Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • Live TV
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ದಲಿತರ ಬಗ್ಗೆ ಮಾತಾಡೋ ನೈತಿಕತೆ ಬಿಜೆಪಿಯವರಿಗೆ ಇಲ್ಲ – ಸಿದ್ದರಾಮಯ್ಯ

Public TV
Last updated: August 22, 2024 4:21 pm
Public TV
Share
3 Min Read
siddaramaiah 5
SHARE

ಬೆಂಗಳೂರು: ದಲಿತ ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ಅವಹೇಳನಕಾರಿ ಮಾತು ಆಡ್ತಿದೆ, ಹೋರಾಟ ಮಾಡ್ತಿದೆ ಎಂಬ ಬಿಜೆಪಿ ಪ್ರತಿಭಟನೆಗೆ (BJP Protest) ಸಿಎಂ ಸಿದ್ದರಾಮಯ್ಯ (Siddaramaiah) ತಿರುಗೇಟು ನೀಡಿದ್ದಾರೆ. ಸಾಮಾಜಿಕ ಜಾಲತಾಣದ ಮೂಲಕ ಬಿಜೆಪಿಗೆ ತಿರುಗೇಟು ಕೊಟ್ಟಿರುವ ಸಿಎಂ ಬಿಜೆಪಿ ದಲಿತ ವಿರೋಧಿ ಅಂತ ಕಿಡಿಕಾರಿದ್ದಾರೆ.

ದಲಿತರನ್ನು ಬಳಸಿ ಬಿಸಾಡುವ @BJP4India ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್…

— Siddaramaiah (@siddaramaiah) August 22, 2024

ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋಟ್‌ (Thawar chand Gehlot) ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ ಬಿಜೆಪಿ ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ಹಿಂದೂಗಳಲ್ಲಿ (Hindu) ಜಾತಿಯೇ ಇಲ್ಲ, ಧರ್ಮವೇ ಎಲ್ಲ ಎಂದು ಉಪದೇಶ ಮಾಡುತ್ತಿರುವ ಬಿಜೆಪಿ ನಾಯಕರ ಬುಡಕ್ಕೆ ನೀರು ಬಂದಾಗ ಜಾತಿ ನೆನಪಾಗುತ್ತದೆ. ರಾಜ್ಯಪಾಲರಿಗೆ ಅವಮಾನವಾಗಿದೆ ಎಂದು ಪ್ರತಿಭಟಿಸುತ್ತಿರುವ ರಾಜ್ಯದ ಬಿಜೆಪಿ ನಾಯಕರಿಗೆ ನನ್ನ ಕೆಲವು ಸರಳ ಪ್ರಶ್ನೆಗಳಿವೆ. ಇದನ್ನೂ ಓದಿ: ಟ್ರೈನಿ ವೈದ್ಯೆ ಮೇಲೆ ನಡೆದಿರೋದು ಗ್ಯಾಂಗ್‌ ರೇಪ್‌ ಅಲ್ಲ – ಪ್ರಾಥಮಿಕ ತನಿಖೆ ಬಳಿಕ CBI ಮೂಲಗಳಿಂದ ಮಾಹಿತಿ

ರಾಜ್ಯದ ಘನತೆವೆತ್ತ ರಾಜ್ಯಪಾಲರಾಗಿರುವ ಥಾವರ್ ಚಂದ್ ಗೆಹ್ಲೋತ್ ಅವರ ತಪ್ಪು ನಡೆಯ ಬಗೆಗಿನ ನಮ್ಮ ಪ್ರಶ್ನೆಗಳಿಗೆ ಉತ್ತರ ನೀಡಲಾಗದ ರಾಜ್ಯದ @BJP4Karnataka ನಾಯಕರು “ದಲಿತ ಗುರಾಣಿ” ಬಳಸುತ್ತಿರುವುದು ಸಮಸ್ತ ಸ್ವಾಭಿಮಾನಿ ದಲಿತ ಸಮುದಾಯಕ್ಕೆ ಮಾಡಿರುವ ಅವಮಾನವಾಗಿದೆ. ‘ಹಿಂದುಗಳಲ್ಲಿ ಜಾತಿಯೇ ಇಲ್ಲ, ಧರ್ಮವೇ ಎಲ್ಲ’ ಎಂದು ಉಪದೇಶ ಮಾಡುತ್ತಿರುವ…

