Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮೋದಿ ವಿರುದ್ಧ ಪ್ರತಿಭಟನೆಗಿಳಿದ ದೋಸ್ತಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಮೋದಿ ವಿರುದ್ಧ ಪ್ರತಿಭಟನೆಗಿಳಿದ ದೋಸ್ತಿ

Bengaluru City

ಮೋದಿ ವಿರುದ್ಧ ಪ್ರತಿಭಟನೆಗಿಳಿದ ದೋಸ್ತಿ

Public TV
Last updated: March 28, 2019 6:20 pm
Public TV
Share
2 Min Read
IT Attack HDK Siddu D
SHARE

– ‘ಜೋಡೆತ್ತು’ಗಳಿಗೆ ‘ಟಗರು’ ಸಾಥ್
– ಮಾನಸಿಕ ಖಿನ್ನತೆಗೆ ಒಳಗಾದವರ ಮೇಲೆಯೇ ಯಾಕೆ ಐಟಿ ದಾಳಿ?
– ಸಿಆರ್‌ಪಿಎಫ್ ನೆರವು ಪಡೆದಿದ್ದು ಯಾಕೆ- ಎಚ್‍ಡಿಕೆ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ರಾಜಕೀಯ ಪ್ರೇರಿತ ಐಟಿ ದಾಳಿ ನಡೆಯುತ್ತಿದೆ ಎಂದು ಆರೋಪಿಸಿ ಮೈತ್ರಿ ಸರ್ಕಾರದ ನಾಯಕರು ಸೇರಿದಂತೆ ನೂರಾರು ಕಾರ್ಯಕರ್ತರು ನಗರದ ಆದಾಯ ತೆರಿಗೆ ಇಲಾಖೆ ಮುಂದೆ ಸಾಂಕೇತಿಕ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಮಾಜಿ ಸಿಎಂ, ಬಾದಾಮಿ ವಿಧಾನಸಭಾ ಕ್ಷೇತ್ರದಲ್ಲಿ ನನ್ನ ಬೆಂಬಲಕ್ಕೆ ನಿಂತ ಮುಖಂಡರ ಮೇಲೆ ಐಟಿ ದಾಳಿ ಮಾಡಲಾಗಿದೆ. ಕೇಂದ್ರದಲ್ಲಿ ಬಿಜೆಪಿ ಶಾಶ್ವತವಾಗಿ ಅಧಿಕಾರದಲ್ಲಿ ಇರುವುದಿಲ್ಲ. ನೀವು ಯಾಕೆ ಅವರ ಕೈಗೊಂಬೆ ರೀತಿ ಆಡುತ್ತಿರುವಿರಿ? ಚುನಾವಣೆ ಸಮಯದಲ್ಲಿ ಈ ರೀತಿ ಐಟಿ ದಾಳಿ ಮಾಡುವುದು ಸರಿಯಲ್ಲ. ರಾಜ್ಯದಲ್ಲಿ ಕೇವಲ ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರನ್ನೇ ಟಾರ್ಗೆಟ್ ಮಾಡುತ್ತಿರುವಿರಿ. ಎಂದು ಐಟಿ ಅಧಿಕಾರಿಗಳಿಗೆ ಪ್ರಶ್ನಿಸಿದರು.

IT Attack HDK Siddu A

ಬಿಜೆಪಿಗೆ ಸೋಲಿನ ಭಯವಿದೆ. ಹೀಗಾಗಿ ಕೇಂದ್ರ ಸರ್ಕಾರವು ಐಟಿ ಅಧಿಕಾರಿಗಳ ಮೂಲಕ ರಾಜ್ಯ ಕಾಂಗ್ರೆಸ್, ಜೆಡಿಎಸ್ ನಾಯಕರ ಮನೆಯ ಮೇಲೆ ದಾಳಿ ಮಾಡುತ್ತಿದೆ. ಆದರೆ ಬಿಜೆಪಿ ಈ ಬಾರಿ ಅಧಿಕಾರಕ್ಕೆ ಬರುವುದಿಲ್ಲ ಎಂದು ಮಾಜಿ ಸಿಎಂ ಗುಡುಗಿದರು. ಈ ವೇಳೆ ಪ್ರತಿಭಟನಾನಿರತ ಕೆಲವರು ಮೋದಿ ಚೋರ್, ಚೌಕಿದಾರ್ ಜೋರ್ ಹೈ ಎಂದು ಕೂಗಿದರು.

ಡಿಸಿಎಂ ಜಿ.ಪರಮೇಶ್ವರ್ ಮಾತನಾಡಿ, ಬಿಜೆಪಿಯವರು ದೇಶದ ಒಕ್ಕೂಟದ ವ್ಯವಸ್ಥೆಯನ್ನು ಹಾಳು ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೇಂದ್ರ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿಯು ಐಟಿ, ಸಿಬಿಐ ಅಧಿಕಾರಿಗಳ ಮೇಲೆ ಹಿಡಿತ ಸಾಧಿಸಿದ್ದು, ರಾಜಕೀಯ ಸ್ವಾರ್ಥಕ್ಕೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿದರು.

