Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Districts

ಪಂಚಭೂತಗಳಲ್ಲಿ ಸರಳತೆಯ ಶತಮಾನದ ಸಂತ ಸಿದ್ದೇಶ್ವರ ಶ್ರೀ ಲೀನ

Public TV
Last updated: January 3, 2023 8:58 pm
Public TV
Share
3 Min Read
BASAVARAJ BOMMAI SIDDESHWARA SWAMIJI
SHARE

ವಿಜಯಪುರ: ಶತಮಾನದ ಸರಳ ಸಂತ, ನಡೆದಾಡುವ ದೇವರು ವಿಜಯಪುರದ ಜ್ಞಾನಯೋಗಾಶ್ರಮದ ಸಿದ್ದೇಶ್ವರ ಶ್ರೀಗಳ (Siddeshwar Swamiji) ಅಂತ್ಯಕ್ರಿಯೆ (Funeral) ಸಕಲ ಸರ್ಕಾರಿ ಗೌರವಗಳೊಂದಿಗೆ ಜ್ಞಾನಯೋಗಾಶ್ರಮದ ಆವರಣದಲ್ಲಿ ನೆರವೇರಿಸಲಾಯಿತು.

SIDDESHWARA SWAMIJI

ಜ್ಞಾನಯೋಗಾಶ್ರಮದ ಆವರಣದಲ್ಲಿ ಕಟ್ಟೆಯನ್ನು ಕಟ್ಟಿ, ಅದರ ಮೇಲೆ 6 ಅಡಿ ಅಗಲ ಹಾಗೂ 9 ಅಡಿ ಉದ್ದ ಹಾಗೂ ಒಂದುವರೆ ಎತ್ತರದ ಗದ್ದುಗೆಯನ್ನು ನಿರ್ಮಾಣ ಮಾಡಲಾಗಿತ್ತು. ಅಲ್ಲದೇ ಶ್ರೀಗಳು ತಮ್ಮ ಇಚ್ಛೆಯಂತೆಯೇ ಅಂತ್ಯಕ್ರಿಯೆ ಆಗಬೇಕು ಎಂದಿರುವ ಹಿನ್ನೆಲೆಯಲ್ಲಿ ಗದ್ದುಗೆ ಮೇಲೆ ಶ್ರೀಗಳಿಗೆ ಅಗ್ನಿ ಸ್ಪರ್ಶ ಮಾಡಲಾಯಿತು. ಸುತ್ತೂರು ಶ್ರೀಗಳು, ಕನ್ನೇರಿ ಶ್ರೀಗಳು ಮತ್ತು ಆಶ್ರಮದ ಅಧ್ಯಕ್ಷ ಬಸವಲಿಂಗ ಸ್ವಾಮೀಜಿಗಳು ಸಿದ್ದೇಶ್ವರರ ಅಂತಿಮ ಸಂಕಲ್ಪವನ್ನು ಪೂರೈಸಿದರು. ಈ ಮೊದಲು ಪಾರ್ಥಿವ ಶರೀರಕ್ಕೆ ಸಿಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಸಚಿವರಾದ ಮುರುಗೇಶ್ ನಿರಾಣಿ, ಶ್ರೀರಾಮುಲು, ಶಶಿಕಲಾ ಜೊಲ್ಲೆ, ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ಸೇರಿ ಹಲವು ಗಣ್ಯರು ಪುಷ್ಪ ನಮನ ಸಲ್ಲಿಸಿದರು. ಈ ಮೊದಲು ಸರ್ಕಾರದಿಂದ ಸಕಲ ಸರ್ಕಾರಿ ಗೌರವ ಸಲ್ಲಿಸಲಾಯಿತು. ಪೊಲೀಸ್ ಬ್ಯಾಂಡ್ ಸೆಟ್ ಮೂಲಕ ರಾಷ್ಟ್ರಗೀತೆ ನುಡಿಸಿ ಗೌರವ ಸಲ್ಲಿಸಲಾಯಿತು. ಆ ಬಳಿಕ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಿಸಿದರು. ಇದನ್ನೂ ಓದಿ: ಸ್ವಾಮೀಜಿ ದರ್ಶನ ಮಾಡೋ ಪುಣ್ಯ ನಾನು ಪಡೆದುಕೊಂಡಿಲ್ಲ ಅನ್ನೋ ನೋವಾಗ್ತಿದೆ: ಜಮೀರ್

BASAVARAJ BOMMAI AND SIDDESHWARA SWAMIJI 1

ಸೈನಿಕ ಶಾಲೆ ಆವರಣದಲ್ಲಿ ಬೊಮ್ಮಾಯಿ ನೇತೃತ್ವದಲ್ಲಿ ಗೌರವ ವಂದನೆ ಬಳಿಕ ಪಾರ್ಥಿವ ಶರೀರವನ್ನು ಯೋಗಾಶ್ರಮದ ಅಂಗಲದವರೆಗೆ ಸುಮಾರು 5 ಕಿ.ಮೀ ಮೆರವಣಿಗೆ ನಡೆಸಲಾಯಿತು. ಮೆರವಣಿಗೆ ವೇಳೆ ಭಕ್ತವೃಂದ ರಸ್ತೆಯ ಇಕ್ಕೆಲಗಳಲ್ಲಿ ನಿಂತು ಅಂತಿಮ ದರ್ಶನ ಪಡೆದುಕೊಂಡರು. ಯೋಗಾಶ್ರಮದ ಸುತ್ತ ಜನ ಸೇರಿದ್ದರು. ಭಕ್ತರಿಗೆ LED ಮೂಲಕ ಅಂತ್ಯಸಂಸ್ಕಾರ ವೀಕ್ಷಣೆಗೆ ಅವಕಾಶ ಕಲ್ಪಿಸಿಕೊಡಲಾಗಿತ್ತು.

SIDDESHWARA SWAMIJI 1

ಬದುಕಿನುದ್ದಕ್ಕೂ ಸರಳವಾಗಿ ಜೀವನ ಸಾಗಿಸಿ, ಸಾರ್ಥಕತೆಯ ಬದುಕು ನಡೆಸಿ ಲಕ್ಷಾಂತರ ಜನರಿಗೆ ಆದರ್ಶವಾಗಿದ್ದ ಶ್ರೀಗಳ ಪಾರ್ಥಿವ ಶರೀರವನ್ನು ವಿಜಯಪುರ ನಗರದ ಸೈನಿಕ ಶಾಲೆಯ ಆವರಣದಲ್ಲಿ ಶ್ರೀಗಳ ಅಂತಿಮ ದರ್ಶನಕ್ಕೆ ಬೆಳಗ್ಗೆಯಿಂದಲೇ ಅವಕಾಶ ಮಾಡಿಕೊಡಲಾಗಿತ್ತು. ಆದ್ರೂ ಕ್ಷಣ ಕ್ಷಣಕ್ಕೂ ಭಕ್ತರ ಸಂಖ್ಯೆಯಲ್ಲಿ ಏರಿಕೆ ಆಗುತ್ತಿತ್ತು. ಹೀಗಾಗಿ ಸಂಜೆ 5 ಗಂಟೆವರೆಗೆ ಅಂತಿಮ ದರ್ಶನಕ್ಕೆ ವಿಜಯಪುರ ಜಿಲ್ಲಾಡಳಿತ ಸಮಯ ವಿಸ್ತರಿಸಿತ್ತು. ನಡೆದಾಡುವ ದೇವರನ್ನು ನೆನೆದು ಭಕ್ತರ ಕಣ್ಣೀರು, ಗೋಳಾಟ ಮುಗಿಲುಮುಟ್ಟಿತ್ತು. ನಮ್ಮ ದೇವರಿಗೆ ಸಾವಿಲ್ಲ… ಮತ್ತೆ ಹುಟ್ಟಿ ಬನ್ನಿ ಸಿದ್ದಪ್ಪಾಜಿ ಅನ್ನೋ ಘೋಷಣೆಗಳು ಮೊಳಗಿದವು. 20 ಲಕ್ಷಕ್ಕೂ ಅಧಿಕ ಮಂದಿ ಆಗಮಿಸಿ ಸಿದ್ದೇಶ್ವರ ಶ್ರೀಗಳ ಅಂತಿಮ ದರ್ಶನ ಪಡೆದರು. ಬಳಿಕ ಶ್ರೀಗಳ ಇಚ್ಛೆಯಂತೆ ಅವರು ಮಾಡಿದ ವಿಲ್ ಪ್ರಕಾರ ಅಗ್ನಿ ಸ್ಪರ್ಶ ಮಾಡಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಇದನ್ನೂ ಓದಿ: ಮಣ್ಣಿನಲ್ಲಿ ಮೂಡಿದ ಸರಳತೆಯ ಸಾಕಾರ ಮೂರ್ತಿ

