Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಜೆಡಿಎಸ್-ಬಿಜೆಪಿ ಸಂಸದರು ಮೋದಿ ಮುಂದೆ ನಿಂತು ಮಾತಾಡೋಕೆ ನಡುಗುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ
Notification Show More
Font ResizerAa
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಜೆಡಿಎಸ್-ಬಿಜೆಪಿ ಸಂಸದರು ಮೋದಿ ಮುಂದೆ ನಿಂತು ಮಾತಾಡೋಕೆ ನಡುಗುತ್ತಾರೆ: ಸಿದ್ದರಾಮಯ್ಯ ವಾಗ್ದಾಳಿ

Public TV
Last updated: July 19, 2025 4:30 pm
Public TV
Share
3 Min Read
Siddaramaiah 03
SHARE

– ಮೋದಿ ದೇಶದ 10% ಜನರಿಗೆ ಕೆಲಸ ಮಾಡ್ತಾರೆ, 90% ಜನ ಲೆಕ್ಕಕ್ಕಿಲ್ಲ
– ಜೆಡಿಎಸ್-ಬಿಜೆಪಿ ಕಾರ್ಯಕರ್ತರಿಗೂ ಗ್ಯಾರಂಟಿ ಕೊಟ್ಟಿದ್ದೇವೆ ಟೀಕಿಸಲು ನಾಚಿಕೆ ಆಗಬೇಕು ಎಂದ ಸಿಎಂ

ಮೈಸೂರು: ಜೆಡಿಎಸ್ – ಬಿಜೆಪಿ ಸಂಸದರಿಗೆ ಮೋದಿ (Narendra Modi) ಮುಂದೆ ನಿಂತು ರಾಜ್ಯಕ್ಕೆ ಆದ ಅನ್ಯಾಯ ಕೇಳುವ ಧೈರ್ಯವಿಲ್ಲ. ಮೋದಿ ಮುಂದೆ ಮಾತಾಡಲು ಇವರೆಲ್ಲಾ ನಡುಗುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತೀವ್ರ ವಾಗ್ದಾಳಿ ನಡೆಸಿದರು.

ಮೈಸೂರಿನಲ್ಲಿ (Mysuru) ಸಾಧನಾ ಸಮಾವೇಶವನ್ನುದ್ದೇಶಿಸಿ ಮುಖ್ಯಭಾಷಣ ಮಾಡಿದ ಸಿಎಂ, ಬಿಜೆಪಿ-ಜೆಡಿಎಸ್‌ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಬಿಜೆಪಿ, ಜೆಡಿಎಸ್ ಮುಖಂಡರೂ (BJP JDS Leaders) ಈ ವೇದಿಕೆಯಲ್ಲಿ ಇರಬೇಕಿತ್ತು. ಒಂದೇ ವೇದಿಕೆಗೆ ಬಂದಿದ್ದರೆ ಅವರೇನೂ ಅಭಿವೃದ್ಧಿ ಮಾಡಿದ್ದಾರೆ? ನಾವೇನು ಅಭಿವೃದ್ಧಿ ಮಾಡಿದ್ದೇವೆ ಗೊತ್ತಾಗ್ತಿತ್ತು. ಚರ್ಚೆಗೆ ನಾನು ಬರ್ತಿನಿ, ನೀವೂ ಬನ್ನಿ ಚರ್ಚೆ ಮಾಡೋಣ ಅಂತ ಜೆಡಿಎಸ್ – ಬಿಜೆಪಿಗೆ ಬಹಿರಂಗ ಸವಾಲು ಹಾಕಿದರು. ಇದನ್ನೂ ಓದಿ: ಮನೆಯಲ್ಲಿ ಕೂತಿರೋರಿಗೆಲ್ಲ ವೆಲ್‌ಕಮ್‌ ಮಾಡೋಕಾಗಲ್ಲ – ಡಿಕೆಶಿ ಹೆಸರನ್ನೇ ಹೇಳದ ಸಿಎಂ