IT Attack HDK Siddu B

ಸಿಎಂ ಕುಮಾರಸ್ವಾಮಿ ಅವರು ಮಾತನಾಡಿ, ಐಟಿ ದಾಳಿಯ ಬಗ್ಗೆ ನಮ್ಮ ವಿರೋಧವಿಲ್ಲ. ಕೆಲವೇ ಕೆಲವು ಪಕ್ಷದ ಮುಖಂಡರು, ಕಾರ್ಯಕರ್ತರ ಮನೆಯ ಮೇಲೆ ದಾಳಿ ಮಾಡುತ್ತಿರುವುದು ಸರಿಯಲ್ಲ. ವಿರೋಧ ಪಕ್ಷದ ಕಾರ್ಯಕರ್ತರಲ್ಲಿ ಭಯ ಮೂಡಿಸಲು ಬಿಜೆಪಿಯವರು ಇಂತಹ ತಂತ್ರ ಅನುಸರಿಸುತ್ತಿದ್ದಾರೆ ಎಂದು ದೂರಿದರು.

ಐಟಿ ಇಲಾಖೆಯ ಅಧಿಕಾರಿಯೊಬ್ಬರು ಮುಂಬೈನಲ್ಲಿ ಅಕ್ರಮ ಆಸ್ತಿ ಹೊಂದಿದ್ದಾರೆ. ಅಧಿಕಾರ ದುರುಪಯೋಗಪಡಿಸಿಕೊಂಡು ಸಂಪಾದನೆ ಮಾಡಿರುವ ಬಗ್ಗೆ ನನ್ನ ಬಳಿ ದಾಖಲೆಗಳಿವೆ. ಐಟಿ ಅಧಿಕಾರಿಗಳು ಬಿಜೆಪಿಯ ಏಜೆಂಟ್ ಆಗಿ ಕೆಲಸ ಮಾಡುವುದನ್ನು ಬಿಡಬೇಕು ಎಂದು ತಿಳಿಸಿದರು.

ಸಾಮಾನ್ಯವಾಗಿ ಐಟಿ ಅಧಿಕಾರಿಗಳು ಆಯಾ ರಾಜ್ಯಗಳ ಪೊಲೀಸರ ನೆರವು ಪಡೆದು ದಾಳಿ ಮಾಡುತ್ತಾರೆ. ಆದರೆ ಇಂದು ಸಿಆರ್‌ಪಿಎಫ್ ಯೋಧರ ನೆರವು ಪಡೆದು ದಾಳಿ ಮಾಡಿದ್ದೀರಿ. ಯಾವ ಉದ್ದೇಶಕ್ಕಾಗಿ ಹೀಗೆ ಮಾಡಿದ್ದು ಎನ್ನುವುದಕ್ಕೆ ಉತ್ತರ ನೀಡಬೇಕು ಎಂದು ಸಿಎಂ ಕುಮಾರಸ್ವಾಮಿ ಆಗ್ರಹಿಸಿದರು.

IT Attack HDK Siddu C

ಬೃಹತ್ ನೀರಾವರಿ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಮಾತನಾಡಿ, ಬಿಜೆಪಿಯ ಒತ್ತಡದ ಮೇಲೆ ಕೇಂದ್ರ ಸಂಸ್ಥೆಯ ಅಧಿಕಾರಿಗಳು ಕೆಲಸ ಮಾಡಬಾರದು. ಬಿಜೆಪಿ ಕೇಂದ್ರದಲ್ಲಿ ಶಾಶ್ವತವಾಗಿ ಇರುವುದಿಲ್ಲ. ಭಾರತದ ಇತಿಹಾಸದಲ್ಲಿಯೇ ಐಟಿ ಅಧಿಕಾರಿಗಳು ರ್ನಾಟನಕದಲ್ಲಿ ಎರಡು ಬಾರಿ ಸಿಆರ್‌ಪಿಎಫ್ ನೆರವು ಪಡೆದು ದಾಳಿ ಮಾಡಿದ್ದಾರೆ. ಈ ಹಿಂದೆ ನನ್ನ ಮನೆಯ ಮೇಲೆ ದಾಳಿ ಮಾಡಿದ್ದಾಗ ಸಿಆರ್‍ಪಿಎಫ್ ಯೋಧರನ್ನು ಕರೆತಂದಿದ್ದರು. ಇಂದು ಕೂಡ ಅದೇ ರೀತಿ ನಡೆದುಕೊಂಡಿದ್ದಾರೆ ಎಂದು ಕಿಡಿಕಾರಿದರು.

