Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಎಷ್ಟಿಂಚು ಎದೆಯಿದ್ದರೇನು ಪ್ರಯೋಜನ, ಮಾತೃ ಹೃದಯವಿರಬೇಕು: ಮೋದಿಗೆ ಸಿದ್ದು ಟಾಂಗ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಎಷ್ಟಿಂಚು ಎದೆಯಿದ್ದರೇನು ಪ್ರಯೋಜನ, ಮಾತೃ ಹೃದಯವಿರಬೇಕು: ಮೋದಿಗೆ ಸಿದ್ದು ಟಾಂಗ್

Chikkamagaluru

ಎಷ್ಟಿಂಚು ಎದೆಯಿದ್ದರೇನು ಪ್ರಯೋಜನ, ಮಾತೃ ಹೃದಯವಿರಬೇಕು: ಮೋದಿಗೆ ಸಿದ್ದು ಟಾಂಗ್

Public TV
Last updated: October 13, 2019 1:12 pm
Public TV
Share
2 Min Read
siddu 1
SHARE

– ರಮೇಶ್ ಸಾವು ನಿಗೂಢವಾಗಿ ಕಾಣಿಸ್ತಿದೆ
– ವಿಧಾನಸಭೆಯಲ್ಲಿ ಮಾಧ್ಯಮ ನಿಷೇಧಕ್ಕೆ ಕಿಡಿ

ಚಿಕ್ಕಮಗಳೂರು: ಕರ್ನಾಟಕ ಪ್ರವಾಹಕ್ಕೆ ಸರಿಯಾಗಿ ಸ್ಪಂದಿಸದ ಕೇಂದ್ರ ಸರ್ಕಾರ ಹಾಗೂ ಪ್ರಧಾನಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಎಷ್ಟಿಂಚು ಎದೆಯಿದ್ದರೇನು ಪ್ರಯೋಜನ, ಮಾತೃ ಹೃದಯವಿರಬೇಕು. ಜನರ ಕಷ್ಟಕ್ಕೆ ಸ್ಪಂದಿಸುವ ಮನಸ್ಸಿರಬೇಕು ಎಂದು ಮೋದಿಗೆ ಟಾಂಗ್ ಕೊಟ್ಟಿದ್ದಾರೆ.

ನಗರದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮಾಜಿ ಸಿಎಂ, ಈ ವರ್ಷ ರಾಜ್ಯದಲ್ಲಿ ಪ್ರವಾಹ ಹಾಗೂ ಬರ ಎರಡೂ ಇದೆ. ಇದನ್ನು ಸಚಿವ ಆರ್. ಅಶೋಕ್ ಅವರೇ ಒಪ್ಪಿಕೊಂಡಿದ್ದಾರೆ. ಪ್ರವಾಹದ ಪರಿಹಾರ ಎಷ್ಟು ದಿನಕ್ಕೆ ಬಂದಿದೆ ಎಂದು ಗೊತ್ತಾ? 60 ದಿನಗಳಾದ ಮೇಲೆ 1,200 ಕೋಟಿ ರೂ. ಕೇಂದ್ರ ಸರ್ಕಾರದಿಂದ ಕೊಟ್ಟಿದ್ದಾರೆ. ಧೂಪ ಹಾಕ್ತಾರಲ್ಲ ಆ ರೀತಿ 1,200 ಕೋಟಿ ಕೊಟ್ಟಿದ್ದಾರೆ. ನೆರೆ ಬಂದು ಜನರು ಸಂಕಷ್ಟಕ್ಕೆ ಸಿಲುಕಿ ಸಾಕಷ್ಟು ಸಾವು-ನೋವುಗಳು ಆದರೂ ಮೋದಿ ಕರ್ನಾಟಕಕ್ಕೆ ಬಂದೇ ಇಲ್ಲ. ಸುಮಾರು 2 ಕೋಟಿ ಜನರು ಕರ್ನಾಟಕದಲ್ಲಿ ಪ್ರವಾಹದಿಂದ ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಬಗ್ಗೆ ಮೋದಿ ಪ್ರತಿಕ್ರಿಯೆ ನೀಡಿಲ್ಲ. ಆದರೆ ಬಿಹಾರದಲ್ಲಿ ನೆರೆ ಬಂದಾಗ ತಕ್ಷಣ ಟ್ವೀಟ್ ಮಾಡುತ್ತಾರೆ ಎಂದು ಹರಿಹಾಯ್ದರು.

pm modi 1

ಎದೆ ಎಷ್ಟು ಇಂಚು ಇದ್ದರೇನು, ಜನರ ಕಷ್ಟಕ್ಕೆ ಸ್ಪಂದಿಸಲು ಮಾತೃ ಹೃದಯ ಇರಬೇಕು. ನೂರು ಇಂಚು ಎದೆ ಬೇಕಾದರೆ ಇಟ್ಟುಕೊಳ್ಳಿ ಆದರೆ ಮಾತೃ ಹೃದಯ ಇರಬೇಕು ಅಷ್ಟೆ ಎಂದು ಮೋದಿಯರನ್ನು ಟೀಕಿಸಿದರು.

ಇದೇ ವೇಳೆ ವಿಧಾನಸಭೆಯಲ್ಲಿ ಮಾಧ್ಯಮ ನಿಷೇಧ ವಿಚಾರವಾಗಿ ಪ್ರತಿಕ್ರಿಯಿಸಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರನ್ನ ದೂರ ಇಟ್ಟು ಏನು ಮಾಡೋಕೆ ಆಗಲ್ಲ. ವಿಧಾನಸಭೆಯಲ್ಲಿ ನಡೆಯುವ ಕಲಾಪ ಎಲ್ಲರಿಗೂ ಗೊತ್ತಾಗಬೇಕು. ಕಲಾಪ ಗೌಪ್ಯವಾಗಿ ನಡೆಯೋದಿಲ್ಲ, ಎಲ್ಲರಿಗೂ ಗೊತ್ತಾಗಲಿ ಎಂದು ನಾವು ಚರ್ಚೆ ಮಾಡೋದು. ಆದ್ದರಿಂದ ಮಾಧ್ಯಮಕ್ಕೆ ನಿರ್ಬಂಧ ಹೇರಿರುವುದು ಸರಿಯಲ್ಲ. ಈ ನಿರ್ಧಾರ ಸಿಎಂ ಹಾಗೂ ಸ್ಪೀಕರ್ ಇಬ್ಬರೂ ಸೇರಿಯೇ ಮಾಡಿರುವುದು. ಸರ್ಕಾರಕ್ಕೆ ಗೊತ್ತಿಲ್ಲದೆ ಏನು ಮಾಡೋಕೆ ಆಗಲ್ಲ. ಬಿಜೆಪಿಯವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ಅಲ್ಲದೆ ಬಿಜೆಪಿ ಸರ್ಕಾರ ಸರ್ವಾಧಿಕಾರ ಧೋರಣೆ ಮಾಡುತ್ತಿದೆ. ಇದು ಪ್ರಜಾಪ್ರಭುತ್ವಕ್ಕೆ ಮಾರಕ, ಪ್ರಜಾಪ್ರಭುತ್ವದ ಕೊಲೆ ಎಂದು ಕಿಡಿಕಾರಿದರು.

Speaker

ಪ್ರಜಾಪ್ರಭುತ್ವ ಯಶಸ್ವಿಯಾಗಬೇಕಾದರೆ ನಾಲ್ಕು ಅಂಗಗಳು ಮುಖ್ಯ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಹಾಗೂ ಪತ್ರಿಕಾ ರಂಗ ಮುಖ್ಯ ಪಾತ್ರವಹಿಸುತ್ತದೆ. ಪ್ರತಿ ನಿಯಮಾವಳಿಗಳನ್ನ ನಾವೇ ಮಾಡಿಕೊಂಡಿರೋದು. ನಿಯಮಾವಳಿಗಳು ದೇವಲೋಕದಿಂದ ಇಳಿದು ಬಂದಿಲ್ಲ. ನಿಯಮಗಳ ಬಗ್ಗೆ ಬಿಜೆಪಿಯವರಿಗೇ ನಂಬಿಕೆ ಇಲ್ಲ. ಸರ್ಕಾರದ ಹುಳುಕು, ವೈಫಲ್ಯಗಳು ಗೊತ್ತಾಗುತ್ತದೆ ಎಂದು ಮಾಧ್ಯಮದವರನ್ನ ದೂರ ಇಟ್ಟಿದ್ದಾರೆ ಎಂದು ಆರೋಪಿಸಿದರು.

CM BSY BLG a

ವಿರೋಧ ಪಕ್ಷದ ನಾಯಕರು ಮಾತಾನಾಡುವಾಗ ತಡೆಯೋದು ಸರಿಯಲ್ಲ. ನಾನು ಯಾವತ್ತೂ ಈ ರೀತಿಯ ಸ್ಪೀಕರ್ ನೋಡಿಲ್ಲ. ಮುಂದೆ ಇದೇ ರೀತಿ ನಡೆದರೆ ವಿಧಾನಸಭೆ ನಡೆಯಲು ಬಿಡುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಜೊತೆಗೆ ಈ ಸಲ ಒಪ್ಪಿಕೊಂಡಿದ್ದೇನೆ. ಆದರೆ ಮೋದಿ, ಅಮಿತ್ ಶಾ ಅವರಿಗೆ ಪ್ರಜಾಪ್ರಭುತ್ವ ವ್ಯವಸ್ಥೆ ಮೇಲೆ ನಂಬಿಕೆ ಇಲ್ಲ. ಆರ್‍ಎಸ್‍ಎಸ್ ಅವರಿಗೆ ನಂಬಿಕೆ ಬರೋಕೆ ಸಾಧ್ಯವಿಲ್ಲ ಎಂದು ಗುಡುಗಿದರು.

