ಬೆಂಗಳೂರು: ಸರ್ಕಾರಿ ಅಧಿಕಾರಿಗಳು ಭ್ರಷ್ಟಾಚಾರ ಮತ್ತು ಧರ್ಮ ಕಲಹದಲ್ಲಿ ತೊಡಗಿಕೊಳ್ಳಬಾರದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅಧಿಕಾರಿಗಳಿಗೆ ಕಿವಿಮಾತು ಹೇಳಿದ್ದಾರೆ.
ವಿಧಾನಸೌಧದಲ್ಲಿ ನಡೆದ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅಧಿಕಾರಿಗೆ ಪ್ರಾಮಾಣಿಕತೆಯ ಪಾಠ ಮಾಡಿದ್ದಾರೆ. ಐಎಎಸ್ ಹಾಗೂ ಕೆಎಎಸ್ ಅಧಿಕಾರಿಗಳು ಪ್ರಜಾಪ್ರಭುತ್ವದ ಕಣ್ಣು ಮತ್ತು ಕಿವಿ ಇದ್ದಂತೆ. ಸಮಾಜವನ್ನ ಬದಲಾವಣೆ ಮತ್ತು ಸುಧಾರಣೆ ಮಾಡುವ ಜವಾಬ್ದಾರಿ ನಮ್ಮ ಮೇಲೆ ಇದೆ. ನಮ್ಮ ಜವಾಬ್ದಾರಿಗಳನ್ನು ಅರ್ಥ ಮಾಡಿಕೊಂಡು ಕೆಲಸ ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದ್ದಾರೆ. ಇದನ್ನೂ ಓದಿ: ದೇಶದಲ್ಲಿ ಬಾಂಬ್ ಸ್ಫೋಟದ ಬೆದರಿಕೆ, ಪ್ರಧಾನಿ ಕೊಲ್ಲುವುದಾಗಿ ಕಾಮೆಂಟ್: ಆರೋಪಿಗಾಗಿ ತೀವ್ರ ಶೋಧ
- Advertisement 2
- Advertisement 3
ಜನರು ಮತ್ತು ಸರ್ಕಾರದ ನಡುವೆ ಸೇತುವೆ ಆಗಿ ಕೆಲಸ ಮಾಡುವವರು ಅಧಿಕಾರಿಗಳು. ಅಧಿಕಾರಿಗಳು ಒಳ್ಳೆಯ ಕೆಲಸ ಮಾಡಬೇಕು. ಜನಪರ ಕೆಲಸ ಮಾಡಿ ಸರ್ಕಾರಕ್ಕೂ ಒಳ್ಳೆಯ ಹೆಸರು ಬರಲಿದೆ. ಅನೇಕ ಜನ ಒಳ್ಳೆಯ ಅಧಿಕಾರಿಗಳು ಇದ್ದಾರೆ. ಆದರೆ ಕೆಲವರು ಸರ್ಕಾರದ ನಿರೀಕ್ಷೆಯಂತೆ ಕೆಲಸ ಮಾಡದೇ ಇರುವವರು ಇದ್ದಾರೆ. ಅಂತಹ ಕೆಲವು ಅಧಿಕಾರಿಗಳ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
- Advertisement 4
ಸಂವಿಧಾನವನ್ನು ರಕ್ಷಣೆ ಮಾಡುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸಂವಿಧಾನದ ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಸಂವಿಧಾನದ ಧ್ಯೇಯೋದ್ದೇಶ ಅರ್ಥ ಮಾಡಿಕೊಂಡು ಅಧಿಕಾರಿಗಳು ಕೆಲಸ ಮಾಡಬೇಕು ಎಂದು ಅವರು ಹೇಳಿದ್ದಾರೆ.
ಬಡವರಿಗಾಗಿ ನಾವು 5 ಗ್ಯಾರಂಟಿ ಜಾರಿ ಘೋಷಣೆ ಮಾಡಿದ್ದೇವೆ. ಈಗಾಗಲೇ 3 ಗ್ಯಾರಂಟಿಗಳು ಜಾರಿ ಆಗಿವೆ. 4 ನೇ ಗ್ಯಾರಂಟಿ ಆ.20ಕ್ಕೆ ಜಾರಿ ಆಗಲಿದೆ. 5ನೇ ಗ್ಯಾರಂಟಿ ಡಿಸೆಂಬರ್ ಅಥವಾ ಜನವರಿಯಲ್ಲಿ ಅನುಷ್ಠಾನ ಆಗಲಿದೆ. ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಬೇಕಾದರೆ ಅಧಿಕಾರಿಗಳ ಪಾತ್ರ ಮುಖ್ಯ ಎಂದಿದ್ದಾರೆ.
ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್, ಸಚಿವ ಕೃಷ್ಣಭೈರೇಗೌಡ ಸೇರಿ ಸಂಘದ ಪದಾಧಿಕಾರಿಗಳು, ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು. ಕೆಎಎಸ್ ಅಧಿಕಾರಿಗಳನ್ನ ಸಿಇಒ, ಡಿಸಿ ಪೋಸ್ಟ್ಗೆ ನೇಮಕ ಮಾಡಬೇಕು. ಕೆಎಎಸ್ ಅಧಿಕಾರಿಗಳನ್ನು ಐಎಎಸ್ ಆಗಿ ಪದೋನ್ನತಿ ಮಾಡುವ ಪ್ರಮಾಣವನ್ನ 50% ಹೆಚ್ಚಳ ಮಾಡಬೇಕು ಎಂದು ಸಿಎಂಗೆ ಕೆಎಎಸ್ ಅಧಿಕಾರಿಗಳ ಸಂಘದ ವತಿಯಿಂದ ಮನವಿ ಮಾಡಲಾಯಿತು. ಇದನ್ನೂ ಓದಿ: ಹರಿಶ್ಚಂದ್ರ ಘಾಟ್ನಲ್ಲಿ ನೆರವೇರಿದ ಸ್ಪಂದನಾ ಅಂತ್ಯಸಂಸ್ಕಾರ
Web Stories