Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಸಂಕ್ರಾಂತಿಯ ಮಹಾಕ್ರಾಂತಿ ವಿಫಲ ಬೆನ್ನಲ್ಲೆ ಆಪರೇಷನ್ ಮೌನ ಕ್ರಾಂತಿ ಆರಂಭ!
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಸಂಕ್ರಾಂತಿಯ ಮಹಾಕ್ರಾಂತಿ ವಿಫಲ ಬೆನ್ನಲ್ಲೆ ಆಪರೇಷನ್ ಮೌನ ಕ್ರಾಂತಿ ಆರಂಭ!

Bengaluru City

ಸಂಕ್ರಾಂತಿಯ ಮಹಾಕ್ರಾಂತಿ ವಿಫಲ ಬೆನ್ನಲ್ಲೆ ಆಪರೇಷನ್ ಮೌನ ಕ್ರಾಂತಿ ಆರಂಭ!

Public TV
Last updated: January 29, 2019 2:58 pm
Public TV
Share
3 Min Read
operation mouna
SHARE

– ದೋಸ್ತಿ ಸರ್ಕಾರಕ್ಕೆ ಖೆಡ್ಡಾ ತೋಡಲು ಕೂಡಿ ಕಳೆಯುವ ಆಟ!
– ಆಪರೇಷನ್ ಕಡೇ ಆಟ ಸಕ್ಸಸ್ ಆಗುತ್ತಾ? ಹೇಗೆ ನಡೆಯುತ್ತೆ..?

ಬೆಂಗಳೂರು: ಈ ಬಾರಿಯ ಸಂಕ್ರಾಂತಿಗೆ ರಾಜ್ಯದ ಮೈತ್ರಿ ಸರ್ಕಾರ ಬಿದ್ದು ಹೋಗುತ್ತೆ ಎನ್ನುವಂತೆ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿತ್ತು. ಮೂರು ಹಂತಗಳಲ್ಲಿ ನಡೆದಿದ್ದು ಆಪರೇಷನ್ ಕಮಲ ಎರಡನೇ ಸ್ಟೇಜ್‍ನಲ್ಲಿ ವಿಫಲವಾಯ್ತು. ಕೊನೆಗೂ ನಮ್ಮ ಸರ್ಕಾರವನ್ನು ನಾವು ಉಳಿಸಿಕೊಂಡಿದ್ದೇವೆ ಎಂದು ಕಾಂಗ್ರೆಸ್ ನಾಯಕರು ಸಾರ್ವಜನಿಕವಾಗಿಯೇ ಗೆಲುವಿನ ನಗೆ ಬೀರಿದ್ದರು. ಇದೀಗ ಮತ್ತೊಮ್ಮೆ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗ್ತಿದೆ ಎಂಬ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿ ಬರುತ್ತಿವೆ.

ಕಾಂಗ್ರೆಸ್ ಶಾಸಕರು ಬಿಡದಿಯ ಈಗಲ್ಟನ್ ರೆಸಾರ್ಟ್ ಸೇರುತ್ತಿದ್ದಂತೆ ಗುರುಗ್ರಾಮದಲ್ಲಿ ವಾಸ್ತವ್ಯ ಹೂಡಿದ್ದ ಬಿಜೆಪಿಯ ಶಾಸಕರ ಪಡೆ ರಾಜ್ಯಕ್ಕೆ ಹಿಂದಿರುಗಿತ್ತು. ಕಾಂಗ್ರೆಸ್ ನಾಯಕರು ಬಿಜೆಪಿ ನಮ್ಮ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದೆ ಎಂದು ಬಹಿರಂಗವಾಗಿ ಹೇಳಿಕೆಯನ್ನು ನೀಡತೊಡಗಿದರು. ನಾವ್ ಯಾವುದೇ ಆಪರೇಷನ್ ನಡೆಸಿಲ್ಲ ಅಂತಾ ಬಿಜೆಪಿ ಪ್ರತ್ಯುತ್ತರ ನೀಡಿತ್ತು. ನಾವು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಾಗಿ ಎಲ್ಲ ಶಾಸಕರನ್ನು ಒಂದೆಡೆ ಸೇರಿಸಲಾಗಿತ್ತು ಬಿಜೆಪಿ ನಾಯಕರು ಗುರುಗ್ರಾಮ ರೆಸಾರ್ಟ್ ವಾಸ್ತವ್ಯಕ್ಕೆ ಸ್ಪಷ್ಟನೆ ನೀಡಿದ್ದರು.

operation mouna a

ಆಪರೇಷನ್ ಮೌನ ಕ್ರಾಂತಿ:
ಆಪರೇಷನ್ ಕಮಲ ವಿಫಲವಾದ ಬೆನ್ನಲ್ಲೆ ಬಿಜೆಪಿ ಮೌನ ಕ್ರಾಂತಿಗೆ ಮುಂದಾಗಿದೆ. ಬಜೆಟ್ ಅಧಿವೇಶನದಲ್ಲಿಯೇ ಕಾಂಗ್ರೆಸ್ ಶಾಸಕರನ್ನು ಸೆಳೆಯಲು ಬಿಜೆಪಿ ತೆರೆಮರೆಯಲ್ಲಿ ತಯಾರಿ ನಡೆಸುತ್ತಿದೆ. ಈ ಮೊದಲು ಎಲ್ಲ ಶಾಸಕರನ್ನು ಬಿಜೆಪಿ ದೆಹಲಿಯತ್ತ ಕರೆದೊಯ್ಯುತ್ತಿದ್ದಂತೆ ಕಾಂಗ್ರೆಸ್ ಮತ್ತು ಜೆಡಿಎಸ್ ಅಲರ್ಟ್ ಆಗಿತ್ತು. ಹಾಗಾಗಿ ಈ ಬಾರಿ ಸುಳಿವು ನೀಡದೇ ಆಪರೇಷನ್ ನಡೆಸಲು ಬಿಜೆಪಿ ತೀರ್ಮಾನಿಸಿದೆ ಎಂಬ ಮಾಹಿತಿ ಮೂಲಗಳಿಂದ ಪಬ್ಲಿಕ್ ಟಿವಿಗೆ ಲಭ್ಯವಾಗಿವೆ.

ಈ ಅತೃಪ್ತ ಶಾಸಕರು ಉಳಿದುಕೊಂಡಿದ್ದರು ಎನ್ನಲಾದ ರಿನೈಸಾನ್ಸ್ ಹೋಟೆಲ್ 20 ರೂಮ್‍ಗಳನ್ನು ಬಿಜೆಪಿ ಖಾಲಿ ಮಾಡಿಲ್ಲ. ರಮೇಶ್ ಜಾರಕಿಹೊಳಿ ಸಹ ಇದೇ ಹೋಟೆಲ್ ನಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗುತ್ತಿದೆ. ಬಜೆಟ್ ಅಧಿವೇಶನಕ್ಕೂ ಮುನ್ನ ಬಿಜೆಪಿ ರಾಜ್ಯಪಾಲರನ್ನು ಭೇಟಿ ಮಾಡಿ ವಿಶ್ವಾಸ ಮತಯಾಚನೆ ಅವಕಾಶ ನೀಡಬೇಕೆಂದು ಕೇಳಿಕೊಳ್ಳಲಿದೆ. ರಾಜ್ಯಪಾಲರು ವಿಶ್ವಾಸಮತಯಾಚನೆಗೆ ಅವಕಾಶ ಕೊಟ್ಟಾಗ ಮೌನ ಕ್ರಾಂತಿ ಬ್ಲಾಸ್ಟ್ ಆಗಲಿದೆಯಂತೆ. ಫೆಬ್ರವರಿ 8ರಿಂದ 10ರೊಳಗೆ ರಾಜ್ಯ ರಾಜಕೀಯದಲ್ಲಿ ಕ್ಷಿಪ್ರ ಬೆಳವಣಿಗೆ ಆದ್ರೂ ಆಶ್ಚರ್ಯಪಡುವಂತಿಲ್ಲ ಎನ್ನುತ್ತಿದೆ ರಾಜಕೀಯ ಅಂಗಳ.

operation mouna b

ಅತೃಪ್ತರೊಂದಿಗೆ ಸಂಪರ್ಕ: ಆಪರೇಷನ್ ಕಮಲ ಫೇಲ್ ಆದರೂ ಬಿಜೆಪಿ ಕಾಂಗ್ರೆಸ್‍ನ 8 ಶಾಸಕರೊಂದಿಗೆ ನಿರಂತರ ಸಂಪರ್ಕದಲ್ಲಿದ್ದಾರಂತೆ. 104 ಶಾಸಕರನ್ನು ಹೊಂದಿರುವ ಬಿಜೆಪಿ ಇಬ್ಬರ ಪಕ್ಷೇತರ ಬೆಂಬಲದೊಂದಿಗೆ 106ರ ಬಲ ಹೊಂದಿದೆ. ಇದೀಗ 8 ಶಾಸಕರು ಕಡೆಯಿಂದ ರಾಜೀನಾಮೆ ಕೊಡಿಸ್ತಾರಂತೆ. ಲೋಕಸಭಾ ಚುನಾವಣೆಗೂ ಮುನ್ನ ದೋಸ್ತಿಯನ್ನು ಕೆಡವಲು ಬಿಜೆಪಿ ಈ ಬಾರಿ ಅತ್ಯಂತ ಎಚ್ಚರಿಕೆಯಿಂದ ಹೆಜ್ಜೆ ಇಟ್ಟಂತೆ ಕಾಣುತ್ತಿದೆ. ಶಾಸಕರಾದ ರಮೇಶ್ ಜಾರಕಿಹೊಳಿ, ಉಮೇಶ್ ಜಾಧವ್, ನಾಗೇಂದ್ರ, ಮಹೇಶ್ ಕುಮಟಳ್ಳಿ, ಶಿವರಾಮ್ ಹೆಬ್ಬಾರ್, ಭೀಮಾ ನಾಯ್ಕ್ ಮತ್ತು ಗಣೇಶ್ ಬಂಡಾಯದ ಬಾವುಟ ಹಿಡಿದು ರೆಡಿಯಾಗಿ ನಿಂತಿದ್ದಾರೆ.

