Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿಯನ್ನು ಭೇಟಿಯಾದ ಸಿಎಂ, ಡಿಸಿಎಂ – ಪ್ರಧಾನಿಯಿಂದ ಬೇಡಿಕೆ ನೇರವೇರಿಸುವ ಭರವಸೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ಮೋದಿಯನ್ನು ಭೇಟಿಯಾದ ಸಿಎಂ, ಡಿಸಿಎಂ – ಪ್ರಧಾನಿಯಿಂದ ಬೇಡಿಕೆ ನೇರವೇರಿಸುವ ಭರವಸೆ

Latest

ಮೋದಿಯನ್ನು ಭೇಟಿಯಾದ ಸಿಎಂ, ಡಿಸಿಎಂ – ಪ್ರಧಾನಿಯಿಂದ ಬೇಡಿಕೆ ನೇರವೇರಿಸುವ ಭರವಸೆ

Public TV
Last updated: June 29, 2024 11:26 pm
Public TV
Share
3 Min Read
Siddaramaiah DK Shivakumar Narendra Modi 1
SHARE

ನವದೆಹಲಿ: ರಾಜ್ಯದ ಅಭಿವೃದ್ಧಿ ಮತ್ತು ಬಾಕಿ ಅನುದಾನಗಳ ಬಿಡುಗಡೆ ವಿಚಾರವಾಗಿ ಪ್ರಧಾನಿ ನರೇಂದ್ರ ಮೋದಿಯವರನ್ನ (Narendra Modi) ಸಿಎಂ ಸಿದ್ದರಾಮಯ್ಯ (Siddaramaiah) ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಈ ವೇಳೆ ರಾಜ್ಯದ ಪ್ರಮುಖ ಯೋಜನೆಗಳಿಗೆ ಅನುಮತಿ ನೀಡುವಂತೆ ಸಿಎಂ ಮನವಿ ಮಾಡಿದ್ದಾರೆ.

Siddaramaiah DK Shivakumar Narendra Modi

ಪ್ರಧಾನಿ ಭೇಟಿ ಬಳಿಕ ದೆಹಲಿಯಲ್ಲಿ ಮಾತನಾಡಿದ ಡಿ.ಕೆ.ಶಿವಕುಮಾರ್ (D.K Shivakumar) , ನಾನು ಸಿಎಂ, ಪರಮೇಶ್ವರ್ ಹಾಗೂ ಮಹಾದೇವಪ್ಪ ಪ್ರಧಾನಿ ಭೇಟಿ ಮಾಡಿ 40 ನಿಮಿಷ ಚರ್ಚೆ ಮಾಡಿದ್ದೇವೆ. ಮುಖ್ಯವಾಗಿ ಮಹದಾಯಿ, ಮೇಕೆದಾಟು, ಕೃಷ್ಣ ಮೇಲ್ದಂಡೆ ಯೋಜನೆ, ಬೆಂಗಳೂರು ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಸಿದ್ದೇವೆ. ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದೆ. ಹೀಗಾಗಿ ಅಗತ್ಯ ಕೆಲಸಗಳು ಆಗಬೇಕು ಎಂದು ಮನವಿ ಮಾಡಿದ್ದೇವೆ ಎಂದು ತಿಳಿಸಿದರು. ಇದನ್ನೂ ಓದಿ: ಬಿಬಿಎಂಪಿಯಲ್ಲಿ ಕೋಟಿ ಕೋಟಿ ಹಣ ಅಕ್ರಮ ವರ್ಗಾವಣೆ ಬಯಲಿಗೆ

ನಮ್ಮ ಬೇಡಿಕೆಗಳನ್ನು ಪರಿಶೀಲಿಸುವ ಭರವಸೆಯನ್ನು ಪ್ರಧಾನಿಗಳು ನೀಡಿದ್ದಾರೆ. ಗಿಫ್ಟ್ ಸಿಟಿ ರಾಜ್ಯಕ್ಕೊಂದು ಕೊಡುವಂತೆ ಮನವಿ ಮಾಡಿದ್ದೇವೆ. ಒಗ್ಗಟ್ಟಿನಿಂದ ಕೆಲಸ ಮಾಡುತ್ತೇವೆ ಸಹಕಾರ ಮಾಡಿ ಎಂದು ಮನವಿ ಮಾಡಿದ್ದೇವೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: UGCET: ದಾಖಲೆಗಳ ಆನ್‌ಲೈನ್ ಪರಿಶೀಲನೆ – ವೆಬ್‌ಸೈಟ್‌ನಲ್ಲಿ ಮಾಹಿತಿ ಪ್ರಕಟ

