Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂತೋಷ್ ಆತ್ಮಹತ್ಯೆ ಪ್ರಕರಣವು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಬೇಕು: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂತೋಷ್ ಆತ್ಮಹತ್ಯೆ ಪ್ರಕರಣವು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಬೇಕು: ಸಿದ್ದರಾಮಯ್ಯ

Bengaluru City

ಸಂತೋಷ್ ಆತ್ಮಹತ್ಯೆ ಪ್ರಕರಣವು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಬೇಕು: ಸಿದ್ದರಾಮಯ್ಯ

Public TV
Last updated: April 14, 2022 9:22 pm
Public TV
Share
5 Min Read
siddaramaiah 5
SHARE

ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣವು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಬೇಕು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಸಚಿವ ಸ್ಥಾನಕ್ಕೆ ಈಶ್ವರಪ್ಪ ರಾಜೀನಾಮೆ ನೀಡಿರುವ ಹಿನ್ನೆಲೆಯಲ್ಲಿ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಅವರು ಜಂಟಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಈಶ್ವರಪ್ಪ ಅವರು ನಿನ್ನೆವರೆಗೂ ಸುಳ್ಳು ಹೇಳಿಕೊಂಡಿದ್ದರು, ನಾವು ನಮ್ಮ ಹೋರಾಟವನ್ನು ಚುರುಕುಗೊಳಿಸಿದ ಮೇಲೆ ನಾಳೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ಮೃತ ಸಂತೋಷ್ ಪಾಟೀಲ್ ಅವರು ಈಶ್ವರಪ್ಪ ವಿರುದ್ಧ ಲಂಚಕ್ಕಾಗಿ ಕಿರುಕುಳ ನೀಡುತ್ತಿದ್ದರೆಂದು ಮಾಡಿದ ಆರೋಪವನ್ನು ಒಪ್ಪಿಕೊಂಡು, ತಪ್ಪಿನ ಅರಿವಾಗಿ ರಾಜೀನಾಮೆ ನೀಡುತ್ತಿದ್ದಾರೆ ಎಂದು ನಾನು ಭಾವಿಸಿದ್ದೇನೆ ಎಂದರು. ಇದನ್ನೂ ಓದಿ: ಪ್ರಧಾನಿ ಒಂದೇ ಒಂದು ಮಾತು – ಈಶ್ವರಪ್ಪ ದಿಢೀರ್‌ ರಾಜೀನಾಮೆ

ks eshwarappa 3

ಮೊದಲಿಗೆ ಈಶ್ವರಪ್ಪ ಅವರು ಸಂತೋಷ್ ಪಾಟೀಲ್ ಯಾರೆಂದೇ ಗೊತ್ತಿಲ್ಲ ಎಂದು ಹೇಳುತ್ತಿದ್ದರು. ಸಂತೋಷ್ ಪಾಟೀಲ್ ಯಾರು ಅಂತಲೇ ಗೊತ್ತಿಲ್ಲದೆ ಆತನ ಮೇಲೆ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರೇ? ಇದು ಮೊದಲ ಸಾಕ್ಷಿ. ಎರಡನೆಯದು ಬೆಳಗಾವಿ ಜಿಲ್ಲೆಯ ಹಿಂಡಲಗಾ ಗ್ರಾಮ ಪಂಚಾಯತಿ ಅಧ್ಯಕ್ಷ ಹೇಳಿಕೆ ನೀಡಿ, ನಾನು ಮತ್ತು ಸಂತೋಷ್ ಪಾಟೀಲ್ ಅವರು ಎರಡು ಬಾರಿ ಈಶ್ವರಪ್ಪ ಅವರನ್ನು ಭೇಟಿ ಮಾಡಿದ್ದೆವು. ಸ್ವತಃ ಸಚಿವರೇ ಸಂತೋಷ್ ಪಾಟೀಲ್‍ಗೆ ಕೆಲಸ ಮಾಡಲು ಹೇಳಿದ್ದರು. ಹಾಗಾಗಿ ಸಚಿವರ ಅನುಮತಿ ಮೇರೆಗೆ ಅವರು ಎಲ್ಲ ಕೆಲಸ ಪೂರ್ಣಗೊಳಿಸಿದ್ದಾರೆ ಎಂದಿದ್ದಾರೆ. ಇದಕ್ಕೆ ಸಂಬಂಧಿಸಿದ ಫೆÇೀಟೊ ಮಾಧ್ಯಮಗಳಲ್ಲೂ ಪ್ರಸಾರವಾಗಿತ್ತು. ಕೆಲಸ ಮಾಡಿದ ಮೇಲೆ ವರ್ಕ್ ಆರ್ಡರ್ ಮತ್ತು ಬಿಲ್ ಪಾವತಿ ಮಾಡುವ ಸಂದರ್ಭದಲ್ಲಿ 40% ಕಮಿಷನ್‍ಗೆ ಬೇಡಿಕೆ ಇಟ್ಟಿದ್ದಾರೆ. ಅಷ್ಟು ಹಣ ಸಂತೋಷ್ ಪಾಟೀಲ್ ರಿಂದ ಕೊಡೋಕೆ ಸಾಧ್ಯವಾಗಿಲ್ಲ, ಈ ಕಾರಣಕ್ಕೆ ಬಿಲ್ ಹಣ ಬಿಡುಗಡೆ ಮಾಡದೆ ಕಿರುಕುಳ ನೀಡಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ನಾನು ಮಣ್ಣಿಗೆ ಹೋಗುವುದರೊಳಗೆ ಜೆಡಿಎಸ್‌ನಿಂದ ದಲಿತ ಸಿಎಂ ಮಾಡುವೆ: ಹೆಚ್‌ಡಿಕೆ ಘೋಷಣೆ

