Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | 31 Districts | ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು

31 Districts

ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು

Public TV
Last updated: March 7, 2025 12:14 pm
Public TV
Share
3 Min Read
CM Budget
SHARE

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು (Siddaramaiah) ಬಜೆಟ್ ತಮ್ಮ ಭಾಷಣದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಸಿಎಂ ಹೇಳಿದ್ದೇನು?
15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಅನ್ವಯ ತೆರಿಗೆ ಹಂಚಿಕೆಯಲ್ಲಿ ಅತಿ ಹೆಚ್ಚು ನಷ್ಟವನ್ನು ಅನುಭವಿಸಿದ ರಾಜ್ಯ ಕರ್ನಾಟಕ. 14ನೇ ಹಣಕಾಸು ಆಯೋಗವು ಕರ್ನಾಟಕಕ್ಕೆ ಶಿಫಾರಸ್ಸು ಮಾಡಿದ್ದ ತೆರಿಗೆ ಪಾಲು ಶೇ. 4.713 ರಿಂದ, 15ನೇ ಹಣಕಾಸು ಆಯೋಗದ ಅವಧಿಯಲ್ಲಿ ಶೇ.3.647ಕ್ಕೆ ಇಳಿಕೆಯಾಯಿತು. ಇದರಿಂದಾಗಿ ರಾಜ್ಯದ ತೆರಿಗೆ ಹಂಚಿಕೆಯು ಶೇ.23ರಷ್ಟು ಕುಸಿತವಾಗಿ, ರಾಜ್ಯವು ವಾರ್ಷಿಕ ಅಂದಾಜು 12 ಸಾವಿರ ಕೋಟಿ ರೂ. ನಷ್ಟ ಅನುಭವಿಸಬೇಕಾಯಿತು. ಅಲ್ಲದೇ, 15ನೇ ಹಣಕಾಸು ಆಯೋಗವು ರಾಜ್ಯದ ತೆರಿಗೆ ಪಾಲು ಕಡಿಮೆಯಾದ ಕಾರಣ 5,495 ಕೋಟಿ ರೂ.ಗಳ ವಿಶೇಷ ಅನುದಾನ, ಬೆಂಗಳೂರಿನಲ್ಲಿ ಕೆರೆಗಳ ಸಂರಕ್ಷಣೆಗಾಗಿ 3,000 ಕೋಟಿ ರೂ. ಮತ್ತು ಪೆರಿಫೆರಲ್ ರಿಂಗ್ ರಸ್ತೆ ಅಭಿವೃದ್ಧಿಗೆ 3,000 ಕೋಟಿ ರೂ. ಸೇರಿ ಒಟ್ಟು 11,495 ಕೋಟಿ ರೂ.ಗಳನ್ನು ತನ್ನ ವರದಿಯಲ್ಲಿ ಶಿಫಾರಸ್ಸು ಮಾಡಿತು. ಆದರೆ ಕೇಂದ್ರ ಸರ್ಕಾರ ಈ ಅನುದಾನವನ್ನು ಬಿಡುಗಡೆ ಮಾಡಿರುವುದಿಲ್ಲ. 2023-24ನೇ ಸಾಲಿನ ಕೇಂದ್ರ ಸರ್ಕಾರದ ಆಯವ್ಯಯ ಭಾಷಣದಲ್ಲಿ ಭದ್ರಾ ಮೇಲ್ದಂಡೆ ಯೋಜನೆಗೆ 5,300 ಕೋಟಿ ರೂ.ಗಳನ್ನು ಘೋಷಿಸಿತ್ತು. ಆದರೆ, ಕೇಂದ್ರ ಸರ್ಕಾರವು ಈವರೆಗೂ ಯಾವುದೇ ಅನುದಾನ ಬಿಡುಗಡೆ ಮಾಡಿರುವುದಿಲ್ಲ. ಇದನ್ನೂ ಓದಿ: ಅಬಕಾರಿ ಇಲಾಖೆಗೆ 40,000 ಕೋಟಿ ತೆರಿಗೆ ಸಂಗ್ರಹ ಟಾರ್ಗೆಟ್‌

ರಾಜ್ಯಗಳಿಗೆ ತೆರಿಗೆ ಹಂಚಿಕೆಯನ್ನು ಹೆಚ್ಚಿಸುವ ಬಗ್ಗೆ 16ನೇ ಹಣಕಾಸು ಆಯೋಗದ ಮುಂದೆ ರಾಜ್ಯವು ಪ್ರಬಲವಾಗಿ ತನ್ನ ವಾದವನ್ನು ಪ್ರತಿಪಾದಿಸಿದೆ. ಆರೋಗ್ಯಕರ ಮತ್ತು ಸಾಮರಸ್ಯದ ಆರ್ಥಿಕ ಒಕ್ಕೂಟ ರೂಪಿಸಲು ರಾಜ್ಯಗಳಿಗೆ ನೀಡುವ ತೆರಿಗೆ ಪಾಲನ್ನು ಸಮಾನತೆ ಮತ್ತು ದಕ್ಷತೆಯನ್ನು ಆಧರಿಸಿ ಹಂಚಿಕೆ ಮಾಡುವಂತೆ ಹಣಕಾಸು ಆಯೋಗಕ್ಕೆ ಮನವರಿಕೆ ಮಾಡಿದೆ. ಬಲಿಷ್ಠ ಆರ್ಥಿಕತೆ ಹೊಂದಿರುವ ರಾಜ್ಯಗಳು ಬಡ ರಾಜ್ಯಗಳಿಗೆ ನೆರವಾಗಲು ಬದ್ಧರಾಗಿದ್ದರೂ, ಅದು ತನ್ನ ನಾಗರೀಕರ ಹಿತ ಕಾಯುವಲ್ಲಿ ಅಥವಾ ಆರ್ಥಿಕ ಪ್ರಗತಿಗೆ ಕುಂದುಂಟು ಮಾಡುವಂತಿರಬಾರದು. ಆದಾಯ-ಅಂತರ ಮತ್ತು ತಲಾ ಆದಾಯ ನಿರ್ಧರಿಸುವ ಮಾನದಂಡಗಳಲ್ಲಿಯೂ ಲೋಪಗಳಿರುವ ಹಿನ್ನೆಲೆಯಲ್ಲಿ, ಈ ಮಾನದಂಡಗಳಿಗೆ ಕಡಿಮೆ ಅಂಕ ನೀಡುವಂತೆ ಮನವಿ ಮಾಡಿದ್ದೇವೆ. ಇದನ್ನೂ ಓದಿ: ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ

ಕರ್ನಾಟಕ ರಾಜ್ಯವು, ಸುಸ್ಥಿರ ಋಣ ನಿರ್ವಹಣೆ ಮತ್ತು ವಿತ್ತೀಯ ಶಿಸ್ತು ಪಾಲಿಸುವ ಮೂಲಕ ವಿತ್ತೀಯ ಹೊಣೆಗಾರಿಕೆಯನ್ನು ಉತ್ತಮವಾಗಿ ನಿಭಾಯಿಸಿದೆ. ನಮ್ಮ ರಾಜ್ಯದಲ್ಲಿ ವಿತ್ತೀಯ ಹೊಣೆಗಾರಿಕೆ ಅಧಿನಿಯಮವನ್ನು ಕೇಂದ್ರ ಸರ್ಕಾರವು ಅನುಷ್ಠಾನಕ್ಕೆ ತರುವ ಮುನ್ನವೇ ಜಾರಿಗೆ ತರಲಾಯಿತು. ಅಲ್ಲದೆ, ರಾಜ್ಯದ ಒಟ್ಟು ಹೊಣೆಗಾರಿಕೆಗಳಲ್ಲಿ ಆಯವ್ಯಯದ ಹೊರಗಿನ ಸಾಲಗಳನ್ನು ಪರಿಗಣಿಸಿದ ಮೊದಲ ರಾಜ್ಯ ಕರ್ನಾಟಕ. ಆದಾಗ್ಯೂ, ಜಿ.ಎಸ್.ಟಿ ಜಾರಿಯಿಂದ ರಾಜ್ಯಕ್ಕೆ ಆದ ರಾಜಸ್ವ ನಷ್ಟವನ್ನು ಸಂಪೂರ್ಣವಾಗಿ ಸರಿದೂಗಿಸಲು ಕೇಂದ್ರ ಸರ್ಕಾರ ವಿಫಲವಾದ ಕಾರಣ ಮತ್ತು ಕೇಂದ್ರ ಸರ್ಕಾರ ವಿಧಿಸುವ ಸೆಸ್‌ಗಳು ಮತ್ತು ಸರ್‌ಚಾರ್ಜ್ಗಳನ್ನು ರಾಜ್ಯಗಳಿಗೆ ಹಂಚಿಕೆಯಾಗುವ ತೆರಿಗೆ ಪಾಲಿನಲ್ಲಿ ಪರಿಗಣಿಸದಿರುವುದರಿಂದ ಹಾಗೂ 15ನೇ ಹಣಕಾಸು ಆಯೋಗದ ಶಿಫಾರಸ್ಸಿನನ್ವಯ ರಾಜ್ಯದ ತೆರಿಗೆ ಪಾಲು ಕಡಿಮೆಯಾದ ಕಾರಣ ರಾಜ್ಯವು ವಿತ್ತೀಯ ಸವಾಲುಗಳನ್ನು ಎದುರಿಸುವಂತಾಯಿತು. ಇದನ್ನೂ ಓದಿ: ರಾಜ್ಯದಲ್ಲಿ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ: ಸಿಎಂ ಘೋಷಣೆ

