Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ಹೊಗಳುಭಟ್ಟರ ಸಮೀಕ್ಷಾ ವರದಿಯಲ್ಲಿ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? – EVM ಸರ್ವೆಗೆ ಸಿಎಂ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿ ಹೊಗಳುಭಟ್ಟರ ಸಮೀಕ್ಷಾ ವರದಿಯಲ್ಲಿ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? – EVM ಸರ್ವೆಗೆ ಸಿಎಂ ಕಿಡಿ

Bengaluru City

ಮೋದಿ ಹೊಗಳುಭಟ್ಟರ ಸಮೀಕ್ಷಾ ವರದಿಯಲ್ಲಿ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? – EVM ಸರ್ವೆಗೆ ಸಿಎಂ ಕಿಡಿ

Public TV
Last updated: January 2, 2026 10:20 pm
Public TV
Share
4 Min Read
Siddaramaiah 10
SHARE

– ವೋಟ್ ಚೋರಿ ಒಂದು ಘೋಷಣೆ ಅಲ್ಲ.. ಅದು ಜಾರ್ಜ್‌ಶೀಟ್‌
– ಹಳೆಯ ಸಮೀಕ್ಷೆ ಬಳಸಿ ವಿಪಕ್ಷಗಳಿಂದ ದಾರಿ ತಪ್ಪಿಸುವ ಪ್ರಯತ್ನ; ಕಿಡಿ

ಬೆಂಗಳೂರು: EVM ಸಮೀಕ್ಷೆಯನ್ನ ಡಾ.ಆರ್ ಬಾಲಸುಬ್ರಮಣ್ಯಂ ಸ್ಥಾಪಿಸಿದ GRAAM ಎಂಬ NGO ನಡೆಸಿದೆ. ಅವರು 2024ರಲ್ಲಿ ಮೋದಿ ಬಗ್ಗೆ ಬರೆದಿರುವ ಪುಸ್ತಕ ನೋಡಿದ್ರೆ ಮೋದಿಯವರ ಅಂಧ ಅಭಿಮಾನಿಯಂತೆ ಕಾಣುತ್ತಾರೆ. ಇಂತಹ ಹೊಗಳುಭಟ್ಟರು ನಡೆಸಿರುವ ಸಮೀಕ್ಷೆ ಆಧರಿಸಿ ವರದಿ ಸಿದ್ಧಪಡಿಸಿರುವುದಕ್ಕೆ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಕಿಡಿ ಕಾರಿದ್ದಾರೆ.

ಎಕ್ಸ್‌ ಖಾತೆಯಲ್ಲಿ ಸುದೀರ್ಘ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಸಿಎಂ ಇವಿಎಂ (Electronic Voting Machines) ಸಮೀಕ್ಷೆ ವಿರುದ್ಧ ಕಿಡಿ ಕಾಡಿದ್ದಾರೆ. ಚುನಾವಣಾ ಆಯೋಗದ ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ರಾಜ್ಯದಲ್ಲಿ ವಿರೋಧಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ ಎಂದು ಅಸಮಾಧಾನ ಹೊರಹಾಕಿದ್ದಾರೆ.

ಚುನಾವಣಾ ಆಯೋಗದ ಹಳೆಯ ಸಮೀಕ್ಷೆಯೊಂದನ್ನು ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ರಾಜ್ಯದಲ್ಲಿ ವಿರೋಧಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ. ಚುನಾವಣಾ ಅಕ್ರಮಗಳ ಬಗ್ಗೆ ನಮ್ಮ ನಾಯಕರಾದ @RahulGandhi ಅವರು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅದನ್ನು ‘ತಪ್ಪು’ ಎಂದು ಬಿಂಬಿಸುವ ಕುತಂತ್ರ ನಡೆಯುತ್ತಿದೆ.… pic.twitter.com/5SFjJyPpyf

— Siddaramaiah (@siddaramaiah) January 2, 2026

ಸಿಎಂ ಎಕ್ಸ್‌ನಲ್ಲಿ ಏನಿದೆ?
ಚುನಾವಣಾ ಆಯೋಗದ (Election Commission) ಹಳೆಯ ಸಮೀಕ್ಷೆಯೊಂದನ್ನು ಬಳಸಿಕೊಂಡು ಜನರ ದಾರಿತಪ್ಪಿಸುವ ವ್ಯರ್ಥಪ್ರಯತ್ನ ರಾಜ್ಯದಲ್ಲಿ ವಿರೋಧಪಕ್ಷಗಳಿಂದ ನಡೆಯುತ್ತಿರುವುದು ವಿಷಾದನೀಯ. ಚುನಾವಣಾ ಅಕ್ರಮಗಳ ಬಗ್ಗೆ ನಮ್ಮ ನಾಯಕರಾದ ರಾಹುಲ್‌ ಗಾಂಧಿ (Rahul Gandhi) ಅವರು ಎತ್ತಿರುವ ಗಂಭೀರ ಪ್ರಶ್ನೆಗಳಿಗೆ ಉತ್ತರಿಸಲಾಗದೆ ಅದನ್ನು ‘ತಪ್ಪು’ ಎಂದು ಬಿಂಬಿಸುವ ಕುತಂತ್ರ ನಡೆಯುತ್ತಿದೆ. ಮಾಧ್ಯಮಗಳಲ್ಲಿ ವರದಿಯಾಗಿರುವ ಈ ಸುಳ್ಳು ಕಥನದ ವಿಶ್ವಾಸಾರ್ಹತೆಯನ್ನು ತುಸು ಆಳಕ್ಕೆ ಇಳಿದು ಪರಿಶೀಲಿಸಿದರೆ ಇದರ ಹಿಂದಿನ ದುರುದ್ದೇಶ ಸ್ಪಷ್ಟವಾಗುತ್ತದೆ.

ಮೊದಲನೆಯದಾಗಿ, ಈ ತಥಾಕಥಿತ ಸಮೀಕ್ಷೆ ರಾಜ್ಯ ಚುನಾವಣಾ ಆಯೋಗವು ಮೇ 2025ರಲ್ಲಿ ಮತದಾರರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ನಡೆಸಿದ ಸಿಸ್ಟಮ್ಯಾಟಿಕ್ ವೋಟರ್ಸ್‌ ಎಜುಕೇಷನ್ ಆ್ಯಂಡ್ ಎಲೆಕ್ಟೋರಲ್‌ ಪಾರ್ಟಿಸಿಪೇಷನ್‌ (ಸ್ವೀಪ್‌ – SWEEP) ಕಾರ್ಯಕ್ರಮದ ಒಂದು ಭಾಗವಾಗಿದೆ. ಜನರಲ್ಲಿ ಮತದಾನದ ಬಗ್ಗೆ ಅರಿವು ಮೂಡಿಸುವುದು ಇದರ ಉದ್ದೇಶವಾಗಿತ್ತೇ ಹೊರತು ಇದು ರಾಹುಲ್ ಗಾಂಧಿ ಅವರು ಆರೋಪಿಸಿರುವ ಮತಗಳ್ಳತನದ ಜನಾಭಿಪ್ರಾಯ ಸಂಗ್ರಹ ಅಲ್ಲ. ಮತದಾರರ ಜಾಗೃತಿಯ ಉದ್ದೇಶವನ್ನು ಚುನಾವಣಾ ಅಕ್ರಮದ ಕುರಿತಾದ ಜನಾಭಿಪ್ರಾಯವೆಂದು ಬಿಂಬಿಸುವುದು ಸರಿಯಲ್ಲ. ಇದು ಜನರ ದಾರಿ ತಪ್ಪಿಸುವ ದುರುದ್ದೇಶದ ರಾಜಕೀಯ ಹುನ್ನಾರವಾಗಿದೆ.

evm counting

2ನೇಯದಾಗಿ, ಸಮೀಕ್ಷೆ ನಡೆಸಲಾದ ಸಮಯವೇ ಸತ್ಯಕ್ಕೆ ಹಿಡಿದ ಕೈಗನ್ನಡಿಯಂತಿದೆ. ಸಮೀಕ್ಷೆಯನ್ನು ಮೇ 2025ರಲ್ಲಿ ನಡೆಸಲಾಗಿದೆ. ರಾಹುಲ್ ಗಾಂಧಿ ಅವರು ಚುನಾವಣಾ ಅಕ್ರಮಗಳ ಕುರಿತು ಪುರಾವೆ ಸಹಿತ ಸುದ್ದಿಗೋಷ್ಠಿ ನಡೆಸಿದ್ದು ಆಗಸ್ಟ್‌ 2025ರಲ್ಲಿ, ಅಂದರೆ ಸಮೀಕ್ಷೆಯಾದ 3 ತಿಂಗಳ ಬಳಿಕ ರಾಹುಲ್‌ ಗಾಂಧಿ ಅವರು ಮತಗಳ್ಳತನದ ವಿರುದ್ಧ ಧ್ವನಿಯೆತ್ತಿದ್ದಾರೆ. ಹಿಂದಿನ ಜನಾಭಿಪ್ರಾಯದ ಡಾಟಾವನ್ನು ಬಳಸಿಕೊಂಡು ನಂತರದ ಮತಗಳ್ಳತನದ ಆರೋಪಕ್ಕೆ ಜನಮನ್ನಣೆ ನೀಡಿಲ್ಲ ಎನ್ನುವುದು ಹಾಸ್ಯಾಸ್ಪದ. ಸತ್ಯಾಂಶವನ್ನು ಪರಿಶೀಲಿಸದೆ ಮಾಡಿರುವ ಈ ವರದಿಗೆ ಸತ್ಯಾಂಶವನ್ನು ಮರೆಮಾಚುವ ಉದ್ದೇಶವಿದ್ದಂತಿದೆ.

ಮೂರನೆಯದಾಗಿ, ಸಮೀಕ್ಷೆಯಲ್ಲಿ ಬಳಸಲಾದ ಮಾದರಿ ಪ್ರಮಾಣವು ರಾಜ್ಯದ ಜನಾಭಿಪ್ರಾಯವೆಂದು ಪರಿಗಣಿಸುವಷ್ಟು ಸಮರ್ಥನೀಯವಾಗಿಲ್ಲ. ಸುಮಾರು 5.3 ಕೋಟಿಗೂ ಹೆಚ್ಚು ವಯಸ್ಕ ಮತದಾರರನ್ನು ಹೊಂದಿರುವ ರಾಜ್ಯದಲ್ಲಿ ಕೇವಲ 5,100 ಜನರನ್ನಷ್ಟೇ ಸಮೀಕ್ಷೆಗೆ ಒಳಪಡಿಸಲಾಗಿದೆ. ಇದು ಮತದಾರರನ್ನು 0.01% ಕ್ಕಿಂತ ಕಡಿಮೆ ಪ್ರಮಾಣದಲ್ಲಿ ಪ್ರತಿನಿಧಿಸುತ್ತದೆ. ಗಂಭೀರವಾದ ವಿಷಯಕ್ಕೆ ಸಂಬಂಧಿಸಿದಂತೆ ಅಂಕಿಅಂಶಗಳನ್ನು ಸಂಗ್ರಹಿಸುವಾಗ ಇಷ್ಟು ಸಣ್ಣ ಪ್ರಮಾಣದ ಮಾದರಿಯು ಸಮೀಕ್ಷೆಯ ದೊಡ್ಡ ಲೋಪವಾಗಿದೆ. ಬೆಂಗಳೂರು ಸೆಂಟ್ರಲ್‌ ನಂತಹ ಕ್ಷೇತ್ರದಲ್ಲಿ ಮತದಾರರ ಪಟ್ಟಿಯನ್ನು ತಿರುಚಿರುವುದು ಸತ್ಯಾಂಶವಿರುವ ಆರೋಪವಾಗಿದೆ. ಅಂತಹ ಕ್ಷೇತ್ರದಲ್ಲಿ ಸಮೀಕ್ಷೆಗೆ ಒಳಪಟ್ಟಿರುವವರ ಸಂಖ್ಯೆ ಎರಡಂಕಿಯನ್ನು ದಾಟಿಲ್ಲ. ಇದನ್ನೇ ಜನರ ತೀರ್ಮಾನ ಎಂದು ಬಿಂಬಿಸುವುದು ಸಮಂಜಸವೆನಿಸುವುದಿಲ್ಲ.

