Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಮತಕ್ಕಾಗಿ ಮೇಕೆದಾಟು ಯೋಜನೆ ಮಾಡ್ತಿಲ್ಲ, ದಾಖಲೆ ಇದ್ರೆ ಬಿಡುಗಡೆ ಮಾಡಿ: ಬಿಜೆಪಿಗೆ ಸಿದ್ದು ಸವಾಲು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chamarajanagar | ಮತಕ್ಕಾಗಿ ಮೇಕೆದಾಟು ಯೋಜನೆ ಮಾಡ್ತಿಲ್ಲ, ದಾಖಲೆ ಇದ್ರೆ ಬಿಡುಗಡೆ ಮಾಡಿ: ಬಿಜೆಪಿಗೆ ಸಿದ್ದು ಸವಾಲು

Chamarajanagar

ಮತಕ್ಕಾಗಿ ಮೇಕೆದಾಟು ಯೋಜನೆ ಮಾಡ್ತಿಲ್ಲ, ದಾಖಲೆ ಇದ್ರೆ ಬಿಡುಗಡೆ ಮಾಡಿ: ಬಿಜೆಪಿಗೆ ಸಿದ್ದು ಸವಾಲು

Public TV
Last updated: January 2, 2022 9:55 pm
Public TV
Share
3 Min Read
Siddaramaiah Chamarajanagar
SHARE

ಚಾಮರಾಜನಗರ: ತಮಿಳುನಾಡಿನ ಕೆಲವರ ಮಾತು ಕೇಳಿಕೊಂಡು, ಮತ ರಾಜಕೀಯಕ್ಕಾಗಿ ಬಿಜೆಪಿ ಮೇಕೆದಾಟು ಯೋಜನೆ ಜಾರಿ ಮಾಡುತ್ತಿಲ್ಲ ಎಂದು ವಿಪಕ್ಷ ನಾಯಕ ಮತ್ತು ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ಮಾಡಿದರು.

ನಗರದಲ್ಲಿ ಆಯೋಜಿಸಿದ್ದ ಮೇಕೆದಾಟು ಪಾದಯಾತ್ರೆ ಪೂರ್ವಭಾವಿ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ತಮಿಳುನಾಡಿನ ಉಸ್ತುವಾರಿ ಸಿ.ಟಿ.ರವಿಯನ್ನ ಲೂಟಿ ರವಿ ಅಂತಲೂ ಕರೆಯುತ್ತಾರೆ. ಅವನು ಅಣ್ಣಾಮಲೈ ಅವರನ್ನು ಎತ್ತಿಕಟ್ಟಿ ಧರಣಿ ಮಾಡಿಸುತ್ತಿದ್ದಾನೆ. ತಮಿಳುನಾಡಿನವರ ಮಾತು ಕೇಳಿ ಕೇಂದ್ರ ಸರ್ಕಾರ ಅನುಮತಿ ಕೊಡುತ್ತಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.

Siddaramaiah Chamarajanagar 3

ಮೇಕೆದಾಟು ಯೋಜನೆ ಬಗ್ಗೆ ಗೋವಿಂದ್ ಕಾರಜೋಳ ಅವರು ಮಾತನಾಡಿದ್ದು, ಅವರಲ್ಲಿ ದಾಖಲೆ ಇದೆಯಂತೆ ಸ್ಫೋಟ ಮಾಡ್ತಾರಂತೆ. ಅದೇನು ದಾಖಲೆ ಇದೆಯೋ ಬಿಡುಗಡೆ ಮಾಡಲಿ. ಜನರಿಗೆ ಸತ್ಯ ಗೊತ್ತಾಗಲಿ ಎಂದು ಕಾರಜೋಳರಿಗೆ ಸವಾಲು ಎಸೆದರು. ಇದನ್ನೂ ಓದಿ: ಗಡಿಯೊಳಗೆ ನುಸುಳಿದ ಪಾಕ್ ಯೋಧನ ಹತ್ಯೆ – ಶವವನ್ನ ಹಿಂದಕ್ಕೆ ತೆಗೆದುಕೊಳ್ಳಿ ಎಂದ ಭಾರತೀಯ ಸೇನೆ

ನಮ್ಮ ಸರ್ಕಾರದ ವೇಳೆ 5912 ಕೋಟಿ ಡಿಪಿಆರ್ ರೆಡಿ ಮಾಡಿ ಕೇಂದ್ರಕ್ಕೆ ಕಳುಹಿಸಿದ್ದವು. ಡಿ.ಕೆ.ಶಿವಕುಮಾರ್ ಅವರು ನೀರಾವರಿ ಸಚಿವರಾಗಿದ್ದಾಗ 9 ಸಾವಿರಕ್ಕೆ ಹೆಚ್ಚಿಸಿ ಮತ್ತೊಮ್ಮೆ ಡಿಪಿಆರ್ ಕಳುಹಿಸಿದ್ವಿ. ಡಿಪಿಆರ್ ಸಲ್ಲಿಸಿ ಮೂರು ವರ್ಷ ಕಳೆದಿದೆ. ಮೂರು ವರ್ಷ ಕಳೆದರೂ ಏನ್ ಕಡೆದುಕಟ್ಟೆ ಹಾಕುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

Siddaramaiah Chamarajanagar 2

ಅರಣ್ಯ ಇಲಾಖೆಯ ಕ್ಲಿಯರೆನ್ಸ್ ಅಷ್ಟೇ ಸಿಗಬೇಕಿದೆ. ಮಾತಿಗೆ ಮುನ್ನ ಪ್ರಧಾನಿ ಮೋದಿ ನಮ್ಮದು ಡಬಲ್ ಇಂಜಿನ್ ಸರ್ಕಾರ ಅಂತಾರೆ. ಡಬ್ಬಲ್ ಇಂಜಿನ್ ಸರ್ಕಾರ ಇದ್ರೆ ಯಾಕೆ ಯೋಜನೆ ಜಾರಿಗೆ ತರುತ್ತಿಲ್ಲ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.

ವಿಧಾನಸೌಧದಲ್ಲಿ ರಾಕ್ಷಸರು!
ಸರ್ಕಾರದ ಕೆಲಸ ದೇವರ ಕೆಲಸ ಎಂದು ಕೆಂಗಲ್ ಹನುಮಂತಯ್ಯ ಬರೆಸಿದ್ದಾರೆ. ಆದರೆ ಈಗ ಅಲ್ಲಿ ಮನುಷ್ಯರ ರಕ್ತ ಹೀರುವವರು, ರಾಕ್ಷಸರು ಇದ್ದಾರೆ. ಅವರನ್ನೆಲ್ಲಾ ಒದ್ದು ಓಡಿಸಬೇಕಲ್ವಾ, ನಮ್ಮ ಕಾಲದಲ್ಲಿ ನಡೆದ ಕಾಮಗಾರಿಗಳಿಗೆ ಇನ್ನು ಬಿಲ್ ಕೊಟ್ಟಿಲ್ಲ ಎಂದು ಕಿಡಿಕಾರಿದರು.

Siddaramaiah Chamarajanagar 1

ವಿಜಯೇಂದ್ರಗೂ ಸೋಮಣ್ಣಗೂ ಆಗಲ್ಲ!
ಬಿ.ವೈ.ವಿಜಯೇಂದ್ರಗೂ, ಸಚಿವ ವಿ.ಸೋಮಣ್ಣ ಅವರಿಗೂ ಆಗ್ತಿರಲಿಲ್ಲ. ಅದಕ್ಕಾಗಿಯೇ ಸೋಮಣ್ಣ ಅವರು ಖಾತೆಗೆ ಒಂದು ರೂಪಾಯಿ ಕೊಟ್ಟಿರಲಿಲ್ಲ. ಹೀಗಾಗಿಯೇ ವಸತಿ ಯೋಜನೆಗಳು ಕುಂಠಿತಗೊಂಡಿವೆ. ನಾನು ಈ ಬಗ್ಗೆ ಕೇಳಿದ್ರೆ ಸೋಮಣ್ಣ ಅವರು ಅಸಹಾಯಕತೆ ತೋಡಿಕೊಳ್ತಾರೆ. ಹೀಗಾಗಿ ಬಿಜೆಪಿಗೆ ಯಾವುದೇ ಕಾರಣಕ್ಕೂ ಮತ ಹಾಕಬಾರದು. ಗಡಿಜಿಲ್ಲೆಯಿಂದಲೇ ಕಾಂಗ್ರೆಸ್ ನ ದಿಗ್ವಿಜಯ ಯಾತ್ರೆ ಆರಂಭವಾಗಬೇಕು ಎಂದು ಕರೆಕೊಟ್ಟರು.

ಸಿಎಂ ಸ್ಥಾನ ಗಟ್ಟಿ!
ಇಲ್ಲಿಗೆ ಬಂದರೆ ಅಧಿಕಾರ ಹೋಗುತ್ತೆ ಎಂಬ ಮೂಢನಂಬಿಕೆ ಇತ್ತು. ಸಮಾಜವಾದ ಪಾಲಿಸುತ್ತಿದ್ದ ಜೆ.ಎಚ್.ಪಟೇಲ್ ಅವರೂ ಈ ಮೌಢ್ಯ ನಂಬಿ ಚಾಮರಾಜನಗರಕ್ಕೆ ಬರಲಿಲ್ಲ. ಆದರೆ ನಾನು 10 ರಿಂದ 12 ಬಾರಿ ಬಂದಿದ್ದೆ. ಇಲ್ಲಿಗೆ ಬಂದ ನಂತರವೇ ನನ್ನ ಸಿಎಂ ಸ್ಥಾನ ಗಟ್ಟಿಯಾಯಿತು. ಚಾಮರಾಜನಗರ ಜಿಲ್ಲೆಯ ಸಮಗ್ರ ಅಭಿವೃದ್ಧಿ ಸಾವಿರಾರು ಕೋಟಿ ರೂ. ಅನುದಾನ ಕೊಟ್ಟಿದ್ದೇನೆ. ನನ್ನ ಕಾರ್ಯಕ್ರಮಗಳ ಕಾಮಗಾರಿಯನ್ನೇ ಈಗಲೂ ಮಾಡುತ್ತಿದ್ದಾರೆ, ಉದ್ಘಾಟಿಸುತ್ತಿದ್ದಾರೆ ಎಂದು ವ್ಯಂಗ್ಯ ಮಾಡಿದರು. ಇದನ್ನೂ ಓದಿ: ಜ.14ಕ್ಕೆ ಪಂಚಮಸಾಲಿ ಹೋರಾಟ ವರ್ಷಾಚರಣೆ: ಜಯಮೃತ್ಯುಂಜಯ ಸ್ವಾಮಿ

ಆಕ್ಸಿಜನ್ ಕೊರತೆಯಿಂದ ಮೂರೇ ಜನ ಎಂದು ಅಂದಿನ ಆರೋಗ್ಯ ಸಚಿವ ಡಾ.ಸುಧಾಕರ್, ಜಿಲ್ಲಾ ಸಚಿವ ಸುರೇಶ್ ಕುಮಾರ್ ರಾಜ್ಯದ ಜನರಿಗೆ ಸುಳ್ಳು ಹೇಳಿದ್ದರು. ಆದರೆ 36 ಜನ ಸತ್ತಿದ್ದಾರೆ ಎಂದು ಅಧಿಕಾರಿಗಳೇ ನಮ್ಮ ಮುಂದೆ ಒಪ್ಪಿಕೊಂಡಿದ್ದರು. 36 ಜನರ ಸಾವಿಗೆ ಬಿಜೆಪಿ ಸರ್ಕಾರವೇ ನೇರ ಹೊಣೆ. ಸುಧಾಕರ್ ಅವರು ಸುಳ್ಳು ಹೇಳಿ ಜನರನ್ನು ದಾರಿ ತಪ್ಪಿಸಿ ಜನದ್ರೋಹ ಕೆಲಸ ಮಾಡಿದ್ದಾರೆ ಎಂದು ಕಿಡಿಕಾರಿದರು.

Chamarajanagar

ಮನೆಗೊಂದು ಆಳು ಬನ್ನಿ
ನಿಮಗೆ ನೀರು ಬೇಕು ಅಂದ್ರೆ ಮನೆಗೊಂದು ಆಳಂತೆ ಬರಬೇಕು. ಮೇಕೆದಾಟು ಯೋಜನೆಯಿಂದ ಚಾಮರಾಜನಗರಕ್ಕೂ ಅನುಕೂಲ, ಕನಿಷ್ಠ 10 ಸಾವಿರ ಜನರು ಬರಬೇಕು ಎಲ್ಲ ವ್ಯವಸ್ಥೆಯನ್ನು ಡಿಕೆಶಿ ಮಾಡಿದ್ದಾರೆ ಎಂದು ಆಹ್ವಾನವಿತ್ತರು.

TAGGED:BY VijayendrachamarajanagarMekedadattu Projectsiddaramaiahಚಾಮರಾಜನಗರಬಿ.ವೈ.ವಿಜಯೇಂದ್ರಮೇಕೆದಾಟು ಯೋಜನೆಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Rishab Shetty
ಕೊಲ್ಲೂರು ಮೂಕಾಂಬಿಕಾ ದೇವಿ ದರ್ಶನ ಪಡೆದ ರಿಷಬ್ ದಂಪತಿ
Cinema Districts Karnataka Latest Sandalwood Top Stories
Rachita Ram
ಪ್ರೇಮಿಗಳ ದಿನದಂದೆ I Love You ಅಂತ ರಚ್ಚು ಪ್ರಪೋಸ್‌ – ಹೇಳಿದ್ದು ಯಾರಿಗೆ?
Bengaluru City Cinema Latest Main Post Sandalwood
ranveer singh 2
ಬಿಷ್ಣೋಯ್ ಗ್ಯಾಂಗ್‌ನಿಂದ ಮತ್ತೆ ರಣವೀರ್ ಸಿಂಗ್‌ಗೆ ಬೆದರಿಕೆ
Cinema Latest Top Stories
Joe Simon
ಫಿಲ್ಮ್‌ ಚೇಂಬರ್‌ನಲ್ಲೇ ಹೃದಯಾಘಾತ – ಸಾಹಸಸಿಂಹ ಚಿತ್ರದ ನಿರ್ದೇಶಕ ಜೊ ಸೈಮನ್ ನಿಧನ
Cinema Latest Main Post

You Might Also Like

Chitradurga Student Suicide In Residential School
Chitradurga

ಚಿತ್ರದುರ್ಗ | ವಸತಿ ಶಾಲೆಯ 3ನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆ

Public TV
By Public TV
8 minutes ago
ULLA SHIVAMOGGA
Crime

ಶಿವಮೊಗ್ಗದಲ್ಲಿ ಅವೈಜ್ಞಾನಿಕ ಹಂಪ್‌ಗೆ ಯುವಕ ಬಲಿ

Public TV
By Public TV
18 minutes ago
Solar eclipse 1
Latest

ಮಂಗಳವಾರ ವರ್ಷದ ಮೊದಲ ʻಕಂಕಣ ಸೂರ್ಯಗ್ರಹಣʼ – ಎಲ್ಲೆಲ್ಲಿ ಗೋಚರ?

Public TV
By Public TV
19 minutes ago
Kannadiga Chandan Shot Dead In Canada
Bengaluru City

ಕೆನಡಾದಲ್ಲಿ ಕನ್ನಡಿಗನಿಗೆ ಗುಂಡಿಟ್ಟು ಹತ್ಯೆ – ಸ್ವಗ್ರಾಮದಲ್ಲಿ ಅಂತ್ಯಕ್ರಿಯೆಗೆ ಸಿದ್ಧತೆ

Public TV
By Public TV
44 minutes ago
belagavi money robbery
Belgaum

400 ಕೋಟಿ ದರೋಡೆ ಕಟ್ಟುಕಥೆ – ʻಮಹಾʼ ಸರ್ಕಾರಕ್ಕೆ ಎಸ್‌ಐಟಿ ವರದಿ

Public TV
By Public TV
1 hour ago
AI Impact Summit 2
Latest

ಇಂದಿನಿಂದ AI ಇಂಪ್ಯಾಕ್ಟ್ ಶೃಂಗಸಭೆ – ಭಾರತದಲ್ಲಿ ರಸ್ತೆ ಸುರಕ್ಷತೆಗೆ ಎಐ ಬಳಕೆ ಕುರಿತು ಚರ್ಚೆ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?