ಹುಬ್ಬಳ್ಳಿ: ಶ್ರೀ ಸಿದ್ದಾರೂಢರ ಮಠದ ಕೆರೆಯಲ್ಲಿನ ಶ್ರೀ ಸಿದ್ದಾರೂಢರ ಹಾಗೂ ಶ್ರೀ ಗುರುನಾಥರೂಢರ ಮೂರ್ತಿಗೆ ಅಲಂಕಾರ ಹಾಗೂ ಪೂಜೆ ಸಲ್ಲಿಸಲು ಹೋದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.
ಉಮೇಶಪ್ಪ ಜಾಲಿಹಾಳ (22) ಮೃತ. ಈತ ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕಿನ ಕಲ್ಲೂರು ಗ್ರಾಮದ ನಿವಾಸಿಯಾಗಿದ್ದಾನೆ. ಕಳೆದ 6 ವರ್ಷಗಳಿಂದ ಮಠದ ವಿದ್ಯಾರ್ಥಿನಿಯದಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದ. ಸಿದ್ಧಾರೂಢ ಮಠದಲ್ಲಿ ಪೂಜೆಸಲ್ಲಿಸಲು ಹೋದ ಯುವಕ ಕೆರೆಯಲ್ಲಿ ಮುಳುಗಿ ಸಾವನ್ನಪಿದ್ದಾನೆ. ಇದನ್ನೂ ಓದಿ: ಯಾರೂ ತಿರುಕನ ಕನಸು ಕಾಣೋದು ಬೇಡ: ಆರ್. ಅಶೋಕ್
ಇಂದು ಬೆಳಗ್ಗೆ ಮಠದ ಕೆರೆಯ ಮಧ್ಯದಲ್ಲಿರುವ ಸಿದ್ದಾರೂಢ ಹಾಗೂ ಗುರುನಾಥರೂಢ ಮೂರ್ತಿಗಳಿಗೆ ಪೂಜೆ ಸಲ್ಲಿಸಲು ಈಜಿಕೊಂಡು ಹೋಗಿದ್ದಾನೆ. ಆದರೆ ಕೆರೆಯಲ್ಲಿ ಆತನಿಗೆ ಕೈ ಸೋತು ಕೆರೆಯಲ್ಲಿ ಮುಳಗಿದ್ದಾನೆ. ಘಟನೆಯ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ, ಪೊಲೀಸರು ಹಾಗೂ ಎನ್ ಡಿ ಆರ್ ಎಫ್ ಸಿಬ್ಬಂದಿ ಕಾರ್ಯಚರಣೆ ನಡೆಸಿ ಯುವಕನ ಶವ ಹೊರ ತೆಗೆದಿದ್ದಾರೆ. ಈ ಸಂಬಂಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮುಂದಿನ ಚುನಾವಣೆಗೆ ಮೈತ್ರಿ ಮುಂದುವರಿಯುವ ಬಗ್ಗೆ ಚರ್ಚೆ ನಡೆದಿಲ್ಲ – ದೇವೇಗೌಡ