Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಭ್ರಷ್ಟಾಚಾರ, ದುರಾಡಳಿತದಿಂದ ಬಿಜೆಪಿ ಸರ್ಕಾರ ನಿತ್ಯ ಬೆತ್ತಲೆ ಆಗುತ್ತಿದೆ: ಸಿದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಭ್ರಷ್ಟಾಚಾರ, ದುರಾಡಳಿತದಿಂದ ಬಿಜೆಪಿ ಸರ್ಕಾರ ನಿತ್ಯ ಬೆತ್ತಲೆ ಆಗುತ್ತಿದೆ: ಸಿದ್ದು

Bengaluru City

ಭ್ರಷ್ಟಾಚಾರ, ದುರಾಡಳಿತದಿಂದ ಬಿಜೆಪಿ ಸರ್ಕಾರ ನಿತ್ಯ ಬೆತ್ತಲೆ ಆಗುತ್ತಿದೆ: ಸಿದ್ದು

Public TV
Last updated: May 13, 2022 11:45 am
Public TV
Share
2 Min Read
Siddaramaiah
SHARE

ಬೆಂಗಳೂರು: ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬೆತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸುತ್ತಿದೆ ಎಂದು ವಿರೋಧ ಪಕ್ಷದ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರೋಧ ವಾಗ್ದಾಳಿ ಮಾಡಿದರು.

ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಲು ಹೊರಟಿರುವ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ(ಮತಾಂತರ ನಿಷೇಧ) ಕಾಯ್ದೆ ಬಗ್ಗೆ  ಸಿದ್ದರಾಮಯ್ಯ ಅವರು ಮಾಧ್ಯಮ ಹೇಳಿಕೆ ನೀಡಿದರು. ಭ್ರಷ್ಟಾಚಾರ ಮತ್ತು ದುರಾಡಳಿತದಿಂದ ನಿತ್ಯ ಬೆತ್ತಲೆ ಆಗುತ್ತಿರುವ ರಾಜ್ಯದ ಬಿಜೆಪಿ ಸರ್ಕಾರ ಧಾರ್ಮಿಕ ಭಾವನೆ ಕೆರಳಿಸುತ್ತಿದೆ. ಜನರ ಗಮನ ಬೇರೆಡೆ ಸೆಳೆಯುವ ದುರುದ್ದೇಶದಿಂದ ಸುಗ್ರಿವಾಜ್ಞೆ ಮೂಲಕ ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ(ಮತಾಂತರ ನಿಷೇಧ) ಕಾಯ್ದೆ ಜಾರಿಗೊಳಿಸಲು ಹೊರಟಿದೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಜನರು ಕಡಿಮೆ ನಾಟಕವನ್ನು ಬಯಸಿದ್ದರಿಂದ ಬೈಡನ್ ಆಯ್ಕೆಯಾದರು: ಟ್ರಂಪ್‌ ಕಾಲೆಳೆದ ಮಸ್ಕ್ 

BJP CONGRESS FLAG

ಅಲ್ಪಸಂಖ್ಯಾತ ಸಮುದಾಯವನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶದಿಂದ ಈ ಕಾಯ್ದೆಯನ್ನು ಜಾರಿ ಮಾಡಲಾಗುತ್ತಿದೆ. ಅದಕ್ಕೆ ಮತಾಂತರ ನಿಷೇಧ ಕಾಯ್ದೆ ಜಾರಿಯ ಸುಗ್ರೀವಾಜ್ಞೆಯನ್ನು ತಿರಸ್ಕರಿಸಬೇಕೆಂದು ರಾಜ್ಯದ ಘನತೆವೆತ್ತ ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇನೆ ಎಂದರು.