ಸಂಕ್ರಾಂತಿಯ ಆಸುಪಾಸಿನಲ್ಲಿ ಬಿಜೆಪಿ ಮುಂಬೈನ ರಿನೈಸಾನ್ಸ್ ಹೋಟೆಲ್ ನ ಆರನೇ ಮಹಡಿಯಲ್ಲಿ ಕೆಲವು ಕೋಣೆಗಳನ್ನು ಬುಕ್ ಮಾಡಿಕೊಂಡಿತ್ತು. ಇದೇ ಹೋಟೆಲ್ ನಲ್ಲಿ ಕಾಂಗ್ರೆಸ್ ಶಾಸಕರು ಕಾಣಿಸಿಕೊಂಡಿರುವ ಫೋಟೋಗಳು ಹರಿದಾಡಿದ್ದವು. ಕಾಂಗ್ರೆಸ್ ಶಾಸಕರ ಜೊತೆ ಬಿಜೆಪಿಯ ಅಶ್ವಥ್ ನಾರಾಯಣ್ ಸಹ ಕಾಣಿಸಿಕೊಂಡಿದ್ದರಿಂದ ಆಪರೇಷನ್ ಕಮಲ ನಡೆಯುತ್ತಿದೆ ಎಂಬುವುದಕ್ಕೆ ಪುಷ್ಠಿ ನೀಡಿತ್ತು. ಮುಂಬೈನಲ್ಲಿಯೇ ಪಕ್ಷೇತರ ಶಾಸಕರಾದ ಆರ್. ಶಂಕರ್ ಮತ್ತು ಹೆಚ್.ನಾಗೇಶ್ ಮೈತ್ರಿ ಸರ್ಕಾರಕ್ಕೆ ನೀಡಿದ್ದ ಬೆಂಬಲ ಹಿಂಪಡೆದಿದ್ದರು. ಅತೃಪ್ತ ಶಾಸಕರ ನೇತೃತ್ವವನ್ನು ಬೆಳಗಾವಿಯ ಸಾಹುಕಾರ, ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ವಹಿಸಿಕೊಂಡಿದ್ದರು ಎನ್ನಲಾಗುತ್ತಿದೆ.

operation mouna C

ಸಾಹುಕಾರರ ಷರತ್ತು?
ಮುಂಬೈನಲ್ಲಿ ಉಳಿದಿದ್ದ ಎಲ್ಲ ಶಾಸಕರು ರಾಜ್ಯಕ್ಕೆ ಹಿಂದಿರುಗಿದ್ದಾರೆ. ಸಚಿವ ಸ್ಥಾನ ಕಳೆದುಕೊಂಡು ಕೋಪಾಗ್ನಿಯಲ್ಲಿ ಉರಿಯುತ್ತಿರುವ ರಮೇಶ್ ಜಾರಕಿಹೊಳಿ ಉಪ ಮುಖ್ಯಮಂತ್ರಿ ಆಗುವವರೆಗೂ ಸ್ವಕ್ಷೇತ್ರಕ್ಕೆ ಬರಲ್ಲ ಎಂದು ಪಟ್ಟು ಹಿಡಿದು ಕುಳಿತಿದ್ದಾರಂತೆ. ಡಿಸಿಎಂ ಸ್ಥಾನ ನೀಡಬೇಕು ಇಲ್ಲವೇ ಸಚಿವ ಡಿ.ಕೆ.ಶಿವಕುಮಾರ್ ಅವರನ್ನು ಸಂಪುಟದಿಂದ ಕೈ ಬಿಡಬೇಕು ಎಂಬ ಎರಡು ಷರತ್ತುಗಳನ್ನು ರಮೇಶ್ ಜಾರಕಿಹೊಳಿ ಹೈಕಮಾಂಡ್ ಇಟ್ಟಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.

https://www.youtube.com/watch?v=9xGOrVUddC0

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

TAGGED:bjpcongressjdsOperation LotusPublic TVಆಪರೇಷನ್ ಕಮಲಕಾಂಗ್ರೆಸ್ಜೆಡಿಎಸ್ಪಬ್ಲಿಕ್ ಟಿವಿಬಿಜೆಪಿ
Share This Article
Facebook Whatsapp Whatsapp Telegram

Cinema news

Kavya 01
BBK Season 12 | 3ನೇ ರನ್ನರ್‌ಅಪ್‌ ಕಾವ್ಯ ಶೈವ ಔಟ್‌ – ಸಿಕ್ಕ ಬಹುಮಾನ ಎಷ್ಟು?
Bengaluru City Cinema Latest Main Post TV Shows
Raghu
BBK Season 12 | ಗ್ರ್ಯಾಂಡ್‌ ಫಿನಾಲೆಯಿಂದ ರಗಡ್‌ ರಘು ಔಟ್‌
Cinema Latest Main Post TV Shows
AR Rahman 2
ಭಾರತ ನನ್ನ ಸ್ಫೂರ್ತಿ, ತವರು – ಕೆಲವೊಮ್ಮೆ ಉದ್ದೇಶಗಳನ್ನು ತಪ್ಪಾಗಿ ಅರ್ಥೈಸಲ್ಪಡಬಹುದು: ರೆಹಮಾನ್ ಸ್ಪಷ್ಟನೆ
Bollywood Cinema Latest National
Dhanush Gowda
BBK 12 | Top-5 ಪಟ್ಟದಿಂದ ಔಟ್‌ – ಗ್ರ್ಯಾಂಡ್‌ ಫಿನಾಲೆಯಿಂದ ಹೊರಬಂದ ಧನುಷ್‌
Cinema Latest Main Post TV Shows

You Might Also Like

Narendra Modi
Latest

ಮಮತಾ ಬ್ಯಾನರ್ಜಿ ಸರ್ಕಾರಕ್ಕೆ ಶಿಕ್ಷೆಯಾಗಲೇಬೇಕು, ‘ಮಹಾ ಜಂಗಲ್ ರಾಜ್’ ಯುಗ ಕೊನೆಗೊಳಿಸಬೇಕು: ಮೋದಿ ಕರೆ

Public TV
By Public TV
2 hours ago
Haveri Sadhana Samavesha Shivananda Patil
Districts

ಫೆ. 13ರಂದು ಹಾವೇರಿಯಲ್ಲಿ ಬೃಹತ್ ಸಾಧನಾ ಸಮಾವೇಶ – ಒಂದು ಲಕ್ಷಕ್ಕೂ ಅಧಿಕ ಹಕ್ಕು ಪತ್ರ ವಿತರಣೆ

Public TV
By Public TV
3 hours ago
Road Accident
Latest

ದೆಹಲಿ, ಹರಿಯಾಣದಲ್ಲಿ ಪ್ರತ್ಯೇಕ ಅಪಘಾತ – ಮೂವರು ಸಾವು, 20ಕ್ಕೂ ಅಧಿಕ ಮಂದಿಗೆ ಗಾಯ

Public TV
By Public TV
3 hours ago
Agriculture Award For Karnataka PM Fasal Bima Yojana
Bengaluru City

ಬೆಳೆ ವಿಮೆ ಯೋಜನೆ ಅನುಷ್ಠಾನದಲ್ಲಿ ರಾಜ್ಯ ಕೃಷಿ ಇಲಾಖೆಗೆ ದ್ವಿತೀಯ ಸ್ಥಾನ

Public TV
By Public TV
4 hours ago
HT Manju
Bengaluru City

ಅಬಕಾರಿ ಇಲಾಖೆ ಕರ್ಮಕಾಂಡ | ಸನ್ನದು ಪಡೆಯಲು 2.30 ಕೋಟಿ ಬೇಡಿಕೆ ಆರೋಪದ ಆಡಿಯೋ ವೈರಲ್ – ಹೆಚ್‌ಟಿ ಮಂಜು ದೂರು

Public TV
By Public TV
4 hours ago
Sara Mahesh
Bengaluru City

ಜೆಡಿಎಸ್‌ ಪಾಳಯದಲ್ಲಿ ಕ್ಷಿಪ್ರ ಕ್ರಾಂತಿ – ಜಿಟಿಡಿ ಕ್ಷೇತ್ರದಿಂದ ಸಾರಾ ಮಹೇಶ್‌ ಕಣಕ್ಕಿಳಿಸಲು ಪ್ಲ್ಯಾನ್‌!

Public TV
By Public TV
4 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?