SIDDESHWARA SWAMIJI Funeral

ಅಂತ್ಯಸಂಸ್ಕಾರದಲ್ಲಿ ಕೇವಲ ಕುಟುಂಬಸ್ಥರು, ಗಣ್ಯರು, ಸ್ವಾಮೀಜಿಗಳಿಗೆ ಮಾತ್ರ ಪಾಲ್ಗೊಳ್ಳಲು ಅವಕಾಶ ನೀಡಲಾಗಿತ್ತು. ಮಾಜಿ ಸಿಎಂ ಸಿದ್ದರಾಮಯ್ಯ, ಚಿತ್ರನಟ ಡಾಲಿ ಧನಂಜಯ್, ಸೇರಿದಂತೆ ಅನೇಕ ಮಂದಿ ಅಂತಿಮ ದರ್ಶನ ಪಡೆದರು. ಬಳಿಕ ನಡೆದ ಅಂತ್ಯಸಂಸ್ಕಾರದಲ್ಲಿ ಸಿ.ಎಂ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಮಾಜಿ ಸಿ.ಎಂ ಯಡಿಯೂರಪ್ಪ,  ಸಚಿವರಾದ ಶ್ರೀರಾಮುಲು, ಮುರುಗೇಶ್‌ ನಿರಾಣಿ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಹಲವು ಮಂದಿ ಭಾಗಿಯಾಗಿದ್ದರು.

ಪ್ರವಚನ ಚೇತನರಾಗಿ, ಭಕ್ತರ ಸಿದ್ದಾಪಾಜಿಯಾಗಿ ವಿಜಯಪುರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳಲ್ಲಿ ಪ್ರಸಿದ್ದಿಯಾಗಿದ್ರು. ಇಂತಹ ಸಂತನ ಅಗಲಿಕೆಗೆ ನಾಡಿನ ಜನ ಕಂಬನಿ ಮಿಡಿದಿದ್ದಾರೆ. ಅಂತಿಮ ದರ್ಶನಕ್ಕೆ ಭಕ್ತಸಾಗರವೇ ಹರಿದು ಬಂದಿತ್ತು. ಪ್ರವಚನಗಳಿಂದಲೇ ಕೋಟ್ಯಂತರ ಭಕ್ತರ ಬಾಳು ಬೆಳಗಿದ್ದ ಸಿದ್ದಪ್ಪಾಜಿಯ ಪಾರ್ಥಿವ ಶರೀರದ ಅಂತಿಮದರ್ಶನಕ್ಕೆ ಪ್ರವಾಹೋಪಾದಿಯಲ್ಲಿ ಜನ ಬಂದಿದ್ದರು. ಕಣ್ಣು ಹಾಯಿಸಿದ್ದು ಕಿಲೋ ಮೀಟರ್‌ಗಟ್ಟಲೇ ಜನರ ದಂಡೇ ಕಾಣಿಸುತ್ತಿತ್ತು. ಶ್ರೀಗಳ ಪಾರ್ಥಿವ ಶರೀರದ ದರ್ಶನಕ್ಕೆ ಬ್ಯಾರಿಕೇಡ್‍ಗಳನ್ನೇ ಮುರಿದು ಭಕ್ತರು ಒಳನುಗ್ಗಲು ಯತ್ನಿಸಿದ್ರು. ಕೆಲಕಾಲ ತಳ್ಳಾಟ ನೂಕಾಟವೇ ಆಯ್ತು. ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

