Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನ್ನಭಾಗ್ಯದ ಭಾವನಾತ್ಮಕ ನಂಟು ತೆರೆದಿಟ್ಟು ಎಚ್‍ಡಿಕೆಗೆ ದೀರ್ಘ ಪತ್ರ ಬರೆದ ಮಾಜಿ ಸಿಎಂ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | States | Karnataka | ಅನ್ನಭಾಗ್ಯದ ಭಾವನಾತ್ಮಕ ನಂಟು ತೆರೆದಿಟ್ಟು ಎಚ್‍ಡಿಕೆಗೆ ದೀರ್ಘ ಪತ್ರ ಬರೆದ ಮಾಜಿ ಸಿಎಂ

Karnataka

ಅನ್ನಭಾಗ್ಯದ ಭಾವನಾತ್ಮಕ ನಂಟು ತೆರೆದಿಟ್ಟು ಎಚ್‍ಡಿಕೆಗೆ ದೀರ್ಘ ಪತ್ರ ಬರೆದ ಮಾಜಿ ಸಿಎಂ

Public TV
Last updated: July 11, 2018 9:24 pm
Public TV
Share
3 Min Read
SIDDU HDK
SHARE

ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯನವರು ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಕೊಟ್ಟ ಭರವಸೆಯಂತೆ `ನುಡಿದಂತೆ ನಡೆ’ದಿದ್ದಾರೆ.

ಬಜೆಟ್‍ನಲ್ಲಿ ಅನ್ನಭಾಗ್ಯದ ಅಕ್ಕಿಯ ಪ್ರಮಾಣ ಮತ್ತು ತೈಲ ಬೆಲೆ ಏರಿಕೆಗೆ ಕಾಂಗ್ರೆಸ್‍ನಲ್ಲೇ ಅಸಮಾಧಾನ ಕೇಳಿ ಬಂದಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಶಾಸಕಾಂಗ ಸಭೆಯಲ್ಲಿ ಶಾಸಕರು ಸಿದ್ದರಾಮಯ್ಯ ಮತ್ತು ಡಿಸಿಎಂ ಪರಮೇಶ್ವರ್ ಮುಂದೆಯೇ ಅಸಮಾಧಾನವನ್ನು ಪ್ರಕಟಿಸಿದ್ದರು.

ಈ ಸಂದರ್ಭದಲ್ಲಿ ಸಿದ್ದರಾಮಯ್ಯನವರು ಈ ವಿಚಾರವನ್ನು ನಾನು ಸರ್ಕಾರಕ್ಕೆ ಮುಟ್ಟಿಸುತ್ತೇನೆ ಎಂದು ಹೇಳಿದ್ದರು. ಅದರಂತೆ ಈಗ ನೇರವಾಗಿಯೇ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸಿಎಂ ಕುಮಾರಸ್ವಾಮಿ ಅವರಿಗೆ ಪತ್ರ ಬರೆದು ಅನ್ನ ಭಾಗ್ಯದ ಅಕ್ಕಿ ಪ್ರಮಾಣವನ್ನು ಏರಿಸಬೇಕು  ಮತ್ತು ತೈಲ ಬೆಲೆ ಮೇಲಿನ ತೆರಿಗೆಯನ್ನು ಇಳಿಸುವಂತೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಏನಿದೆ?
ಅನ್ನಭಾಗ್ಯ ಎನ್ನುವುದು ನನ್ನ ಪಾಲಿಗೆ ಕೇವಲ ಒಂದು ಸರ್ಕಾರಿ ಯೋಜನೆಯಲ್ಲ. ಅದು ಬಡಜನರ ಹಸಿವು ನೀಗಿಸುವ ಪುಣ್ಯದ ಕೆಲಸ ಎಂದು ನಾನು ನಂಬಿದವನು. ಬಡವರ ಹಸಿವಿನ ಭವಣೆಯನ್ನು ಕಣ್ಣಾರೆ ಕಂಡ ನನ್ನ ಅನುಭವವೇ ಈ ಯೋಜನೆಯ ಪ್ರೇರಣೆ. ಇದರ ಜತೆಗೆ ನನಗೆ ಭಾವನಾತ್ಮಕ ಸಂಬಂಧವಿದೆ.

