Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಂಬರೀಶ್ ಶ್ರದ್ಧಾಂಜಲಿ- ವೇದಿಕೆಯಲ್ಲೇ ಎಚ್‍ಡಿಕೆಗೆ ಸಿದ್ದರಾಮಯ್ಯ ಮನವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಂಬರೀಶ್ ಶ್ರದ್ಧಾಂಜಲಿ- ವೇದಿಕೆಯಲ್ಲೇ ಎಚ್‍ಡಿಕೆಗೆ ಸಿದ್ದರಾಮಯ್ಯ ಮನವಿ

Bengaluru City

ಅಂಬರೀಶ್ ಶ್ರದ್ಧಾಂಜಲಿ- ವೇದಿಕೆಯಲ್ಲೇ ಎಚ್‍ಡಿಕೆಗೆ ಸಿದ್ದರಾಮಯ್ಯ ಮನವಿ

Public TV
Last updated: November 30, 2018 12:46 pm
Public TV
Share
2 Min Read
SIDDU HDK
SHARE

ಬೆಂಗಳೂರು: ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿಯವರೇ ನೀವು ರಾಮನಗರದಲ್ಲಿ ಫಿಲಂ ಸಿಟಿ ಮಾಡಬೇಕು ಅಂತ ಆಸೆ ಇಟ್ಟುಕೊಂಡಿದ್ದೀರಾ. ಆದ್ರೆ ಅದನ್ನು ಅಂಬಿ ಆಸೆಯಂತೆ ಮೈಸೂರಿನಲ್ಲಿ ಮಾಡಿ ಅಂತ ಮಾಜಿ ಮುಖ್ಯಮಂತ್ರಿ  ಸಿದ್ದರಾಮಯ್ಯ ಮನವಿ ಮಾಡಿಕೊಂಡಿದ್ದಾರೆ.

ಇಂದು ಚಲನಚಿತ್ರ ವಾಣಿಜ್ಯ ಮಂಡಳಿ ವತಿಯಿಂದ ಅಂಬೇಡ್ಕರ್ ಭವನದಲ್ಲಿ ಅಗಲಿದ ಅಂಬರೀಶ್ ಅವರಿಗೆ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ ವೇದಿಕೆಯಲ್ಲೇ ಎಚ್‍ಡಿಕೆಯಲ್ಲಿ ಮನವಿ ಮಾಡಿಕೊಂಡರು.

AMBI 3

ನನ್ನ ಬಳಿ ಅಂಬರೀಶ್ ಅವರು ಫಿಲಂ ಸಿಟಿ ಮೈಸೂರಿನಲ್ಲಿ ಆಗಬೇಕು ಅಂತ ಹೇಳಿದ್ದರು. ಅದಕ್ಕೆ ನಮ್ಮ ಕ್ಷೇತ್ರ ಹುಳಿಮಾವು ಬಳಿ ನಾನು ಜಾಗವನ್ನು ಕೂಡ ಕೊಟ್ಟಿದ್ದೇನೆ. ಅಲ್ಲದೇ ಆ ಫಿಲಂ ಸಿಟಿಗೆ ಅಂಬರೀಶ್ ಅವರ ಹೆಸರನ್ನೇ ಇಡಿ. ಈ ಮೂಲಕ ಅವರ ಹೆಸರು ಶಾಸ್ವತವಾಗಿ ಉಳಿಯಲು ಸಾಧ್ಯ ಅಂತ ಹೇಳಿದ್ರು.

