ಆರಂಭದಲ್ಲಿ ಸಿಎಲ್‍ಪಿ ಸಭೆಗೆ ಬರ್ತೀನಿ ಎಂದಿದ್ದ ಸಿಎಂ ಗೈರಾಗುತ್ತಿರೋದು ಯಾಕೆ?

Public TV
1 Min Read
SIDDU HDK

ಬೆಳಗಾವಿ: ಇಂದು ಸಿದ್ದರಾಮಯ್ಯ ನೇತೃತ್ವದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ(ಸಿಎಲ್‍ಪಿ) ನಡೆಯಲಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ ಗೈರಾಗಲಿದ್ದಾರೆ.

ಮೈತ್ರಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಶಾಸಕರ ಅತೃಪ್ತಿ ಹಿನ್ನೆಲೆಯಲ್ಲಿ ಸಿಎಂ ಮುಂದೆಯೇ ನಿಮ್ಮ ಸಮಸ್ಯೆ ಬಗೆಹರಿಸಿಕೊಳ್ಳಿ ಅಂತ ಸಿದ್ದರಾಮಯ್ಯ ಈ ಸಭೆ ಕರೆದಿದ್ದಾರೆ. ಮೊದಲಿಗೆ ಸಭೆಗೆ ಬಂದು ಶಾಸಕರ ಕಷ್ಟ ಕೇಳುತ್ತೇನೆ ಎಂದಿದ್ದ ಸಿಎಂ ಕುಮಾರಸ್ವಾಮಿ ಕೊನೇ ಘಳಿಗೆಯಲ್ಲಿ ಕೈ ಎತ್ತಿದ್ದಾರೆ. ತಿರುಪತಿ ಪ್ರವಾಸದ ಹಿನ್ನೆಲೆಯಲ್ಲಿ ಶಾಸಕಾಂಗ ಪಕ್ಷದ ಸಭೆಗೆ ಬರಲು ಆಗುತ್ತಿಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ತಿಳಿಸಿದ್ದಾರೆ. ಹೀಗಾಗಿ ಬೇರೆ ದಾರಿ ಇಲ್ಲದೇ ಸಿದ್ದರಾಮಯ್ಯ ತಾವೇ ಶಾಸಕರ ಕಷ್ಟ ಆಲಿಸಲು ನಿರ್ಧರಿಸಿದ್ದಾರೆ.

Siddu HDK Meeting 5

ಪ್ರಮುಖವಾಗಿ ಇಂದಿನ ಸಭೆಯಲ್ಲಿ ಸಚಿವ ಸಂಪುಟ ವಿಸ್ತರಣೆ, ಶಾಸಕರ ಕ್ಷೇತ್ರಗಳಲ್ಲಿ ಅನುದಾನದ ಕೊರತೆ, ಕೆಲಸಗಳು ಸ್ಥಗಿತಗೊಂಡಿರುವ ಬಗ್ಗೆ ಚರ್ಚೆ ನಡೆಯಲಿದೆ. ಈ ಮಧ್ಯೆ ಇಂದು ರಾತ್ರಿ ಸರ್ವಪಕ್ಷ ಶಾಸಕರಿಗೆ ಡಿಕೆ ಶಿವಕುಮಾರ್ ಭೋಜನಕೂಟ ಆಯೋಜಿಸಿದ್ದಾರೆ. ಇಷ್ಟು ವರ್ಷ ಬೆಳಗಾವಿ ಅಧಿವೇಶನ ನಡೆದಾಗ ಜಾರಕಿಹೊಳಿ ಸಹೋದರರು ಭೋಜನಕೂಟ ಏರ್ಪಡಿಸುತ್ತಿದ್ದರು. ಆದರೆ ಈ ಬಾರಿ ಡಿಕೆ ಶಿವಕುಮಾರ್ ಆಯೋಜಿಸಿದ್ದು, ಅದಕ್ಕೆ ಜಾರಕಿಹೊಳಿ ಸಹೋದರರು ಹೋಗ್ತಾರಾ ಇಲ್ವಾ ಎನ್ನುವ ಚರ್ಚೆ ಶುರುವಾಗಿದೆ.

MEETING CLP

ತಿರುಪತಿಯಲ್ಲಿ ಸಿಎಂ:
ದೇವೇಗೌಡರ ಕುಟುಂಬ ನಸುಕಿನ ಜಾವವೇ ವೈಕುಂಠ ಏಕಾದಶಿ ಪೂಜೆಯಲ್ಲಿ ಪಾಲ್ಗೊಂಡಿದೆ. ವೈಕುಂಠ ಏಕಾದಶಿಯಂದು ಮೊದಲ ಪೂಜೆ ಮಾಡಿದರೆ ತುಂಬಾ ಒಳ್ಳೆಯದು ಎನ್ನುವ ನಂಬಿಕೆ. ಈ ಹಿನ್ನೆಲೆಯಲ್ಲಿ ತಿರುಪತಿಯಲ್ಲಿ ಬೆಳಗ್ಗೆ 3-30ಕ್ಕೆ ವೈಕುಂಠ ಏಕಾದಶಿಯ ಮೊದಲ ಪೂಜೆಯಲ್ಲಿ ಪಾಲ್ಗೊಂಡಿದ್ದಾರೆ. ಮಕ್ಕಳು, ಸೊಸೆಯಂದಿರು, ಅಳಿಯಂದಿರು, ಮೊಮ್ಮಕ್ಕಳು ತಿಮ್ಮಪ್ಪನ ಸನ್ನಿಧಾನದಲ್ಲಿ ಪೂಜೆ ಸಲ್ಲಿಸಿದ್ದಾರೆ.

ಸೋಮವಾರ ಕಾಂಗ್ರೆಸ್ ಮುಖ್ಯಮಂತ್ರಿಗಳ ಪ್ರಮಾಣವಚನದಲ್ಲಿ ಪಾಲ್ಗೊಂಡಿದ್ದ ಕುಮಾರಸ್ವಾಮಿ ಮತ್ತು ದೇವೇಗೌಡರು ಭೋಪಾಲ್ ನಿಂದ ತಿರುಪತಿಗೆ ಆಗಮಿಸಿದ್ದರು. ಇತ್ತ ಎರಡು ವಿಶೇಷ ವಿಮಾನದಲ್ಲಿ ಕುಟುಂಬದ ಉಳಿದ ಸದಸ್ಯರು ತಿರುಪತಿಗೆ ತೆರಳಿದ್ದರು.

dks hdk congress jds 1

 

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *