ಉಡುಪಿ: ಪಿಎಫ್ಐ (PFI) ಕಾರ್ಯಕರ್ತರ ಕೇಸು ವಾಪಸ್ ತೆಗೆದುಕೊಂಡಿದ್ದೇ ಈ ಪರಿಸ್ಥಿತಿಗೆ ಕಾರಣ. ಕರ್ನಾಟಕವನ್ನು ಪಿಎಫ್ಐ ಫೈನಾನ್ಸಿಯಲ್ ಹಬ್ ಮಾಡಿದ್ದು ಸಿದ್ದರಾಮಯ್ಯ (Siddaramaiah). ಆರ್ಎಸ್ಎಸ್ (RSS) ಬಗ್ಗೆ ಪ್ರಶ್ನೆ ಮಾಡುವ ಅಧಿಕಾರ, ಅರ್ಹತೆ ಕಾಂಗ್ರೆಸ್ಗೆ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಗುಡುಗಿದ್ದಾರೆ.
ಉಡುಪಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ಎಸ್ಎಸ್ ಯಾವ ದೇಶದ್ರೋಹಿ ಚಟುವಟಿಕೆ ಮಾಡಿದೆ? ಒಂದು ಬಾರಿ ಆರ್ಎಸ್ಎಸ್ ಶಾಖೆಗೆ ಭೇಟಿ ಕೊಡಿ. ಮುಸಲ್ಮಾನರನ್ನು ಓಲೈಸಲು ಈ ರೀತಿ ಹೇಳಿಕೆ ಕೊಡಬೇಡಿ. ಪಿಎಫ್ಐ ದೇಶದ್ರೋಹಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡಿದೆ. ಪಿಎಫ್ಐ ಭಯೋತ್ಪಾದಕ ಚಟುವಟಿಕೆಗಳಿಗೆ ತರಬೇತಿ ನೀಡುವ ಸಂಸ್ಥೆ. ಪಿಎಫ್ಐ ಹಿಂದೂ ಯುವಕರ ಕೊಲೆಯಲ್ಲಿ ಭಾಗಿಯಾಗಿದೆ. ಎನ್ಐಎ (NIA) ಮೂರು ವರ್ಷ ಸಾಕ್ಷ್ಯ ದಾಖಲೆ ಸಂಗ್ರಹಿಸಿ ಇದೀಗ ಸರ್ಕಾರ ಕ್ರಮ ಕೈಗೊಂಡಿದೆ ಎಂದಿದ್ದಾರೆ. ಇದನ್ನೂ ಓದಿ: ಡಿ.31ರ ಒಳಗಡೆ BBMP ಚುನಾವಣೆ ನಡೆಸಿ – ಸರ್ಕಾರಕ್ಕೆ ಹೈಕೋರ್ಟ್ ಡೆಡ್ಲೈನ್
ಎಸ್ಡಿಪಿಐ ಒಂದು ರಾಜಕೀಯ ಪಕ್ಷ. ಅದರ ಮೇಲೆ ಕ್ರಮ ಕೈಗೊಳ್ಳಬೇಕಾದ್ದು ಚುನಾವಣಾ ಆಯೋಗ. ಎಸ್ಡಿಪಿಐನಲ್ಲಿರುವ ಪಿಎಫ್ಐ ಕಾರ್ಯಕರ್ತರ ತನಿಖೆಯಾಗುತ್ತಿದೆ. ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಗೃಹ ಇಲಾಖೆ ಜಿಲ್ಲಾಧಿಕಾರಿಗಳಿಗೆ ಸೂಚನೆ ಕೊಟ್ಟಿದೆ. ದೇಶಾದ್ಯಂತ ಜಿಲ್ಲಾಧಿಕಾರಿಗಳು ಈ ಕೆಲಸ ಮಾಡುತ್ತಿದ್ದಾರೆ. ಬಾಂಬ್ ತಯಾರಿಕೆ, ಶಸ್ತ್ರಾಸ್ತ್ರ ಬಳಕೆ ಬಗ್ಗೆ ಪಿಎಫ್ಐ ತರಬೇತಿ ನೀಡುತ್ತಿತ್ತು. ಸಾಮಾಜಿಕ ಜಾಲತಾಣಗಳ ದುರ್ಬಳಕೆ ಮಾಡಿಕೊಂಡು ಈ ಕೃತ್ಯ ಮಾಡುತ್ತಿತ್ತು. ಶಿವಮೊಗ್ಗದಲ್ಲಿ ಮೂವರು ಇಂಜಿನಿಯರ್ಗಳ ಬಂಧನದ ನಂತರ ಈ ಮಾಹಿತಿ ಸಿಕ್ಕಿದೆ. ತುಂಗಾ ನದಿ ತೀರದಲ್ಲಿ ಬಾಂಬ್ ಪ್ರಯೋಗ ಯಶಸ್ವಿ ಆದಾಗ ರಾಷ್ಟ್ರಧ್ವಜ ಅರ್ಧ ಸುಟ್ಟು ಸಂಭ್ರಮಿಸಿದ್ದಾರೆ. ಭಾರತವನ್ನು ದುರ್ಬಲಗೊಳಿಸುವುದು ಪಿಎಫ್ಐ ಉದ್ದೇಶವಾಗಿತ್ತು. ಭಾರತದ ಎಲ್ಲಾ ಸವಲತ್ತು ಪಡೆದು ದೇಶದ ವಿರುದ್ಧ ಇರುವವರ ಮಾನಸಿಕತೆ ಬದಲಾಗಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: ಮಿಥುನ್ ರೈ ಎಲ್ಲಿ, ಸೆಲ್ಫಿ ತೆಗೆದುಕೊಳ್ಳಲು ಬರ್ಲಿ: ಶೋಭಾ ಕರಂದ್ಲಾಜೆ ತಿರುಗೇಟು
ಕಾಂಗ್ರೆಸ್ ಆರ್ಎಸ್ಎಸ್ ಬ್ಯಾನ್ ಬೇಡಿಕೆ ಇಟ್ಟಿರುವುದಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಮಾನಸಿಕ ಸ್ಥಿಮಿತ ಕಳೆದುಕೊಂಡಿದೆ. ದೋಣಿಗೆ ನಾವಿಕನಿಲ್ಲದ ಪಕ್ಷ ಕಾಂಗ್ರೆಸ್. ತನ್ನ ಅಸ್ತಿತ್ವ ಕಳೆದುಕೊಳ್ಳುವ ಭಯದಲ್ಲಿದೆ. ಆರ್ಎಸ್ಎಸ್ ನಿಷೇಧ ಮಾಡಿದಾಗ ಕಾಂಗ್ರೆಸ್ಗೆ ಸುಪ್ರೀಂಕೋರ್ಟ್ ಛೀಮಾರಿ ಹಾಕಿತ್ತು. ಆರ್ಎಸ್ಎಸ್ ಬ್ಯಾನ್ ಮಾಡಿದ ಇಂದಿರಾಗಾಂಧಿಯನ್ನು ಜನ ಸೋಲಿಸಿದ್ದರು ಎಂದಿದ್ದಾರೆ.