Modi 4

ಬೆಂಗಳೂರು ನಗರಕ್ಕೆ ಕುಡಿಯುವ ನೀರು ಒದಗಿಸುವ ಹಾಗೂ 400 ಮೆ.ವ್ಯಾ ವಿದ್ಯುತ್ ಉತ್ಪಾದನೆ ಮಾಡುವ ಮೇಕೆದಾಟು ಅಣೆಕಟ್ಟು ಯೋಜನೆಯ 9000 ಕೋಟಿ ರೂ.ಗಳ ಡಿಪಿಆಆರ್‌ಗೆ ಕೇಂದ್ರ ಜಲ ಆಯೋಗದಿಂದ ಅನುಮೋದನೆ ಬಾಕಿ ಇದೆ. ಮೇಕೆದಾಟು ಯೋಜನೆಗೆ ಪ್ರಧಾನಿಗಳು ಖುದ್ದಾಗಿ ಆಸಕ್ತಿ ವಹಿಸುವಂತೆಯೂ ಮುಖ್ಯಮಂತ್ರಿಗಳು ಮನವಿ ಮಾಡಿದ್ದಾರೆ.

ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ 2023-2024 ನಲ್ಲಿ ಘೋಷಿಸಿದಂತೆ 5300 ಕೋಟಿ ರೂ.ಗಳ ಬಿಡುಗಡೆ ಹಾಗೂ ಕಳಸಾ ಬಂಡೂರಿ ಕುಡಿಯುವ ನೀರಿನ ಯೋಜನೆಗೆ ಶೀಘ್ರವಾಗಿ ತೀರುವಳಿ ನೀಡುವಂತೆ ಜಲಶಕ್ತಿ ಸಚಿವಾಲಯ ಮತ್ತು ಪರಿಸರ ಹಾಗೂ ಅರಣ್ಯ ಮಂತ್ರಾಲಯದ ಅಧಿಕಾರಿಗಳಿಗೆ ಸೂಚಿಸುವಂತೆ ಕೋರಿದ್ದಾರೆ. ಕಿತ್ತೂರು ಕರ್ನಾಟಕ ಭಾಗದ ಜನರ ಬಹುದಿನಗಳ ಕನಸಿನ ಯೋಜನೆಯಾದ ಮಹಾದಾಯಿ ಯೋಜನೆಯಿಂದಾಗಿ ಕುಡಿಯುವ ನೀರಿನ ಸಮಸ್ಯೆ ಬಗೆಹರಿಯಲಿದೆ ಎಂದಿದ್ದಾರೆ.

ಬೆಂಗಳೂರು ನಗರದ ಸಂಚಾರ ದಟ್ಟಣೆ ನಿವಾರಣೆಗೆ 60 ಕಿ.ಮೀ ಸುರಂಗ ಮಾರ್ಗಕ್ಕೆ 3000 ಕೋಟಿ ವೆಚ್ಚವಾಗಲಿದ್ದು, ಯೋಜನೆಯಿಂದ ಹಲವಾರು ಲಾಭಗಳಿವೆ. ಈ ಸುರಂಗ ಮಾರ್ಗ ರಾಷ್ಟ್ರೀಯ ಹೆದ್ದಾರಿ 7 ನ್ನು ರಾ.ಹೆ.4 ಕ್ಕೆ ಸಂಪರ್ಕಿಸುವುದರಿಂದ ಕರ್ನಾಟಕ ಸರ್ಕಾರ ಕೇಂದ್ರ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಸಹಯೋಗದೊಂದಿಗೆ ಕೈಗೊಳ್ಳಬಹುದಾಗಿದ್ದು, ಕೇಂದ್ರ ಬಜೆಟ್ ಮೂಲಕ ರಾಜ್ಯ ಸರ್ಕಾರ ಹಾಗೂ ಎನ್.ಹೆಚ್.ಎ.ಐ ಗೆ ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ.

ಸಾರ್ವಜನಿಕ ಸಾರಿಗೆಗೆ ಬೇಡಿಕೆ ಹೆಚ್ಚಿಸಲು ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3 ನೇ ಹಂತದ 44.65 ಕಿಮೀ ಗಲನ್ನು 15611 ಕೋಟಿಗಳ ವೆಚ್ಚದ ಡಿಪಿಆಆರ್‌ನ್ನೂ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದು ಕೇಂದ್ರ ಸಚಿವ ಸಂಪುಟದ ಅನುಮೋದನೆ ಬಾಕಿ ಇದೆ. ಆದಷ್ಟು ಶೀಘ್ರವಾಗಿ ಅನುಮೋದನೆ ನೀಡುವಂತೆ ಕೋರಿದ್ದಾರೆ. 73.04 ಕಿ.ಮೀ ಉದ್ದದ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್‌ನ್ನು ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕೈಗೆತ್ತಿಕೊಳ್ಳಲು ರಾಜ್ಯ ಸರ್ಕಾರ ಅನುಮೋದಿಸಿದೆ. ಕೇಂದ್ರ ಬಜೆಟ್ ನಲ್ಲಿ ಅಗತ್ಯ ಅನುದಾನವನ್ನು ಮೀಸಲಿಡುವಂತೆ ಮುಖ್ಯಮಂತ್ರಿಗಳು ಪತ್ರದಲ್ಲಿ ಕೋರಿದ್ದಾರೆ.

15 ನೇ ಹಣಕಾಸು ಆಯೋಗವು 2021-26 ರ ಅವಧಿಗೆ ಕೆರೆಗಳ ಅಭಿವೃದ್ಧಿ ಹಾಗೂ ಪೇರಿಫೆರಲ್ ರಿಂಗ್ ರೋಡ್ ಗಾಗಿ ಶಿಫಾರಸ್ಸು ಮಾಡಿರುವ 6000 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಬಿಡುಗಡೆ ಮಾಡುವಂತೆ ಅವರು ಮನವಿ ಮಾಡಿದ್ದಾರೆ. ಬಿಬಿಎಂಪಿ ವತಿಯಿಂದ ಘನ ತ್ಯಾಜ್ಯ ನಿರ್ವಹಣೆಗಾಗಿ 3200 ಕೋಟಿ ಅಂದಾಜು ಮೊತ್ತದ ಯೋಜನೆ ಕೈಗೊಳ್ಳುತ್ತಿದ್ದು, ಯೋಜನೆಯ 30% ಅಂದರೆ 960 ಕೋಟಿ ರೂ.ಗಳನ್ನು ಸ್ವಚ್ಛ ಭಾರತ ಅಭಿಯಾನ 2.0ದಡಿ ಕಾರ್ಯಸಾಧ್ಯಾತಾ ಅಂತರ ನಿಧಿ ಒದಗಿಸಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕದ ಭಾಗದ ಏಳು ಜಿಲ್ಲೆಗಳ ಅಭಿವೃದ್ಧಿಗಾಗಿ ರಾಜ್ಯ ಸರ್ಕಾರ 3000 ಕೋಟಿ ರೂ.ಗಳ ಅನುದಾನವನ್ನು ಬಜೆಟ್ ನಲ್ಲಿ ಮೀಸಲಿರಿಸಿದ್ದು ಕೇಂದ್ರ ಸರ್ಕಾರವು ತನ್ನ 2024-25 ರ ಬಜೆಟ್ ನಲ್ಲಿ ಅನುರೂಪದ ಅನುದಾನವನ್ನು ಒದಗಿಸಲು ಹಾಗೂ ಕೇಂದ್ರ ಸರ್ಕಾರದ ಅಭಿವೃದ್ಧಿ ಆಕಾಂಕ್ಷಿ ಜಿಲ್ಲಾ ಕಾರ್ಯಕ್ರಮದಡಿ ಒದಗಿಸುವ ಅನುದಾನವನ್ನು ಹೆಚ್ಚಿಸಲು ಮತ್ತು ಹೊಸ ಕಾರ್ಯಕ್ರಮಗಳನ್ನು ಯೋಜನೆಯಲ್ಲಿ ಸೇರ್ಪಡೆಗೊಳಿಸಲು ಅನುಕೂಲವಾಗುವಂತೆ ಧನಸಹಾಯ ನೀಡಲು ಕೋರಲಾಗಿದೆ.

ಕಲ್ಯಾಣ ಕರ್ನಾಟಕ ಭಾಗದ ರಾಯಚೂರು ಜಿಲ್ಲೆಯಲ್ಲಿ ಏಮ್ಸ್ (AIIMS) ನ್ನೂ ಘೋಷಿಸುವಂತೆ ಮುಖ್ಯಮಂತ್ರಿಗಳು ತಮ್ಮ ಮನವಿ ಪತ್ರದಲ್ಲಿ ಕೋರಿದ್ದಾರೆ. 15 ನೇ ಹಣಕಾಸು ಆಯೋಗವು 2020-21 ರಲ್ಲಿ ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ನಿರ್ದಿಷ್ಟ ಅನುದಾನವನ್ನು ಕೇಂದ್ರ ಹಣಕಾಸು ಸಚಿವಾಲಯ ಒಪ್ಪಿಲ್ಲ. ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ದೊಡ್ಡ ಮೊತ್ತದ ಪಾಲು ದೊರಲಿಲ್ಲವಾದ್ದರಿಂದ ಈ ಶಿಫಾರಸ್ಸನ್ನು ಒಪ್ಪಿ ಅನುದಾನವನ್ನು ಬಿಡುಗಡೆ ಮಾಡಲು ಮುಖ್ಯಮಂತ್ರಿಗಳು ಕೋರಿದ್ದಾರೆ.

TAGGED:DK Shivakumarnarendra modisiddaramaiah
Share This Article
Facebook Whatsapp Whatsapp Telegram

Cinema news

Suri Annas Nee Nanna Devi song release 2
ಸೂರಿ ಅಣ್ಣನ ನೀ ನನ್ನ ದೇವತೆ ಸಾಂಗ್ ರಿಲೀಸ್
Cinema Latest Sandalwood
Alpha Movie
ಟೀಸರ್‌ನಲ್ಲಿ ಕುತೂಹಲ ಹೆಚ್ಚಿಸಿದ ಹೇಮಂತ್ ನಟನೆಯ ʻಆಲ್ಫಾʼ
Cinema Latest Sandalwood Top Stories
javara movie
ದುನಿಯಾ ವಿಜಯ್ ಮಗಳ ಹೊಸ ಚಿತ್ರಕ್ಕೆ ಮುಹೂರ್ತ: ರಿಷಿ ನಾಯಕ
Cinema Latest Sandalwood Top Stories
Gharga
ಘಾರ್ಗಾ ಸಿನಿಮಾದ ರೊಮ್ಯಾಂಟಿಕ್ ಸಾಂಗ್ ರಿಲೀಸ್
Cinema Latest Sandalwood

You Might Also Like

Puttur Mahalingeshwara Temple
Dakshina Kannada

ಸದ್ಯ ಪ್ರಸಾದ್ ಯೋಜನೆಯಡಿ ಪುತ್ತೂರು ಮಹಾಲಿಂಗೇಶ್ವರ ದೇವಾಲಯ ಪರಿಗಣನೆಯಲ್ಲಿಲ್ಲ: ಕೇಂದ್ರ

Public TV
By Public TV
2 minutes ago
IndiGo
Latest

ಇಂಡಿಗೋ ಸಮಸ್ಯೆ – 9,55,591 ಟಿಕೆಟ್‌ ರದ್ದು, 827 ಕೋಟಿ ರೂ. ರೀ ಫಂಡ್

Public TV
By Public TV
17 minutes ago
Madhu bangarappa
Belgaum

ಒಂದು ಮಗು ಇದ್ದರೂ ಸರ್ಕಾರಿ ಶಾಲೆ ಮುಚ್ಚಲ್ಲ: ಮಧು ಬಂಗಾರಪ್ಪ

Public TV
By Public TV
50 minutes ago
Siddaramaiah 15
Court

ಸಿಎಂ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್‌ ನೋಟಿಸ್‌

Public TV
By Public TV
1 hour ago
BY Vijayendra Ramesh jarkiholi
Belgaum

ರೇವಣ್ಣ ಎದುರು ರಮೇಶ್ ಜಾರಕಿಹೊಳಿಗೆ ಶೇಕ್ ಹ್ಯಾಂಡ್ ಮಾಡಿದ ಬಿವೈವಿ

Public TV
By Public TV
1 hour ago
kh muniyappa
Belgaum

ಜನವರಿಯಿಂದಲೇ ʻಇಂದಿರಾ ಕಿಟ್‌ʼ ವಿತರಣೆ – ಸಚಿವ ಮುನಿಯಪ್ಪ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?