ನಮ್ಮ ಒಟ್ಟು ಆಯವ್ಯಯ ಪ್ರಮಾಣವನ್ನು ಗಮನಿಸಿದರೆ ಅನ್ನಭಾಗ್ಯ ಯೋಜನೆ ದುಬಾರಿಯೇನಲ್ಲ. ಐದು ವರ್ಷಗಳ ಅವಧಿಯಲ್ಲಿ ಈ ಯೋಜನೆಗೆ ನಮ್ಮ ಸರ್ಕಾರ ನೀಡಿದ್ದ ಒಟ್ಟು ಹಣ 11,564 ಕೋಟಿ ರೂ.. ಇದರ ಫಲಾನುಭವಿಗಳ ಸಂಖ್ಯೆ 3.85 ಕೋಟಿ. ಜಾತಿ, ಧರ್ಮ, ಪ್ರದೇಶದ ಗಡಿಗಳೆನ್ನಲ್ಲ ಮೀರಿ ಅತ್ಯಂತ ಹೆಚ್ಚು ಫಲಾನುಭವಿಗಳನನ್ನು ತಲುಪುತ್ತಿರುವ ಏಕೈಕ ಯೋಜನೆ ಇದು.

ಇಂದು ನಮ್ಮ ನಾಡಿನಲ್ಲಿ ಯಾರೊಬ್ಬರೂ ಹಸಿದು ಮಲಗುವಂತಹ ಅಸಹಾಯಕ ಪರಿಸ್ಥಿತಿ ಇಲ್ಲ. ಆಹಾರ ಹಕ್ಕನ್ನು ನೀಡಿದ ತೃಪ್ತಿ ನನ್ನದು. ಹಸಿವಿನ ವಿರುದ್ಧದ ಹೋರಾಟದಲ್ಲಿ ಕರ್ನಾಟಕ ಗೆದ್ದಿದೆ. ಹಸಿವು ಮುಕ್ತ ಕರ್ನಾಟಕ ಸಾಕಾರಗೊಂಡಿದೆ. ಸತತ ಬರಗಾಲ ಹೊರತಾಗಿಯೂ ರೈತರ ಆತ್ಮಹತ್ಯೆ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಲಸೆ ಕಡಿಮೆಯಾಗಲು ಅನ್ನಭಾಗ್ಯ ಯೋಜನೆ ಮುಖ್ಯ ಕಾರಣವಾಗಿದೆ.

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ನೀಡಲಾಗುತ್ತಿರುವ ಅಕ್ಕಿಯ ಪ್ರಮಾಣವನ್ನು ತಲಾ 7 ಕೆಜಿಯಿಂದ 5 ಕೆಜಿಗೆ ಇಳಿಸುವ ಹಾಗೂ ಪೆಟ್ರೋಲ್, ಡೀಸೆಲ್‌ ದರ ಏರಿಸುವ ತೀರ್ಮಾನದ ಬಗ್ಗೆ ಮರು ಪರಿಶೀಲನೆ ಮಾಡುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಪತ್ರ ಬರೆದಿದ್ದೇನೆ.@INCKarnataka @CMofKarnataka pic.twitter.com/46iT3SlxGz

— Siddaramaiah (@siddaramaiah) July 11, 2018

ನೀವು ಮಂಡಿಸಿದ ಹೊಸ ಬಜೆಟ್‍ನಲ್ಲಿ ಅನ್ನಭಾಗ್ಯದ ಅಕ್ಕಿಯ ಪ್ರಮಾಣವನ್ನು 5 ಕೆಜಿಗೆ ಇಳಿಸಿದ್ದು ತಿಳಿದು ಅಚ್ಚರಿಯಾಯಿತು. ಅನ್ನಭಾಗ್ಯ ಯೋಜನೆಗೆ ನಾವು ಬಜೆಟ್‍ನಲ್ಲಿ ನಿಗದಿಪಡಿಸಿದ್ದ ಸಹಾಯಧನ 2,450 ಕೋಟಿ ರೂ. 2 ಕೆಜಿ ಅಕ್ಕಿ ಕಡಿಮೆ ಮಾಡುವುದರಿಂದ ಹೆಚ್ಚೆಂದರೆ 600-700 ಕೋಟಿ ರೂಪಾಯಿ ಉಳಿತಾಯ ಮಾಡಬಹುದು. ಆದರೆ ಈ ಕಡಿತದಿಂದ ಹೆಚ್ಚಾಗಲಿರುವ ಬಡವರ ಕಷ್ಟದ ಪ್ರಮಾಣವನ್ನು ನೀವು ಊಹಿಸಬಲ್ಲಿರಿ ಎಂದು ನಾನು ನಂಬಿದ್ದೇನೆ. ಈಗಾಗಲೇ ಬೇರೆ ಬೇರೆ ಜಿಲ್ಲೆಗಳ ಜನತೆ ತಮ್ಮ ಅಸಮಾಧಾನ ವ್ಯಕ್ತಪಡಿಸಿರುವುದನ್ನು ನಮ್ಮ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ನನ್ನ ಗಮನಕ್ಕೆ ತಂದಿದ್ದಾರೆ.

ಈ ಹಿನ್ನೆಲೆಯಲ್ಲಿ ಬಡತನದ ರೇಖೆಗಿಂತ ಕೆಳಗಿರುವ ಕುಟುಂಬದ ಪ್ರತಿಯೊಬ್ಬನ ಸದಸ್ಯರಿಗೂ ನೀಡಲಾಗುತ್ತಿದ್ದ ಅಕ್ಕಿಯನ್ನು ತಲಾ 7 ಕೆಜಿ ಯಿಂದ 5 ಕೆಜಿಗೆ ಇಳಿಸುವ ನಿರ್ಧಾರವನ್ನು ಪುನರ್ ಪರಿಶೀಲಿಸಿ ಹಳೆಯ ಪದ್ಧತಿಯನ್ನೇ ಮುಂದುವರೆಸಿಕೊಂಡು ಹೋಗಬೇಕೆಂದು ಕೋರುತ್ತೇನೆ.

ಹಾಗೆಯೇ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷ ರಾಷ್ಟ್ರಮಟ್ಟದಲ್ಲಿ ಹೋರಾಟ ನಡೆಸಿತ್ತು. ತೈಲ ಬೆಲೆ ಏರಿಕೆಯನ್ನು ಪ್ರಮುಖ ವಿಷಯವನ್ನಾಗಿ ಮಾಡಿಕೊಂಡು ನಮ್ಮ ಪಕ್ಷ ವಿಧಾನ ಸಭೆ ಚುನಾವಣೆಯಲ್ಲಿ ಹೋರಾಟ ನಡೆಸಿತ್ತು. ಜೊತೆಗೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರೂ ಸಹ ಈ ವಿಷಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.

ಇಂತಹ ಸನ್ನಿವೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ನಿಧಾರವನ್ನು ತಾವು ಘೋಷಣೆ ಮಾಡಿದ್ದೀರಿ. ಇದರಿಂದ ಬೆಲೆ ಏರಿಕೆ ಜೊತೆಗೆ ಜನಸಾಮಾನ್ಯದ ಮೇಲು ಪರಿಣಾಮ ಬೀರಲಿದೆ. ಹೀಗಾಗಿ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಸುವ ತೀರ್ಮಾನದ ಬಗ್ಗೆಯೂ ಮರು ಪರಿಶೀಲನೆ ಮಾಡಬೇಕೆಂದು ಕೋರುತ್ತೇನೆ.

The Co-ordination committee of Congress-JDS is just an illusion. Co-ordination committee Chairman Sri @siddaramaiah himself thinks @hd_kumaraswamy’s budget is nothing more than a poor joke. While the coalition of corrupts fight over power & prestige Kannadigas are bound to suffer pic.twitter.com/SovQMa1Yg3