ಹಲವು ಬಾರಿ ಹಣ ಬಿಡುಗಡೆ ಮಾಡುವಂತೆ ಸಂತೋಷ್ ಪಾಟೀಲ್ ಗೋಗರೆದಿದ್ದಾರೆ. ಎಷ್ಟೇ ಮನವಿ ಮಾಡಿದರೂ ಸಚಿವರು ಸ್ಪಂದಿಸದೆ ಇದ್ದಾಗ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದಕ್ಕೆ ಸಾಕ್ಷಿಯಾಗಿ ಸಂತೋಷ್ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗ್ರಾಮೀಣಾಭಿವೃದ್ಧಿ ಸಚಿವರಿಗೆ ಬರೆದ ಪತ್ರವಿದೆ. ಜೊತೆಗೆ ಬಿಜೆಪಿ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರನ್ನು ಭೇಟಿಮಾಡಿ ಮನವಿ ಮಾಡಿದ್ದಾರೆ. ಪ್ರಧಾನಿಗಳಿಗೆ ಬರೆದ ಪತ್ರದಲ್ಲಿ ನಾನು ಕಾಮಗಾರಿ ಕೆಲಸ ಮಾಡಲು ಸಾಕಷ್ಟು ಸಾಲ ಮಾಡಿಕೊಂಡಿದ್ದೇನೆ. ಈಗ ಬಿಲ್ ಹಣ ಪಾವತಿಸದೇ ಹೋದರೆ ಆತ್ಮಹತ್ಯೆ ಮಾಡಿಕೊಳ್ಳುವುದೊಂದೇ ದಾರಿ ಎಂದು ಸ್ಪಷ್ಟವಾಗಿ ಹೇಳಿದ್ದಾರೆ. ಆತ್ಮಹತ್ಯೆಗೆ ಈಶ್ವರಪ್ಪ ಕಾರಣ ಎಂದು ಹೇಳಲು ಇದಕ್ಕಿಂತ ಸಾಕ್ಷಿ ಬೇಕೆ? ಎಂದರು.

santosh patil

ಈಶ್ವರಪ್ಪ ಅವರೇ ಸಂತೋಷ್ ಪಾಟೀಲ್ ಸಾವಿಗೆ ಕಾರಣ ಎಂದು ಆತನ ಹೆಂಡತಿ ಮತ್ತು ತಾಯಿ ಹೇಳಿದ್ದಾರೆ. ಸಂತೋಷ್ ಪಾಟೀಲ್ ಅವರಿಗೆ ಈಶ್ವರಪ್ಪ ನೀಡುತ್ತಿದ್ದ ಕಿರುಕುಳ, 40% ಕಮಿಷನ್ ಕೇಳಿದ್ದು, ಬಿಲ್ ಬಿಡುಗಡೆ ಮಾಡದೆ ಸತಾಯಿಸುತ್ತ ಇದ್ದದ್ದು ಎಲ್ಲವನ್ನು ತಮ್ಮ, ತಾಯಿ ಮತ್ತು ಹೆಂಡತಿ ಬಳಿ ಹೇಳಿಕೊಂಡಿದ್ದರು. ಈಗ ಮೃತನ ತಾಯಿ ಮತ್ತು ಹೆಂಡತಿ ಈ ಬಗ್ಗೆ ಹೇಳಿಕೆ ನೀಡಿದ್ದಾರೆ ಎಂದು ನುಡಿದರು.

ಸಂತೋಷ್ ಪಾಟೀಲ್ ಸಾಯುವ ಮುನ್ನ ತನ್ನ ಸಾವಿಗೆ ಸಚಿವ ಈಶ್ವರಪ್ಪ ಕಾರಣ ಎಂದು ವಾಟ್ಸಾಪ್ ಮೂಲಕ ಡೆತ್ ನೋಟ್ ಕಳಿಸಿ, ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಎಲ್ಲಾ ಸಾಂದರ್ಭಿಕ ಸಾಕ್ಷ್ಯಗಳು ಈಶ್ವರಪ್ಪ ಅಪರಾಧಿ ಎಂದು ತೋರಿಸುತ್ತಿವೆ. ಮೃತನ ಸಹೋದರ ನೀಡಿರುವ ದೂರಿನಲ್ಲಿ ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರದ ಆರೋಪವನ್ನು ಮಾಡಿದ್ದಾರೆ ಎಂದರು.

santosh patil congress

ಈಶ್ವರಪ್ಪ ರಾಜೀನಾಮೆ ನಮ್ಮ ಹೋರಾಟದ ಮುಖ್ಯ ಉದ್ದೇಶವಲ್ಲ. ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯ ಸೆಕ್ಷನ್ -13 ರಡಿ ಪ್ರಕರಣ ದಾಖಲು ಮಾಡಬೇಕು, ಈಗ ಅವರ ಮೇಲೆ ಸೆಕ್ಷನ್ 306, ಸೆಕ್ಷನ್ 34 ರಡಿ ಕೇಸ್ ದಾಖಲಾಗಿದೆ. ಇದರಲ್ಲಿ ಈಶ್ವರಪ್ಪ ಅವರೇ ಮೊದಲ ಆರೋಪಿ ಆಗಿದ್ದಾರೆ. ಇದೊಂದು ಅಮಾನವೀಯ ಅಪರಾಧ, ಇಂತಹ ಅಪರಾಧ ಪ್ರಕರಣಗಳಲ್ಲಿ ಅಪರಾಧಿ ಸಿಕ್ಕ ಕೂಡಲೆ ಬಂಧನ ಮಾಡಬೇಕು ಎಂದು ಕಾನೂನು ಹೇಳುತ್ತದೆ. ಹಾಗಾಗಿ ಈ ಕೂಡಲೇ ಈಶ್ವರಪ್ಪ ಅವರನ್ನು ಬಂಧಿಸಬೇಕು. ಕಾನೂನು ಎಲ್ಲರಿಗೂ ಒಂದೆ ಅಲ್ಲವೇ? ಇವು ನಮ್ಮ ಮುಖ್ಯ ಬೇಡಿಕೆಗಳು ಎಂದು ಆಗ್ರಹಿಸಿದರು.

ಇವುಗಳ ಜೊತೆಗೆ ಸಂತೋಷ್ ಕುಟುಂಬಸ್ಥರಿಗೆ ರೂ. 1 ಕೋಟಿ ಪರಿಹಾರ ನೀಡಬೇಕು. ಮೃತನ ಪತ್ನಿ ಬಿ.ಎ ಪಧವೀದರೆ ಆಗಿರುವುದರಿಂದ ಆಕೆಗೆ ಸರ್ಕಾರಿ ಉದ್ಯೋಗವನ್ನು ನೀಡಬೇಕು. ಇದನ್ನು ನಿನ್ನೆ ಸಂತೋಷ್ ಪಾಟೀಲ್ ನಿವಾಸಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸ್ಪಷ್ಟಪಡಿಸಿದ್ದೇವೆ. ನಾವು ಪಕ್ಷದ ವತಿಯಿಂದ ಮೃತನ ಕುಟುಂಬಕ್ಕೆ ಏನು ಪರಿಹಾರ ಘೋಷಣೆ ಮಾಡಿದ್ದೇವೆ ಅದನ್ನು ಕೊಡುತ್ತೇವೆ ಎಂದು ಹೇಳಿದರು.

court order law

ಸರ್ಕಾರ ನಮ್ಮ ಒತ್ತಾಯಗಳನ್ನು ಈಡೇರಿಸದೆ. ಈ ನೆಲದ ಕಾನೂನಿಗೆ ಗೌರವ ಕೊಡದೆ ಭ್ರಷ್ಟಾಚಾರವನ್ನು ಬೆಂಬಲಿಸುವ ಕೆಲಸ ಮುಖ್ಯಮಂತ್ರಿಗಳಿಂದ ಆಗುತ್ತಿದೆ. ಮುಖ್ಯಮಂತ್ರಿಗಳು ಕೂಡ ಇದರಲ್ಲಿ ಶಾಮೀಲಾಗಿದ್ದಾರೆ ಎಂಬುದು ನಮ್ಮ ಆರೋಪ, ಕಾರಣ ಈ ಇಡೀ ಸರ್ಕಾರದ ಮೇಲೆಯೇ 40% ಕಮಿಷನ್ ಆರೋಪ ಇದೆ ಎಂದರು.

ಈ ಆತ್ಮಹತ್ಯೆ ಪ್ರಕರಣವು ಹೈಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಬೇಕು. ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷರಾದ ಕೆಂಪಣ್ಣನವರು ಈ ಸರ್ಕಾರದ ಮೇಲೆ 40% ಕಮಿಷನ್ ಆರೋಪ ಮಾಡಿದ್ದಾರೆ. ಅದು ಕೂಡ ನ್ಯಾಯಾಂಗ ತನಿಖೆಯಾಗಬೇಕು. ಇದನ್ನು ಬಹಳ ಹಿಂದಿನಿಂದಲೂ ಒತ್ತಾಯ ಮಾಡುತ್ತಾ ಬಂದಿದ್ದೇವೆ, ಈಗಲೂ ಒತ್ತಾಯ ಮಾಡುತ್ತೇವೆ ಎಂದರು.

Basavaraj Bommai 1

ನಮ್ಮ ಈ ಎಲ್ಲಾ ಆಗ್ರಹಗಳು ಇನ್ನೂ ಈಡೇರಿಲ್ಲ. ಹಾಗಾಗಿ ನಾವು ನಿರ್ಧಾರ ಮಾಡಿದಂತೆ 24 ಗಂಟೆಗಳ ಕಾಲ ಧರಣಿಯನ್ನು ಮುಂದುವರೆಸುತ್ತೇವೆ. ಈಗಾಗಲೇ ನಮ್ಮ ಪಕ್ಷದ ಹಲವು ನಾಯಕರ ನೇತೃತ್ವದಲ್ಲಿ ಏಳು ತಂಡಗಳನ್ನು ರಚನೆ ಮಾಡಿ, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಪ್ರವಾಸ ಮಾಡುವ ನಿರ್ಧಾರ ಮಾಡಿದ್ದೇವೆ, ಅದನ್ನು ಕೂಡ ಮಾಡುತ್ತೇವೆ ಎಂದು ತಿಳಿಸಿದರು.

ನಿನ್ನೆವರೆಗೂ ನಾನು ಯಾವುದಕ್ಕೂ ಬಗ್ಗಲ್ಲ, ಜಗ್ಗಲ್ಲ ಎನ್ನುತ್ತಿದ್ದ ಈಶ್ವರಪ್ಪ ಇಂದು ರಾಜೀನಾಮೆ ಘೋಷಣೆ ಮಾಡಿದ್ದಾರೆ. ಮೊದಲಿಂದಲೂ ನಾನು ಈಶ್ವರಪ್ಪ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡುತ್ತಿರಲಿಲ್ಲ. ಈಗ ಅವರು ಅಮಾನವೀಯ ಅಪರಾಧ ಎಸಗಿರುವ ಆರೋಪಿ ಬೇರೆ. ಭಾರತೀಯ ಸಾಕ್ಷ್ಯ ಕಾಯ್ದೆಯಡಿ ಆರೋಪಿ ನಂಬರ್ 1 ಆಗಿರುವ ಈಶ್ವರಪ್ಪ ಅವರು ನೀಡುವ ಯಾವ ಹೇಳಿಕೆಗಳು ಕಾನೂನಿನಡಿ ಮಹತ್ವ ಪಡೆದಿಲ್ಲ ಮತ್ತು ಅಪರಾಧ ಕೃತ್ಯದ ಸ್ಪಷ್ಟೀಕರಣ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಹೇಳಿದರು.

modi pariksha pe charcha

ಮಾಧ್ಯಮಗಳು ಪ್ರಜಾಪ್ರಭುತ್ವದ ನಾಲ್ಕನೆಯ ಅಂಗ, ದೇಶ, ವ್ಯವಸ್ಥೆ ಉಳಿಯಬೇಕಾದರೆ ಮಾಧ್ಯಮಗಳ ಪಾತ್ರ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಎಲ್ಲಾ ಮಾಧ್ಯಮಗಳು ನಮ್ಮೊಂದಿಗೆ ನಿಂತು ಪ್ರಜಾಪ್ರಭುತ್ವವನ್ನು ಉಳಿಸಲು ಸಹಕಾರ ನೀಡುತ್ತಿವೆ ಎಂದರು.

TAGGED:bengaluruDK ShivakumareshwarappaResignationsiddaramaiahಈಶ್ವರಪ್ಪಡಿ.ಕೆ.ಶಿವಕುಮಾರ್ಬೆಂಗಳೂರುರಾಜೀನಾಮೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories
chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories

You Might Also Like

mann ki baat
Dharwad

56gw ದಾಟಿದ ಭಾರತದ ಪವನಶಕ್ತಿ ಉತ್ಪಾದನೆ ಸಾಮರ್ಥ್ಯಕ್ಕೆ ಮೋದಿ ಶ್ಲಾಘನೆ: ಜೋಶಿ

Public TV
By Public TV
13 minutes ago
nobody told me its a dangerous profession jokes Donald Trump after WHCD event shooting Hilton Hotel
Latest

ಅಧ್ಯಕ್ಷ ಹುದ್ದೆ ಇಷ್ಟು ಅಪಾಯಕಾರಿ ಎಂದು ತಿಳಿದಿರಲಿಲ್ಲ: ಗುಂಡಿನ ದಾಳಿಯ ನಂತರ ಟ್ರಂಪ್ ವ್ಯಂಗ್ಯ

Public TV
By Public TV
18 minutes ago
White House Correspondents Dinner
Latest

Explained| ಏನಿದು ವೈಟ್ ಹೌಸ್ ಕರೆಸ್ಪಾಂಡೆಂಟ್ಸ್ ಡಿನ್ನರ್? ಅಧ್ಯಕ್ಷರು ಯಾಕೆ ಬರುತ್ತಾರೆ? ಹಿಲ್ಟನ್ ಹೋಟೆಲ್‌ನಲ್ಲೇ ಆಯೋಜನೆ ಯಾಕೆ?

Public TV
By Public TV
20 minutes ago
Fly91 Flight Faces Landing Delay Circles Over Hubballi
Dharwad

ಹವಾಮಾನ ವೈಪರಿತ್ಯ – ಆಕಾಶದಲ್ಲೇ 40 ನಿಮಿಷ ಗಿರಕಿ ಹೊಡೆದ Fly 91 ವಿಮಾನ

Public TV
By Public TV
23 minutes ago
Engagement
Crime

ಇಂದು ನಿಶ್ಚಿತಾರ್ಥ, ನಿನ್ನೆ ರಾತ್ರಿ ಇಬ್ರಾಹಿಂ ಜೊತೆ ಪರಾರಿ – ಲವ್‌ ಜಿಹಾದ್‌ ಆರೋಪ

Public TV
By Public TV
26 minutes ago
teacher committed suicide by being shot in madikeri
Crime

ಪ್ರೀತಿಯ ವಿದ್ಯಾರ್ಥಿಗಳೆ ನಿಮಗೆ ವಿದಾಯ ಎಂದು ಗುಂಡು ಹೊಡೆದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕಿ

Public TV
By Public TV
26 minutes ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?