ನಾಲ್ಕನೆಯದಾಗಿ, ಸಮೀಕ್ಷೆ ನಡೆಸಿದವರ ಹಿನ್ನೆಲೆಯನ್ನು ಮಾಧ್ಯಮಗಳು ಕೂಡಾ ಪರಿಶೀಲಿಸಿದಂತಿಲ್ಲ. ಈ ಸಮೀಕ್ಷೆಯನ್ನು ಡಾ. ಆರ್. ಬಾಲಸುಬ್ರಮಣ್ಯಂ ಸ್ಥಾಪಿಸಿದ GRAAM ಎಂಬ NGO ನಡೆಸಿದೆ. ಬಾಲಸುಬ್ರಮಣ್ಯಂ ಅವರು ಪ್ರಸ್ತುತ ಕೇಂದ್ರ ಸರ್ಕಾರ ನೇಮಿಸಿರುವ ಒಂದು ಹುದ್ದೆಯಲ್ಲಿದ್ದಾರೆ. ಇವರು 2024ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಬರೆದಿರುವ ಪುಸ್ತಕವನ್ನು ನೋಡಿದರೆ ಈ ಮಹಾಶಯರು ಮೋದಿಯವರ ಅಂಧ ಅಭಿಮಾನಿಯಂತೆ ಕಾಣುತ್ತಾರೆ. ಇಂತಹ ಹೊಗಳುಭಟ್ಟರು ನಡೆಸಿರುವ ಸಮೀಕ್ಷೆಯನ್ನು ಆಧರಿಸಿ ವರದಿಯನ್ನು ಸಿದ್ಧಪಡಿಸಿರುವುದಕ್ಕೆ ಯಾವ ವಿಶ್ವಾಸಾರ್ಹತೆ ಇರಲು ಸಾಧ್ಯ?

ಐದನೆಯದಾಗಿ, ಸಮೀಕ್ಷಾ ವರದಿಯನ್ನು ಉಲ್ಲೇಖಿಸಿ ಮಾಧ್ಯಮಗಳಲ್ಲಿ ಪ್ರಕಟವಾದ ವರದಿಗಳಲ್ಲಿ ಉದ್ದೇಶಪೂರ್ವಕವಾಗಿ ರಾಹುಲ್ ಗಾಂಧಿಯವರ ಆರೋಪದಲ್ಲಿ ಹುರುಳಿಲ್ಲ ಎನ್ನುವುದನ್ನು ಹೇಳಲು ಪ್ರಯತ್ನಿಸಿರುವುದು ವಿಷಾದನೀಯ. ರಾಹುಲ್‌ ಗಾಂಧಿ ಅವರು ಪ್ರಜಾಪ್ರಭುತ್ವವನ್ನಾಗಲಿ, ಚುನಾವಣೆಯನ್ನಾಗಲಿ ಪ್ರಶ್ನಿಸಿಲ್ಲ. ಅವರು ಚುನಾವಣಾ ಆಯೋಗ ಪಾರದರ್ಶಕವಾಗಿ ತಯಾರಿಸಿರುವ ಮತದಾರರ ಪಟ್ಟಿ ಮತ್ತು ಮತಗಟ್ಟೆಗಳ ಸಿಸಿಟಿವಿ ದೃಶ್ಯಗಳನ್ನು ಕೇಳಿದ್ದಾರೆ. ಇವಿಎಂನ ಕಾರ್ಯವೈಖರಿಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದಾರೆ. ಚುನಾವಣಾ ಆಯುಕ್ತರನ್ನು ನೇಮಕಗೊಳಿಸುವ ಪ್ರಕ್ರಿಯೆ ಬಗ್ಗೆ ಪ್ರಶ್ನಿಸಿದ್ದಾರೆ. ಆದರೆ ಈ ಯಾವ ಪ್ರಶ್ನೆಗಳಿಗೂ ಚುನಾವಣಾ ಆಯೋಗ ಸಮಂಜಸ ಉತ್ತರವನ್ನು ಕೊಟ್ಟಿಲ್ಲ.

