ಬೆಂಗಳೂರು: ಸೆಪ್ಟೆಂಬರ್ 6ರಂದು ಬೆಂಗಳೂರಲ್ಲಿ ಅಹಿಂದ ಸಮಾವೇಶ ನಡೆಯಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ (Siddaramaiah) ಭಾಗಿಯಾಗಲಿದ್ದಾರೆ.
ಹಿಂದುಳಿದ ವರ್ಗಗಳ ಒಕ್ಕೂಟದ ವತಿಯಿಂದ ಈ ಸಮಾವೇಶ ಆಯೋಜಿಸಲಾಗಿದೆ. ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟ ಬಳಿಕ ನಡೆಯುತ್ತಿರುವ ಸಮಾವೇಶ ಇದಾಗಿದ್ದು, ಕಾಂಗ್ರೆಸ್ನ ಅಹಿಂದ ನಾಯಕರಿಗೂ ಸಮಾವೇಶಕ್ಕೆ ಆಹ್ವಾನ ನೀಡಲಾಗಿದೆ. ಈ ಮಧ್ಯೆ ಕೆಲ ನಾಯಕರಿಗೆ ಸಮಾವೇಶಕ್ಕೆ ಹೋಗ್ಬೇಕಾ..? ಬೇಡ್ವಾ..? ಎಂಬ ಗೊಂದಲ ಕೂಡ ಎದುರಾಗಿದೆ.
ಇನ್ನು ಸಮಾವೇಶದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಜಾತಿಗಣತಿ, ಒಳಮೀಸಲಾತಿ ವಿಚಾರಗಳ ಬಗ್ಗೆಯೂ ಅಹಿಂದ ಸಮಾವೇಶದಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ. ಇದನ್ನೂ ಓದಿ: ಉಕ್ರೇನ್ ವಿರುದ್ಧದ ಯುದ್ಧ ಕೊನೆಗೊಳಿಸಲು ಬೇಕಾದ್ದನ್ನು ಮಾಡಲು ಭಾರತ ಸಿದ್ಧ – ಪುಟಿನ್ಗೆ ಮೋದಿ ಸಂದೇಶ
ಸೆಪ್ಟೆಂಬರ್ 6 ನಡೆಯಲಿರುವ ಸಮಾವೇಶದಲ್ಲಿ ಸಿದ್ದರಾಮಯ್ಯ ಅವರ ಸಂದೇಶವೇನು? ಏಕಕಾಲಕ್ಕೆ ಪಕ್ಷ ಮತ್ತು ಸರ್ಕಾರ ಅಚ್ಚರಿಯಾಗುವ ರೀತಿಯಲ್ಲಿ ನಿರ್ಧಾರವನ್ನೇನಾದರೂ ತೆಗೆದುಕೊಳ್ಳಲಿದ್ದಾರಾ? ಎಂಬ ಕುತೂಹಲ ಮೂಡಿದೆ. ಅಷ್ಟೇ ಅಲ್ಲ ಈ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರು, ಡಿಸಿಎಂ ಸೇರಿದಂತೆ ಕಾಂಗ್ರೆಸ್ನ ಪ್ರಮುಖ ನಾಯಕರು ಸಮಾವೇಶಕ್ಕೆ ಹಾಜರಾಗುತ್ತಾರಾ ಎಂಬುದರ ಮೇಲೂ ಎಲ್ಲರ ಕಣ್ಣು ನೆಟ್ಟಿದೆ. ಇದನ್ನೂ ಓದಿ: ‘ಬಳ್ಳಾರಿ ಚಲೋ’ಗೆ ಇಂದು ಚಾಲನೆ; ವಿಜಯೇಂದ್ರ ನೇತೃತ್ವದಲ್ಲಿ ಬಿಜೆಪಿ ಪಾದಯಾತ್ರೆ