— BJP Karnataka (@BJP4Karnataka) July 11, 2018

TAGGED:annabhagyabudgetdieselhd kumaraswamyInspectionpetrolPublic TVsiddaramaiahtwitterಅನ್ನಭಾಗ್ಯಎಚ್ ಡಿ ಕುಮಾರಸ್ವಾಮಿಟ್ವೀಟ್ಟರ್ಡೀಸೆಲ್ಪಬ್ಲಿಕ್ ಟಿವಿಪರಿಶೀಲನೆಪೆಟ್ರೋಲ್ಬಜೆಟ್ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ʻಕಾಂತಾರʼ ದೈವ ನಿಂದಿಸಿದ್ದ ರಣವೀರ್‌ಗೆ ಪಾಪಪ್ರಜ್ಞೆ – ಚಾಮುಂಡಿ ದೇಗುಲದಲ್ಲೇ ಕ್ಷಮೆ ಕೇಳಲು ನಿರ್ಧಾರ
Cinema Districts Karnataka Latest National Sandalwood South cinema Top Stories
Badshah Isha Rikhi Marriage
ಡಿವೋರ್ಸ್ ಪಡೆದು 6 ವರ್ಷಗಳ ಬಳಿಕ ರ‍್ಯಾಪರ್ ಬಾದ್‌ಶಾ ಎರಡನೇ ಮದುವೆ
Cinema Latest Top Stories
Dhurandhar 2 1
ಗಲ್ಲಾಪೆಟ್ಟಿಗೆಯಲ್ಲಿ ಸದ್ದು ಮಾಡ್ತಿದೆ ‘ಧುರಂಧರ್‌ 2’; 800 ಕೋಟಿ ಕ್ಲಬ್‌ ಸೇರುವತ್ತ ಓಟ
Bollywood Cinema Latest Top Stories
Dhurandhar 2
ಬಾಕ್ಸಾಫೀಸ್‌ನಲ್ಲಿ ಧೂಳೆಬ್ಬಿಸಿದ ‘ಧುರಂಧರ್‌ 2’ – ಮೂರೇ ದಿನದಲ್ಲಿ ವಿಶ್ವಾದ್ಯಂತ 500 ಕೋಟಿ ಕಲೆಕ್ಷನ್‌
Bollywood Cinema Latest Top Stories

You Might Also Like

ajit pawar plane crash
Bengaluru City

ಅಜಿತ್ ಪವಾರ್ ಅವರದ್ದು ವಿಮಾನ ದುರಂತವಲ್ಲ ವ್ಯವಸ್ಥಿತ ಕೊಲೆ – ಬೆಂಗಳೂರಲ್ಲಿ ಝೀರೋ ಎಫ್‌ಐಆರ್‌ ದಾಖಲು

Public TV
By Public TV
15 minutes ago
Harish Rana
Latest

13 ವರ್ಷಗಳ ನರಕಯಾತನೆಗೆ ಮುಕ್ತಿ – ದಯಾಮರಣಕ್ಕೆ ಅನುಮತಿ ಪಡೆದಿದ್ದ ಹರೀಶ್ ರಾಣಾ ನಿಧನ

Public TV
By Public TV
44 minutes ago
Siddaramaiah DK Shivakumar cabinet meeting
Bagalkot

ದಾವಣಗೆರೆ, ಬಾಗಲಕೋಟೆ ಉಪಸಮರ – ಜವಾಬ್ದಾರಿ ಹಂಚಿಕೆಗೆ ಸಿದ್ಧತೆ; ಬುಧವಾರ ಸಿಎಲ್‌ಪಿ ಸಭೆ

Public TV
By Public TV
48 minutes ago
KMF RCB
Bengaluru City

ನಂದಿನಿ ಉತ್ಪನ್ನಗಳ ಪ್ರಚಾರಕ್ಕೆ RCB ಜೊತೆ ಒಪ್ಪಂದ – 1 ವರ್ಷಕ್ಕೆ 4.80 ಕೋಟಿ ಕೊಟ್ಟ KMF

Public TV
By Public TV
1 hour ago
R Ashok E Khata Bribe
Bengaluru City

ಇ ಖಾತಾದಲ್ಲಿ ಲಂಚಾವತಾರ – ಸಾರ್ವಜನಿಕರಿಗೆ ಅಧಿಕಾರಿಗಳಿಂದ ಹಣಕ್ಕೆ ಬೇಡಿಕೆ: ಅಶೋಕ್

Public TV
By Public TV
2 hours ago
Jakkur Flying School R Ashok
Bengaluru City

ಜಕ್ಕೂರು ಫ್ಲೈಯಿಂಗ್ ಸ್ಕೂಲ್ ಮೇಲೆ ರಿಯಲ್ ಎಸ್ಟೇಟ್ ಕಣ್ಣು – ಸರ್ಕಾರದ ಮೇಲೆಯೇ ಕಬಳಿಕೆ ಆರೋಪ

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?