ಕರ್ನಾಟಕದ ಆರ್ಥಿಕತೆಯಲ್ಲಿ ಸೇವಾ ವಲಯದ ಕೊಡುಗೆಯೂ ಪ್ರಮುಖವಾಗಿದ್ದು, ಒಟ್ಟು ಮೌಲ್ಯವರ್ಧನೆಯಲ್ಲಿ ಸೇವಾ ವಲಯಗಳ ಪಾಲು ಶೇ.66 ರಷ್ಟಿದೆ. 2024-25ನೇ ಸಾಲಿಗೆ ರಾಜ್ಯದಲ್ಲಿ ಸೇವಾ ವಲಯವು ಗಣನೀಯವಾಗಿ ಬೆಳವಣಿಗೆಯಾಗಿದ್ದು, ಶೇ.8.9ರಷ್ಟು ಬೆಳವಣಿಗೆ ದಾಖಲಿಸುವ ಮೂಲಕ ದೇಶದ ಆರ್ಥಿಕತೆಯಲ್ಲಿನ ಸೇವಾ ವಲಯದ ಬೆಳವಣಿಗೆ ಶೇ.7.2ಕ್ಕಿಂತ ಹೆಚ್ಚಾಗಿದೆ.

ಆರ್ಥಿಕ ಬೆಳವಣಿಗೆ ಮತ್ತು ಹೆಚ್ಚಿನ ಉದ್ಯೋಗಾವಕಾಶಗಳನ್ನು ಸೃಜಿಸಲು ಸರ್ಕಾರವು ಮಾಹಿತಿ ತಂತ್ರಜ್ಞಾನ, ಪ್ರವಾಸೋದ್ಯಮ, ಜೈವಿಕ ತಂತ್ರಜ್ಞಾನ ಸೇರಿದಂತೆ ಕೈಗಾರಿಕೆ ಮತ್ತು ಸೇವಾ ವಲಯದಲ್ಲಿ ಹಲವು ನೀತಿಗಳನ್ನು ಜಾರಿಗೆ ತಂದಿದೆ. ಈ ನೀತಿಗಳು ಮಾನವ ಸಂಪನ್ಮೂಲವನ್ನು ಸಮರ್ಥವಾಗಿ ಬಳಸುವುದರ ಜೊತೆಗೆ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಹೆಚ್ಚಿನ ಹೂಡಿಕೆಗಳನ್ನು ಉತ್ತೇಜಿಸಲಿವೆ. ಸರ್ಕಾರವು ಜಾರಿಗೆ ತಂದಿರುವ ಈ ನೀತಿಗಳಿಂದ ರಾಜ್ಯದಲ್ಲಿ ಅಂದಾಜು 1 ಲಕ್ಷ ಕೋಟಿ ರೂ. ಹೂಡಿಕೆಯನ್ನು ನಿರೀಕ್ಷಿಸಲಾಗಿದೆ. ಈ ಉದ್ದೇಶಕ್ಕೆ ಸರ್ಕಾರವು 13,500 ಕೋಟಿ ರೂ. ಸಹಾಯಧನ ಮತ್ತು ಆರ್ಥಿಕ ನೆರವು ನೀಡಲು ಸಹಮತಿಸಿದೆ. ಇದನ್ನೂ ಓದಿ: ಪ್ರಾಜೆಕ್ಟ್‌ ಮೆಜೆಸ್ಟಿಕ್‌ – ಹೈಟೆಕ್‌ ಆಗಲಿದೆ ಬಸ್‌ ನಿಲ್ದಾಣ

ನಮ್ಮ ಸರ್ಕಾರವು ಆರ್ಥಿಕತೆಯ ಬೆಳವಣಿಗೆಗೆ ಹೆಚ್ಚಿನ ಪ್ರಾಶಸ್ತ್ಯ ನೀಡಿದ್ದು, 2024-25ರ ಡಿಸೆಂಬರ್ ಅಂತ್ಯದವರೆಗೆ 4.4 ಬಿಲಿಯನ್ ಡಾಲರ್ ಮೌಲ್ಯದ ವಿದೇಶಿ ಹೂಡಿಕೆಗಳನ್ನು ಆಕರ್ಷಿಸುವ ಮೂಲಕ ದೇಶದಲ್ಲಿಯೇ ಮೂರನೇ ಸ್ಥಾನದಲ್ಲಿದೆ.

