Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ: ಸಿದ್ದರಾಮಯ್ಯ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ: ಸಿದ್ದರಾಮಯ್ಯ

Districts

ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ: ಸಿದ್ದರಾಮಯ್ಯ

Public TV
Last updated: November 21, 2021 5:16 pm
Public TV
Share
3 Min Read
SIDDU 5
SHARE

– ಜನ ಶಕ್ತಿ ಮುಂದೆ ರಾಜ ಶಕ್ತಿ ಏನು ಮಾಡಲು ಆಗಲ್ಲ

ತುಮಕೂರು: ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ ಎಂದು ವಿಪಕ್ಷ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಟೀಕಿಸಿದರು.

ಬಿಜೆಪಿ ಸರ್ಕಾರ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ಸರ್ಕಾರದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಇಲ್ಲ. ಇವತ್ತು ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಇದೆ. ರೈತರು ಒಂದು ವರ್ಷದಿಂದ ಹೋರಾಟ ಮಾಡುತ್ತಿದ್ದಾರೆ. 700 ಜನ ರೈತರು ಪ್ರಾಣ ತ್ಯಾಗ ಮಾಡಿದ್ದಾರೆ. ಈಗ ಪ್ರಧಾನಿ ಮೋದಿ ಅವರಿಗೆ ಜ್ಞಾನೋದಯ ಆಗಿದೆ. ಅದಕ್ಕೆ ಕೃಷಿ ಕಾಯ್ದೆ ವಾಪಸ್ ಪಡೆಯುವ ಬಗ್ಗೆ ಹೇಳಿದ್ದಾರೆ. ಮುಂಚಿತವಾಗಿ ತಗೊಂಡ್ರೆ ರೈತರ ಪ್ರಾಣ ಉಳಿಯುತಿತ್ತು ಎಂದು ಆರೋಪಿಸಿದರು.

FARMERS PROTEST 4

ಪ್ರಾಣ ಹೋಗಲು ನೇರವಾಗಿ ಮೋದಿ ಮತ್ತು ಅವರ ಸರ್ಕಾರವೇ ಕಾರಣ. ರೈತ ಹೋರಾಟಕ್ಕೆ ಐತಿಹಾಸಿಕ ಜಯ ಸಿಕ್ಕಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಆಕ್ರೋಶಕ್ಕೆ ಸರ್ಕಾರ ಮಣಿಯಬೇಕಾಗುತ್ತದೆ. ಜನ ಶಕ್ತಿ ಮುಂದೆ ರಾಜ ಶಕ್ತಿ ಏನೂ ಮಾಡಲು ಆಗಲ್ಲ. ಜನ ಶಕ್ತಿ ಅಂಕುಶದಲ್ಲಿ ರಾಜ ಶಕ್ತಿ ಇರಬೇಕು. ರೈತರಿಗೆ ದೊಡ್ಡ ನಮಸ್ಕಾರ, ಮೃತ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಕೊಡಬೇಕು. ಮೋದಿ ಜೀ ನೀವು ರೈತರ ವಿರುದ್ಧ ಇರಲು ಸಾಧ್ಯವಿಲ್ಲ. ಇದನ್ನು ಅನ್ನದಾತರು ಸಹಿಸಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:  70 ವರ್ಷದ ದೇಶದ ಸಾಧನೆಯನ್ನು ಪ್ರಶ್ನಿಸುತ್ತಿರುವುದು ದುರದೃಷ್ಟಕರ: ಭೂಪೇಶ್ ಬಘೇಲ್

bommai modi1

ನರೇಂದ್ರ ಮೋದಿ ಜೀ, ಅಮಿತ್ ಶಾ ಜೀ, ಯಡಿಯೂರಪ್ಪ ಜೀ, ನಿಮಗೆ ನಾಚಿಕೆ ಆಗಲ್ವಾ. ಸಿಲಿಂಡರ್ ಬೆಲೆ ಜಾಸ್ತಿ ಆದಾಗ ಶೊಭಾ ಕರಂದ್ಲಾಜೆ ಅವರು ತಲೆ ಮೇಲೆ ಹೊತ್ತು ಹೋರಾಟ ಮಾಡಿದ್ರು. ಈಗ ಶೋಭಾ ಜೀ ಆಪ್ ಕಂಹಾ ಹೈ(ಎಲ್ಲಿದ್ದೀರಾ ನೀವು?) ಎಂದು ಹಾಸ್ಯ ಮಾಡಿದರು.

