Public TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Bengaluru City

ಉತ್ತರ ಭಾರತದಲ್ಲಿ 5 ದಿನ ದೀಪಾವಳಿ – ಯಾವ ದಿನ ಯಾವ ಹಬ್ಬ?

Public TV
Last updated: November 15, 2020 7:36 am
Public TV
Share
3 Min Read
diwali 1
SHARE

ಕತ್ತಲೆಯನ್ನು ಹೋಗಲಾಡಿಸಿ ಮನೆ ಹಾಗೂ ಮನದ ಕತ್ತಲೆಯನ್ನು ನಿವಾರಿಸಿ ಬೆಳಕನ್ನು ಉಂಟು ಮಾಡುವ ಹಬ್ಬವೇ ದೀಪಾವಳಿ. ಮುಂಗಾರು ಬೆಳೆ ಕೊಯ್ಲಿಗೆ ಬರುವ ಸಮಯದಲ್ಲಿ ಈ ಹಬ್ಬ ಬರುವುದು ವಿಶೇಷ. ಕೆಲ ಕಡೆ ಆಶ್ವಯುಜ ಮಾಸದ ಕೊನೆಯ ಎರಡು ದಿನಗಳು ಹಾಗೂ ಕಾರ್ತಿಕ ಮಾಸದ ಮೊದಲನೆಯ ದಿನ ಈ ಹಬ್ಬವನ್ನು ಆಚರಿಸಿದರೆ ಇನ್ನು ಕೆಲ ಕಡೆ ಮುಂದಿನ ಎರಡು ದಿನಗಳನ್ನು ಸೇರಿಸಿ 5 ದಿನ ವಿಜೃಂಭಣೆಯಿಂದ ಈ ಹಬ್ಬವನ್ನು ಆಚರಿಸಲಾಗುತ್ತದೆ.

ಹಿಂದೂ ಕ್ಯಾಲೆಂಡರ್ ಪ್ರಕಾರ ಈ ಹಬ್ಬ ಕಾರ್ತಿಕ ಮಾಸದಲ್ಲಿ ದೀಪಾವಳಿ ಹಬ್ಬ ಸಮೀಪಿಸುತ್ತಿದ್ದಂತೆ ಕೆಲವರು ಮನೆಗೆ ಹೊಸ ವಸ್ತುಗಳನ್ನು ತರುತ್ತಾರೆ. ಇದನ್ನೂ ಓದಿ: ದೀಪಾವಳಿಯ ದೀಪಾರಾಧನೆ-ಮನೆಯ ಮುಂಭಾಗ ಇರಿಸುವ ದೀಪಗಳೆಷ್ಟಿರಬೇಕು?

diwali 2

ದೀಪಾವಳಿ ಹಬ್ಬದ ಮಹತ್ವ:
ದೀಪಾವಳಿ `ದೀಪಾ’ ಎಂದರೆ ಮಣ್ಣಿನ ದೀಪ ಹಾಗೂ `ವಳಿ’ ಎಂದು ಯಾವುದಾದರು ವಸ್ತು ಸರಣಿಯಾಗಿಯಿಡುವುದು. ದೀಪಾವಳಿಯ ಅಮವಾಸ್ಯೆಯನ್ನು ದೀವಾಳಿ ಅಮಾವಾಸ್ಯೆಯೆಂದು ಕರೆಯುತ್ತಾರೆ. ಹಿಂದೂ ಕ್ಯಾಲೆಂಡರ್ ಪ್ರಕಾರ ಆ ದಿನ ಕತ್ತಲೆಯಿಂದ ಕೂಡಿರುತ್ತದೆ. ದೀಪಾವಳಿ ಹಬ್ಬವನ್ನು ಹಿಂದುಗಳ ಹಬ್ಬ ಮಾತ್ರ ಆಗಿರದೇ ಈ ಹಬ್ಬವನ್ನು ಜೈನ್, ಸಿಖ್‍ಗಳು ಹಾಗೂ ಬೌದ್ಧರು ಕೂಡ ಈ ಹಬ್ಬವನ್ನು ಆಚರಿಸುತ್ತಾರೆ.

ಭಾರತದ ಬೇರೆ ಬೇರೆ ಪ್ರದೇಶಗಳಲ್ಲಿ ದೀಪಾವಳಿಗೆ ಅದರದ್ದೇ ಆದ ಮಹತ್ವವಿದೆ ಹಾಗೂ ಅವರದ್ದೆ ಆದ ಕೆಲವು ಸಂಪ್ರದಾಯಗಳು ಇರುತ್ತದೆ. ಕೆಲವರು ತಮ್ಮ ಸಂಪ್ರದಾಯಕ್ಕೆ ತಕ್ಕಂತೆ ತಮ್ಮ ಹಬ್ಬವನ್ನು ಆಚರಿಸುತ್ತಾರೆ. ಆದರೆ ಎಲ್ಲರ ಪ್ರಕಾರ ದೀಪಾವಳಿ ಹಬ್ಬ ರಾಮಾಯಣದ ಕಥೆಗೆ ಹೊಂದಿಕೊಂಡಿದೆ. ಇದನ್ನೂ ಓದಿ: ದೀಪಾವಳಿ ಸಂಭ್ರಮಕ್ಕೆ ಜೊತೆಯಾಗಲಿದೆ ಪರಿಸರ ಸ್ನೇಹಿ ಹಸಿರು ಪಟಾಕಿ

Deepavali 3

ರಾವಣನನ್ನು ಸಂಹಾರ ಮಾಡಿ ರಾಮ, ಸೀತಾ, ಲಕ್ಷ್ಮಣ ಹಾಗೂ ಹನುಮಂತ ಲಂಕೆಯಿಂದ ಆಯೋಧ್ಯೆಗೆ ಹಿಂದಿರುಗಿದ ದಿನ. ಅಲ್ಲದೆ ರಾಮ ಪಟ್ಟಾಭಿಷೇಕಗೊಂಡ ದಿನ. ಹಾಗಾಗಿ ಜನರು ಆ ದಿನ ಆನಂದದಿಂದ ದೀಪಗಳನ್ನು ಬೆಳಗಿಸಿ ರಾಮನನ್ನು ಸ್ವಾಗತಿಸಿದ್ದರು. ಅಲ್ಲದೆ ಪಾಂಡವರು ಕೂಡ ಅದೇ ದಿನ ತಮ್ಮ ಅಜ್ಞಾತವಾಸವನ್ನು ಮುಗಿಸಿದ ದಿನ ಎನ್ನುವ ಕತೆಯೂ ಇದೆ.  ಇದನ್ನೂ ಓದಿ: ದೀಪಾವಳಿಗೆ ರುಚಿ ರುಚಿಯಾದ ಕುಂಬಳಕಾಯಿ ಇಡ್ಲಿ ಮಾಡೋದು ಹೇಗೆ?

ದೀಪಾವಳಿಯ ಐದು ಹಬ್ಬಗಳು ಹಾಗೂ ಅದರ ಮಹತ್ವಗಳು;

1. ದನ್ತೇರಸ್: ದನ್ತೇರಸ್ ಹಬ್ಬವನ್ನು ಅಕ್ಟೋಬರ್ 27ರಂದು ಆಚರಿಸುತ್ತಾರೆ. ಈ ದಿನ ಜನರು ತಮ್ಮ ಮನೆಗೆ ಅಡುಗೆ ಪಾತ್ರೆಗಳು, ಚಿನ್ನದ ನಾಣ್ಯ ಹಾಗೂ ಆಭರಣಗಳನ್ನು ಖರೀದಿಸಲು ಹೋಗುತ್ತಾರೆ. ಅಲ್ಲದೇ ತಮ್ಮ ಮನೆ ಹಾಗೂ ಕಚೇರಿಯನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ ಮಣ್ಣಿನ ದೀಪವನ್ನು ಹಚ್ಚಿ ಅಲಂಕರಿಸುತ್ತಾರೆ.

141019kpn78 1

2. ನರಕ ಚತುರ್ದಶಿ: ನರಕ ಚತುರ್ದಶಿಯನ್ನು ಚೋಟಾ ದೀಪಾವಳಿ ಎಂದು ಕರೆಯುತ್ತಾರೆ. ನವೆಂಬರ್ 28ರಂದು ಈ ಹಬ್ಬವನ್ನು ಆಚರಿಸುತ್ತಾರೆ. ಶ್ರೀಕೃಷ್ಣನು ನರಕಾಸುರನನ್ನು ಕೊಂದ ನೆನಪನ್ನು ಈ ಹಬ್ಬ ತರುತ್ತದೆ. ನರಕಾಸುರನನ್ನು ಆಶ್ವಯುಜ ಕೃಷ್ಣ ಚತುರ್ದಶಿಯ ಕತ್ತಲೆಯಲ್ಲಿ ಕೃಷ್ಣ ಸಂಹಾರ ಮಾಡುತ್ತಾನೆ. ಈ ಹಬ್ಬದಂದು ಸಿಹಿ ತಿನುಸುಗಳನ್ನು ಖರೀದಿಸಿ ಕುಟುಂಬದವರಿಗೆ, ಸ್ನೇಹಿತರಿಗೆ ಹಾಗೂ ಸಂಬಂಧಿಕರಿಗೆ ಹಂಚುತ್ತಾರೆ. ಸಿಹಿ ತಯಾರಿಸುವವರು ನರಕ ಚತುರ್ದಶಿದಂದು ಹೆಚ್ಚು ಸಮಯ ಕೆಲಸ ಮಾಡುತ್ತಾರೆ.

3. ದೀಪಾವಳಿ: ದೀಪಾವಳಿಯಂದು ಲಕ್ಷ್ಮಿ ಪೂಜೆ ಮಾಡುತ್ತಾರೆ. ಲಕ್ಷ್ಮಿ ಎಂದರೆ ಕೇವಲ ಧನಾಧಿದೇವತೆ ಎಂಬ ಪ್ರತೀತಿಯಿದೆ. ಲಕ್ಷ್ಮೀ ಕೇವಲ ಧನಲಕ್ಷ್ಮೀ ಮಾತ್ರವಲ್ಲ. ಸಕಲ ಶ್ರೇಯಸ್ಸುಗಳಿಗೆ ಲಕ್ಷ್ಮೀ ಕಾರಣ ಎಂದು ಹೇಳುತ್ತಾರೆ. ಈ ಹಬ್ಬದಂದು ಎಲ್ಲರೂ ತಮ್ಮ ಕುಟುಂಬದವರೊಂದಿಗೆ ಸೇರಿ ಒಬ್ಬರಿಗೊಬ್ಬರು ಸಿಹಿ ಹಂಚಿ ಉಡುಗೊರೆ ನೀಡುತ್ತಾರೆ.

Deepavali special 5

4. ಗೋಪೂಜೆ: ದೀಪಾವಳಿಯ ನಾಲ್ಕನೇ ದಿನ ಗೋ ಪೂಜೆ ಮಾಡುತ್ತಾರೆ. ಈ ದಿನದಂದು ಗೋವುಗಳನ್ನು ಅಲಂಕರಿಸಿ, ಹಾಲು ಹಿಡಿಯುವ ಪಾತ್ರೆ, ಕುಡಗೋಲುಗಳನ್ನು ಪೂಜಿಸಿ, ಗೋಶಾಲೆಯನ್ನು ದೀಪದಿಂದ ಬೆಳಗಿ, ಹಸುಗಳಿಗೆ ಅಕ್ಕಿ, ಬೆಲ್ಲ, ತಿಂಡಿ ತಿನಿಸುಗಳನ್ನು ನೀಡುತ್ತಾರೆ. ಉತ್ತರ ಭಾರತದಲ್ಲಿ ಅಥವಾ ಕೆಲವರ ಸಂಪ್ರದಾಯದಲ್ಲಿ ಈ ದಿನದಂದು ಪತಿ ತಮ್ಮ ಪತ್ನಿಯರಿಗೆ ಉಡುಗೊರೆ ನೀಡುತ್ತಾರೆ. ಅಲ್ಲದೆ ಹೊಸದಾಗಿ ಮದುವೆಯಾದ ಜೋಡಿಯನ್ನು ಮನೆಗೆ ಔತಣಕ್ಕೆ ಕರೆದು ಉಡುಗೊರೆ ನೀಡಲಾಗುತ್ತದೆ.

5. ಬಾಯ್ ದೂಜ್: ಬಾಯ್ ದೂಜ್ ಅನ್ನು ಬಯ್ಯಾ ದೂಜ್ ಎಂದು ಕರೆಯುತ್ತಾರೆ. ದೀಪಾವಳಿಯ ಐದನೇ ದಿನದಂದು ಈ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬ ಅಣ್ಣ-ತಂಗಿಯರ ಹಬ್ಬವಾಗಿದ್ದು, ಅಣ್ಣಂದಿರು ತಮ್ಮ ತಂಗಿಯ ಮನೆಗೆ ಊಟಕ್ಕೆ ಹೋಗುತ್ತಾರೆ. ಅಲ್ಲದೇ ತಿಲಕ ಶಾಸ್ತ್ರ ಮಾಡುತ್ತಾರೆ. ಸಹೋದರಿಯರು ತಮ್ಮ ಸಹೋದರನಿಗೆ ತಿಲಕ ಶಾಸ್ತ್ರ ಮಾಡುತ್ತಾರೆ. ಇದನ್ನು ಮತ್ತೊಂದು ರಕ್ಷಾ ಬಂಧನ ಎಂದೂ ಕರೆಯಲಾಗುತ್ತದೆ.

https://www.youtube.com/watch?v=bdq-b9Difjs

TAGGED:celebrationDeepawalifestivalFestival of lightsPublic TVಆಚರಣೆದೀಪಾವಳಿಪಬ್ಲಿಕ್ ಟಿವಿಹಬ್ಬ
Share This Article
Facebook Whatsapp Whatsapp Telegram

You Might Also Like

k.l.rahul test cricket
Cricket

ಮಳೆಗೆ 3ನೇ ದಿನದಾಟ ಅಂತ್ಯ; 2ನೇ ಇನ್ನಿಂಗ್ಸ್‌ನಲ್ಲಿ ಭಾರತಕ್ಕೆ 96 ರನ್‌ ಮುನ್ನಡೆ – ಕನ್ನಡಿಗ ಕೆ.ಎಲ್.ರಾಹುಲ್‌ ಆಸರೆ

Public TV
By Public TV
6 minutes ago
big bulletin 22 June 2025 part 1
Big Bulletin

ಬಿಗ್‌ ಬುಲೆಟಿನ್‌ 22 June 2025 ಭಾಗ-1

Public TV
By Public TV
11 minutes ago
big bulletin 22 June 2025 part 2
Big Bulletin

ಬಿಗ್‌ ಬುಲೆಟಿನ್‌ 22 June 2025 ಭಾಗ-2

Public TV
By Public TV
16 minutes ago
DK Shivakumar
Bengaluru City

ದಿನಕ್ಕೆ 45ಕ್ಕೂ ಹೆಚ್ಚು ನಿಮಿಷ ಉಳಿಸಬಹುದು – ಸುರಂಗ ಮಾರ್ಗದ ಉಪಯೋಗ ತಿಳಿಸಿದ ಡಿಕೆಶಿ

Public TV
By Public TV
31 minutes ago
crude oil well petrol
Latest

Israel-Iran tensions: ರಷ್ಯಾ, ಅಮೆರಿಕದಿಂದ ತೈಲ ಆಮದು ಹೆಚ್ಚಿಸಿದ ಭಾರತ

Public TV
By Public TV
50 minutes ago
helmet traffic police
Bengaluru City

ನಾನು ಹೆಲ್ಮೆಟ್ ಹಾಕಲ್ಲ ಏನಿವಾಗ – ಜೆಡಿಎಸ್ ಅಧ್ಯಕ್ಷ ಎಂದವನ ಜೈಲಿಗಟ್ಟಿದ ಪೊಲೀಸರು

Public TV
By Public TV
2 hours ago
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?