ಹಾವೇರಿ: ಸರಿಗಮಪ ಮೂಲಕ ಮನೆಮತಾದ ಕುರಿಗಾಹಿ ಹನುಮಂತ ಸದೃಢ ದೇಶದ ನಿರ್ಮಾಣಕ್ಕಾಗಿ ತಮ್ಮ ಮೊದಲ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ.
ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಅವರು, ನಾನು ಮೊದಲ ಬಾರಿಗೆ ಮತದಾನ ಮಾಡಿದ್ದೇನೆ. ನೀವು ಕೂಡ ತಪ್ಪದೇ ಮತದಾನ ಮಾಡಿ. ಮತದಾನ ನಿಮ್ಮ ಹಕ್ಕಾಗಿದ್ದು, ನೀವೇ ಮತ ಚಲಾಯಿಸಿ. ಅಲ್ಲದೆ ಸೂಕ್ತವಾದ ಜನಪ್ರತಿನಿಧಿ ಆಯ್ಕೆ ಮಾಡಿ ಎಂದು ಇದೇ ವೇಳೆ ಜನರಿಗೆ ಸಂದೇಶ ರವಾನಿಸಿದ್ರು.
ಧಾರವಾಡ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಹಾವೇರಿಯ ಸವಣೂರು ತಾಲೂಕಿನ ಚಿಲ್ಲೂರುಬಡ್ನಿ ಗ್ರಾಮದ ಮತಗಟ್ಟೆ ನಂ.116 ರಲ್ಲಿ ಸಿಂಗರ್ ಹನುಮಂತ ಲಮಾಣಿ ತಮ್ಮ ಮತ ಚಲಾಯಿಸಿದ್ದಾರೆ. ಹನುಮಂತ ಹಾವೇರಿ ಎಲೆಕ್ಷನ್ ಐಕಾನ್ ಆಗಿದ್ದಾರೆ.
ಕರ್ನಾಟಕ ಸೇರಿದಂತೆ 12 ರಾಜ್ಯಗಳು ಮತ್ತು 2 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 116 ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಈಗಾಗಲೇ ಮತದಾನ ಆರಂಭವಾಗಿದೆ. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದ್ದು, ಮತದಾನ ಮಾಡುವುದು ನಮ್ಮ ಜವಾಬ್ದಾರಿ. ತಪ್ಪದೇ ಮತ ಹಾಕಿ. ದೇಶದ ಭವಿಷ್ಯಕ್ಕಾಗಿ ನಿಮ್ಮ ಹಕ್ಕು ಚಲಾಯಿಸಿ.