— Siddaramaiah (@siddaramaiah) August 22, 2024

ಮೊದಲನೆಯದಾಗಿ ದಲಿತ ಸಮುದಾಯಕ್ಕೆ (Dalits Community) ಸೇರಿರುವ ಥಾವರಚಂದ್ ಗೆಹ್ಲೋಟ್‌ ಅವರ ಬಗ್ಗೆ ನಿಮ್ಮಲ್ಲಿ ಅಷ್ಟೊಂದು ಗೌರವ ಮತ್ತು ಅಭಿಮಾನವಿದ್ದರೇ ಕೇಂದ್ರ ಸಚಿವ ಸಂಪುಟದಲ್ಲಿರಬೇಕಾಗಿದ್ದ ಅವರನ್ನು ಇಲ್ಲಿ ತಂದು ಪಂಜರದ ಗಿಣಿಯನ್ನಾಗಿ ಯಾಕೆ ಮಾಡಿದ್ದೀರಿ? ಮಾರ್ಗದರ್ಶಕ ಮಂಡಳಿ ಎಂಬ ವನವಾಸಾಶ್ರಮ ಸೇರುವಷ್ಟು ವಯಸ್ಸಾಗದೇ ಇದ್ದರೂ ಅವರ ಸಕ್ರಿಯ ರಾಜಕೀಯ ಜೀವನವನ್ನು ಯಾಕೆ ಮೊಟಕುಗೊಳಿಸಿದಿರಿ? ಕೇಂದ್ರ ಸಚಿವ ಸ್ಥಾನದಿಂದ ವಂಚಿತರನ್ನಾಗಿ ಮಾಡಿ, ತಮ್ಮ ರಾಜಕೀಯ ವಿರೋಧಿಗಳ ವಿರುದ್ಧದ ದ್ವೇಷದ ರಾಜಕಾರಣಕ್ಕೆ ದಲಿತ ಸಮುದಾಯದ ನಾಯಕನನ್ನು ದುರ್ಬಳಕೆ ಮಾಡಿಕೊಳ್ಳುವುದು ಆ ಸಮುದಾಯಕ್ಕೆ ಮಾಡುವ ಅನ್ಯಾಯ-ಅವಮಾನ ಅಲ್ಲವೇ? ಇದನ್ನೂ ಓದಿ: ಧರ್ಮಗುರುಗಳ ಮೂಲಕ ಮುಸ್ಲಿಮರ ವಿವಾಹ ನೋಂದಣಿಗೆ ತಡೆ – ಹೊಸ ಮಸೂದೆಗೆ ಅಸ್ಸಾಂ ಕ್ಯಾಬಿನೆಟ್ ಅನುಮೋದನೆ