ಅಂಬರೀಶ್ ಅವರ ಮಾತು ಬಹಳ ಒರಟು. ಆದ್ರೆ ಅವರ ಜೊತೆಯಲ್ಲಿ ಸ್ವಲ್ಪ ಸಮಯ ಕಳೆದ್ರೆ, ಅವರ ಹೃದಯ ಎಷ್ಟು ಮೃದುವಾಗಿತ್ತು ಹಾಗೂ ಎಷ್ಟು ಸ್ನೇಹಮಯವಾಗಿತ್ತು ಅನ್ನೋದು ಅರ್ಥವಾಗುತ್ತದೆ. ಸ್ನೇಹದಲ್ಲಿ ಅಂಬರೀಶ್ ಅವರಿಗೆ ಶ್ರೀಮಂತರಿರಲಿ, ಬಡವರಿರಲಿ ತಾರತಮ್ಯ ಇರಲಿಲ್ಲ. ಸಣ್ಣವರಿಂದ ಹಿಡಿದು ಅವರು ಎಷ್ಟೇ ಎತ್ತರದವರಾಗಿದ್ದರೂ ಕೂಡ ಒಂದೇ ರೀತಿಯ ಸ್ನೇಹ ಅವರಲ್ಲಿತ್ತು. ಅದು ಅವರ ವಿಶೇಷತೆಯಾಗಿತ್ತು. ಅದು ಒಂದು ಮಾನವೀಯ ಗುಣ ಕೂಡ ಆಗಿತ್ತು. ಮನುಷ್ಯ ಮನುಷ್ಯನನ್ನು ಪ್ರೀತಿಸಬೇಕು. ಅದು ಎಲ್ಲರಿಗೂ ಬರಬೇಕಾದಂತಹ ಒಂದು ಸ್ವಭಾವವಾಗಿದೆ. ಆಗ ಮಾತ್ರ ಸಮಾಜದಲ್ಲಿ ನಾವು ಸಹಬಾಳ್ವೆ, ಸಾಮರಸ್ಯ ಕಾಣಲು ಸಾಧ್ಯ. ಇಂತಹ ಒಬ್ಬ ಸ್ನೇಹಜೀವಿ ಅಂಬರೀಶ್ ಆಗಿದ್ದರು ಅಂತ ಹೇಳಿದ್ರು.

vlcsnap 2018 11 30 11h50m50s46

ಪುಟ್ಟಣ್ಣ ಕಣಗಲ್ ನಿರ್ದೇಶನದ ನಾಗರಹಾವು ಚಿತ್ರದಲ್ಲಿ ಜಲೀಲ್ ಪಾತ್ರ ಮಾಡಲು ಅಂಬರೀಶ್ ಆಯ್ಕೆಯಾಗಿದ್ದರು. ನಾನು ಅವರನ್ನು ಭೇಟಿ ಮಾಡುವ ಸಮಯಕ್ಕೆ ಅಂಬರೀಶ್, ನಾಗರಹಾವು ಚಿತ್ರದಲ್ಲಿ ಅಭಿನಯ ಮಾಡಿಬಿಟ್ಟಿದ್ದಾರೆ. ಹೀಗಾಗಿ ಅಂಬಿಗೆ ಅದು ಕೂಡ ಬಯಸಿ ಬಂದಿದ್ದಲ್ಲ. ಆದ್ರೆ ಅವರಿಗೆ ಆ ಕ್ಷೇತ್ರದಲ್ಲಿ(ಕನ್ನಡ ಚಿತ್ರರಂಗ) ಬಹಳ ಎತ್ತರಕ್ಕೆ ಬೆಳೆದ್ರು. 200ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ಅಭಿನಯಿಸಿದ್ದಾರೆ ಅಂದ್ರು.

ರಾಜಕಾರಣಕ್ಕೂ ಅಂಬರೀಶ್ ಅವರು ಬಯಸಿ ಬಂದಿಲ್ಲ. ದೇವೇಗೌಡರು ಜನತಾದಳದ ಅಧ್ಯಕ್ಷರಾಗಿದ್ದರು. ಅಲ್ಲದೇ ಪ್ರಧಾನಮಂತ್ರಿಗಳಾಗಿದ್ದ ಸಂದರ್ಭದಲ್ಲಿ ಅಂಬರೀಶ್ ರಾಜಕೀಯ ಪ್ರವೇಶ ಮಾಡಿದ್ರು ಅಂತ ಮಾಜಿ ಸಿಎಂ, ಅಂಬರೀಶ್ ಅವರ ಹಳೆಯ ನೆನಪುಗಳನ್ನು ಮೆಲುಕು ಹಾಕಿದ್ರು.

ಮನವಿ ಸ್ವೀಕರಿಸಿದ ಎಚ್‍ಡಿಕೆ:
ಮೈಸೂರಿನಲ್ಲೇ ಫಿಲಂ ಸಿಟಿ ಮಾಡುವ ಸಿದ್ದರಾಮಯ್ಯ ಅವರ ಮನವಿಯನ್ನು ಎಚ್‍ಡಿಕೆ ಸ್ವೀಕರಿಸಿದ್ದಾರೆ. ಮೈಸೂರಿನಲ್ಲೇ ಫಿಲಂ ಸಿಟಿ ಮಾಡುವುದಾಗಿ ವೇದಿಕೆಯಲ್ಲೇ ಘೋಷಣೆ ಮಾಡಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

