ಬಿಗ್ ಬಾಸ್ ಮನೆಯ (Bigg Boss Kannada 11) ಆಟ ರೋಚಕ ತಿರುವು ಪಡೆದು ಮುನ್ನುಗ್ಗುತ್ತಿದೆ. ಆಟ ಶುರುವಾಗಿ ಕೆಲವೇ ದಿನಕ್ಕೆ ಸ್ಪರ್ಧಿಯೊಬ್ಬರು ಮನೆಗೆ ವೈಲ್ಡ್ ಕಾರ್ಡ್ (Wild Card Entry) ಎಂಟ್ರಿ ಕೊಟ್ಟಿದ್ದಾರೆ. ಅದು ಬೇರೆ ಯಾರು ಅಲ್ಲ. ಸಂಗೀತದ ಮೂಲಕ ರಂಜಿಸಿದ್ದ ಗಾಯಕ ಹನುಮಂತ (Hanumantha) ಈಗ ಬಿಗ್ ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಈ ಕುರಿತ ಪ್ರೋಮೋವೊಂದನ್ನು ವಾಹಿನಿ ಹಂಚಿಕೊಂಡಿದೆ. ಇದನ್ನೂ ಓದಿ:ನಟ ಕಿಚ್ಚ ಸುದೀಪ್ ತಾಯಿ ನಿಧನ

View this post on Instagram
ಇನ್ನೂ ಹನುಮಂತ ಊಟ ಮಾಡುವಾಗ, ಬಿಗ್ ಬಾಸ್ ಮಾತನಾಡಿಸಿದ್ದಾರೆ. ಇರಿ ಊಟ ಮಾಡಬೇಕಾದ್ರೆ, ನನಗೆ ತಲೆ ಓಡಲ್ಲ. ಆಮೇಲೆ ಮಾತನಾಡುತ್ತೇನೆ ಎಂದು ಬಿಗ್ ಬಾಸ್ ಗೆ ಹೇಳುತ್ತಾರೆ. ಅವರ ಮುಗ್ಧತೆ ನೋಡಿ ಮನೆಮಂದಿ ನಗುತ್ತಾರೆ. ಇನ್ನೂ ದೊಡ್ಮನೆಗೆ ಬಂದ ಮೊದಲ ದಿನವೇ ಹನುಮಂತ ಕ್ಯಾಪ್ಟನ್ ಆಗಿದ್ದಾರೆ. ಇನ್ನೂ ಅವರು ಕ್ಯಾಪ್ಟನ್ ಎಂದು ಘೋಷಿಸಿದ್ದೇ ಬಿಗ್ ಬಾಸ್. ಹಾಗಾಗಿ ಮನೆಮಂದಿ ದಂಗಾಗಿದ್ದಾರೆ. ಬಿಗ್ ಬಾಸ್ ಆದೇಶಕ್ಕೆ ಸ್ಪರ್ಧಿಗಳು ಸೈಲೆಂಟ್ ಆಗಿದ್ದಾರೆ. ಇನ್ನೂ ಸದಾ ಜಗಳಗಳ ಮೂಲಕ ಸುದ್ದಿ ಆಗೋ ಸ್ಪರ್ಧಿಗಳ ನಡುವೆ ಹನುಮಂತ ಸೆಡ್ಡು ಹೊಡೆಯುತ್ತಾರಾ? ಎಂದು ಕಾದುನೋಡಬೇಕಿದೆ.