BY Vijayendra Mysuru Chalo

ಬಿಜೆಪಿ ನಾಯಕರೇ, ದಲಿತ ನಾಯಕರೊಬ್ಬರನ್ನು ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ ಬಳಸುವಾಗ ಕನಿಷ್ಠ ನಿಮ್ಮ ಆತ್ಮಸಾಕ್ಷಿಯೂ ಚುಚ್ಚಲಿಲ್ಲವೇ?ದಲಿತರನ್ನು ಬಳಸಿ ಬಿಸಾಡುವ ಬಿಜೆಪಿ ಮತ್ತು ಸಂಘ ಪರಿವಾರದ ಪಿತೂರಿ ರಾಜಕಾರಣವನ್ನು ಅರ್ಥಮಾಡಿಕೊಳ್ಳುವಷ್ಟು ದಲಿತ ಸಮುದಾಯ ಜಾಗೃತವಾಗಿದೆ. ಈಗ ನೀವು ದಲಿತರ ಹೆಸರಲ್ಲಿ ಸುರಿಸುತ್ತಿರುವ ಮೊಸಳೆ ಕಣ್ಣೀರಿನ ಹಿಂದಿನ ಪ್ರಾಮಾಣಿಕತೆ ತಿಳಿಯದಷ್ಟು ದಡ್ಡರಲ್ಲ. ಕನಿಷ್ಠ ಅಟಲ್ ಬಿಹಾರಿ ವಾಜಪೇಯಿ ಅವರು ದಲಿತ ಸಮುದಾಯಕ್ಕೆ ಸೇರಿರುವ ಬಂಗಾರು ಲಕ್ಷ್ಮಣ್ ಅವರನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ನೇಮಕ ಮಾಡಿದರು. ಆದರೆ ಬಿಜೆಪಿಯೊಳಗಿನ ಸಂಘಿ ಮನಸ್ಸು ಅದನ್ನು ಸಹಿಸಿಕೊಳ್ಳದೇ ಅವರ ಮೇಲೆ ಭ್ರಷ್ಟಾಚಾರದ ಆರೋಪ ಹೊರಿಸಿತು, ಕೊನೆಗೆ ಅದೇ ಕೊರಗಿನಲ್ಲಿ ಅವರು ಸಾವಿಗೀಡಾದರು.

hassana bjp jds ct ravi vijayendra prajwal reavnna 2

ದಲಿತ ಸಮುದಾಯಕ್ಕೆ ಸೇರಿರುವ ನಮ್ಮ ಪಕ್ಷದ ಈಗಿನ ರಾಷ್ಟ್ರೀಯ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪಕ್ಷದ ಹಿರಿಯ ನಾಯಕರು ಎಷ್ಟು ಗೌರವ ಮತ್ತು ಘನತೆಯಿಂದ ನಡೆಸಿಕೊಳ್ಳುತ್ತಿದ್ದಾರೆ ಎನ್ನುವುದನ್ನು ನೋಡಿ ಕಲಿಯಿರಿ. ಸಂವಿಧಾನವನ್ನೇ ಬದಲಾಯಿಸಲು ಹೊರಟಿರುವ, ಮೀಸಲಾತಿಯನ್ನು ವಿರೋಧಿಸುತ್ತಿರುವ ಮತ್ತು ಜಾತಿ ತಾರತಮ್ಯವನ್ನು ಅಂತರಂಗದಲ್ಲಿ ಒಪ್ಪಿಕೊಂಡು ಬಹಿರಂಗದಲ್ಲಿ ಜಾತ್ಯತೀತತೆಯ ಸೋಗುಹಾಕಿರುವ ನಿಮಗೆ ದಲಿತರ ಬಗ್ಗೆ ಮಾತನಾಡುವ ಯಾವ ನೈತಿಕತೆಯೂ ಇಲ್ಲ. ನಿಮಗೆ ದಲಿತ ಸಮುದಾಯದ ಬಗ್ಗೆ ನಿಜವಾಗಿಯೂ ಗೌರವ ಇದ್ದರೇ ಥಾವರ ಚಂದ್ ಗೆಹ್ಲೋಟ್‌ ಅವರ ಮೇಲೆ ಕೆಟ್ಟ ಕೆಲಸ ಮಾಡಲು ರಾಜಕೀಯ ಒತ್ತಡ ಹೇರಲು ಹೋಗದೆ, ಅವರು ಸಂವಿಧಾನದತ್ತವಾಗಿ ಕರ್ತವ್ಯ ನಿರ್ವಹಣೆ ಮಾಡಲು ಅವಕಾಶ ಮಾಡಿಕೊಡಿ, ಈ ಪ್ರತಿಭಟನೆ, ಪ್ರತಿರೋಧದ ನಾಟಕಗಳನ್ನು ನಿಲ್ಲಿಸಿ ಅಂತ ಕಿಡಿಕಾರಿದ್ದಾರೆ. ಇದನ್ನೂ ಓದಿ: J&K Assembly Polls | ಎನ್‌ಸಿ-ಕಾಂಗ್ರೆಸ್ ಮೈತ್ರಿ ಬಹುತೇಕ ಖಚಿತ; ಮುಂದುವರಿದ ಸೀಟು ಹಂಚಿಕೆ ಮಾತುಕತೆ

