರ ಕಡೆಗೂ ಚಾಲನೆ ನೀಡಿದೆ. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಬುಧವಾರ ಗೃಹಲಕ್ಷ್ಮಿ ಆ್ಯಪ್ ಬಿಡುಗಡೆ ಮಾಡಿದ್ದಾರೆ.
ಗುರುವಾರದಿಂದ ಅಧಿಕೃತವಾಗಿ ಅರ್ಜಿ ಸ್ವೀಕಾರ ಆರಂಭ ಆಗಲಿದೆ. ಇದಕ್ಕಾಗಿ ಸರ್ಕಾರ ನಿಗದಿ ಮಾಡಿದ ಕೇಂದ್ರಗಳಲ್ಲಿ ನೋಂದಣಿ ಮಾಡಿಸಿಕೊಳ್ಳಬೇಕು. ನೋಂದಣಿ ಯಾವಾಗ ಎಂಬುದು ಮೊಬೈಲ್ಗಳಿಗೆ ಸಂದೇಶ ಬರಲಿದೆ. ಆಗ ನಿಗದಿತ ಕೇಂದ್ರಕ್ಕೆ ಹೋಗಿ ನೋಂದಣಿ ಮಾಡಿಕೊಳ್ಳಬೇಕು. ಈ ನೋಂದಣಿಗೆ ಯಾವುದೇ ಶುಲ್ಕವಿಲ್ಲ.
ಅಗತ್ಯ ವಸ್ತುಗಳ ಬೆಲೆಯೇರಿಕೆಯಿಂದ ಸಂಕಷ್ಟದಲ್ಲಿ ಬದುಕು ಸಾಗಿಸುತ್ತಿರುವ ನಾಡಿನ ಮಹಿಳೆಯರಿಗೆ ಆರ್ಥಿಕ ನೆರವು ನೀಡಿ, ನೆಮ್ಮದಿಯ ನಾಳೆಗಳನ್ನು ಕಲ್ಪಿಸಿಕೊಡುವ ಉದ್ದೇಶದೊಂದಿಗೆ ನಾವು ಜಾರಿಗೊಳಿಸಿರುವ ಮಹತ್ವಾಕಾಂಕ್ಷೆಯ “ಗೃಹಲಕ್ಷ್ಮಿ” ಯೋಜನೆಯ ಅರ್ಜಿ ಸಲ್ಲಿಕೆಯು ಇಂದಿನಿಂದ ಆರಂಭಗೊಂಡಿದ್ದು, ಅರ್ಹ ಕುಟುಂಬಗಳ ಯಜಮಾನಿಯರು ತಪ್ಪದೇ ಅರ್ಜಿ… pic.twitter.com/mHFucqqFa2
— CM of Karnataka (@CMofKarnataka) July 19, 2023
ಆದರೆ ಆ್ಯಪ್ಗಳಿಂದಾಗಿ ಅನಕ್ಷರಸ್ತರಿಗೆ ತೊಂದರೆಯಾಗುವ ಬಗ್ಗೆ ‘ಪಬ್ಲಿಕ್ ಟಿವಿ’ಯಲ್ಲಿ ಪ್ರಸ್ತಾಪವಾಗಿತ್ತು. ಇದನ್ನು ಸರ್ಕಾರ ಪರಿಗಣಿಸಿದೆ. ಮೊಬೈಲ್ ಬಳಕೆ ಯಾರಿಗೆ ಬರುವುದಿಲ್ಲವೋ ಅಂಥವರ ನೋಂದಣಿಗೆ ಅಂಗನವಾಡಿ ಕಾರ್ಯಕರ್ತೆಯರು ನೆರವಾಗಬೇಕು ಎಂದು ಸರ್ಕಾರ ಸೂಚನೆ ನೀಡಿದೆ. ಇದನ್ನೂ ಓದಿ: ಮಸೂದೆಗಳ ಪ್ರತಿ ಹರಿದು ಡೆಪ್ಯುಟಿ ಸ್ಪೀಕರ್ನತ್ತ ತೂರಿದ ವಿಪಕ್ಷಗಳು – ಬಿಜೆಪಿಯ 10 ಶಾಸಕರು ಅಮಾನತು
ಕಾಂಗ್ರೆಸ್ನ ಐದು ಗ್ಯಾರಂಟಿಗಳ ಪೈಕಿ ಗೃಹಲಕ್ಷ್ಮಿ ಯೋಜನೆ ಪ್ರಮುಖದ್ದಾಗಿದೆ. ಕುಟುಂಬದ ಮನೆ ಯಜಮಾನಿ ಖಾತೆಗೆ ತಿಂಗಳಿಗೆ 2,000 ರೂ. ನೀಡುವುದು ಯೋಜನೆಯ ಉದ್ದೇಶವಾಗಿದೆ. ಯಜಮಾನಿಯಾಗಲಿ ಅಥವಾ ಆಕೆ ಪತಿಯಾಗಲಿ ತೆರಿಗೆ ಪಾವತಿದಾರರಾಗಿದ್ದಲ್ಲಿ, ಅವರಿಗೆ ಈ ಯೋಜನೆ ಸೌಲಭ್ಯ ಸಿಗುವುದಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಇದನ್ನೂ ಓದಿ: ತಳ್ಳಾಟ ನೂಕಾಟದಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದ ಯತ್ನಾಳ್ – ಆಸ್ಪತ್ರೆಗೆ ರವಾನೆ
Web Stories