Param pa suicide 5 copy

ಹಾಗೆಯೆ ಪರಮೇಶ್ವರ್ ಪಿ.ಎ. ಆತ್ಮಹತ್ಯೆ ಪ್ರಕರಣದ ಬಗ್ಗೆ ಮಾತನಾಡಿ, ರಮೇಶ್ ಸಾವು ನಿಗೂಢವಾಗಿ ಕಾಣಿಸುತ್ತದೆ. ಡೆತ್ ನೋಟ್‍ನಲ್ಲಿ ನನಗೆ ಕಿರುಕುಳ ಕೊಟ್ಟಿದ್ದಾರೆಂದು ಉಲ್ಲೇಖಿಸಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆ ಮಾಡಿಕೊಂಡಿರುವುದರಿಂದ ಪ್ರಕರಣದ ಸೂಕ್ತ ತನಿಖೆಯಾಗಬೇಕು. ಈ ಸಂಬಂಧ ಯಾವ ಏಜೆನ್ಸಿ ತನಿಖೆ ಮಾಡಬೇಕು ಅನ್ನೋದು ಸರ್ಕಾರಕ್ಕೆ ಬಿಟ್ಟಿದ್ದು. ರಮೇಶ್ ಸಾವಿಗೆ ಕಾರಣರಾದ ತಪ್ಪಿತಸ್ಥರಿಗೆ ಶಿಕ್ಷೆಯಾಗಬೇಕು ಎಂದು ಆಗ್ರಹಿಸಿದರು.

TAGGED:Central GovernmentChikkamagalurumodiPublic TVsiddaramaiahState Governmentಕೇಂದ್ರ ಸರ್ಕಾರಚಿಕ್ಕಮಗಳೂರುಪಬ್ಲಿಕ್ ಟಿವಿಮೋದಿರಾಜ್ಯ ಸರ್ಕಾರಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

Pralhad Joshi 1
Latest

ನವೀಕರಿಸಬಹುದಾದ ಇಂಧನದಲ್ಲಿ ಭಾರತ 3ನೇ ಅತಿದೊಡ್ಡ ರಾಷ್ಟ್ರ: ಪ್ರಹ್ಲಾದ್ ಜೋಶಿ

Public TV
By Public TV
7 minutes ago
Droupadi Murmu Ram Temple
Ayodhya Ram Mandir

ಅಯೋಧ್ಯೆ ರಾಮಮಂದಿರಕ್ಕೆ ದ್ರೌಪದಿ ಮುರ್ಮು ಭೇಟಿ – 150 ಕೆಜಿ ತೂಕದ ಚಿನ್ನ ಲೇಪಿತ ಲೋಹದ ತಟ್ಟೆ ಪ್ರತಿಷ್ಠಾಪನೆ

Public TV
By Public TV
7 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
8 minutes ago
Yatnal
Davanagere

ದಾವಣಗೆರೆ ಬಿಜೆಪಿ ಟಿಕೆಟ್ ಬದಲಾದ್ರೂ ಆಶ್ಚರ್ಯ ಇಲ್ಲ: ಯತ್ನಾಳ್‌ ಹೊಸ ಬಾಂಬ್‌

Public TV
By Public TV
29 minutes ago
Mantralayam Sri Raghavendra Swamy Matha
Districts

ಮಂತ್ರಾಲಯದಲ್ಲಿ ಯುಗಾದಿ ಸಂಭ್ರಮ – ಮೂಲ ರಾಮದೇವರಿಗೆ ತೈಲ ಅಭ್ಯಂಗನ

Public TV
By Public TV
44 minutes ago
former corporation member who had been absconding for 7 years without appearing in court arrested
Court

ಧಾರವಾಡ | ಕೋರ್ಟ್‌ಗೆ ಹಾಜರಾಗದೇ 7 ವರ್ಷ ತಲೆಮರೆಸಿಕೊಂಡಿದ್ದ ಪಾಲಿಕೆ ಮಾಜಿ ಸದಸ್ಯ ಅರೆಸ್ಟ್‌

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?