TAGGED:Ambareeshbengaluruformer cmPublic TVsandalwoodsiddaramaiahTributeಅಂಬರೀಶ್ಪಬ್ಲಿಕ್ ಟಿವಿಬೆಂಗಳೂರುಮಾಜಿ ಸಿಎಂಶ್ರದ್ಧಾಂಜಲಿಸಿದ್ದರಾಮಯ್ಯಸ್ಯಾಂಡಲ್ ವುಡ್
Share This Article
Facebook Whatsapp Whatsapp Telegram

Cinema news

chetan 13 5
ರಾಜ್‌ಕುಮಾರ್‌ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿಯೇ? – ನಟ‌ ಚೇತನ್ ವಿರುದ್ಧ ಡಾಕ್ಟರ್ ರಾಜ್‌ ಅಭಿಮಾನಿಗಳಿಂದ ದೂರು
Bengaluru City Cinema Latest Sandalwood Top Stories
Akshay Kumar 1
ನಟ ಅಕ್ಷಯ್ ಕುಮಾರ್ ಅಪ್ರಾಪ್ತ ಪುತ್ರಿಯ ಬೆತ್ತಲೆ ಫೋಟೋಗೆ ಬೇಡಿಕೆಯಿಟ್ಟಿದ್ದ ವ್ಯಕ್ತಿ ಅರೆಸ್ಟ್
Bollywood Cinema Crime Latest Top Stories
ranveer singh 2
ದೈವಕ್ಕೆ ಅಪಮಾನ – ಇನ್ಮುಂದೆ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲ್ಲ: ಕ್ಷಮೆಯಾಚಿಸಿದ ರಣವೀರ್ ಸಿಂಗ್
Cinema Court Latest South cinema Top Stories
Monalisa
ಕುಂಭಮೇಳದ ವೈರಲ್ ಹುಡುಗಿ ಮೊನಾಲಿಸಾ ಈಗ ಗರ್ಭಿಣಿ
Cinema Latest Main Post National

You Might Also Like

Soul of Bengaluru
Bengaluru City

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ‘ಬೆಂಗಳೂರಿನ ಆತ್ಮ’ ಶಿಲ್ಪ ಅನಾವರಣ – ಟರ್ಮಿನಲ್ 2ರ ಸೌಂದರ್ಯಕ್ಕೆ ಹೊಸ ಮೆರುಗು

Public TV
By Public TV
3 minutes ago
Hangal Taluk Hospital Haveri Fire Accident
Districts

ಹಾನಗಲ್ ತಾಲೂಕು ಆಸ್ಪತ್ರೆಯಲ್ಲಿ ಅಗ್ನಿ ಅವಘಡ – 1 ಕೋಟಿ ರೂ. ಮೌಲ್ಯದ ಔಷಧಿ, ಮಾತ್ರೆಗಳು ಭಸ್ಮ

Public TV
By Public TV
17 minutes ago
DRINKING WATER 1
Bagalkot

ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರು ಒದಗಿಸಲು ತುರ್ತು ಅನುದಾನ ಬಿಡುಗಡೆ – ಯಾವ ಜಿಲ್ಲೆಗೆ ಎಷ್ಟು?

Public TV
By Public TV
47 minutes ago
Shreyas Iyer 5
Cricket

ಕನ್ನಡಿಗ ಕೆಎಲ್‌ ರಾಹುಲ್‌ ರೆಕಾರ್ಡ್‌ ಆಟ ವ್ಯರ್ಥ – ಡೆಲ್ಲಿ ವಿರುದ್ಧ ಪಂಜಾಬ್‌ಗೆ 6 ವಿಕೆಟ್‌ಗಳ ಜಯ

Public TV
By Public TV
1 hour ago
Public TV Vidhyapeeta 5
Bengaluru City

ಪಬ್ಲಿಕ್‌ ಟಿವಿ ವಿದ್ಯಾಪೀಠಕ್ಕೆ ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್ – ಅದೃಷ್ಟವಂತ ವಿದ್ಯಾರ್ಥಿಗಳಿಗೆ ಬೈಸಿಕಲ್, ಲ್ಯಾಪ್‌ಟಾಪ್‌ ಗಿಫ್ಟ್‌

Public TV
By Public TV
1 hour ago
lungi ngidi Injury
Cricket

ಕ್ಯಾಚ್‌ ಹಿಡಿಯುವಾಗ ಕೆಳಗೆ ಬಿದ್ದ ಲುಂಗಿ ಎನ್‌ಗಿಡಿ ತಲೆಗೆ ತೀವ್ರ ಪೆಟ್ಟು – ಮೈದಾನಕ್ಕೆ ಬಂತು ಅಂಬುಲೆನ್ಸ್‌

Public TV
By Public TV
3 hours ago

Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?