ಆಮಿಷ, ಒತ್ತಡ, ಬೆದರಿಕೆಗಳ ಮೂಲಕ ನಡೆಯುವ ಬಲತ್ಕಾರದ ಮತಾಂತರಗಳನ್ನು ತಡೆಯಲು ನಮ್ಮ ಕಾನೂನು ಸಶಕ್ತವಾಗಿದೆ. ಹೀಗಿದ್ದಾಗ ಹೊಸ ಕಾಯ್ದೆಯ ಅವಶ್ಯಕತೆ ಏನಿದೆ? ಅಲ್ಪಸಂಖ್ಯಾತರನ್ನು ಬೆದರಿಸುವ ಮತ್ತು ಅವರಿಗೆ ಕಿರುಕುಳ ನೀಡುವ ದುರುದ್ದೇಶವಲ್ಲದೆ ಈ ಕಾಯ್ದೆಗೆ ಬೇರೆ ಸದುದ್ದೇಶಗಳೇನಿದೆ ಎಂದು ಪ್ರಶ್ನಿಸಿದರು.

ಸಹಬಾಳ್ವೆ-ಸೌಹಾರ್ದತಾ ಪರಂಪರೆಯ ಹಿಂದೂ ಧರ್ಮದ ನೈಜ ಅನುಯಾಯಿಗಳು ಯಾರೂ ಇಂತಹದ್ದೊಂದು ಅನಗತ್ಯ ಕಾಯ್ದೆಗೆ ಒತ್ತಾಯಿಸಿಲ್ಲ. ಇದನ್ನು ಒಪ್ಪುವುದೂ ಇಲ್ಲ. ಇದು ಸಂಘ ಪರಿವಾರದ ರಾಜಕೀಯ ಹಿಂದುತ್ವದ ಅಜೆಂಡಾ ಆಗಿದೆ. ಇದನ್ನು ಸಹೃದಯ ಹಿಂದೂ ಬಾಂಧವರೆಲ್ಲರೂ ಖಂಡಿಸಬೇಕು ಎಂದರು.

BASAVARAJ BOMMAI

ಬಿಜೆಪಿ ಅಧಿಕಾರಕ್ಕೆ ಬಂದಾಗೆಲ್ಲ ಅಲ್ಪಸಂಖ್ಯಾತರು ಮತ್ತು ಅವರ ಪೂಜಾಸ್ಥಳಗಳ ಮೇಲೆ ದಾಳಿ ನಡೆಯವುದಕ್ಕೆ ದೇಶ ಸಾಕ್ಷಿಯಾಗಿದೆ. ಕರ್ನಾಟಕದಲ್ಲಿ ಚರ್ಚ್‍ಗಳ ಮೇಲೆ ನಡೆದಿರುವ ದಾಳಿಯಿಂದ ರಾಜ್ಯದ ಜನತೆ ತಲೆತಗ್ಗಿಸುವಂತಾಗಿದೆ. ತರಾತುರಿಯ ಮತಾಂತರ ನಿಷೇಧ ಕಾಯ್ದೆ ದುಷ್ಕರ್ಮಿಗಳ ಕೈಗೆ ನೀಡುವ ಆಯುಧವಾ ಎಂದು ಸಿಎಂ ಬೊಮ್ಮಾಯಿ ಅವರಿಗೆ ಪ್ರಶ್ನೆ ಕೇಳಿದರು.

ಸ್ವಯೀಚ್ಛೆಯಿಂದ ಮತಾಂತರಗೊಳ್ಳುವ ಹಕ್ಕುನ್ನು ಸಂವಿಧಾನವೇ ನೀಡಿದೆ. ಇದರ ಹೊರತಾದ ಮತಾಂತರ ತಡೆಯಲು ಕಾನೂನು ಇದೆ. ಇರುವ ಕಾನೂನನ್ನು ಜಾರಿಗೆ ತರುವ ಪೊಲೀಸ್ ಇಲಾಖೆ ಮತ್ತು ತಪ್ಪು-ಒಪ್ಪುಗಳ ನ್ಯಾಯ ಒದಗಿಸುವ ನ್ಯಾಯಾಂಗದ ಮೇಲೆ ರಾಜ್ಯ ಸರ್ಕಾರಕ್ಕೆ ನಂಬಿಕೆ ಇಲ್ಲವೇ? ಎಂದು ಕಿಡಿಕಾರಿದರು. ಇದನ್ನೂ ಓದಿ: ಮಹಿಳೆಯರ ಮೇಲೆ ತಾಲಿಬಾನ್ ವಿಧಿಸುತ್ತಿರುವ ನಿರ್ಬಂಧ ಖಂಡಿಸಿದ G7