TAGGED:bjpcongressdalitssiddaramaiahthawar chand gehlotಕಾಂಗ್ರೆಸ್ಥಾವರ ಚಂದ್ ಗೆಹ್ಲೋಟ್‌ದಲಿತರುಬಿಜೆಪಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema Updates

Kamal Haasan
ಕಮಲ್ `ಕನ್ನಡ’ ವಿವಾದ – ಜೂ.20ಕ್ಕೆ ವಿಚಾರಣೆ ಮುಂದೂಡಿದ ಕೋರ್ಟ್
15 hours ago
Kangana Ranaut to bengaluru
ಬೆಂಗಳೂರಿನ ಶಿವೋಹಂ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಕಂಗನಾ ರಣಾವತ್‌
16 hours ago
Timmana Mottegalu
ಜೂ.27ಕ್ಕೆ `ತಿಮ್ಮನ ಮೊಟ್ಟೆಗಳು’ ರಿಲೀಸ್
19 hours ago
Karisma Kapoor Sunjay Kapur
ನಟಿ ಕರಿಷ್ಮಾ ಕಪೂರ್‌ ಮಾಜಿ ಪತಿ ಸಂಜಯ್‌ ಹೃದಯಾಘಾತದಿಂದ ನಿಧನ
1 day ago

You Might Also Like

Ahmedabad Plane Crash 1 2
Latest

ಏರ್ ಇಂಡಿಯಾ ವಿಮಾನ ದುರಂತ – ಅವಶೇಷಗಳ ತೆರವು ಕಾರ್ಯ ಆರಂಭ

Public TV
By Public TV
15 minutes ago
Gadag Rain
Districts

ಗದಗ | ವರುಣನ ಆರ್ಭಟಕ್ಕೆ ಕೊಚ್ಚಿಹೋದ ಸೇತುವೆ – ಹರಿಯುವ ನೀರಿನಲ್ಲಿ ಜನರ ಹುಚ್ಚಾಟ

Public TV
By Public TV
16 minutes ago
Agumbe Ghat
Districts

ಆಗುಂಬೆ ಘಾಟಿಯಲ್ಲಿ ಭಾರೀ ವಾಹನಗಳ ಸಂಚಾರ ನಿಷೇಧ

Public TV
By Public TV
39 minutes ago
Sumeet Sabharwal Clive Kundar
Latest

Mayday… unable to lift: ಕ್ಯಾಪ್ಟನ್‌ ಸುಮಿತ್‌ ಕೊನೆ ಕ್ಷಣದ ಆಡಿಯೋ ಲಭ್ಯ

Public TV
By Public TV
40 minutes ago
Air India Bird Hit Ahmedabad Plane Crash
Latest

100 ಕೋಟಿ ಪ್ರಯಾಣಿಕರನ್ನ ಸೇಫ್ ಲ್ಯಾಂಡ್ ಮಾಡಿದ್ದ ವಿಮಾನಕ್ಕೆ ಏನಾಯ್ತು?

Public TV
By Public TV
1 hour ago
Madikeri Auto Driver
Districts

40 ರೂ. ಬದಲಿಗೆ 34,000 ರೂ. ಪೇ ಮಾಡಿದ ಪ್ರಯಾಣಿಕ – ಹಣ ಹಿಂತಿರುಗಿಸಿ ಪ್ರಾಮಾಣಿಕತೆ ಮೆರೆದ ಆಟೋ ಚಾಲಕ

Public TV
By Public TV
1 hour ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?