ಅಂತಿಮವಾಗಿ, ಮತಗಳವು ಒಂದು ಘೋಷಣೆಯಲ್ಲ. ಅದು ಆರೋಪಪಟ್ಟಿ. ಆಳಂದದಲ್ಲಿ ಸುಮಾರು 5,994 ಅಧಿಕೃತ ಮತದಾರರ ಹೆಸರನ್ನು ಮತದಾರರ ಪಟ್ಟಿಯಿಂದ ಅಳಿಸಲು ಪ್ರಯತ್ನಿಸಿರುವ ಆರೋಪಕ್ಕೆ ಸಂಬಂಧಿಸಿ ತನಿಖೆ ನಡೆಸಿದ ಎಸ್ಐಟಿ 22,000 ಪುಟಗಳ ಆರೋಪಪಟ್ಟಿಯನ್ನು ಸಲ್ಲಿಸಿದೆ. ಅದರಲ್ಲಿ ಪಕ್ಷದ ಮಾಜಿ ಶಾಸಕರು ಸೇರಿದಂತೆ 7 ಮಂದಿ ಆರೋಪಿಗಳಿದ್ದಾರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿದ್ದರೂ ಆರೋಪದ ಕುರಿತು ರಾಜ್ಯ ಸರ್ಕಾರವು ಎಸ್ಐಟಿ ತನಿಖೆಯನ್ನು ನಡೆಸಿದೆ. ಆರೋಪವನ್ನು ಮರೆಮಾಚಲು ಚುನಾವಣಾ ಆಯೋಗವೇ ವ್ಯವಸ್ಥಿತವಾಗಿ ಪ್ರಯತ್ನಿಸಿರುವುದು ಕಂಡುಬಂದಿದೆ.

ಚುನಾವಣಾ ಆಯೋಗ ದುರುದ್ದೇಶದಿಂದ ಸಂಶಾಯಸ್ಪದ ಸಂಸ್ಥೆಯ ಮೂಲಕ ನಡೆಸಿರುವ ದೋಷಪೂರಿತ ಸಮೀಕ್ಷೆಯ ವರದಿಯನ್ನು ಬಳಸಿಕೊಂಡು ನಂತರದ ದಿನಗಳಲ್ಲಿ ರಾಹುಲ್ ಗಾಂಧಿಯವರು ಪತ್ರಿಕಾಗೋಷ್ಠಿಯಲ್ಲಿ ಮಾಡಿರುವ ಆರೋಪಗಳನ್ನು ಮುಚ್ಚಿಹಾಕಲು ಸಾಧ್ಯ ಇಲ್ಲ ಎನ್ನುವುದನ್ನು ಭಾರತೀಯ ಜನತಾ ಪಕ್ಷ ಅರ್ಥಮಾಡಿಕೊಳ್ಳಬೇಕು.

