ಬೆಂಗಳೂರು: ಸ್ಯಾಂಡಲ್ವುಡ್ ಗಾಯಕ ರಾಜೇಶ್ ಕೃಷ್ಣನ್ ಅವರು ಚಿತ್ರ ಕಲಾವಿದ ನಾಗರಾಜ್ ಅವರಿಗೆ ಸಹಾಯ ಹಸ್ತ ಚಾಚಿದ್ದಾರೆ.
ಚಿತ್ರಕಲೆಯನ್ನೇ ನಂಬಿ ಬದುಕಿದ್ದ ನಾಗರಾಜ್ ಅವರಿಗೆ ಓಪನ್ ಹಾರ್ಟ್ ಸರ್ಜರಿ ಆಗಿದ್ದು, ವೈದ್ಯರು ಅವರಿಗೆ ವಿಶ್ರಾಂತಿ ಪಡೆಯಲು ಹೇಳಿದ್ದಾರೆ. ಆದರೆ ನಾಗರಾಜ್ ಅವರ ಮನೆಯಲ್ಲಿ ಅವರು ಬಿಟ್ಟರೆ ಬೇರೆ ಯಾರೂ ದುಡಿಯುವವರಿಲ್ಲ.
ನಾಗರಾಜ್ ಈ ಕಲೆಯಿಂದಲೇ ತಮ್ಮ ಪತ್ನಿ ಹಾಗೂ ಮಕ್ಕಳನ್ನು ಸಾಕುತ್ತಿದ್ದರು. ಈಗ ಕೂಡ ಈ ಕಲೆಯಿಂದಲೇ ತಮ್ಮ ಪತ್ನಿ ಹಾಗೂ ಮಕ್ಕಳನ್ನು ಸಾಕಬೇಕಿದೆ. ಹೀಗಾಗಿ ಆರ್ಥಿಕ ಸಂಕಷ್ಟದಲ್ಲಿರುವ ನಾಗರಾಜ್ ಅವರಿಗೆ ಸಹಾಯ ಮಾಡಲು ರಾಜೇಶ್ ಕೃಷ್ಣನ್ ಅವರು ಶೇಷಾದ್ರಿಪುರಂ ಕಾಲೇಜಿನಲ್ಲಿ ಸಂಗೀತಾ ಕಾರ್ಯಕ್ರಮವನ್ನು ನಡೆಸಿದ್ದಾರೆ. ಅಲ್ಲದೇ ಆ ಕಾರ್ಯಕ್ರಮದಲ್ಲಿ ಬಂದ ಹಣವನ್ನು ನಾಗರಾಜ್ ಅವರ ಕುಟುಂಬಕ್ಕೆ ನೀಡಿ ಸಹಾಯ ಮಾಡಿದ್ದಾರೆ.
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುವ ‘ಸದಾ ನಿಮ್ಮೊಂದಿಗೆ’ ಕಾರ್ಯಕ್ರಮದಲ್ಲಿ ಈ ವಾರ ಗಾಯಕ ರಾಜೇಶ್ ಕೃಷ್ಣನ್ ಭಾಗವಹಿಸುತ್ತಿದ್ದಾರೆ. ಸದ್ಯ ಈ ಕಾರ್ಯಕ್ರಮದ ಶೀರ್ಷಿಕೆ ಹಾಡನ್ನು ಕೂಡ ರಾಜೇಶ್ ಕೃಷ್ಣನ್ ಅವರೇ ಹಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv