Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Chikkamagaluru

ಪ್ರಧಾನಿ ಹೋದಲ್ಲೆಲ್ಲ ಮೋದಿ…ಮೋದಿ… ಅಂತಾರೆ, ಸಿದ್ರಾಮಯ್ಯರ ಹೆಸರನ್ನು ಪಾಕಿಸ್ತಾನದಲ್ಲಿ ಹೇಳಬಹುದಷ್ಟೇ: ಸಿ.ಟಿ.ರವಿ

Public TV
Last updated: December 8, 2021 7:47 pm
Public TV
Share
2 Min Read
ct ravi
SHARE

ಚಿಕ್ಕಮಗಳೂರು: ನರೇಂದ್ರ ಮೋದಿ ಅವರು ಹೋದಲ್ಲೆಲ್ಲ ಮೋದಿ… ಮೋದಿ… ಅಂತಾರೆ ಸಿದ್ದರಾಮಯ್ಯ ಅವರ ಹೆಸರನ್ನು ಪಾಕಿಸ್ತಾನದಲ್ಲಿ ಯಾರಾದರೂ ಹೇಳಬಹುದು ಅಷ್ಟೇ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವ್ಯಂಗ್ಯವಾಡಿದರು.

ಚಿಕ್ಕಮಗಳೂರಿನ ಕಾಮಧೇನು ಗಣಪತಿ ದೇವಸ್ಥಾನದಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರೇ ಕೇಳಿಸಿಕೊಳ್ಳಿ, ಇಂಗ್ಲೆಂಡ್ ಅಧ್ಯಕ್ಷ ಬೋಯಿಂಗ್ ಜಾನ್ಸನ್ ‘ಒನ್ ಸನ್, ಒನ್ ಮೂನ್, ಒನ್ ವಲ್ಡ್ ಒನ್ ನರೇಂದ್ರ ಮೋದಿ’ ಎಂದಿದ್ದಾರೆ. ಇಸ್ರೇಲ್ ಅಧ್ಯಕ್ಷ ನಮ್ಮ ದೇಶದಲ್ಲಿ ನನಗಿಂತ ಜನಪ್ರಿಯರೆಂದರೆ ನರೇಂದ್ರ ಮೋದಿ ಎಂದಿದ್ದಾರೆ. ಕರ್ನಾಟಕದಿಂದ ಹೊರ ಹೋದರೆ ಸಿದ್ದರಾಮಯ್ಯನವರ ಹೆಸರನ್ನು ಯಾರು ಹೇಳುತ್ತಾರೆ ಎಂದು ಲೇವಡಿ ಮಾಡಿದರು. ಇದನ್ನೂ ಓದಿ: ಮತದಾರರ ಬಳಿ ಆಣೆ ಪ್ರಮಾಣ ಮಾಡಿಸಿದ ಬಿಜೆಪಿ ನಾಯಕ

ct ravi1

ಸಂಸ್ಕೃತದಲ್ಲಿ ಯದ್ಭಾವಂ ತದ್ಭವತಿ ಎಂಬ ಶ್ಲೋಕ ಇದೆ. ನಾನು ಹೇಗಿದ್ದೇನೋ ಅದೇ ರೀತಿ ಉಳಿದವರು ಎಂದು ಭಾವಿಸುತ್ತಾರೆ ಎಂದು. ಆದರೆ, ಜಗತ್ತಿನ ದೃಷ್ಟಿಯಲ್ಲಿ ನರೇಂದ್ರ ಮೋದಿ ಓರ್ವ ಅಗ್ರಗಣ್ಯ ನಾಯಕ. ಬಾವಿಯೊಳಗಿನ ಕಪ್ಪೆ ಬಾವಿಯನ್ನೇ ಪ್ರಪಂಚ ಎಂದು ತಿಳಿದುಕೊಳ್ಳುತ್ತೆ. ಅವರು ಬಾವಿಯೊಳಗಿರುವ ಕಪ್ಪೆ ಅಲ್ಲ ಎಂದರು.

ಇಸ್ರೇಲ್ ಅಧ್ಯಕ್ಷ ನೀವು ನಮ್ಮ ಪಕ್ಷಕ್ಕೆ ಸೇರಿ ಎಂದು ನರೇಂದ್ರ ಮೋದಿಗೆ ತಮಾಷೆಯಾಗಿ ಪ್ರಶಂಸೆ ಮಾಡಿದ್ದಾರೆ. ಮೋದಿ ಎಲ್ಲಿಗೆ ಹೋದರು ಮೋದಿ… ಮೋದಿ ಅನ್ನುತ್ತಾರೆ. ಕರ್ನಾಟಕದಿಂದ ಆಚೆ ಹೋದರೆ ಸಿದ್ದರಾಮಯ್ಯನವರ ಹೆಸರನ್ನು ಯಾರು ಹೇಳುತ್ತಾರೆ? ರಾಹುಲ್ ಗಾಂಧಿ ಹೆಸರನ್ನೇ ಯಾರೂ ಹೇಳುವುದಿಲ್ಲ. ದೇಶದ ಪ್ರಧಾನಿ ಆಫ್ರಿಕಾ, ಅಮೆರಿಕ, ಆಸ್ಟ್ರೇಲಿಯಾ ಎಲ್ಲಿ ಹೋದರು ಮೋದಿ ಮೋದಿ ಅನ್ನುತ್ತಾರೆ. ಸಿದ್ದರಾಮಯ್ಯನವರ ಹೆಸರನ್ನು ಯಾರಾದರೂ ಹೇಳುವವರು ಇದ್ದರೆ ಅದು ಪಾಕಿಸ್ತಾನದಲ್ಲಿ ಅಷ್ಟೆ ಎಂದು ಕುಟುಕಿದರು.

Siddaramaiah 1

ಜೆಡಿಎಸ್ ಜೊತೆ ಒಳಒಪ್ಪಂದ ಮಾಡಿಕೊಳ್ಳದಿದ್ದರೆ ಡಿ.ಕೆ.ಶಿವಕುಮಾರ್ ಶಾಸಕರಾಗೋದಕ್ಕೆ ತಿಣುಕಾಡಬೇಕಿತ್ತು. ಡಿ.ಕೆ.ಸುರೇಶ್ ಸಂಸದರೂ ಆಗುತ್ತಿರಲಿಲ್ಲ ಎಂದು ಡಿಕೆಶಿ ಬ್ರದರ್ಸ್ ವಿರುದ್ಧ ಕಿಡಿಕಾರಿದರು. ಇದನ್ನೂ ಓದಿ: ಮತದಾರರಿಗೆ ಆಮಿಷವೊಡ್ಡಿದ ಕೈ ನಾಯಕರು: ಭಗವಂತ ಖೂಬಾ ವಾಗ್ದಾಳಿ

ಬಿಜೆಪಿ ಅಲೆಯಲ್ಲೂ ಜೆಡಿಎಸ್ ಬೆಂಬಲ ಇದ್ದ ಕಾರಣಕ್ಕೆ ಸುರೇಶ್ ಸಂಸದರಾಗಿ ಆಯ್ಕೆಯಾದರು. ಜೆಡಿಎಸ್ ಎಲ್ಲಿ ಸ್ಪರ್ಧೆ ಮಾಡಿಲ್ಲವೋ ಅಲ್ಲಿ ನಾವು ಬೆಂಬಲ ಕೇಳಿದ್ದೇವೆ. ಜೆಡಿಎಸ್ ಕೈನಲ್ಲಿ ಸ್ವಲ್ಪ ಮತಗಳಿವೆ ಎಂದು ನಾವು ಕೇಳಿದ್ದೇವೆ. ಅವರು ಎಲ್ಲೂ ಹಾಕುತ್ತೇವೆ ಎಂದು ಹೇಳಿಲ್ಲ. ಒಪ್ಪಂದವಾಗಿಲ್ಲ. ಮತದಾರರಿಗೆ, ಚುನಾಯಿತ ಪ್ರತಿನಿಧಿಗಳಿಗೆ ಯಾವುದು ಒಳ್ಳೆಯದು-ಕೆಟ್ಟದ್ದು ಎಂಬುದು ಗೊತ್ತು. ಕೈಗೆಟುಕದ ದ್ರಾಕ್ಷಿ ಹುಳಿ ಅನ್ನೋ ಕಥೆ ಹೇಳಿದರೆ ಅದು ಅವರಿಗೆ ಅನ್ವಯವಾಗುತ್ತೆ ಎಂದು ಕಾಂಗ್ರೆಸ್-ಡಿಕೆಶಿ ವಾಗ್ದಾಳಿ ನಡೆಸಿದರು.

modi1

ಕುಮಾರಸ್ವಾಮಿಯನ್ನು ಸಿಎಂ ಸ್ಥಾನದಲ್ಲಿ ಕೂರಿಸಿದ್ದು ನಾವ? ಅವರನ್ನು ಇಳಿಸುವುದಕ್ಕೆ ಅವರದ್ದೇ ಪಕ್ಷದ ಶಾಸಕರನ್ನು ಕಳಿಸಿದ್ದು ಯಾರು? ಕೂರಿಸಿ ಕಾಲೆಳೆಯುವುದನ್ನು ಮಾಡಿರುವುದು ಅವರೇ. ನಮ್ಮ ಸಂಬಂಧ ಜನರ ಜೊತೆ, ಒಪ್ಪಂದವೆಲ್ಲಾ ಕಾಂಗ್ರೆಸ್‍ಗೆ ಬಿಟ್ಟಿದ್ದು ಎಂದರು.

TAGGED:c t raviChikkamagalurumodisiddaramaiahಚಿಕ್ಕಮಗಳೂರುಮೋದಿಸಿ.ಟಿ ರವಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Singer Mangli
ಮಂಗ್ಲಿ ಬರ್ತ್‍ಡೇ ಪಾರ್ಟಿ ಮೇಲೆ ದಾಳಿ – ಮಾದಕ ವಸ್ತು ಪತ್ತೆ, ಪೊಲೀಸರಿಗೆ ಆವಾಜ್ ಹಾಕಿದ ಗಾಯಕಿ!
15 hours ago
Katrina Kaif
ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ
1 day ago
ZEE Kannada 2
ಹೊಸ ಅಧ್ಯಾಯಕ್ಕೆ ʻಜೀ ಕನ್ನಡʼ ಮುನ್ನುಡಿ…
2 days ago
Deepika padukone
ಪಡುಕೋಣೆ ಸ್ಕೂಲ್ ಆಫ್ ಬ್ಯಾಡ್ಮಿಂಟನ್ ಘೋಷಿಸಿದ ದೀಪಿಕಾ
2 days ago

You Might Also Like

KRS Toll Price Hike
Districts

ಕೆಆರ್‌ಎಸ್ ವೀಕ್ಷಣೆಗೆ ಬರುವ ಪ್ರವಾಸಿಗರ ಜೇಬಿಗೆ ಕತ್ತರಿ – 500 ಮೀ. ಸೇತುವೆ ದಾಟಲು 200 ರೂ.

Public TV
By Public TV
31 minutes ago
weather
Chikkamagaluru

ಕರಾವಳಿ ಭಾಗದಲ್ಲಿ ಮಳೆಯ ಆರ್ಭಟ – ಉತ್ತರ ಕನ್ನಡದಲ್ಲಿ ಇಂದು ಶಾಲೆಗಳಿಗೆ ರಜೆ

Public TV
By Public TV
55 minutes ago
Electronic City Flyover Accident copy
Bengaluru City

ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್ ಮೇಲೆ ಸರಣಿ ಅಪಘಾತ – ಬೈಕ್ ಸವಾರನಿಗೆ ಗಾಯ

Public TV
By Public TV
56 minutes ago
Raichuru
Districts

ಧಾರಾಕಾರ ಮಳೆಗೆ 101 ಬಾಗಿಲುಗಳುಳ್ಳ 160 ವರ್ಷಗಳ ಕಟ್ಟಡ ಕುಸಿತ

Public TV
By Public TV
9 hours ago
Rain Landslide Udupi
Districts

ಉಡುಪಿ | ಭಾರೀ ಮಳೆಗೆ ರೈಲ್ವೇ ಸೇತುವೆ ಬಳಿಯೇ ಭೂಕುಸಿತ

Public TV
By Public TV
9 hours ago
Nara Bharat Reddy
Bellary

ನನ್ನ ಮನೆಯಲ್ಲಿ ಒಂದು ತುಂಡು ಸೀಜ್‌ ಆಗಿಲ್ಲ: ನಾರಾ ಭರತ್‌ ರೆಡ್ಡಿ

Public TV
By Public TV
10 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?