ಸಿದ್ದರಾಮಯ್ಯ ಎಲ್ಲೇ ಸ್ಪರ್ಧಿಸಿದರೂ ಸೋಲುತ್ತಾರೆ : ಈಶ್ವರಪ್ಪ

Public TV
1 Min Read
SIDDU ESHWARAPPA

ಶಿವಮೊಗ್ಗ: ಸಿದ್ದರಾಮಯ್ಯ(Siddaramaiah) ವರುಣದಲ್ಲಿ ಅಲ್ಲ, ರಾಜ್ಯದಲ್ಲಿ ಎಲ್ಲಿಯೇ ಸ್ಪರ್ಧೆ ಮಾಡಿದರೂ ಸೋಲುತ್ತಾರೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ(KS Eshwarappa) ಭವಿಷ್ಯ ನುಡಿದಿದ್ದಾರೆ.

ಶಿವಮೊಗ್ಗದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಕಾಲದಲ್ಲಿ ಸಾಕಷ್ಟು ಹಿಂದೂ ಯುವಕರ ಕಗ್ಗೊಲೆ ನಡೆದಿದೆ. ಹಿಂದೂ ಧರ್ಮ ವಿರೋಧಿ ನೀತಿಯೇ ಅವರನ್ನು ಸೋಲಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೆಂಕಿಗೆ ತುಪ್ಪ ಸುರಿಯೋ ಕೆಲಸ ನಾನು ಮಾಡಲ್ಲ: ಚೇತನ್‌ಗೆ ಉಪೇಂದ್ರ ಟಾಂಗ್

ಹಿಂದೂ ಧರ್ಮಕ್ಕೆ ದ್ರೋಹ ಮಾಡಿದ್ದೇನೆ ಎಂಬುದರ ಬಗ್ಗೆ ಸಿದ್ದರಾಮಯ್ಯ ಮೊದಲು ಕ್ಷಮೆ ಕೇಳಲಿ. ಕ್ಷಮೆ ಕೇಳಿದ ಬಳಿಕ ಚುನಾವಣೆಗೆ ಸ್ಪರ್ಧೆ ಮಾಡಲಿ ಎಂದು ಹೇಳಿದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *