ನವದೆಹಲಿ: ಸಿಗ್ನೇಚರ್ ಸೇತುವೆಯ ಡಿವೈಡರ್ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸಾವನ್ನಪ್ಪಿ, ಮೂವರು ಗಾಯಗೊಂಡ ಘಟನೆ ನಡೆದಿದೆ.
ಆಶಿಶ್ (23) ಈ ಅಪಘಾತದಲ್ಲಿ ಸಾವನ್ನಪ್ಪಿದ ಯುವಕ. ಆಶಿಶ್, ರಿಷಬ್, ಯಶ್ ಮತ್ತು ವಿಶಾಲ್ ಎಂಬ ನಾಲ್ವರು ಸ್ನೇಹಿತರು ತಮ್ಮ ಕಾರಿನಲ್ಲಿ ಸಿಗ್ನೇಚರ್ ಸೇತುವೆಯ ಮೇಲೆ ತೆರಳುತ್ತಿದ್ದಾಗ ಈ ಅಪಘಾತ ನಡೆದಿದೆ.
ಆಶಿಶ್ ಕಾರು ಚಲಾಯಿಸುತ್ತಿದ್ದು, ನಿಯಂತ್ರಣ ಕಳೆದುಕೊಂಡು ಡಿವೈಡರ್ಗೆ ಡಿಕ್ಕಿಹೊಡೆದಿದ್ದಾರೆ. ಪರಿಣಾಮ ಕಾರು ಚಲಾಯಿಸುತ್ತಿದ್ದ ಆಶಿಶ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಘಟನೆಯಿಂದಾಗಿ ಮೂವರಿಗೆ ಗಂಭೀರ ಗಾಯಗಳಾಗಿದೆ.
ಗಾಯಗೊಂಡವರಲ್ಲಿ ವಿಶಾಲ್ ಸ್ಥಿತಿ ಗಂಭೀರವಾಗಿದೆ. ಯಶ್ ಮತ್ತು ರಿಷಬ್ ಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಮರಣೋತ್ತರ ಪರೀಕ್ಷೆ ಮುಗಿದ ನಂತರ ಮೃತ ಆಶಿಶ್ ದೇಹವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗುವುದು. ಈ ಪ್ರಕರಣದ ಬಗ್ಗೆ ದೂರು ದಾಖಲಿಸಿ ತನಿಖೆ ಮಾಡುತ್ತೇವೆ ಎಂದು ಪೊಲೀಸರು ಹೇಳಿದ್ದಾರೆ.