TAGGED:bjpCM KumaraswamyDK Shivakumarformer CM SiddaramaiahG Parameshwarit attackPublic TVಐಟಿ ದಾಳಿಜಿ.ಪರಮೇಶ್ವರ್ಡಿ.ಕೆ.ಶಿವಕುಮಾರ್ಪಬ್ಲಿಕ್ ಟಿವಿಬಿಜೆಪಿಮಾಜಿ ಸಿಎಂ ಸಿದ್ದರಾಮಯ್ಯಸಿಎಂ ಕುಮಾರಸ್ವಾಮಿ
Share This Article
Facebook Whatsapp Whatsapp Telegram

Cinema news

darshan 1
ದರ್ಶನ್ ಒಳಸಂದರ್ಶನಕ್ಕೆ ಕೋರ್ಟ್ ಅಸ್ತು – ಅಂತಿಮ ನಿರ್ಧಾರ ಜೈಲು ಅಧೀಕ್ಷಕರಿಗೆ ಬಿಟ್ಟದ್ದು ಎಂದ ನ್ಯಾಯಾಲಯ
Bengaluru City Cinema Court Districts Karnataka Latest Top Stories
Nora Fatehi
ʻಸರ್ಸೆ ಸರ್ಸೆ ಸೆರಗ ಸರ್ಸೆʼ ಹಾಡಿನ ವಿವಾದ – ಮಹಿಳಾ ಆಯೋಗದಿಂದ ಫಿಲ್ಮ್ ಚೇಂಬರ್‌ಗೆ ಪತ್ರ
Bollywood Cinema Latest Sandalwood Top Stories
Salman Khan
ಸಲ್ಮಾನ್ ಖಾನ್ ಅಭಿನಯದ `ಬ್ಯಾಟಲ್ ಆಫ್ ಗಲ್ವಾನ್’ ಈಗ `ಮಾತೃಭೂಮಿ’
Bollywood Cinema Latest Top Stories
Oscars 2026 Michael B Jordan Jessie Buckley
Oscars 2026: ಮೈಕೆಲ್ ಬಿ ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ
Cinema Latest Top Stories World

You Might Also Like

Accident between two Thar cars on the highway Chikkaballapura
Chikkaballapur

ಹೈವೇಯಲ್ಲಿ ಎರಡು ಥಾರ್ ಕಾರುಗಳ ಮಧ್ಯೆ ಅಪಘಾತ

Public TV
By Public TV
43 seconds ago
Srirama pattabhisheka
Latest

ಯುಗಾದಿ ವಿಶೇಷ | ಶ್ರೀರಾಮನ ಪಟ್ಟಾಭಿಷೇಕ – ಕೆಡುಕಿಂದ ಒಳಿತಿನೆಡೆ ನಡೆವ ಸಂಕೇತ

Public TV
By Public TV
2 minutes ago
Weather 1
Bengaluru City

ಬೆಂಗಳೂರಿನಲ್ಲಿ ಮೊದಲ ವರ್ಷಧಾರೆ – ಮುಂದಿನ 4 ದಿನ ರಾಜ್ಯಾದ್ಯಂತ ಮಳೆ

Public TV
By Public TV
34 minutes ago
Bengaluru IIM passout Sofia Firdous is Odisha first Muslim woman MLA 2
Bengaluru City

ಬಿಜೆಪಿ ಬೆಂಬಲಿತ ಅಭ್ಯರ್ಥಿಗೆ ಮತ – ಒಡಿಶಾ ಕಾಂಗ್ರೆಸ್ಸಿನ ಮೊದಲ ಮುಸ್ಲಿಮ್‌ ಶಾಸಕಿ ಪಕ್ಷದಿಂದಲೇ ಉಚ್ಚಾಟನೆ

Public TV
By Public TV
1 hour ago
Davanagere Byelection
Davanagere

ದಾವಣಗೆರೆ ದಕ್ಷಿಣ ಉಪಚುನಾವಣೆ | ಕಾಂಗ್ರೆಸ್‌ ಸಭೆಯಲ್ಲಿ ಗದ್ದಲ – ಬೇಸರದಿಂದ ಹೊರನಡೆದ ಉಸ್ತುವಾರಿ ಸಮಿತಿ ಸದಸ್ಯರು

Public TV
By Public TV
2 hours ago
Bidar LPG Cylinder
Bidar

ಕಾಳಸಂತೆಯಲ್ಲಿ ಮಾರಾಟ ಮಾಡೋಕೆ ಸಂಗ್ರಹಿಸಿದ್ದ 105 ಗ್ಯಾಸ್ ಸಿಲಿಂಡರ್ ಜಪ್ತಿ – ನಾಲ್ವರು ಅರೆಸ್ಟ್

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?