TAGGED:cm siddaramaiahKarnarakaKarnataka State Budget 2025ಕರ್ನಾಟಕಕರ್ನಾಟಕ ರಾಜ್ಯ ಬಜೆಟ್‌ 2025ಸಿದ್ದರಾಮಯ್ಯ
Share This Article
Facebook Whatsapp Whatsapp Telegram

Cinema news

3 Idiots
10 ವರ್ಷಗಳ ಬಳಿಕವೂ ಅದೇ ಪಾತ್ರಗಳೊಂದಿಗೆ ಬರಲಿದೆ 3 Idiots ಸೀಕ್ವೆಲ್
Bollywood Cinema Latest Top Stories
nikhil kumaraswamy actor chetan
ಡಾ.ರಾಜ್‌ಕುಮಾರ್ ಎಂದರೆ ಆರು ಕೋಟಿ ಕನ್ನಡಿಗರ ಭಾವನೆ: ನಟ ಚೇತನ್‌ಗೆ ನಿಖಿಲ್ ಕುಮಾರಸ್ವಾಮಿ ಕಿಡಿ
Bengaluru City Cinema Latest Sandalwood Top Stories
Sanjay Dutt
ಸರ್ಸೆ ಸೆರಗ ಸರ್ಸೆ ಹಾಡಿನ ವಿವಾದ – ಕ್ಷಮೆಯಾಚಿಸಿದ ಸಂಜಯ್ ದತ್, ಬುಡಕಟ್ಟು ಜನಾಂಗದ 50 ಹುಡುಗಿಯರ ಶಿಕ್ಷಣಕ್ಕೆ ಹಣದ ಭರವಸೆ
Bollywood Cinema Latest National Sandalwood Top Stories
ChetanKumar Ahimsa
ರಾಜ್‌ಕುಮಾರ್‌ ಸಮಾಧಿ ಬಗ್ಗೆ ವಿವಾದಾತ್ಮಕ ಪೋಸ್ಟ್‌ – ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಂತೆ ಕ್ಷಮೆಯಾಚಿಸಿದ ಚೇತನ್‌
Cinema Karnataka Latest Top Stories

You Might Also Like

gundlupet inspector safari
Chamarajanagar

ನಿರ್ಬಂಧಿತ ಅರಣ್ಯಪ್ರದೇಶದಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಬಿಂದಾಸ್ ಸವಾರಿ

Public TV
By Public TV
33 minutes ago
supreme Court 1
Court

ಪ್ರತಿಯೊಂದು ಧಾರ್ಮಿಕ ಸಂಸ್ಥೆಗಳಲ್ಲಿ ನಿಯಮಗಳಿರಬೇಕು, ಅರಾಜಕತೆ ಇರಬಾರದು – ಶಬರಿಮಲೆ ಕೇಸ್‌ನಲ್ಲಿ ಸುಪ್ರೀಂ ಅಭಿಪ್ರಾಯ

Public TV
By Public TV
1 hour ago
Vidhana Soudha
Bengaluru City

ನೇಮಕಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸಿ ಸರ್ಕಾರ ಆದೇಶ

Public TV
By Public TV
2 hours ago
drone camera captures footage of people gambling in bhadravati forest 19 detained
Crime

ಪೊಲೀಸರ ಕಣ್ತಪ್ಪಿಸಿ ಕಾಡಲ್ಲಿ ಜೂಜು – ಡ್ರೋನ್‌ ಕಣ್ಣಲ್ಲಿ ಸಿಕ್ಕಿಬಿದ್ದ ಗ್ಯಾಂಗ್‌, 19 ಮಂದಿ ವಶಕ್ಕೆ

Public TV
By Public TV
2 hours ago
S 400 missile system
Latest

ಆಪರೇಷನ್ ಸಿಂಧೂರ ಆ್ಯನಿವರ್ಸರಿ ಹೊತ್ತಲ್ಲೇ ಭಾರತಕ್ಕೆ ಬರುತ್ತಿದೆ 4ನೇ ಸುದರ್ಶನ

Public TV
By Public TV
2 hours ago
visl worker dies after falling iron billet 8 lakh compensation before funeral job guarantee letter for wife
Districts

ಕಬ್ಬಿಣದ ಬಿಲ್ಲೆಟ್ ಬಿದ್ದು VISL ಕಾರ್ಮಿಕ ಸಾವು – ಅಂತ್ಯಸಂಸ್ಕಾರಕ್ಕೂ ಮುನ್ನವೇ 8 ಲಕ್ಷ ಪರಿಹಾರ, ಪತ್ನಿಗೆ ಉದ್ಯೋಗ ಭರವಸೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?