SIDDESHWARA SWAMIJI Funeral 1

ಸಿದ್ದೇಶ್ವರರು ಹೊಂದಿದ್ದ ಜನಪ್ರಿಯತೆಯನ್ನು ಹಿಂದೂ-ಮುಸ್ಲಿಮ್-ಕ್ರಿಶ್ಚಿಯನ್ ಎನ್ನದೇ ಎಲ್ಲಾ ವರ್ಗದ ಜನ ಹೆಣ್ಣು-ಗಂಡೆಂಬ ಬೇಧವಿಲ್ಲದೇ, ವಯಸ್ಸಿನ ಅಂತರವಿಲ್ಲದೇ ಭಕ್ತಜನ ಸ್ವಾಮೀಜಿ ಅಂತಿಮ ದರ್ಶನಕ್ಕೆ ಬಂದಿದ್ದರು.

Live Tv
[brid partner=56869869 player=32851 video=960834 autoplay=true]

TAGGED:siddeshwar swamijivijayapuraಬಸವರಾಜ ಬೊಮ್ಮಾಯಿವಿಜಯಪುರಸಿದ್ದೇಶ್ವರ ಶ್ರೀ
Share This Article
Facebook Whatsapp Whatsapp Telegram

You Might Also Like

You Are The Best Trying To Be As You The Modi Meloni Melodi Moment From Canada
Latest

ʼYou Are The Bestʼ – ಜಿ-7 ಶೃಂಗಸಭೆಯಲ್ಲಿ ಮೆಲೋಡಿ ಮೊಮೆಂಟ್

Public TV
By Public TV
28 minutes ago
tanisha kuppanda kishen dance
Cinema

‘ಪೆನ್‌ ಡ್ರೈವ್‌’ಗಾಗಿ ಕಿಶನ್ ಜೊತೆ ಜಬರ್ದಸ್ತ್ ಕುಣಿದ ತನಿಷಾ ಕುಪ್ಪಂಡ

Public TV
By Public TV
51 minutes ago
dk shivakumar
Bengaluru City

ಡಿಕೆ ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ: ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಡಿಕೆಶಿ

Public TV
By Public TV
1 hour ago
d.k.shivakumar KPCC
Bengaluru City

ನಂದಿನಿ ನಮ್ಮ ಸಂಸ್ಥೆ, ‘ನಮ್ಮ ಮೆಟ್ರೋ’ದಲ್ಲಿ ಮಳಿಗೆ ಹಾಕಲು ಅವಕಾಶ ಕೊಡ್ತೀವಿ: ಡಿಕೆಶಿ

Public TV
By Public TV
1 hour ago
Kiara Advani and yash
Cinema

ಟಾಕ್ಸಿಕ್ ನಟಿಗಾಗಿ ಬೆಂಗಳೂರಿನಿಂದ ಮುಂಬೈಗೆ ಲೊಕೇಶನ್ ಶಿಫ್ಟ್ !

Public TV
By Public TV
2 hours ago
ಸಾಂದರ್ಭಿಕ ಚಿತ್ರ
Bengaluru City

ದಳಪತಿಗಳ `ಕೈ’ ಸೆಳೆತದ ನೋವಿಗೆ ಹೆಚ್‌ಡಿಕೆ ಮೈತ್ರಿ ಮದ್ದು: ಜಿಗಿಯುವ ಕಾಯಿಲೆ ವಾಸಿ ಆಗುತ್ತಾ..!?

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?