ಮೋದಿ ಅವರು ಒಳ್ಳೆ ದಿನ ಬರುತ್ತೆ ಅಂದರು. ಎಲ್ಲಿ ಮೋದಿ ಜೀ ಒಳ್ಳೆ ದಿನ. ಬಿಜೆಪಿ ಜನ ಸ್ವರಾಜ್ ಎಂದು ಶಂಖ, ಕೊಂಬು ಊದಿಕೊಂಡು ಹೊರಟಿದ್ದಾರೆ. ಶಂಖಕ್ಕೆ ಕೊಂಬುಗೆ ಮರ್ಯಾದೆ ಇದೆ. ಅದರ ಮರ್ಯಾದೆ ತೆಗೆಯಲು ಇವರು ಹೊರಟಿದ್ದಾರೆ. ಬಿಜೆಪಿಯವರಿಗೆ ಮಾನ ಮರ್ಯಾದೆ ಏನೂ ಇಲ್ಲ, ಲಜ್ಜೆಗೆಟ್ಟವರು. ಗ್ರಾಮ ಸ್ವರಾಜ್ ಯಾತ್ರೆ ಮಾಡಲು ಹೊರಟಿದ್ದಾರೆ. ಅಧಿಕಾರ ವಿಕೇಂದ್ರೀಕರಣಕ್ಕೆ ವಿರೋಧ ಬಿಜೆಪಿ ಅಂಥವರು ಗ್ರಾಮ ಸ್ವರಾಜ್ ಮಾಡಲು ಹೊರಟಿದ್ದಾರೆ ಎಂದು ವ್ಯಂಗ್ಯವಾಡಿದರು.

AMIT MODI

ಸಚಿವ ಈಶ್ವರಪ್ಪ ಒಬ್ಬ ಪೆದ್ದ. ಜನರಿಗೆ ನೀವು ಮತ ಕೊಟ್ಟರೆ ನಾವು ಗ್ಯಾರಂಟಿ ಕೊಡ್ತೀವಿ ಅಂದಿದ್ದಾರೆ. ಜನರ ದುಡ್ಡು ಜನರಿಗೆ ಕೊಡಲು ಈ ರೀತಿ ಹೇಳುತ್ತಾರೆ. ಕಳೆದ ಬಾರಿ ಪರಿಷತ್ ನಲ್ಲಿ ತುಮಕೂರಿನಲ್ಲಿ ಸೋತಿದ್ದಿವಿ. ಆದರೆ ಈ ಬಾರಿ ಗೆಲ್ತೀವಿ, ಆರ್. ರಾಜೇಂದ್ರ ಅವರು ಇಲ್ಲಿ ಅಭ್ಯರ್ಥಿಯಾಗಿದ್ದಾರೆ. ನೂರಕ್ಕೆ ನೂರು ಈ ಬಾರಿ ರಾಜೇಂದ್ರ ಗೆಲ್ಲುತ್ತಾರೆ. ಮಳೆಯಿಂದಾಗಿ 1 ಲಕ್ಷ ಹೆಕ್ಟೆರ್ ಪ್ರದೇಶದಲ್ಲಿ ಬೆಳೆ ಹಾನಿಯಾಗಿದೆ. ಆ ಸಿಎಂ ಬೊಮ್ಮಾಯಿ ಚಲನಚಿತ್ರ ಬಿಡುಗಡೆ ಮಾಡೋದ್ರಲ್ಲಿ ಬ್ಯುಸಿಯಾಗಿದ್ದಾರೆ. ರೈತರು ಕಣ್ಣೀರಲ್ಲಿ ಕೈ ತೊಳೆಯುತ್ತಿದ್ದಾರೆ. ಬೊಮ್ಮಾಯಿ ಅವರಿಗೆ ರೈತರ ಬಗ್ಗೆ ಕನಿಕರ ಇಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ನಡುಗಡ್ಡೆಯಲ್ಲಿ ಸಿಲುಕಿದ 500 ದನಕರುಗಳು – ಹಸುಗಳನ್ನು ಕಾಪಾಡುವಂತೆ ಡಿಸಿಗೆ ಮನವಿ

BJP - CONGRESS

5 ಟ್ರಿಲಿಯನ್ ಆದಾಯ ಮಾಡ್ತೀನಿ ಅಂದರು. ಇನ್ನೂ ಮೋದಿ ಅವರ ಹೆಸರಲ್ಲಿ ಬದುಕುತ್ತಿದ್ದಾರೆ. ಬಿಜೆಪಿಗೆ ಅವರಿಗೆ ಧಮ್ ಇಲ್ಲ. ಹಾಗಾಗಿ ಮೋದಿ ಅವರ ಹೆಸರಲ್ಲೇ ಬದುಕುತಿದ್ದಾರೆ. ಕಾಂಗ್ರೆಸ್ ಸರ್ಕಾರ 10 ಪರ್ಸೆಂಟ್ ಸರ್ಕಾರ ಎಂದು ಮೋದಿ ಹೇಳಿದ್ರು. ಈಗ ಗುತ್ತಿಗೆದಾರರ ಅಧ್ಯಕ್ಷ ಕೆಂಪಣ್ಣ ಮೋದಿ ಅವರಿಗೆ ಪತ್ರ ಬರೆದು ರಾಜ್ಯ ಸರ್ಕಾರದ ಶೇಕಡಾವಾರು ತಿಳಿಸಿದ್ದಾರೆ. ಬೊಮ್ಮಾಯಿ ನಿಮಗೆ ಮಾನ ಮರ್ಯಾದೆ ಇದ್ರೆ, ಶೇ.30-40 ಲಂಚ ಪಡೀತಿದ್ದಾರೆ. ಇಂಥಹ ಸರ್ಕಾರ ಕಿತ್ತೊಗೆಯಬೇಕು. ಭ್ರಷ್ಟಾಚಾರ, ಕಪಟತನ ಬಯಲಿಗೆ ತಂದು ಅವರನ್ನು ಬೆತ್ತಲೆ ಮಾಡುವ ಕೆಲಸ ಮಾಡುತ್ತೇವೆ. ರೈತರಿಗೆ ಪರಿಹಾರ ಕೊಡಬೇಕು ಎಂದು ಒತ್ತಾಯ ಮಾಡುತ್ತೇವೆ ಎಂದು ಭರವಸೆಯನ್ನು ನೀಡಿದರು.

TAGGED:BJP governmentCM Basavaraja Bommainarendra modisiddaramaiahtumkurತುಮಕೂರುನರೇಂದ್ರ ಮೋದಿಬಿಜೆಪಿ ಸರ್ಕಾರಸಿಎಂ ಬಸವರಾಜ ಬೊಮ್ಮಾಯಿಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Keerthy Suresh
ಕೀರ್ತಿ ಇಟ್ಟ ಗುರಿಗೆ ಫೋಟೋಗ್ರಾಫರ್ ಕಣ್ಣೇ ಹೋಯ್ತು..!
Cinema Latest South cinema
Kerala Court 2
ಖ್ಯಾತ ಬಹುಭಾಷಾ ನಟಿ ಮೇಲೆ ಲೈಂಗಿಕ ದೌರ್ಜನ್ಯ – 6 ಆರೋಪಿಗಳಿಗೆ 20 ವರ್ಷ ಜೈಲು
Cinema Court Latest Main Post National South cinema
Salman Khan Sharukh Khan
ಸಲ್ಮಾನ್-ಶಾರುಖ್ ಫ್ಯಾನ್ಸ್‌ಗೆ ಭರ್ಜರಿ ನ್ಯೂಸ್.. ಶೀಘ್ರದಲ್ಲೇ ಪಠಾಣ್-2!
Bollywood Cinema Latest Top Stories
Rishab Shetty
ಕಾಗದದ ಮೇಲೆ ಹುಟ್ಟಿದ ಪಾತ್ರ ಜೀವ ಪಡೆದಾಗ… `ಕಾಂತಾರ’ದ ಆತ್ಮಕಥೆ ಬಿಚ್ಚಿಟ್ಟ ರಿಷಬ್
Cinema Latest Sandalwood Top Stories

You Might Also Like

In a first since partition Pakistan brings course on Sanskrit to launch program on Bhagavad Gita
Latest

ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿವಿಯಲ್ಲಿ ಸಂಸ್ಕೃತ ಕೋರ್ಸ್

Public TV
By Public TV
22 minutes ago
nice road
Bengaluru City

ನೈಸ್‌ ರಸ್ತೆಯಲ್ಲಿ ಹಿಟ್ ಆ್ಯಂಡ್ ರನ್‌ಗೆ ಇಬ್ಬರು ಮಹಿಳಾ ಕಾರ್ಮಿಕರು ಬಲಿ

Public TV
By Public TV
29 minutes ago
Subhash Guttedar
Bengaluru City

ಆಳಂದದಲ್ಲಿ ಗುತ್ತೇದಾರ್ ಸೂತ್ರದಂತೆ ಮತಗಳವು – ಎಸ್‌ಐಟಿಯಿಂದ ಚಾರ್ಜ್‌ಶೀಟ್‌

Public TV
By Public TV
49 minutes ago
Shivamogga Crime Murder MANJUNATH
Crime

ಪ್ರೇಮಿಗಳಿಗೆ ಸಹಕರಿಸಿದ್ದಕ್ಕೆ ಭದ್ರಾವತಿಯಲ್ಲಿ ಡಬಲ್‌ ಮರ್ಡರ್‌ – ಐವರು ಅರೆಸ್ಟ್‌

Public TV
By Public TV
58 minutes ago
daily horoscope dina bhavishya
Astrology

ದಿನ ಭವಿಷ್ಯ 13-12-2025

Public TV
By Public TV
2 hours ago
Mysuru Palace 2
Districts

ಮೈಸೂರು | ಅರಮನೆಯ ಜಯರಾಮ-ಬಲರಾಮ ದ್ವಾರದ ಗೋಡೆಯಲ್ಲಿ ಭಾರೀ ಬಿರುಕು

Public TV
By Public TV
9 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?