ಬಿಜೆಪಿ, ಜೆಡಿಎಸ್‌ಗೆ ಇರುವಷ್ಟು ಮತ್ಸರ ಇರಬಾರದು
ಸರ್ಕಾರ ದಿವಾಳಿ ಆಗಿದ್ದರೆ, ಅಭಿವೃದ್ಧಿ ಯೋಜನೆ ಮಾಡುಲು ಆಗುತ್ತಿತ್ತಾ? ಸರ್ಕಾರ ದಿವಾಳಿ ಆಗಿಲ್ಲ ಎಂದರಲ್ಲದೇ ಇದು ಸಿದ್ದರಾಮಯ್ಯನ ಶಕ್ತಿ ಪ್ರದರ್ಶನ ಅಲ್ಲ. ಇದು ಅಭಿವೃದ್ಧಿಯ ಶಕ್ತಿಯನ್ನು ಜನರ ಮುಂದೆ ಇಡುವ ಸಮಾವೇಶ. ಮತ್ಸರ ಇರಬೇಕು. ಆದ್ರೆ ಬಿಜೆಪಿ, ಜೆಡಿಎಸ್‌ಗೆ ಇರುವಷ್ಟು ಮತ್ಸರ ಇರಬಾರದು. ಬಿಜೆಪಿ, ಜೆಡಿಎಸ್ ಸುಳ್ಳು ಹೇಳುತ್ತಾ ಜನರ ದಾರಿ ತಪ್ಪಿಸುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಹಣಕಾಸು ಸಚಿವರಾದಾಗ ಲಕ್ಷ್ಮಿ ಕುಂಟಾಗಿ ಖಜಾನೆಯಲ್ಲಿರ‍್ತಾಳೆ: ಮಲ್ಲಿಕಾರ್ಜುನ ಖರ್ಗೆ

ಜೆಡಿಎಸ್‌ ವೀಕ್‌ ಆಗಿ ಬಿಜೆಪಿ ಜೊತೆ ಸೇರಿದೆ
ನಾನು ಜೆಡಿಎಸ್ ಅಧ್ಯಕ್ಷನಾಗಿದ್ದಾಗ 58 ಸ್ಥಾನ ಗೆದ್ದಿದ್ದೇವು. ಈಗ ಜೆಡಿಎಸ್ ಗೆದ್ದಿರೋದು ಎಷ್ಟು ದೇವೇಗೌಡರೇ? ಜೆಡಿಎಸ್ ಈಗ ಗೆದ್ದಿರೋದು 18 ಸ್ಥಾನ ಮಾತ್ರ. ಜೆಡಿಎಸ್ ಯಾವುದೇ ಕಾರಣಕ್ಕೂ ಸ್ವಂತ ಬಲದಿಂದ ಅಧಿಕಾರೋದಕ್ಕೆ ಸಾಧ್ಯವಿಲ್ಲ. ಜೆಡಿಎಸ್ ವೀಕ್ ಆಗಿದೆ. ಹೀಗಾಗಿ ಬಿಜೆಪಿ ಜೊತೆ ಸೇರಿಕೊಂಡಿದ್ದಾರೆ. ಜೆಡಿಎಸ್, ಬಿಜೆಪಿ ಈ ರಾಜ್ಯದಲ್ಲಿ ಜನರ ಪ್ರೀತಿ ಉಳಿಸಿ ಕೊಂಡಿಲ್ಲ ಎಂದು ತಿವಿದರು. ಇದನ್ನೂ ಓದಿ: ನಮ್ಮ ಸರ್ಕಾರ ದೇವರ ಮನೆಯಿದ್ದಂತೆ, ಸಿದ್ದರಾಮಯ್ಯ ನಮ್ಮೆಲ್ಲರ ನಾಯಕ: ಡಿಕೆಶಿ

ಜೆಡಿಎಸ್, ಬಿಜೆಪಿಗೆ ಹೊಟ್ಟೆ ಉರಿ
ಜೆಡಿಎಸ್ – ಬಿಜೆಪಿ ಸಂಸದರಿಗೆ ಮೋದಿ ಮುಂದೆ ನಿಂತು ರಾಜ್ಯಕ್ಕೆ ಆದ ಅನ್ಯಾಯ ಕೇಳುವ ಧೈರ್ಯವಿಲ್ಲ. ಮೋದಿ ಮುಂದೆ ಮಾತಾಡಲು ಇವರೆಲ್ಲಾ ನಡುಗುತ್ತಾರೆ. ಬಿಜೆಪಿ – ಜೆಡಿಎಸ್‌ಗೆ ನಾಚಿಕೆ ಆಗಲ್ವಾ? ನಾವು ಜೆಡಿಎಸ್ – ಬಿಜೆಪಿ ಕಾರ್ಯಕರ್ತರಿಗೂ ಗ್ಯಾರಂಟಿ ಕೊಟ್ಟಿದ್ದೇವೆ. ಗ್ಯಾರಂಟಿ ಟೀಕಿಸಲು ಅವರಿಗೆ ನಾಚಿಕೆ ಆಗಬೇಕು. ನಮ್ಮ ಗ್ಯಾರಂಟಿಯಿಂದ ಬಡವರು, ದಲಿತರು, ಅಲ್ಪಸಂಖ್ಯಾತರು ಖುಷಿಯಾಗಿದ್ದಾರೆ. ಇದೇ ಜೆಡಿಎಸ್, ಬಿಜೆಪಿಗೆ ಹೊಟ್ಟೆ ಉರಿ, ಈ ಹೊಟ್ಟೆ ಉರಿ ಬಿಡಿ. ರಾಜಕೀಯವಾಗಿ ಏನಾದ್ರೂ ಮಾತನಾಡಿ, ನಾನು ತಪ್ಪು ಮಾಡಿದ್ದರೆ ದಾಖಲೆ ಸಮೇತ ಹೇಳಿ ಎಂದು ಹೇಳಿದರು. ಇದನ್ನೂ ಓದಿ: Kolar | ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ – ಹಾಲಿನಲ್ಲಿ ಕೆಮಿಕಲ್ ಅಂಶ ಪತ್ತೆ

ಮೋದಿ ದೇಶದ 10% ಜನರಿಗೆ ಮಾತ್ರ ಕೆಲಸ ಮಾಡೋದು
ಮುಂದುವರಿದು… ನರೇಂದ್ರ ಮೋದಿ ಈ ದೇಶದ 10% ಜನರಿಗೆ ಮಾತ್ರ ಕೆಲಸ ಮಾಡೋದು, ಉಳಿದ 90% ಅವರಿಗೆ ಲೆಕ್ಕ ಇಲ್ಲ. ಆದ್ರೆ ಕಾಂಗ್ರೆಸ್ ಬಡವರು, ದಲಿತರ ಪರ ಕೆಲಸ ಮಾಡುವ ಪಕ್ಷ. ಬುದ್ಧ, ಬಸವ, ಅಂಬೇಡ್ಕರ್ ತತ್ವದಲ್ಲಿ ಕಾಂಗ್ರೆಸ್ ನಂಬಿಕೆ ಇಟ್ಟಿದೆ. ಆದ್ರೆ ಆರ್‌ಎಸ್‌ಎಸ್‌, ಬಿಜೆಪಿ ಮನುವಾದಿಗಳು, ಸಂವಿಧಾನ ವಿರೋಧಿಗಳು ಅಂತ ವಾಗ್ದಾಳಿ ನಡೆಸಿದರು.

ಗ್ಯಾರಂಟಿ ಶಾಶ್ವತ
ಇದೇ ವೇಳೆ ಗ್ಯಾರಂಟಿ ನಿಲ್ಲಿಸುತ್ತೆ ಕಾಂಗ್ರೆಸ್‌ ಎನ್ನುವ ವಿಪಕ್ಷಗಳ ಆರೋಪ ಕುರಿತು ಮಾತನಾಡಿ, ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ. ಗ್ಯಾರಂಟಿ ಯೋಜನೆಗಳನ್ನು ಬಿಜೆಪಿ ಬೇರೆ ಬೇರೆ ರಾಜ್ಯದಲ್ಲಿ ಕಾಪಿ ಮಾಡ್ತಿದೆ. ಮೋದಿ ಜೀ ನಿಮಗೆ ನಾಚಿಕೆ ಆಗಲ್ವಾ? ನಮ್ಮ ಗ್ಯಾರಂಟಿ ಟೀಕಿಸಿ ಈಗ ಅದನ್ನೆ ಎಲ್ಲಾ ಕಡೆ ಕೊಡುತ್ತಿದ್ದಿರಿ ಎಂದು ಲೇವಡಿ ಮಾಡಿದರು.

Share This Article
Facebook Whatsapp Whatsapp Telegram
Previous Article Kolar Adulterated Milk Kolar | ಕಲಬೆರೆಕೆ ಹಾಲು ತಯಾರಿಕಾ ಘಟಕದ ಮೇಲೆ ಪೊಲೀಸರ ದಾಳಿ – ಹಾಲಿನಲ್ಲಿ ಕೆಮಿಕಲ್ ಅಂಶ ಪತ್ತೆ
Next Article TIRUPATI 1 ಅನ್ಯ ಧರ್ಮಗಳ ಪಾಲನೆ – ತಿರುಪತಿಯ ನಾಲ್ವರು ನೌಕರರ ಅಮಾನತು

Latest Cinema News

Actor Vijays Rally
ತಮಿಳು ನಟ ವಿಜಯ್‌ ರ‍್ಯಾಲಿಯಲ್ಲಿ ಭೀಕರ ಕಾಲ್ತುಳಿತ – ಮಕ್ಕಳು ಸೇರಿ 33 ಮಂದಿ ಸಾವು
Cinema Latest Main Post National South cinema
Kapil Sharma
ಕಪಿಲ್ ಶರ್ಮಾಗೆ ಬೆದರಿಕೆಯೊಡ್ಡಿ 1 ಕೋಟಿ ಹಣಕ್ಕೆ ಬೇಡಿಕೆಯಿಟ್ಟದ್ದ ವ್ಯಕ್ತಿ ಬಂಧನ
Cinema Crime Latest Top Stories TV Shows
Thama Trailer Rashmika Mandanna
ದೆವ್ವವಾಗಿ ಕಾಡುವ ರಶ್ಮಿಕಾರನ್ನು ನೋಡಿದ್ರಾ?
Bollywood Cinema Latest Top Stories
vijay thalapathy
ಡಿಎಂಕೆಗೆ ಮತ ಹಾಕಿದರೆ ಬಿಜೆಪಿಗೇ ವೋಟ್‌ ಹಾಕಿದಂತೆ.. ನಾನು BJP ಜೊತೆ ಕೈಜೋಡಿಸಲ್ಲ: ನಟ ವಿಜಯ್‌
Cinema Latest National South cinema Top Stories
Geetha Shivaraj Kumar
ಇನ್ಮುಂದೆ ಚುನಾವಣೆಗೆ ಸ್ಪರ್ಧಿಸುವುದಿಲ್ಲ: ಗೀತಾ ಶಿವರಾಜ್‌ಕುಮಾರ್ ಘೋಷಣೆ
Cinema Karnataka Latest Shivamogga Top Stories

You Might Also Like

Sonam Wangchuk
Latest

ಸೋನಮ್ ವಾಂಗ್‌ಚುಕ್ ಜೊತೆ ನಂಟು ಹೊಂದಿದ್ದ ಪಾಕ್ ಪರ ಬೇಹುಗಾರಿಕೆ ಮಾಡುತ್ತಿದ್ದ ವ್ಯಕ್ತಿ ಬಂಧನ

44 minutes ago
Raichuru
Districts

ರಾಯಚೂರು | ಟೀ ಕುಡಿಯಲು ಅಂಗಡಿಗೆ ತೆರಳಿದ್ದಾಗ ಕುಸಿದ ಛಾವಣಿ – ವೃದ್ಧೆ ಸಾವು

58 minutes ago
Bengaluru Siddaramaiah City Rounds 1
Bengaluru City

ಬೆಂಗಳೂರಿನಲ್ಲಿ ಗುಂಡಿಗಳದ್ದೇ ಕಾರುಬಾರು – ಸಿಎಂ, ಡಿಸಿಎಂ ಸಿಟಿ ರೌಂಡ್ಸ್

1 hour ago
MB Patil
Bengaluru City

ಸುಂಕದ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಬಗೆಹರಿಸಲಿ – ಎಂ.ಬಿ ಪಾಟೀಲ್ ಸಲಹೆ

2 hours ago
cockroach sudhi mouna guddemane jhanvi kartik
Cinema

ಈ ಬಾರಿ ಬಿಗ್ ಬಾಸ್ ಮನೆಗೆ ಹೋಗುವ ಕಂಟೆಸ್ಟೆಂಟ್‌ ಯಾರ್ ಗೊತ್ತಾ? – ಇಲ್ಲಿದೆ ನೋಡಿ ಫೈನಲ್ ಲಿಸ್ಟ್

3 hours ago
Previous Next
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?