ಕರ್ನಾಟಕ ಧಾರ್ಮಿಕ ಹಕ್ಕು ಸಂರಕ್ಷಣಾ ಕಾಯ್ದೆಯ ದುರುಪಯೋಗವನ್ನು ತಡೆಯಲು ಕಾಂಗ್ರೆಸ್ ಪಕ್ಷ ಖಂಡಿತ ಅವಕಾಶ ನೀಡುವುದಿಲ್ಲ. ಅನ್ಯಾಯ-ದೌರ್ಜನ್ಯಕ್ಕೊಳಗಾಗುವ ಪ್ರತಿಯೊಬ್ಬ ಅಲ್ಪಸಂಖ್ಯಾತ ಬಂಧುವಿನ ಜೊತೆ ನಮ್ಮ ಪಕ್ಷ ನಿಲ್ಲುತ್ತೆ. ಈ ಕಾಯ್ದೆಯ ವಿರುದ್ಧ ನಮ್ಮ ಪಕ್ಷ ಜನಾಂದೋಲನ ನಡೆಸಲಿದೆ ಎಂದು ತಿಳಿಸಿದರು.

TAGGED:Bangalorebjpcongressconversion bansiddaramaiahಕಾಂಗ್ರೆಸ್ಬಿಜೆಪಿಬೆಂಗಳೂರುಮತಾಂತರ ನಿಷೇಧಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

Hassan Accident Priya
Crime

ಹೆಲ್ಮೆಟ್ ಧರಿಸದೇ ಬುಲೆಟ್‌ ಚಲಾಯಿಸುತ್ತಾ ಜಾಲಿ ರೈಡ್ – ಯುವತಿ ಸಾವು

Public TV
By Public TV
32 seconds ago
chikkamagaluru bandh
Chikkamagaluru

ಕಾಡಾನೆ ದಾಳಿಗೆ ಮಹಿಳೆ ಬಲಿ ಕೇಸ್ – ಚಿಕ್ಕಮಗಳೂರು ಕೊತಕೊತ; ಮುಚ್ಚಿದ ಅಂಗಡಿಗಳು, ರಸ್ತೆಗಳು ಖಾಲಿ ಖಾಲಿ

Public TV
By Public TV
42 minutes ago
Snehamayi Krishna 2
Bengaluru City

ಸ್ನೇಹಿಮಯಿ ಕೃಷ್ಣ ವಿರುದ್ಧ ಮತ್ತೊಂದು ಎಫ್‌ಐಆರ್

Public TV
By Public TV
1 hour ago
Sringeri Bandh
Chikkamagaluru

ರೈತ ಹೋರಾಟಗಾರರ ಮೇಲೆ ಪೊಲೀಸರ ಲಾಠಿಚಾರ್ಜ್‌ – ಇಂದು ಶೃಂಗೇರಿ, ಕೊಪ್ಪ, ಎನ್.ಆರ್ ಪುರ ಬಂದ್

Public TV
By Public TV
2 hours ago
Powerful Drug Lord El Mencho
Latest

‘ಪವರ್‌ಫುಲ್‌ ಡ್ರಗ್ಸ್‌ ಲಾರ್ಡ್‌’ ಎಲ್‌ ಮೆಂಚೊಗೆ ಗುಂಡಿಕ್ಕಿ ಹತ್ಯೆಗೈದ ಮೆಕ್ಸಿಕನ್‌ ಸೇನೆ

Public TV
By Public TV
2 hours ago
mukul roy
Latest

ಮಾಜಿ ರೈಲ್ವೆ ಸಚಿವ, ಬಂಗಾಳದ ‘ರಾಜಕೀಯದ ಚಾಣಕ್ಯ’ ಮುಕುಲ್ ರಾಯ್ ನಿಧನ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?