ಮೇಲ್ನೋಟದಲ್ಲಿಯೇ ಸ್ಪಷ್ಟವಾಗಿ ಕಾಣುವಂತೆ, ರಾಜಕೀಯ ದುರುದ್ದೇಶದಿಂದಲೇ ಮಾಡಲಾಗಿರುವ ಸಮೀಕ್ಷೆಯ ಒಳ-ಹೊರಗನ್ನು ಸೂಕ್ಷ್ಮವಾಗಿ ಪರಿಶೀಲಿಸದೆ, ಅದರ ಗುಪ್ತ ಅಜೆಂಡಾವನ್ನು ಅರ್ಥಮಾಡಿಕೊಳ್ಳದೆ, ಆ ವರದಿಯ ಕೆಲವು ಭಾಗಗಳನ್ನಷ್ಟೇ ಹೆಕ್ಕಿ ತೆಗೆಯಲಾಗಿದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

TAGGED:Congress Governmentevmkarnatakanarendra modiRahul GandhisiddaramaiahVote TheftVoting Machinesಇವಿಎಂ ಸಮೀಕ್ಷೆನರೇಂದ್ರ ಮೋದಿಬೆಂಗಳೂರುಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post
rishab shetty public tv anniversary
ಪಬ್ಲಿಕ್‌ ಟಿವಿಗೆ ಇನ್ನೂ ಟೀನೇಜ್‌, ರಂಗಣ್ಣ ಸರ್‌ ಈ ಸಮಾಜಕ್ಕೆ ದೊಡ್ಡ ಕೊಡುಗೆ: ರಿಷಬ್‌ ಶೆಟ್ಟಿ
Bengaluru City Cinema Latest Main Post Sandalwood
Sathish Ninasam Public TV Anniversary
ಆಟೋ ಡ್ರೈವರ್‌ಗಳಿಂದ ಕಾರಿನಲ್ಲಿ ಓಡಾಡೋರು ನಿಮ್ಮನ್ನ ಇಷ್ಟ ಪಡ್ತಾರೆ, ರಂಗಣ್ಣ ಸರ್‌ ಮಾಸ್‌ ಹೀರೋ: ನೀನಾಸಂ ಸತೀಶ್‌ ಬಣ್ಣನೆ
Bengaluru City Cinema Latest Main Post Sandalwood

You Might Also Like

Girinagara
Latest

ಬೆಂಗ್ಳೂರಲ್ಲೊಂದು ʻಲಕ್ಕಿ ಭಾಸ್ಕರ್ʼ ಸಿನಿ ಸ್ಟೋರಿ – ಬ್ಯಾಂಕ್‌ನಿಂದ 2.78 ಕೆಜಿ ಚಿನ್ನಾಭರಣ ಕಳವು

Public TV
By Public TV
1 minute ago
Bilwapatre Shivalinga
Karnataka

ಶಿವನ ಆರಾಧನೆಯ ಪವಿತ್ರ ಶ್ಲೋಕ ʻಬಿಲ್ವಾಷ್ಟಕಂʼ ಮಹತ್ವವೇನು?

Public TV
By Public TV
20 minutes ago
FBI
Latest

ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ಪ್ರಕರಣ – ತಪ್ಪೊಪ್ಪಿಕೊಂಡ ಭಾರತೀಯ ವ್ಯಕ್ತಿ; 40 ವರ್ಷ ಜೈಲು ಸಾಧ್ಯತೆ

Public TV
By Public TV
27 minutes ago
Byrati Basavaraj 1
Bengaluru City

ಇಸಿಜಿಯಲ್ಲಿ ವ್ಯತ್ಯಾಸ – ಶಾಸಕ ಬೈರತಿ ಬಸವರಾಜ್‌ಗೆ ಜಯದೇವದಲ್ಲಿ ಆಂಜಿಯೋಗ್ರಾಂ?

Public TV
By Public TV
49 minutes ago
LOVE LETTER 1
Latest

ಹೂ ಅರಳೋಕೆ ಶುಭ ಅಶುಭಗಳ ಮುಹೂರ್ತವೇ ಇಲ್ಲ..!

Public TV
By Public TV
2 hours ago
Youngest Organ Donor 2
Latest

ಜಗತ್ತು ನೋಡದ ಮಗುವಿನಿಂದ 5 ಮಕ್ಕಳಿಗೆ ಜೀವದಾನ; ಕೇರಳದಲ್ಲಿ ಅತೀ ಕಿರಿಯ ಅಂಗಾಂಗ ದಾನಿ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?